ಐಶ್ವರ್ಯ ಗೌಡ ವಂಚನೆ ಪ್ರಕರಣ | ಮಾಜಿ ಸಂಸದ ಡಿ ಕೆ ಸುರೇಶ್‌ಗೆ ಇ.ಡಿ ಸಮನ್ಸ್ ಜಾರಿ

Date:

ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್‌ಗೆ ಇ.ಡಿ ಗುರುವಾರ (ಜೂ.19) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಐಶ್ವರ್ಯ ಗೌಡ ಈ ಹಿಂದೆ ತಮ್ಮನ್ನು ಡಿ.ಕೆ. ಸುರೇಶ್ ಅವರ ತಂಗಿ ಎಂದು ಪರಿಚಯಿಸಿಕೊಂಡು ಹಲವು ಜನರನ್ನು ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಡಿ ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯು ನೀಡಿದ ಹೇಳಿಕೆ ಮತ್ತು ದಾಖಲೆಗಳ ಆಧಾರದಲ್ಲಿ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರತಿಕ್ರಿಯಿಸಿರುವ ಡಿ ಕೆ ಸುರೇಶ್, “ಇಂದು ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇ.ಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್‌ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಗಿದೆ” ಎಂದು ಹೇಳಿದರು.

“ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

“ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...