Breaking | ಬಾನು ಮುಷ್ತಾಕ್‌ಗೆ ದಸರಾ ಉದ್ಘಾಟಿಸದಂತೆ ತಡೆ ಕೋರಿದ್ದ ಪ್ರತಾಪ್ ಸಿಂಹ ಅರ್ಜಿ‌ ವಜಾ

Date:

ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಮುಖ್ಯ ನ್ಯಾ. ವಿಭು ಬಬ್ರು ಮತ್ತು ನ್ಯಾ. ಸಿ.ಎಂ.ಜೋಶಿ ಅವರ ವಿಭಾಗೀಯ ನ್ಯಾಯಪೀಠವು ಸೋಮವಾರ (ಸೆ.15) ಪ್ರತಾಪ್ ಸಿಂಹ ಮತ್ತು ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ವಜಾ ಮಾಡಿದೆ.

ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ನಿರ್ಧಾರದಿಂದ ಅರ್ಜಿದಾರರ ಯಾವುದೇ ಕಾನೂನಾತ್ಮಕ ಅಥವಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಅರ್ಜಿದಾರರಿಗೆ ದಂಡ ವಿಧಿಸುವಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡಿದರು. ಆದರೆ ಇದಕ್ಕೆ ಪೀಠ ನಿರಾಕರಿಸಿತು.

ಪ್ರತಾಪ್‌ ಸಿಂಹ ಪರ ವಕೀಲ ಎಸ್‌ ಸುದರ್ಶನ್‌ ಅವರು “ಬಾನು ಮುಷ್ತಾಕ್‌ ಅವರು ಹಿಂದೂ ಸಂಪ್ರದಾಯ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆಯಾದವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಶಿಷ್ಟಾಚಾರ. ಇದನ್ನು ಪಾಲಿಸಲಾಗಿಲ್ಲ. ಬಾನು ಮುಷ್ತಾಕ್‌ ಅವರಿಗೆ ಅರಿಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲ. ದಸರಾ ಹಿಂದೂ ಹಬ್ಬವಾಗಿದ್ದು, ಜಾತ್ಯತೀತ ಹಬ್ಬವಲ್ಲ” ಎಂದರು.

ಇದಕ್ಕೆ ಪೀಠವು “ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಅವರಿಗೆ ಸೇರಿದ ವಿಚಾರ” ಎಂದು ಹೇಳಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...