ಅಲ್ಲಮನ ಅನನ್ಯ ಪದಪ್ರಯೋಗಗಳು | ದಾರಿದ್ರ್ಯವಿದ್ದಲ್ಲಿ ನಿದ್ರೆ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ದಾರಿದ್ರ್ಯವಿದ್ದಲ್ಲಿ ನಿದ್ರೆ
ಕಬ್ಬು ಬೆಳೆವುದಯ್ಯ ಕರಿಯ ಭೂಮಿಯಿದ್ದಲ್ಲಿ,
ಉಬ್ಬುಬ್ಬಿ ಬೆಳೆವುದಯ್ಯ ಜಲ ಪ್ರಮಾಣವಿರ್ದಲ್ಲಿ,
ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ,
ನಮ್ಮ ಶಿವನ ಸಲೆ ಸಂದ ಶರಣರಾದ ಹಿರಿಯರಿದ್ದಲ್ಲಿ ಬುದ್ಧಿ ಬೆಳವುದಯ್ಯ,
ಜಟ್ಟಿ ಮಾಸಾಳರಿರ್ದಲ್ಲಿ ಕಾಳಗ ಘನವನಪ್ಪುದಯ್ಯ,
ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರ.

ಪದಾರ್ಥ:
ಸಲೆ = ಸರಿಯಾಗಿ
ಮಾಸಾಳ = ವೀರ, ಶೂರ
ಇಷ್ಟ = ಇಷ್ಟನ್ನು

ವಚನಾರ್ಥ:
ಫಲವತ್ತಾದ ಭೂಮಿ ಇದ್ದಲ್ಲಿ ಅದರ ಮೇಲೆ ರಸಭರಿತ ಕರಿಯ ಕಬ್ಬು ಬೆಳೆಯುತ್ತದೆ. ಅಂತರ್ಜಲ ಯಥೇಚ್ಛವಾಗಿರುವ ಕಡೆಯಲ್ಲಿ ಭಾವಿ ತೋಡಿದರೆ ನೀರು ಉಕ್ಕಿ ಉಕ್ಕಿ ಬರುತ್ತದೆ. ಜೀವನವನ್ನು ಸರಿಯಾಗಿ ಅರಿತು ಶಿವಶರಣರೆನಿಸಿಕೊಂಡ ಹಿರಿಯರ ಸಂಪರ್ಕದಲ್ಲಿದ್ದರೆ ಬುದ್ದಿ ಬೆಳೆಯುತ್ತದೆ. ಜಟ್ಟಿಗಳ ಸೆಣಸಾಟದಲ್ಲಿ ಇಬ್ಬರೂ ಶೂರರು ಸಮಬಲರಿದ್ದರೆ ಕಾಳಗ ಕಳೆಗಟ್ಟಿ ಬೆಳೆಯುತ್ತದೆ. ಇವೆಲ್ಲಾ ಸಕಾರಾತ್ಮಕ ಬೆಳವಣಿಗೆಗಳು. ಇನ್ನೊಂದು ನಕಾರಾತ್ಮಕ ಬೆಳವಣಿಗೆ ಇದೆ. ಚುರುಕಾಗಿ ಕೆಲಸ ಮಾಡದೇ ಸೋಮಾರಿತನ ರೂಢಿಸಿಕೊಂಡರೆ ಸದಾಕಾಲ ನಿದ್ರೆಯ ಜೊಂಪು ಮೈಯಲ್ಲಿ ಬೆಳೆಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಸಕಾರಾತ್ಮಕ ಮತ್ತು ನಕಾರಾತ್ಮಕ ಬೆಳೆವಣಿಗೆಗಳು ಜೀವನ ಕ್ರಿಯೆಯಲ್ಲಿ ಬೆರಗನ್ನು ಬರಿಸುವಂತಹವು.

ಪದಪ್ರಯೋಗಾರ್ಥ:
ದಿನವೊಂದಕ್ಕೆ ಸತತ ಏಳೆಂಟು ಗಂಟೆಗಳ ಕಾಲ ನಿದ್ರೆ ಬೇಕು. ಅದು ಆರೋಗ್ಯಕರ ಜೀವನದ ದಿನಚರಿ. ಆದರೆ ಅದಕ್ಕಿಂತ ಹೆಚ್ಚಾಗಿ ನಿದ್ರೆ ಮಾಡುವ ಕ್ರಮವನ್ನು ಬೆಳೆಸಿಕೊಂಡರೆ ಮಾಡುವ ಕೆಲಸಗಳನ್ನು ಸಕಾಲದಲ್ಲಿ ಮಾಡಲಾಗದೆ ಅಭಿವೃದ್ಧಿ ಕುಂಠಿತವಾಗಿ
ದಾರಿದ್ರ್ಯ ಮೈದಳೆಯುತ್ತದೆ. ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ, ನಿದ್ರೆ ಬೆಳೆದಲ್ಲಿ ದಾರಿದ್ರ್ಯವಿರುವುದಯ್ಯ. ನಿದ್ರೆ ಎಂಬ ಕ್ರಿಯೆಯನ್ನು ಮಾಯೆಗೆ ಹೋಲಿಸಿ ಅಲ್ಲಮ ಬರೆದ ಅಪರೂಪದ ಮತ್ತೊಂದು ವಚನ ಅತ್ಯಂತ ಗಮನ ಸೆಳೆಯುತ್ತದೆ.

“ಮೂರು ಲೋಕದ ಧೀರೆ ನಿದ್ರಾಂಗನೆ,
ಎಲ್ಲರನೂ ಹಿಂಡಿ ಹೀರಿ ಪ್ರಾಣಾಕರ್ಷಣೆಯ ಮಾಡಿ,
ಕಟ್ಟಿ ಕೆಡಹಿದಳಲ್ಲಾ!
ಇವಳ ಗೆಲುವ ಧೀರನಾರುವನೂ ಕಾಣೆ.
ಇವಳ ಬಾಣಕ್ಕೆ ಗುರಿಯಾಗಿ ಏಳುತ್ತ ಬೀಳುತ್ತಲಿದ್ದರು ಎಲ್ಲರೂ-ಗುಹೇಶ್ವರಾ.”

ಸರಳ ಸುಂದರವಾದ ಅಲ್ಲಮನ ಈ ವಚನಕ್ಕೆ ವ್ಯಾಖ್ಯಾನ ಬೇಕಿಲ್ಲ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...