ಅಲ್ಲಮನ ಅನನ್ಯ ಪದಪ್ರಯೋಗಗಳು | ಎತ್ತನೇರಿ ಎತ್ತನರಸುವರು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಎತ್ತನೇರಿ ಎತ್ತನರಸುವರು

ಭಾವದಲೊಬ್ಬ ದೇವರ ಮಾಡಿ ಮನದಲೊಂದು ಭಕ್ತಿಯ ಮಾಡಿದಡೆ
ಕಾಯದ ಕೈಯಲ್ಲಿ ಕಾರ್ಯವುಂಟೆ?
ವಾಯಕ್ಕೆ ಬಳಲುವರು ನೋಡಾ.
ಎತ್ತನೇರಿ ಎತ್ತನರಸುವರು
ಎತ್ತ ಹೋದರೈ ಗುಹೇಶ್ವರಾ?

ಪದಾರ್ಥ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಯದ ಕೈ = ದೇಹದಲ್ಲಿರುವ ಕೈ, ಕರಸ್ಥಲ
ಕಾರ್ಯ = ಕರಸ್ಥಲದ ಇಷ್ಟಲಿಂಗ
ವಾಯ = ವಿನಾಕಾರಣ

ವಚನಾರ್ಥ:
ಪ್ರತಿಯೊಬ್ಬನ ದೇಹ ಭಾವದಲ್ಲೂ ದೇವರು ನೆಲೆಸಿರುತ್ತಾನೆ. “ಅಹಮಾತ್ಮಾ ಗುಡಾಕೇಶ ಸರ್ವಭೂತಾಶಯಸ್ಮಿತಃ” ಎಲೈ ಅರ್ಜುನ, ನಾನು ಎಲ್ಲಾ ಪ್ರಾಣಿಗಳ ಹೃದಯದಲ್ಲಿರುವ ಆತ್ಮನಾಗಿದ್ದೇನೆ ಎಂದು ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ಅದರಂತೆ ನಮ್ಮ ದೇಹಭಾವದಲ್ಲಿರುವ ದೈವವನ್ನು ಕರಸ್ಥಲದಲ್ಲಿಟ್ಟು ಕಾಣಬೇಕು. ಹಾಗಲ್ಲದೆ ದೈವವನ್ನು ಹೊರಗೆಲ್ಲೊ ಹುಡುಕಿ ಅಲೆಯುತ್ತಾ ದೈಹಿಕ ಶ್ರಮದಿಂದ ಬಳಲಬಾರದು. ಇದನ್ನು ಅಲ್ಲಮಪ್ರಭು ಅದ್ಭುತವಾದ ಒಂದು ಉಪಮೆಯ ಮೂಲಕ ಸ್ಪಷ್ಟಪಡಿಸುತ್ತಾರೆ. ಎತ್ತಿನ ಮೇಲೆ ಕುಳಿತು ಸವಾರಿ ಮಾಡುತ್ತ ಅದೇ ಎತ್ತನ್ನು ಹುಡುಕಿಕೊಂಡು ಹೋದ ಹಾಗೆ. ಎತ್ತನೇರಿ ಎತ್ತನರಸುವರು
ಎತ್ತ ಹೋದರಯ್ಯ?

ಪದಪ್ರಯೋಗಾರ್ಥ:

ಎತ್ತನೇರಿ ಎತ್ತನರಸುವರು ಎಂಬ ಅಲ್ಲಮನ ಅನನ್ಯ ಪದಪ್ರಯೋಗವನ್ನು ಒಂದು ಸರಳ ಕಥೆಯೊಂದಿಗೆ ಸಮೀಕರಿಸಿ ನೋಡಬಹುದು.

ಒಬ್ಬ ಗುರುವಿನ ಹತ್ತು ಶಿಷ್ಯರ ಗುಂಪು ಹರಿಯುವ ನದಿಯನ್ನು ದಾಟಿ ಹೋಗುವ ಪ್ರಸಂಗ ಬಂತು. ನದಿ ದಾಟಿದ ನಂತರ ಎಲ್ಲಾ ಹತ್ತು ಶಿಷ್ಯರೂ ದಾಟಿ ಬಂದಿರುವರೆ ಎಂದು ಖಚಿತಪಡಿಸಿಕೊಳ್ಳಲು ಒಬ್ಬನು ತನ್ನನ್ನು ಬಿಟ್ಟು ಇತರರನ್ನು ಎಣಿಸಿ ಒಂಬತ್ತು ಶಿಷ್ಯರು ಮಾತ್ರ ಇದ್ದಾರೆಂದು ಆತಂಕಗೊಂಡ. ಪ್ರತಿಯೊಬ್ಬನು ಹೀಗೆಯೇ ತನ್ನನ್ನು ಬಿಟ್ಟು ಇತರರನ್ನು ಒಂಬತ್ತು ಎಂದು ಎಣಿಸುತ್ತ ಹತ್ತನೆಯವನು ನದಿಯಲ್ಲಿ ಮುಳುಗಿ ಹೋಗಿದ್ದಾನೆ ಅಂದುಕೊಂಡು ದುಃಖಿತರಾದರು. ಎಲ್ಲವೂ ತನ್ನಲ್ಲೇ ಇದ್ದುಕೊಂಡು ಅದೆಲ್ಲಿದೆ ಎಂದು ಹುಡುಕುತ್ತಾ ಹೋಗಿ ದುಃಖಿತನಾಗುವ ಮನುಷ್ಯನ ಮನಸ್ಥಿತಿಯನ್ನು ರಮಣ ಮಹರ್ಷಿಗಳು ಈ ಕಥೆಯ ಮೂಲಕ ಉದಹರಿಸಿದ್ದಾರೆ. ಅಲ್ಲಮ ಬಳಸಿರುವ ಎತ್ತನೇರಿ ಎತ್ತನರಸುವ ಅಪರೂಪದ ರೂಪಕ ಮತ್ತು ರಮಣರು ಹೇಳಿದ ಉಪದೇಶಾಮೃತ ಕಥೆಯ ಸಾರ ಎರಡೂ ಒಂದೇ. “ಭಾವದಲೊಬ್ಬ ದೇವರ ಮಾಡಿ” ಎಲ್ಲಾ ವಚನ ಗಾಯಕರ ಹಾಟ್ ಫೇವರಿಟ್ ವಚನ ಕೂಡಾ!

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...