ಅಲ್ಲಮನ ಅನನ್ಯ ಪದಪ್ರಯೋಗಗಳು | ನೋಟದ ಸುಖ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು... ಆಗಾಗ

ಓಡಿನಲುಂಟೆ ಕನ್ನಡಿಯ ನೋಟ?
ಮರುಳಿನ ಕೂಟ ವಿಪರೀತಚರಿತ್ರ.
ನೋಟದ ಸುಖ ತಾಗಿ ಕೋಟಲೆಗೊಳ್ಳುತ್ತಿದೆ ಲೋಕ
ಗುಹೇಶ್ವರನೆಂಬ ಲಿಂಗವು ಒಬ್ಬನೆ ಅಚಲ. ಉಳಿದವರೆಲ್ಲರೂ ಸೂತಕಿಗಳು.

ಪದಾರ್ಥ:
ಓಡು = ಮಡಕೆಯ ತುಂಡು
ವಿಪರೀತ = ವಿರುದ್ಧ
ಚರಿತ್ರ = ನಡವಳಿಕೆ
ಕೋಟಲೆ = ತೊಂದರೆ
ಸೂತಕಿ = ಅಬಲ

ವಚನಾರ್ಥ:
ಕಣ್ಣು, ಕನ್ನಡಿ, ಕಾಣ್ಕೆ ಇವು ವಚನದಲ್ಲಿ ಅಲ್ಲಮ ಬಳಸಿರುವ ಮೂರು ರೂಪಕಗಳು. ಕನ್ನಡಿಯಲ್ಲಿ ಕಣ್ಣಿರಿಸಿದಾಗ ಕಾಣುವ ಕಾಣುವಿಕೆ ಮಣ್ಣಿನ ಮಡಕೆಯ ತುಂಡಿನಲ್ಲಿ ಕಂಡುಬರುವುದೇ? ಮಣ್ಣಿನ ಮಡಕೆಯ ಚೂರಿನಲ್ಲಿ ತನ್ನ ಪ್ರತಿಬಿಂಬ ಕಂಡೀತು ಎಂಬ ಅಜ್ಞಾನ ಮತ್ತು ಭ್ರಮೆಯಿಂದ ಮರುಳುಗೊಂಡ ಲೋಕದ ಜನರ ನಡವಳಿಕೆಗಳೇ ವಿಪರೀತ ವೈಪರೀತ್ಯದಿಂದ ಕೂಡಿರುತ್ತವೆ. ಅವರ ಕಾಣ್ಕೆ, ನೋಟ, ಚಾರಿತ್ರ್ಯ ಎಲ್ಲವೂ ಇಂದ್ರಿಯ ನಿಯಂತ್ರಿತ. ಕಣ್ಣು ಕಿವಿ ಮೂಗು ನಾಲಗೆ ಚರ್ಮ ಎಂಬ ಪಂಚೇಂದ್ರಿಯಗಳು ಸ್ಪುರಿಸುವ ಸುಖದಿಂದ ನಿರ್ದೇಶಿತವಾದ ಜನರ ವಿಪರೀತದ ನಡವಳಿಕೆಗಳಿಂದಾಗಿ ಲೋಕ ಕಷ್ಟ ಕೋಟಲೆಗೊಳಗಾಗಿದೆ. ಈ ಎಲ್ಲಾ ವಿಪರೀತಗಳ ನಡುವೆಯೂ ಅಚಲನಾಗಿ ಸ್ಥಿರನಾಗಿ ನಿಲ್ಲುವವ ಆ ಗುಹೇಶ್ವರನೊಬ್ಬನೇ. ಉಳಿದವರೆಲ್ಲರೂ ನೋಟದ ಸುಖದ ಸೋಂಕು ತಾಗಿ ನೊಂದ ಬೆಂದ ಮಲಿನವಾದ ಮನದವರು, ಅಬಲರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದಪ್ರಯೋಗಾರ್ಥ:
ಇಡೀ ವಚನವನ್ನು “ನೋಟದ ಸುಖ” ಎಂಬ ಅಪರೂಪದ ಪದ ನಿಯಂತ್ರಿಸುತ್ತದೆ.
ಪಂಚೇಂದ್ರಿಯಗಳಲ್ಲಿ ಪ್ರಧಾನವಾದ ಕಣ್ಣನ್ನು ಕೇಂದ್ರಿಕರಿಸಿ ಇಂದ್ರಿಯ ಸುಖಗಳ ಪ್ರಲೋಭನೆಗೆ ಕಣ್ಣೋಟವೇ ಕಾರಣವೆಂದು ಪ್ರತಿಪಾದಿಸುವ ಅಲ್ಲಮನ ದೃಷ್ಟಿಯಲ್ಲಿ “ನೋಟದ ಸುಖ”ವೇ ಲೋಕದ ಜನರ ಸಕಲ ಕಷ್ಟ ಕಾರ್ಪಣ್ಯಗಳಿಗೆ ಮೂಲ ಬೀಜವಾಗಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ ಕರಣಂಗಳ ಚೇಷ್ಟೆಗೆ ಮನವೇ ಬೀಜ ಎಂಬ ಅಕ್ಕನ ಮಾತಿನಂತೆ ನೋಟದ ಸುಖವೇ ಕರಣಂಗಳ ಚೇಷ್ಟೆಗೆ ಕಾರಣ ಎಂಬ ಅಲ್ಲಮನ ಪದ ಪ್ರಯೋಗ ಈ ವಚನದಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ.

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...