ಅಲ್ಲಮನ ಅನನ್ಯ ಪದಪ್ರಯೋಗಗಳು | “ನುಂಗಿ” 

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

“ನುಂಗಿ”
ಅವನು ಜಗವ ನುಂಗಿ,
ಜಗವು ಅವನ ನುಂಗಿ,
ಸೀಮೆಯ ನಿಸ್ಸೀಮೆ ನುಂಗಿ,
ಗುಹೇಶ್ವರನೆಂಬ ನಾಮವ
ಲಿಂಗವು ನುಂಗಿತ್ತು.

ವಚನಾರ್ಥ:
ಇಲ್ಲಿ ಅವನು ಅಂದರೆ ಶರಣ. ನುಂಗು ಅಂದರೆ ಐಕ್ಯನಾಗು ಅಥವಾ ವಿಲೀನನಾಗು ಎಂದರ್ಥ. ಶರಣನು ಜಗತ್ತಿನಲ್ಲಿ ಐಕ್ಯನಾಗಿ, ಜಗತ್ತಿನಲ್ಲಿ ಶರಣನು ಐಕ್ಯನಾಗಿ, ಬಯಲಿನಲ್ಲಿ ಬಟ್ಟಬಯಲು ಐಕ್ಯವಾಗಿ ಕೊನೆಯಲ್ಲಿ ಗುಹೇಶ್ವರನು ಲಿಂಗದಲ್ಲಿ ಐಕ್ಯವಾಗುವ ಪ್ರಕ್ರಿಯೆ ವಚನದಲ್ಲಿ ಚಿತ್ರಿತವಾಗಿದೆ. ಮನುಷ್ಯ ತನ್ನ ಜೀವನ ಗತಿಯಲ್ಲಿ ಮುಂದುವರಿದಂತೆಲ್ಲ ಜಗತ್ತನ್ನೇ ಜಯಿಸಿ ಅರಗಿಸಿ ನುಂಗಿಕೊಳ್ಳಲು ಹೋಗುತ್ತಾನೆ. ಅಂತಿಮವಾಗಿ ಜಗತ್ತು ಆತನನ್ನು ನುಂಗಿಕೊಳ್ಳುತ್ತದೆ. ಸೀಮೆಯ ಅಂದರೆ ಬಯಲನ್ನು ಬಟ್ಟಬಯಲು ನುಂಗುತ್ತದೆ. ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು ಬಯಲು ಬಯಲಾಗಿ ಬಯಲಾಯಿತ್ತಯ್ಯ ಎಂದು ಅಲ್ಲಮನ ಮಹತ್ವದ ಇನ್ನೊಂದು ವಚನವಿದೆ. ಎಲ್ಲವನ್ನೂ ಎಲ್ಲವೂ ನುಂಗಿದ ನಂತರ ಕೊನೆಯಲ್ಲಿ ಉಳಿಯುವುದು ಗುಹೇಶ್ವರ ಲಿಂಗ.

ಪದ ಪ್ರಯೋಗಾರ್ಥ:
ಹದಿಮೂರು ಪದಗಳ ಚಿಕ್ಕ ವಚನದಲ್ಲಿ ನುಂಗಿ ಎನ್ನುವ ಪದ ನಾಲ್ಕು ಬಾರಿ ಪ್ರಯೋಗವಾಗಿದೆ. ನುಂಗುವ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ವಚನದಲ್ಲಿ ಬಿಂಬಿಸುತ್ತದೆ. ನುಂಗುವುದು ಅಂದರೆ ಯಾವುದೇ ಪ್ರಚೋದನೆಯಿಲ್ಲದೆ ಅಹಿಂಸಾತ್ಮಕವಾಗಿ ಒಬ್ಬರೊಲ್ಲಬ್ಬರು ಲೀನರಾಗುವ ಪ್ರಸಂಗ. ನುಂಗಿ ಎಂಬ ಪದದ ಅನನ್ಯ ಪ್ರಯೋಗವನ್ನು ಬೇಂದ್ರೆಯವರ ಅದ್ಭುತವಾದ ಆದ್ಯಾತ್ಮಿಕ ಕವಿತೆ “ಚಾಂಗದೇವ ಪಾಸಷ್ಟಿ”ಯಲ್ಲಿ ಕಾಣಬಹುದು. ಕವಿತೆಯಲ್ಲಿ ಬರುವ ಚಾಂಗದೇವ ಮತ್ತು ಜ್ಞಾನದೇವ ಎಂಬ ಇಬ್ಬರು ಸಂತರ ಸಂಗಮ ಸಂವಾದದ ಸಂದರ್ಭದಲ್ಲಿ ಬೇಂದ್ರೆ ಹೀಗೆ ಹೇಳುತ್ತಾರೆ. “ನಾ ನಿನ್ನ ನುಂಗಿ ನೀ ನನ್ನ ನುಂಗಿ ಇಂಗಿತ್ತು ಸರ್ವನಾಮ, ಆತ್ಮಾರ್ಥವಾಗಿ ಆ ನಾನು ನೀನು ತಣಿಸಿತ್ತು ಆತ್ಮ ಕಾಮ”. ಅಲ್ಲಮನ ವಚನದಲ್ಲಿ ಮತ್ತು ಬೇಂದ್ರೆ ಕವಿತೆಯಲ್ಲಿ ಬಳಕೆಯಾಗಿರುವ ನುಂಗಿ ಎಂಬ ಪದಕ್ಕೆ ಸಮಾನ ಉದ್ದೇಶ ಮತ್ತು ಸನ್ನಿವೇಶಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...