ಅಲ್ಲಮನ ಅನನ್ಯ ಪದಪ್ರಯೋಗಗಳು | ರೂಪ ನಿರೂಪ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ರೂಪ ನಿರೂಪ
ರೂಪನೆ ಕಂಡರು, ನಿರೂಪನೆ ಕಾಣರು.
ತನುವನೆ ಕಂಡರು, ಅನುವನೆ ಕಾಣರು.
ಆಚಾರವನೆ ಕಂಡರು, ವಿಚಾರವನೆ ಕಾಣರು.
ಗುಹೇಶ್ವರಾ, ನಿಮ್ಮ ಕುರುಹನೆ ಕಂಡರು, ಕೂಡಲರಿಯದೆ ಕೆಟ್ಟರು!

ವಚನಾರ್ಥ:
ನಿಮ್ಮನ್ನು ಕೂಡಲರಿಯದೆ ಕೆಟ್ಟರು ಎಂದು ಹೇಳುವುದು ಅಲ್ಲಮನ ವಚನದ ಉದ್ದೇಶ. ಕೂಡುವುದು ಅಂದರೆ ಒಂದಾಗುವುದು, ಐಕ್ಯನಾಗುವುದು ಎಂದರ್ಥ. ಯಾರು ಕೆಟ್ಟರು, ಹೇಗೆ ಕೆಟ್ಟರು ಎಂಬುದಕ್ಕೆ ಅಲ್ಲಮನೇ ನೀಡುವ ಪಟ್ಟಿ ಸಹಿತ ವಿವರಣೆ ಇದೆ. ರೂಪವನ್ನು ಕಾಣುವವರು ಕೆಟ್ಟರು. ಕಣ್ಣಿಗೆ ಕಾಣುವ ಈ ಜಗತ್ತಿನ ವಿವಿಧ ಪ್ರಲೋಭನೆಗಳಿಗೆ ಒಳಗಾಗಿ ಕೆಟ್ಟರು. ಕಣ್ಣಿಗೆ ಕಾಣದ ನಿರೂಪನಾದ ರೂಪವಿಲ್ಲದ ಪರಮಾತ್ಮನ ಕಾಣದೆ ಕೆಟ್ಟರು. ತನುವನ್ನು ಅಂದರೆ ದೇಹವನ್ನು ಮೋಹಿಸಿ ಕೆಟ್ಟರು. ತನುವಿನೊಳಗೆ ಅನುವಾಗಿ ನೆಲೆಸಿರುವ ಅವನನ್ನು ಕಾಣದೆ ಕೆಟ್ಟರು. ಆಚಾರ, ಆಚರಣೆ, ಮಡಿ ಮೈಲಿಗೆ ಸಂಪ್ರದಾಯ ಇತ್ಯಾದಿಗಳಲ್ಲೇ ಮೈಮರೆತು ತನ್ನ ತಾನಾರೆಂದು ವಿಚಾರಿಸಿ ತನ್ನರಿವ ಅರಿಯದೆ ಕೆಟ್ಟರು. ದೇವರು ಎಲ್ಲಿದ್ದಾನೆ, ಹೇಗಿದ್ದಾನೆ ಎಂಬ ಅವನ ಕುರುಹನ್ನು ಹುಡುಕುತ್ತ ಹೋಗಿ ಎಲ್ಲೆಲ್ಲೂ ಎಲ್ಲದರಲ್ಲೂ ವ್ಯಾಪಿಸಿಕೊಂಡಿರುವ ಅವನನ್ನು ಕೂಡಲು ಅರಿಯದೆ ಕೆಟ್ಟರು.

ಪದಪ್ರಯೋಗಾರ್ಥ:
ರೂಪ-ನಿರೂಪ, ತನು-ಅನು, ಆಚಾರ-ವಿಚಾರ, ಕುರುಹು-ಕೂಡಲು ಇವು ವಚನದಲ್ಲಿ ಕಾಣಸಿಗುವ ಅನನ್ಯ ಪದ ಜೋಡಣೆಗಳು. ಏನನ್ನು ಕಂಡು ಕೆಟ್ಟರೋ ಮತ್ತು ಏನನ್ನು ಕಾಣದೆ ಕೆಟ್ಟರೋ ಅವುಗಳನ್ನು ಒಂದು ಸಿದ್ದಪಟ್ಟಿ ಮಾಡಿಕೊಡುವಂತಹ ಉದ್ದೇಶ ವಚನದಲ್ಲಿದೆ. ರೂಪ, ತನು, ಆಚಾರ, ಕುರುಹು ಇವು ಕಣ್ಣಿಗೆ ಕಂಡಂತಹವು. ವಿರೂಪ, ಅನು, ವಿಚಾರ ಇವು ಕಣ್ಣಿಗೆ ಕಾಣದೆ ಹೋದಂತಹವು. ಇವೆರಡನ್ನು ಜೋಡಣೆ ಮಾಡಿ ಪ್ರಾಸಬದ್ದವಾಗಿ ಹೆಣೆದು ವಚನದಲ್ಲಿ ಪ್ರಯೋಗಿಸಿರುವ ಪ್ರಕ್ರಿಯೆಯೇ ಅನನ್ಯವಾಗಿದೆ. ಕಂಡರು, ಕಾಣರು ಎಂಬ ಪದಗಳು ಪ್ರತಿ ಸಾಲಿನಲ್ಲಿ ಆಯಕಟ್ಟಾಗಿ ನಿಂತು ವಚನದ ವಿಷಯ ಮಂಡನೆಗೆ ಕಳೆಗಟ್ಟುತ್ತವೆ. ಕಂಡದ್ದು, ಕಾಣದ್ದು ಕಡೆಯಲ್ಲಿ “ಕೆಟ್ಟರು” ಎಂಬಲ್ಲಿ ಕೊನೆಗೊಂಡು ವಚನದ ಸಂದೇಶವನ್ನು ತಲುಪಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...