ಅಲ್ಲಮನ ಅನನ್ಯ ಪದಪ್ರಯೋಗಗಳು | ಶತಕೋಟಿ ಸೂರ್ಯರು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಶತಕೋಟಿ ಸೂರ್ಯರು
ನಿಮ್ಮ ತೇಜವ ನೋಡಲೆಂದು
ಹೆರಸಾರಿ ನೋಡುತ್ತಿರಲು
ಶತಕೋಟಿ ಸೂರ್ಯರು
ಮೂಡಿದಂತೆ ಇರ್ದುದಯ್ಯಾ! ಮಿಂಚಿನಬಳ್ಳಿಯ ಸಂಚವ ಕಂಡಡೆ,
ಎನಗಿದು ಸೋಜಿಗವಾಯಿತ್ತು!
ಗುಹೇಶ್ವರಾ
ನೀನು ಜ್ಯೋತಿರ್ಲಿಂಗವಾದಡೆ
ಉಪಮಿಸಿ ನೋಡಬಲ್ಲವರಿಲ್ಲಯ್ಯಾ.

ಪದಾರ್ಥ:
ಹೆರಸಾರಿ = ಹೆಜ್ಜೆಯಿಟ್ಟು
ಸಂಚವ = ಗೊಂಚಲು
ಉಪಮಿಸಿ = ಹೋಲಿಸಿ

ವಚನಾರ್ಥ:
ಜ್ಯೋತಿರ್ಲಿಂಗ ಎಂದರೆ ಬೆಳಕನ್ನು ಹೊರಸೂಸುವ ಪ್ರಕಾಶಮಾನವಾದ ಕಿರಣಗಳನ್ನು ಬಿಂಬಿಸುವ ಲಿಂಗ ಸ್ವರೂಪ. ಪ್ರಾಚೀನ ಗ್ರಂಥಗಳ ಪ್ರಕಾರ, ಸುಮಾರು 64 ಜ್ಯೋತಿರ್ಲಿಂಗಗಳಿವೆ, ಅವುಗಳಲ್ಲಿ ಹನ್ನೆರಡು ಬಹಳ ಪ್ರಸಿದ್ಧವಾಗಿವೆ. ಈ ಲಿಂಗಗಳು ಸ್ವಯಂ-ಉಗಮವಾದವುಗಳು ಎಂದು ಹೇಳಲಾಗುತ್ತದೆ. ಒಂದು ಜ್ಯೋತಿರ್ಲಿಂಗದ ತೇಜಸ್ಸು ಹೇಗಿರುತ್ತದೆ ಎಂದರೆ ನೂರು ಕೋಟಿ ಸೂರ್ಯರು ಒಟ್ಟಿಗೇ ಬೆಳಗಿದಂತೆ. ಮಿಂಚಿನ ಬಳ್ಳಿಗಳು ಗೊಂಚಲು ಗೊಂಚಲಾಗಿ ಗಗನದಲ್ಲಿ ಒಮ್ಮೆಲೇ ಮಿಂಚಿ ಮರೆಯಾದಂತೆ. ಅಲ್ಲಮನ ಗುಹೇಶ್ವರ ಜ್ಯೋತಿರ್ಲಿಂಗವೇ. ಅದನ್ನು ಮತ್ತೊಂದಕ್ಕೆ ಹೋಲಿಕೆ ಮಾಡಲಾಗದು. ಅಲ್ಲಮನ ಅಂತ್ಯ ಶ್ರೀಶೈಲದ ಕದಳಿಯಲ್ಲಿ ಆಗಿದೆ ಎಂದು ಹೇಳಲಾಗುವ ಸ್ಥಳದಲ್ಲಿ ಇರುವ ಶ್ರೀಶೈಲ ಮಲ್ಲಿಕಾರ್ಜುನ ಲಿಂಗ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದಪ್ರಯೋಗಾರ್ಥ:
ವಿಜ್ಞಾನದ ಪ್ರಕಾರ ಸೂರ್ಯನು ಸೌರಮಂಡಲದ ಒಂದು ನಕ್ಷತ್ರ. ಸೂರ್ಯ ಎಂದರೆ ಅತ್ಯುಚ್ಚ ಬೆಳಕು ಎಂಬ ಅರ್ಥವಿದೆ. ಸೂರ್ಯನ ಬೆಳಕು ಭೂಮಿಯ ಎಲ್ಲಾ ಜೀವಿಗಳಿಗೂ ಆಧಾರವಾಗಿದ್ದು, ಭೂಮಿಯ ಮೇಲೆ ಅಗಾಧ ಪ್ರಭಾವ ಬೀರುತ್ತದೆ. “ಬಿಸಿಲಿದು ಬರಿ ಬಿಸಿಲಲ್ಲವೋ ಸೂರ್ಯನ ಕೃಪೆ ಕಾಣೋ. ಸೂರ್ಯನು ಬರಿ ರವಿಯಲ್ಲವೋ, ಆ ಭ್ರಾಂತಿಯ ಮಾಣೋ” ಎಂಬ ಕುವೆಂಪುರವರ ಪ್ರಸಿದ್ದ ಕವಿತೆಯಲ್ಲಿ ಕವಿಯು ಸೂರ್ಯನು ಸೂಸುವ ಬೆಳಕಿನ ಕಿರಣಗಳಲ್ಲಿ ದೇವರನ್ನು ಕಾಣುತ್ತಾನೆ. ಹಾಗೆಯೇ ಅಲ್ಲಮ ಗುಹೇಶ್ವರನ ತೇಜಸ್ಸನ್ನು ನೋಡಲೆಂದು ಹೋದಾಗ ಅಲ್ಲಿ ಒಂದಲ್ಲ ಶತಕೋಟಿ ಸೂರ್ಯರು ಒಮ್ಮೆಲೇ ಮೂಡಿ ಪ್ರಜ್ವಲಿಸಿದಂತಾಗಿ ದಿವ್ಯ ಸೋಜಿಗವೊಂದು ಸೃಷ್ಟಿಯಾಗುತ್ತದೆ. ಶತಕೋಟಿ ಸೂರ್ಯರು ಎಂಬ ಪದ ಕಲ್ಪನೆಯೇ ಅತ್ಯಂತ ಪ್ರಖರವಾಗಿದೆ. ಅಲ್ಲಮನ ವಿವಿಧ ವಚನಗಳಲ್ಲಿ ಹೀಗೆ ಸಂಖ್ಯೆಗಳು ಹೇರಳವಾಗಿ ಬಳಕೆಯಾಗಿರುವುದನ್ನು ಕಾಣಬಹುದು. ಅಲ್ಲಮನ ಲೆಕ್ಕಾಚಾರದಲ್ಲಿ ಒಂದು ಜ್ಯೋತಿರ್ಲಿಂಗದ ಪ್ರಭೆಯು ಶತಕೋಟಿ ಸೂರ್ಯರು ಹೊಮ್ಮಿಸುವ ಕಿರಣಗಳಿಗೆ ಸಮನಾದುದು.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...