ಅಲ್ಲಮನ ಅನನ್ಯ ಪದಪ್ರಯೋಗಗಳು | ಸುಮನ ಸುಜ್ಞಾನ 

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಸುಮನ ಸುಜ್ಞಾನ
ಗ್ರಾಮ ಮಧ್ಯದ ಮೇಲಣ ಮಾಮರ
ಸೋಮಸೂರ್ಯರ ನುಂಗಿತ್ತಲ್ಲಾ!
ಅಮರಗಣಂಗಳ ನೇಮದ ಮಂತ್ರ
ಬ್ರಹ್ಮಾಂಡಕೋಟಿಯ ಮೀರಿತ್ತಲ್ಲಾ!
ಸುಮನ ಸುಜ್ಞಾನದಲಾಡುವ ಮಹಾಮಹಿಮಂಗೆ
ನಿರ್ಮಳವಾಯಿತ್ತು ಗುಹೇಶ್ವರಾ!

ಪದಾರ್ಥ:
ಗ್ರಾಮ = ಪುರ, ದೇಹ
ಗ್ರಾಮಮಧ್ಯ = ದೇಹಾಂತರಂಗ

ವಚನಾರ್ಥ:
ಆಧ್ಯಾತ್ಮಿಕ ಚಿಂತನೆಯಲ್ಲಿ ಮನುಷ್ಯ ದೇಹವನ್ನು ಪುರ ಎಂಬ ಅರ್ಥದಲ್ಲಿ ಗುರುತಿಸಿದ ಸಂದರ್ಭವಿದೆ. ಪುರ ಅಂದರೆ ಊರು, ಹಳ್ಳಿ, ಗ್ರಾಮ. ಈ ವಚನದಲ್ಲಿ ಗ್ರಾಮ ಎಂಬ ಪದವನ್ನು ಪುರ ಎಂಬ ಪದಕ್ಕೆ ಸಮಾನಾರ್ಥವಾಗಿ ಬಳಸಿ ಅದನ್ನು ಮನುಷ್ಯ ದೇಹಕ್ಕೆ ಸಮೀಕರಿಸಿ ಮನುಷ್ಯನ ಮನಸ್ಸನ್ನು ಗ್ರಾಮದ ಮಧ್ಯದ ಮಾವಿನ ಮರಕ್ಕೆ ಹೋಲಿಸಲಾಗಿದೆ. ತನ್ನ ದೇಹದ ಅಂತರಂಗದಲ್ಲಿ ಶರಣನು ಒಳಕ್ಕಿಳಿದಾಗ ಅವನಿಗೆ ದೊರೆವುದು ಲಿಂಗಾಂಗ ಸಾಮರಸ್ಯ. ಅಲ್ಲಿ ಸೂರ್ಯ ಚಂದ್ರರ ಹಂಗಿಲ್ಲ. ಹಗಲು ರಾತ್ರಿಗಳ ಹವಣಿಕೆಯಿಲ್ಲ. ಎಲ್ಲವೂ ಪ್ರಶಾಂತ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಶಾಂತತೆಯಲ್ಲಿ ಶರಣನ ಅನುಭವಕ್ಕೆ ಬರುವುದು ಓಂಕಾರ ಮಂತ್ರ ಮಾತ್ರ. ಅದು ದಾಸರು ಹಾಡಿದ ಹಾಗೆ ಧರ್ಮವೇ ಜಯವೆಂಬ ದಿವ್ಯ ಮಂತ್ರ. ಅದು ಅಮರಗಣಂಗಳ ನೇಮದ ಮಂತ್ರವಾಗಿ ಬ್ರಹ್ಮಾಂಡಕೋಟಿಯ ಮೀರಿರುತ್ತದೆ. ಅಂತಹ ಶರಣನ ಮನಸ್ಸು ಸುಮನ. ಪ್ರಶಾಂತ ಮನ. ಅವನ ಜ್ಞಾನ ಸುಜ್ಞಾನ, ದಿವ್ಯ ಜ್ಞಾನ. ಸುಮನ ಸುಜ್ಞಾನದಲಾಡುವ ಮಹಾಮಹಿಮನವ. ಅವನು ನಿರ್ಮಲ, ನಿಷ್ಕಲಂಕ, ನಿಶ್ಚಿಂತ.

ಪದ ಪ್ರಯೋಗಾರ್ಥ:
ಗ್ರಾಮ ಮಧ್ಯದ ಮೇಲಣ ಮಾಮರ ಮತ್ತು ಸುಮನ ಸುಜ್ಞಾನ ಇವು ಈ ವಚನದಲ್ಲಿ ಮೂಡಿಬಂದಿರುವ ಅನನ್ಯ ಪದ ಪ್ರಯೋಗಗಳು. ನಮ್ಮ ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಇಂದಿಗೂ ಕಂಡು ಬರುವ ಸಾಮಾನ್ಯ ದೃಶ್ಯ. ಗ್ರಾಮದ ಮಧ್ಯದಲ್ಲಿ ಒಂದು ಮರ. ಅರಳಿಯೋ, ಆಲವೋ, ಮಾವಿನ ಮರವೋ ಆಗಿರಬಹುದು. ಮರದ ಬುಡದಲ್ಲಿ ಸುತ್ತ ಕಟ್ಟಿದ ಕಟ್ಟೆ. ಅಲ್ಲಿ ಕಟ್ಟೆಯ ಮೇಲೆ ಕುಳಿತ ಊರಿನ ಜನ. ಅಂತಹ ಸಾಮಾನ್ಯ ಸಂಗತಿಯನ್ನು ದೇಹ ಮತ್ತು ದೇಹದೊಳಗಿನ ಅಂತರಂಗಕ್ಕೆ ಸಮೀಕರಿಸಿ ಗ್ರಾಮ ಮಧ್ಯದ ಮೇಲಣ ಮಾಮರ ಎಂಬ ದೃಶ್ಯವನ್ನು ವಚನದಲ್ಲಿ ತಂದಿರುವುದು ವಿಸ್ಮಯಗೊಳಿಸುತ್ತದೆ. ಹಾಗೆಯೇ ಮುಂದುವರಿದು ಶರಣ ವ್ಯಕ್ತಿತ್ವದ ಘನತೆಯನ್ನು ಪ್ರತಿಪಾದಿಸಲು ಬಳಸಿರುವ ಪದ ಸುಮನ ಸುಜ್ಞಾನ. ಶರಣನ ಮನಸ್ಸು ಎಂತದು? ಸು ಮನ. ಸುಮದಂತ ಮನಸ್ಸು. ಹೂವಿನ ಮನಸ್ಸು. ಶರಣನ ಮನಸ್ಸಿನಲ್ಲಿ ಕೋಮಲತೆಯಿದೆ. ಅದು ನಿರ್ಮಲವಾಗಿದೆ. ಅಲ್ಲಿ ಜ್ಞಾನವೆಂಬ ಪರಿಮಳ ಸೂಸುತ್ತಿದೆ. ಶರಣನ ಸುಮನದಲ್ಲಿ ಸುಜ್ಞಾನವಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...