ಅಲ್ಲಮನ ಅನನ್ಯ ಪದಪ್ರಯೋಗಗಳು | ತನ್ನಿಂದ ತಾನಾದಳು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ತನ್ನಿಂದ ತಾನಾದಳು

ಅಂಗೈಯ ಲಿಂಗದಲ್ಲಿ ಕಂಗಳ ನೋಟ ಸ್ವಯವಾದ ಇರವ ನೋಡಾ!
ತನ್ನ ಸ್ವಾನುಭಾವದ ಉದಯದಿಂದ ತನ್ನ ತಾನರಿದ ನಿಜಶಕ್ತಿಯ ನೋಡಾ! ಭಿನ್ನವಿಲ್ಲದರಿವು,
ಮನ್ನಣೆಯ ಮಮಕಾರವ ಮೀರಿದ ಭಾವ!
ತನ್ನಿಂದ ತಾನಾದಳು!
ನಮ್ಮ ಗುಹೇಶ್ವರಲಿಂಗದಲ್ಲಿ ಸ್ವಯಲಿಂಗವಾದ ಮಹಾದೇವಿಯಕ್ಕಗಳ ನಿಲವಿಂಗೆ
ನಮೋ ನಮೋ ಎನುತಿರ್ದೆನು
ಕಾಣಾ ಚೆನ್ನಬಸವಣ್ಣಾ.

ಪದಾರ್ಥ:
ಸ್ವಯವಾದ = ತಾನೇ ತಾನಾದ
ಇರವ = ಅಸ್ತಿತ್ವ
ಸ್ವಯಲಿಂಗವಾದ = ಸ್ವಯಂಭು, ಉದ್ಭವಲಿಂಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನಾರ್ಥ:

ಉಡುತಡಿಯಿಂದ ಕಲ್ಯಾಣಕ್ಕೆ ಆಗಮಿಸಿದ ಅಕ್ಕಮಹಾದೇವಿಯ ಅದ್ಭುತವಾದ ವ್ಯಕ್ತಿತ್ವವನ್ನು ಪ್ರತ್ಯಕ್ಷವಾಗಿ ಕಂಡು ಮನಗಂಡು ಅದನ್ನು ಬಸವಣ್ಣನ ಸಹೋದರಿಯ ಮಗ ಚನ್ನಬಸವಣ್ಣನಿಗೆ ಅಲ್ಲಮನು ವಿವರಿಸಿ ಹೇಳುವ ಮಾತುಗಳು ಈ ವಚನದಲ್ಲಿವೆ. ಅಕ್ಕನದು ಮನ್ನಣೆಯ ಮಮಕಾರವ ಮೀರಿದ ಭಾವ. ಆಕೆಗೆ ಮನ್ನಣೆಯ ಮಮಕಾರವಿಲ್ಲ. ಮನ್ನಣೆಯ ದಾಹ ತಿನ್ನುವುದು ಆತ್ಮವನು ಮಂಕುತಿಮ್ಮ ಎಂಬ ಕಗ್ಗನುಡಿಯಿದೆ. ಅಂಗೈಯ ಇಷ್ಟಲಿಂಗದಲ್ಲಿ ತನ್ನ ನೋಟವನ್ನು ಕೇಂದ್ರೀಕರಿಸಿ ಅದರಲ್ಲೇ ತನ್ನ ಅಸ್ತಿತ್ವವನ್ನು ಕಂಡುಕೊಂಡವಳು ಅಕ್ಕ. ತನ್ನಲ್ಲಿ ಉದಯಿಸಿದ ಸ್ವಯಂ ಅನುಭಾವದಿಂದ ತನ್ನ ಆರಾಧ್ಯದೈವ ಚನ್ನಮಲ್ಲಿಕಾರ್ಜುನನನ್ನು ಅರಿಯುವ ನಿಜಶಕ್ತಿಯನ್ನು ತಾನಾಗಿಯೇ ಪಡೆದುಕೊಂಡವಳು. ಅಕ್ಕಮಹಾದೇವಿಗೆ ಗುರುವಿನ ಮಾರ್ಗದರ್ಶನ ಇರಲಿಲ್ಲ. ದೀಕ್ಷಾ ವಿಧಿವಿಧಾನಗಳಿರಲಿಲ್ಲ. ಅಕ್ಕಮಹಾದೇವಿ ತನ್ನಿಂದ ತಾನಾದವಳು.

ಪದಪ್ರಯೋಗಾರ್ಥ:

ತನ್ನಿಂದ ತಾನಾದಳು ಎಂಬುದು ಒಂದು ಸರಳ ಪದ ಬಳಕೆಯಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ತಾನೇ ತಾನಾಗುವುದು ಅನ್ನುವುದರ ಸಾಂದರ್ಭಿಕ ರೂಪವೇ ತನ್ನಿಂದ ತಾನಾದಳು. ನಾನು ನೀನು ಆನು ತಾನು ಎಂಬ ನಾಕು ತಂತಿಗಳನ್ನು ನಿರಂತರವಾಗಿ ಮೀಟುವುದೇ ಜೀವನ ಎಂದು ಬೇಂದ್ರೆ ಹೇಳಿದ್ದಾರೆ. ಅಲ್ಲಮನೇ ಒಂದು ಮಹತ್ವದ ವಚನದಲ್ಲಿ “ಆನು ನೀನೆಂಬುದು ತಾನಿಲ್ಲ,
(ತನ್ನ)ತಾನರಿದ ಬಳಿಕ ಮತ್ತೇನೂ ಇಲ್ಲ” ಎಂದು ಹೇಳಿರುವುದು ನಾಕುತಂತಿಯ ಅರ್ಥದಲ್ಲೇ.

ತಾನೇ ತಾನಾಗುವುದು ಅಂದರೆ ನಾನು ನೀನು ಆನು ತಾನು ಎಂಬ ನಾಲ್ಕರ ಒಟ್ಟು ಮೊತ್ತ. ನಾನು ಎಂಬುದು ಭ್ರಮೆ, ನೀನು ಎಂಬುದು ಅಜ್ಞಾನ, ಆನು ಎಂಬುದು ಸ್ವಯಂ ತಾನು ಎಂಬುದು ಪರಂ. ಇವುಗಳೆಲ್ಲದರ ಒಟ್ಟು ಮೊತ್ತವಾದ ವ್ಯಕ್ತಿತ್ವ ಮಹಾದೇವಿ ಅಕ್ಕನದು ಎಂದು ನಿರೂಪಿಸುವಲ್ಲಿ ಅಲ್ಲಮ ಬಳಸಿದ ಸರಳ ಆದರೆ ಅತ್ಯಂತ ಆಳವಾದ ಅರ್ಥವುಳ್ಳ ಪದಪ್ರಯೋಗವೇ ತನ್ನಿಂದ ತಾನಾದಳು!

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...