ಅಲ್ಲಮನ ಅನನ್ಯ ಪದಪ್ರಯೋಗಗಳು | ಭೈತ್ರಕ್ಕೆ ಬೈಗುಂಡು

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಭೈತ್ರಕ್ಕೆ ಬೈಗುಂಡು
ಲೋಕ ಒಂದನೆಂದಡೆ
ತಾನೊಂದನೆನಬೇಡ.
ಮತ್ತಾರೇನೆಂದಡೆಯೂ
ತನ್ನನೆಂದರೆನಬೇಡ.
ಅದೆಂತೆಂದಡೆ
ನಾಹಂ ಲೋಕೇ ನ ಲೋಕೋಹಂ ಲೋಕನಿಂದಾ ಕುತೋ ಮಮ |
ಇತಿ ನಿಶ್ಚಯವದ್ಭಾವಹ ಶಿವಜ್ಞಾನೀತಿ ಕಥ್ಯತೇ ||
ಇಂತೆಂದುದಾಗಿ, ಇದನರಿದು
ಭೈತ್ರಕ್ಕೆ ಬೈಗುಂಡನಿಕ್ಕಿದಂತಿರಬೇಕು ಹಿರಿಯರು, ಗುಹೇಶ್ವರಾ

ಪದಾರ್ಥ:
ಭೈತ್ರ = ನೌಕೆ
ಬೈಗುಂಡು = ಲಂಗರು

ಶ್ಲೋಕಾರ್ಥ:
ಲೋಕದಲ್ಲಿ ನಾನಿಲ್ಲ ಲೋಕವು ನಾನಲ್ಲ ಹೀಗಿರುವಾಗ ಲೋಕನಿಂದೆಯು ನನಗೆಲ್ಲಿ? ಈ ರೀತಿ ನಿಶ್ಚಯಭಾವವುಳ್ಳವನು ಶಿವಜ್ಞಾನಿ ಎಂದು ಬಲ್ಲವರು ಹೇಳುತ್ತಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನಾರ್ಥ:
ಈ ವಚನವನ್ನು ಸುಲಭ ಭಾಷೆಯಲ್ಲಿ ಬರೆದರೆ ಹೀಗೆ ಕಂಡು ಬರುತ್ತದೆ. ಲೋಕ ಒಂದು ಅಂದರೆ ತಾನು ಮತ್ತೊಂದು ಅನ್ನಬಾರದು. ಮತ್ತೆ ಯಾರೋ ಏನೋ ಅಂದರೂ ತನ್ನನ್ನೇ ಅಂದರು ಅಂದುಕೊಳ್ಳಬಾರದು. ತಿಳಿದವರು, ಹಿರಿಯರಾದವರು, ಶಿವಜ್ಞಾನವುಳ್ಳವರು ನೌಕೆಯ ಲಂಗರಿನಂತೆ ಸ್ಥಿರವಾಗಿ ಇರಬೇಕು. ಅವರ ಸ್ಥಿರತೆಯ ಮಟ್ಟ ಹೇಗಿರಬೇಕು ಅಂದರೆ ಲೌಕಿಕವಾದ ರಾಗ ದ್ವೇಷಗಳ ಪ್ರವಾಹದಲ್ಲಿ ಕೊಚ್ಚಿ ಹೋಗದಂತಿರಬೇಕು. ಪ್ರಾಪಂಚಿಕ ಪ್ರಲೋಭನೆ ಮತ್ತು ಆಕರ್ಷಣೆಗೆ ಒಳಗಾಗದೆ ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು.

ಪದ ಪ್ರಯೋಗಾರ್ಥ:
ಭೈತ್ರಕ್ಕೆ ಬೈಗುಂಡನಿಕ್ಕಿದಂತಿರಬೇಕು ಹಿರಿಯರು. ತಿಳಿದಂತಹವರು ನೌಕೆಯ ಲಂಗರಿನಂತೆ ಇರಬೇಕು. ಲಂಗರು ಅಂದರೆ ತೇಲುವ ನೌಕೆಯನ್ನು ಒಂದೆಡೆ ಸ್ಥಿರವಾಗಿ ಹಿಡಿದು ನಿಲ್ಲಿಸಲು ಬಳಸುವ ಲೋಹದ ಒಂದು ಸಲಕರಣೆ. ಶಿವ ಜ್ಞಾನಿಯ ನಿಶ್ಚಯಭಾವದ ಸ್ಥಿರತೆಯನ್ನು ಲಂಗರಿನ ಗುಂಡಿನ ರೂಪಕದಲ್ಲಿ ಹಿಡಿದಿಟ್ಟಿರುವುದು ಈ ವಚನದ ಬುಲೆಟ್ ಪಾಯಿಂಟ್.  ಭೈತ್ರಕ್ಕೆ ಬೈಗುಂಡು ಎಂದು ಪ್ರಾಸಬದ್ದವಾಗಿ ಪದ ಹೊಂದಿಸಿರುವುದು ಅಲ್ಲಮನಿಗೆ ಕನ್ನಡ ಭಾಷೆಯ ಮೇಲಿದ್ದ ಪ್ರಭುತ್ವಕ್ಕೆ ಪುರಾವೆ. ಕನ್ನಡದ ವಚನಗಳು ಬರೀ ಆಧ್ಯಾತ್ಮಿಕ ಅನುಭಾವವನ್ನು ವ್ಯಕ್ತಪಡಿಸುವ ಸೀಮಿತ ಉದ್ದೇಶಕ್ಕಾಗಿ ಬರೆದವಂತಹವು ಎಂದು ಪರಿಗಣಿಸಲಾಗದಂತೆ ಉನ್ನತ ಮಟ್ಟದ ಸಾಹಿತ್ಯಕ ಮೌಲ್ಯಗಳನ್ನು ಹೊಂದಿರುವುದು ವಚನ ಸಾಹಿತ್ಯದ ಹೆಗ್ಗಳಿಕೆ. ಆ ಹೆಗ್ಗಳಿಕೆಯಲ್ಲಿ ಅಲ್ಲಮನದು ಸಿಂಹಪಾಲು. ಭೈತ್ರಕ್ಕೆ ಬೈಗುಂಡು ಅಲ್ಲಮನ ಅನನ್ಯ ಪದ ಪ್ರಯೋಗ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕ್ರೂರಿಗಳ ಲೋಕದಲ್ಲಿ ಮಹಿಳಾ ದಿನ

ನಮ್ಮ ಪಾಖಂಡ ಸಮಾಜದ ರೀತಿ ನೀತಿಗಳನ್ನು ನೋಡಿ ನಗು ಬರುತ್ತದೆ. ಇಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನೇತ್ರಮಹಿಮೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಯುಗಧರ್ಮ | ಇರಾನ್ ಬಗ್ಗೆ ಮೋದಿ ಮೌನ ನಮ್ಮನ್ನು ನಾಚಿಕೆಗೀಡು ಮಾಡಿದೆ

ಕನಿಷ್ಠ ಭಾರತವಾದರೂ ಈ ಬೂಟಾಟಿಕೆಯಲ್ಲಿ ಭಾಗವಹಿಸಬಾರದು. ನಮ್ಮ ಪರಮಾಣು ಬಾಂಬ್‌ಗಳಿಗೆ ಜಾಗತಿಕ...