‘ಈ ದಿನ’ ಸಂಪಾದಕೀಯ | ಕೋರ್ಟು, ತಾಯಿ-ತಂದೆಯ ನಡುವೆ ಮಕ್ಕಳು ಕಾಲ್ಚೆಂಡಾಗದಿರಲಿ

Date:

ವಿಚ್ಛೇದಿತ ದಂಪತಿಗಳ ಮಕ್ಕಳ ಉಸ್ತುವಾರಿ ಹಕ್ಕು ಪ್ರಕರಣಗಳಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮ ತಡೆಯುವುದು ಕೌಟುಂಬಿಕ ನ್ಯಾಯಾಲಯಗಳ ಕೆಲಸ ಮಾತ್ರವೇ ಅಲ್ಲ. ಕೇವಲ ಪೋಷಕರ ಹೊಣೆಯೂ ಅಲ್ಲ. ಕೋರ್ಟು ಮತ್ತು ಪೋಷಕರ ಜೊತೆಗೆ ರಾಜ್ಯ ಸರ್ಕಾರಗಳ ಪಾತ್ರವೂ ನಿರ್ಣಾಯಕ

ವಿಚ್ಛೇದನ ಪಡೆದ ದಂಪತಿಗಳ ಮಕ್ಕಳ ಪಾಲನೆ ವಿಷಯದಲ್ಲಿ ತೀರ್ಪು ನೀಡುವಾಗ ಇಂಡಿಯಾದ ಕೌಟುಂಬಿಕ ನ್ಯಾಯಾಲಯಗಳು ತಾಂತ್ರಿಕ ಅಂಶಗಳಿಗಷ್ಟೇ ಹೆಚ್ಚು ಮನ್ನಣೆ ಕೊಡುವ ಎಡವಟ್ಟು ಮಾಡುತ್ತಿವೆ ಎಂಬುದು ಅತ್ಯಂತ ಕಳವಳಕಾರಿ ಸಂಗತಿ. ಸುಪ್ರೀಂ ಕೋರ್ಟು ಮತ್ತು ಹೈಕೋರ್ಟುಗಳು ಆಗಾಗ ನೀಡುವ ಎಚ್ಚರಿಕೆಗಳ ಹೊರತಾಗಿಯೂ ಈ ಪ್ರವೃತ್ತಿ ಮುಂದುವರಿದಿದೆ. ಈ ಬಾರಿ ಕೌಟುಂಬಿಕ ನ್ಯಾಯಾಲಯವೊಂದಕ್ಕೆ ಬುದ್ಧಿ ಹೇಳಿರುವುದು ಬಾಂಬೆ ಹೈಕೋರ್ಟು.

2017ರಲ್ಲಿ ಇತ್ಯರ್ಥಗೊಂಡ ವಿಚ್ಛೇದನ ಪ್ರಕರಣವೊಂದರಲ್ಲಿ ಇಬ್ಬರು ಮಕ್ಕಳ ಉಸ್ತುವಾರಿಯನ್ನು ತಾಯಿಗೆ ವಹಿಸಲಾಗಿತ್ತು. ಇತ್ತೀಚೆಗೆ ಆಕೆ ಮರುವಿವಾಹವಾದ ಕಾರಣ, ಮಕ್ಕಳ ಪಾಲನೆಯ ಉಸ್ತುವಾರಿಯನ್ನು ತನಗೆ ವಹಿಸಬೇಕೆಂದು ಕೋರಿ ತಂದೆ ಕೌಟುಂಬಿಕ ನ್ಯಾಯಾಲಯದ ಮೊರೆಹೋಗಿದ್ದರು. ಆದರೆ, ಮಕ್ಕಳ ಕ್ಷೇಮವನ್ನು ಆದ್ಯತೆಯಾಗಿ ಪರಿಗಣಿಸದ ಕೋರ್ಟು, ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಅರ್ಜಿ ತಿರಸ್ಕರಿಸಿತ್ತು. ನಂತರದಲ್ಲಿ ಪ್ರಕರಣ ಬಾಂಬೆ ಹೈಕೋರ್ಟ್ ತಲುಪಿತ್ತು.

ಈ ಸಂಪಾದಕೀಯ ಓದಿದ್ದೀರಾ?: ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸು: ಮತದಾರರು ಮಾಡಬೇಕಾಗಿರುವುದೇನು?

“ವಿಚ್ಛೇದನ ನಂತರ ಮಕ್ಕಳು ಯಾರ ಜೊತೆ ಇರಬೇಕು ಮತ್ತು ಎಷ್ಟು ಕಾಲ ಇರಬೇಕು ಎಂದು ಹೇಳುವ ತೀರ್ಪುಗಳು ಅತ್ಯಂತ ಕಠಿಣ ನಿಲುವುಗಳಿಂದ ಕೂಡಿರುವ ಅವಶ್ಯಕತೆ ಇಲ್ಲ. ಮಗುವಿನ ಜೀವನದ ನಾನಾ ಘಟ್ಟಗಳಿಗೆ ಅನುಗುಣವಾಗಿ ತೀರ್ಪಿನ ಅಂಶಗಳನ್ನು ಬದಲಾಯಿಸಲು ಸಾಧ್ಯವಾಗಬೇಕು,” ಎಂಬುದು ಬಾಂಬೆ ಹೈಕೋರ್ಟ್ ಕಿವಿಮಾತು. ಸದರಿ ಪ್ರಕರಣದಲ್ಲಿ ಮತ್ತೊಮ್ಮೆ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿ ನೀಲಾ ಗೋಖಲೆ ಅವರ ಏಕಸದಸ್ಯ ಪೀಠ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚ್ಛೇದನ ಪ್ರಕರಣಗಳು ಕೇವಲ ವಿಚ್ಛೇದನ ಪ್ರಕರಣಗಳಾಗಿ ಉಳಿಯದೆ, ಮಕ್ಕಳ ಪಾಲನೆಯ ಉಸ್ತುವಾರಿಗಾಗಿ ಪೋಷಕರಿಬ್ಬರೂ ಪೈಪೋಟಿ ನಡೆಸುವ ಪ್ರಕರಣಗಳಾಗಿ ಬದಲಾಗಿರುವುದು ಹೊಸ ವಿದ್ಯಮಾನವೇನಲ್ಲ. ಆದರೆ, ತಾಯಿ-ತಂದೆಯರಿಬ್ಬರೂ ಪ್ರತಿಷ್ಠೆಗೆ ಕಟ್ಟುಬಿದ್ದು, ತಮ್ಮ ನಡುವಿನ ವೈಯಕ್ತಿಕ ಸೇಡು ಮತ್ತು ಸಿಟ್ಟನ್ನು ಇಂಥ ಪ್ರಕರಣಗಳಲ್ಲಿ ಹೂಡಿಕೆ ಮಾಡಿ ವಿಜಯ ಸಾಧಿಸಲು ಹವಣಿಸುತ್ತಿರುವುದು ಮಾತ್ರ ದುರಂತ. ಇದರಿಂದ ತಮ್ಮದೇ ಮಗುವಿನ ಮನಸ್ಸಿನ ಮೇಲೆ ಕೆಟ್ಟ ಪರಿಣಾಮಗಳಾಗುತ್ತವೆ ಎಂಬುದು ಕಾದಾಟದಲ್ಲಿ ಕಳೆದುಹೋದವರಿಗೆ ನೆನಪಾಗುವುದು ಅಸಾಧ್ಯ. ಇಂತಹ ಬಹುತೇಕ ಪ್ರಕರಣಗಳಲ್ಲಿ, ತಂದೆಯಂದಿರು ತಮ್ಮ ಸಂಗಾತಿಯ ಮೇಲಿರುವ ದ್ವೇಷದ ಜೊತೆಗೆ, ತಾನು ‘ಗಂಡು’ ಎಂಬ ಅಹಮಿಕೆಯನ್ನೂ ಕೂಡಿಸಿಕೊಂಡು ಕಾಳಗಕ್ಕೆ ನಿಲ್ಲುವುದು ಅಕ್ಷಮ್ಯ.

ಈ ಸಂಪಾದಕೀಯ ಓದಿದ್ದೀರಾ?: ದ್ವೇಷ ಭಾಷಣ; ತುರ್ತು ಕಡಿವಾಣ ಅತ್ಯವಶ್ಯ

2022ರ ಜನವರಿಯಿಂದ ಡಿಸೆಂಬರ್‌ವರೆಗೂ, ವಿಚ್ಛೇದಿತ ದಂಪತಿಗಳ ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಇಂಡಿಯಾದ ಕೌಟುಂಬಿಕ ನ್ಯಾಯಾಲಯಗಳಲ್ಲಿ ಒಟ್ಟು 4,776 ಪ್ರಕರಣಗಳು ಇತ್ಯರ್ಥಗೊಂಡಿವೆ. ಬಾಕಿ ಪ್ರಕರಣಗಳ ಸಂಖ್ಯೆ ಹಲವು ಪಟ್ಟು ಹೆಚ್ಚಿದೆ. ವಿಚ್ಛೇದನ ಪ್ರಕರಣಗಳು ಹೆಚ್ಚಿದಂತೆಲ್ಲ ಮಕ್ಕಳ ಪಾಲನೆಯ ಉಸ್ತುವಾರಿಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಲೇ ಇದೆ. ಇಂತಹ ವಿಷಮ ಸನ್ನಿವೇಶದಲ್ಲಿ ಕೋರ್ಟುಗಳು ಕೇವಲ ತಾಂತ್ರಿಕ ಸಂಗತಿಗಳಿಗಷ್ಟೇ ಒತ್ತು ಕೊಟ್ಟರೆ, ಮೊದಲೇ ಕುಸಿದುಬಿದ್ದ ಮಕ್ಕಳ ಮನಸ್ಸು ಇನ್ನಷ್ಟು ಹದಗೆಡುವುದು ನಿಶ್ಚಿತ.

ಇಂತಹ ಪ್ರಕರಣಗಳಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯುವುದು ಕೌಟುಂಬಿಕ ನ್ಯಾಯಾಲಯಗಳು ಮತ್ತು ಪೋಷಕರ ಜೊತೆಗೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೂ ಹೌದು. ಕಟ್ಟಡಗಳ ಸಮಸ್ಯೆಯ ಜೊತೆಗೆ, ನ್ಯಾಯಾಧೀಶರ ಕೊರತೆಯಂಥ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ ಕೌಟುಂಬಿಕ ನ್ಯಾಯಾಲಯಗಳನ್ನು ಸುಸ್ಥಿತಿಗೆ ತರಲು ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಅದೇ ಹೊತ್ತಿಗೆ, ಮಗುವಿನ ಪಾಲನೆಯ ಉಸ್ತುವಾರಿ ವಹಿಸುವ ಸಂದರ್ಭದಲ್ಲಿ ಬೇರಾವುದೇ ಸಂಗತಿಗಳಿಗಿಂತ ಮಗುವಿನ ಕ್ಷೇಮಾಭಿವೃದ್ಧಿ ಮಾತ್ರವೇ ಕೌಟುಂಬಿಕ ನ್ಯಾಯಾಲಯಗಳ ಆದ್ಯತೆ ಆಗಬೇಕಿದೆ. ಇನ್ನು, ವಿಚ್ಛೇದನ ಪಡೆದ ನಂತರವೂ ತಾವು ಮನುಷ್ಯರು, ತಮ್ಮಲ್ಲಿ ಮಾನವೀಯತೆ ಇದೆ ಎಂಬುದನ್ನು ತಾಯ್ತಂದೆಯರು ಸಾಬೀತು ಮಾಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....