‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

Date:

ಭ್ರಷ್ಟಾಚಾರದ ಯಾವುದೇ ಪ್ರಕರಣ ಬೆಳಕಿಗೆ ಬಂದಾಗ, ಅದು ಸುಳ್ಳು ಎಂದು ನಿರಾಕರಿಸುವ ಮುನ್ನ ಅಥವಾ ಕಣ್ಮುಚ್ಚಿಕೊಂಡು ಅಧಿಕಾರಿಗಳ ರಕ್ಷಣೆಗೆ ಧಾವಿಸುವ ಮೊದಲು ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕಾದ್ದು, ಆ ತನಿಖೆಯ ವರದಿ ಬಂದ ನಂತರವೇ ಮುಂದಿನ ಮಾತು ಆಡಬೇಕಾದ್ದು ಸರ್ಕಾರದ ಘನತೆಯ ದೃಷ್ಟಿಯಿಂದ ಒಳ್ಳೆಯದು.

ಮೈಸೂರಿನಲ್ಲಿ ನೆಲೆಸಿರುವ ಖ್ಯಾತ ಸರೋದ್ ವಾದಕ ರಾಜೀವ ತಾರಾನಾಥ್ ಈ ಬಾರಿಯ ದಸರೆಯಲ್ಲಿ ಯಾವುದೇ ಕಾರ್ಯಕ್ರಮ ನೀಡುತ್ತಿಲ್ಲ. ಆದರೆ, ಕೆಲವೇ ದಿನಗಳ ಮೊದಲು ಅವರು ಕಾರ್ಯಕ್ರಮ ನೀಡುತ್ತಿದ್ದಾರೆ ಎಂಬ ಸುದ್ದಿ ಇತ್ತು. ಹಾಗಾದರೆ, ಈ ದಿಢೀರ್ ಬದಲಾವಣೆ ಆದದ್ದೇಕೆ ಎಂದು ಬೆನ್ನತ್ತಿದ ಕೆಲವು ಸುದ್ದಿ ಮಾಧ್ಯಮಗಳಿಂದ, ದಸರಾ ಅಧಿಕಾರಿಗಳು ತಾರಾನಾಥ್ ಅವರಿಂದ ಕಮಿಷನ್ ಕೇಳಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ತಾರಾನಾಥ್ ಅವರ ಸಂಭಾವನೆ ಹೆಚ್ಚಿಸಿ, ಆ ಹೆಚ್ಚುವರಿ ಸಂಭಾವನೆಯನ್ನು ನಂತರದಲ್ಲಿ ತಮಗೆ ವರ್ಗಾಯಿಸಬೇಕೆಂದು ಅಧಿಕಾರಿಗಳು ‘ಒಪ್ಪಂದ’ ಮಾಡಿಕೊಳ್ಳಲು ಮುಂದಾದರು, ಇಂಥದ್ದಕ್ಕೆಲ್ಲ ಪ್ರೋತ್ಸಾಹ ನೀಡಬಾರದು ಎಂಬ ಕಾರಣಕ್ಕೆ ಒಪ್ಪಲಿಲ್ಲ ಎಂದು ಖುದ್ದು ತಾರಾನಾಥ್ ಅವರೇ ಹೇಳಿದರು ಎಂಬುದು ವರದಿಗಳ ಸಾರ.

ಈ ಸುದ್ದಿ ಬೆಳಕಿಗೆ ಬರುತ್ತಲೇ, ದಸರಾ ಉತ್ಸವದಂತೆಯೇ ರಾಜ್ಯದ ಉದ್ದಗಲಕ್ಕೆ ಸರ್ಕಾರವೇ ನಡೆಸುವ ನಾನಾ ಉತ್ಸವಗಳಲ್ಲಿ ಇದೇ ಬಗೆಯ ಕಮಿಷನ್ ದಂಧೆ ಬಹಳ ಕಾಲದಿಂದ ನಡೆಯುತ್ತಿರುವ ಬಗ್ಗೆ ಸಾಂಸ್ಕೃತಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಆದರೆ, ಇಷ್ಟೆಲ್ಲ ಬೆಳವಣಿಗೆಗಳ ನಂತರದ ಸ್ವಲ್ಪ ಹೊತ್ತಿನಲ್ಲೇ, ರಾಜೀವ್ ತಾರಾನಾಥ್ ಅವರಿಂದ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂಬುದೆಲ್ಲ ಸುಳ್ಳು ಸುದ್ದಿ ಎಂಬ ಸ್ಪಷ್ಟನೆ ರಾಜ್ಯ ಸರ್ಕಾರದಿಂದ ಹೊರಬಿದ್ದಿದೆ. ಜೊತೆಗೆ, ಕಮಿಷನ್ ಕೇಳಿದ್ದು ಸುಳ್ಳು ಎಂದು ಸ್ವತಃ ತಾರಾನಾಥರೇ ಹೇಳಿದ್ದಾಗಿಯೂ ಹೇಳಿಕೆಯಲ್ಲಿ ಸಮರ್ಥನೆ ಮಾಡಿಕೊಳ್ಳಲಾಗಿದೆ. ಅದಕ್ಕೂ ಮೊದಲು, ಸಚಿವ ಎಚ್ ಸಿ ಮಹದೇವಪ್ಪ ಪ್ರಕರಣದ ತನಿಖೆಗೆ ಆದೇಶಿಸಿದ್ದೂ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭ್ರಷ್ಟಾಚಾರದ ವಿಷಯ ಬಂದಾಗಲೆಲ್ಲ ಅಧಿಕಾರಿಗಳು ಮತ್ತು ಸರ್ಕಾರಗಳು ನಾಟಕ ಆಡುವುದು ಇತ್ತೀಚೆಗೆ ತೀರಾ ಸಾಮಾನ್ಯ. ಮರ್ಯಾದೆಗೇಡಿನಿಂದ ತಕ್ಷಣಕ್ಕೆ ಬಚಾವಾದರೆ ಸಾಕು ಎಂಬ ಚಾಣಾಕ್ಷ ನಡೆಯದು. ಈ ಪ್ರಕರಣದಲ್ಲಿಯೂ ಸರ್ಕಾರ ಅಧಿಕಾರಿಗಳ ಪರ ನಿಂತಿರುವುದು ಮೇಲ್ನೋಟಕ್ಕೆ ಒಡೆದು ಕಾಣಿಸುತ್ತದೆ. ಏಕೆಂದರೆ, ಸ್ವತಃ ರಾಜೀವ್ ತಾರಾನಾಥ್ ಅವರು ಕಮಿಷನ್ ಕುರಿತಾಗಿ ಮಾತನಾಡಿರುವ ಆಡಿಯೊ, ವಿಡಿಯೊ ಪುರಾವೆಗಳು ಸುದ್ದಿ ಮಾಧ್ಯಮಗಳ ಬಳಿ ಇವೆ. ಇದೀಗ ಸರ್ಕಾರದ ಬಳಿ ಉಳಿದಿರುವುದು ಎರಡೇ ದಾರಿ; ಸುದ್ದಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂಬುದನ್ನು ಸಾಬೀತು ಮಾಡುವುದು ಅಥವಾ ರಾಜೀವ್ ತಾರಾನಾಥ್ ಸುಳ್ಳು ಹೇಳಿದ್ದಾರೆ ಎಂಬುದನ್ನಾದರೂ ಸಾಬೀತು ಮಾಡುವುದು.

ಈ ಎಲ್ಲ ಬೆಳವಣಿಗೆಗಳಿಗೂ ಕಳಶವಿಟ್ಟಂತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಕಮಿಷನ್ ದಂಧೆ ಬಗೆಗೆ ಕಲಾವಿದರು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಕರು ಸಾಮಾಜಿಕ ಜಾಲತಾಣಗಳಲ್ಲಿ ಅಲವತ್ತುಕೊಳ್ಳುತ್ತಿದ್ದಾರೆ. ಇಲಾಖೆಯಿಂದ ಸಹಜವಾಗಿ ಸಿಗಬೇಕಾದ ಅನುದಾನ ಪಡೆಯಲೂ ಅಲೆದಾಡಿಸುವ, ಅನುದಾನ ಸಿಗಲೇಬೇಕೆಂದರೆ ಕಮಿಷನ್ ಕೊಡಬೇಕಾದ ಪ್ರಸಂಗಗಳು ಸರ್ವೇಸಾಮಾನ್ಯ ಎಂಬುದು ಬಹುತೇಕರ ದೂರು. ಇಂತಹ ಆರೋಪಗಳು ಇಂದು-ನಿನ್ನೆಯದಂತೂ ಖಂಡಿತ ಅಲ್ಲ.

ಯಾವುದೇ ಪಕ್ಷದ ಸರ್ಕಾರವಿದ್ದರೂ, ಕಲಾವಿದರಿಗೆ ಸಿಗಬೇಕಾದ ಅನುದಾನ ಮತ್ತು ಮಾಸಾಶನದಂತಹ ವಿಷಯಗಳಲ್ಲಿ ಕಮಿಷನ್ ಹಾವಳಿಯ ಗಂಭೀರ ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಬೇಕಾದದ್ದು ಕೂಡ ಸರ್ಕಾರದ್ದೇ ಜವಾಬ್ದಾರಿ ಅಲ್ಲವೇ? ಭ್ರಷ್ಟಾಚಾರದ ಯಾವುದೇ ಪ್ರಕರಣ ಬೆಳಕಿಗೆ ಬಂದಾಗ, ಅದು ಸುಳ್ಳು ಎಂದು ನಿರಾಕರಿಸುವ ಮುನ್ನ ಅಥವಾ ಕಣ್ಮುಚ್ಚಿಕೊಂಡು ಅಧಿಕಾರಿಗಳ ರಕ್ಷಣೆಗೆ ಧಾವಿಸುವ ಮೊದಲು ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕಾದ್ದು, ಆ ತನಿಖೆಯ ವರದಿ ಬಂದ ನಂತರವೇ ಮುಂದಿನ ಮಾತು ಆಡಬೇಕಾದ್ದು ಸರ್ಕಾರದ ಘನತೆಯ ದೃಷ್ಟಿಯಿಂದ ಒಳ್ಳೆಯದು. ಇಲ್ಲದಿದ್ದರೆ, ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೂ ಸರ್ಕಾರದ ವರ್ತನೆಗಳಿಗೂ ವ್ಯತ್ಯಾಸ ಇಲ್ಲ ಎಂಬ ಸಂದೇಶ ರವಾನೆ ಆಗುತ್ತದೆ. ಈ ಪ್ರಕರಣದಲ್ಲಿ ಆಗುತ್ತಿರುವುದೂ ಅದೇ. ಭ್ರಷ್ಟಾಚಾರರಹಿತ ಕಾರ್ಯಕ್ರಮಗಳನ್ನು ಆಯೋಜಿಸುವ ಮನಸ್ಸು ಸರ್ಕಾರಕ್ಕೆ ನಿಜವಾಗಿಯೂ ಇದ್ದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಕಮಿಷನ್ ಮುಕ್ತಗೊಳಿಸಲಿ.

ಇತ್ತೀಚಿನ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಅಂದು ಆಳುತ್ತಿದ್ದ ಬಿಜೆಪಿ ಸರ್ಕಾರವನ್ನು ’40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂದು ಭರಾಟೆಯ ಪ್ರಚಾರ ನಡೆಸಿ, ಚುನಾವಣಾ ಲಾಭ ಪಡೆದುಕೊಂಡ ಅದೇ ಕಾಂಗ್ರೆಸ್ ಪಕ್ಷ, ತಾನು ಸರ್ಕಾರ ರಚಿಸಿದ ನಂತರ ‘ಕಮಿಷನ್’ಗಳ ನಿರ್ಮೂಲನೆ ಕುರಿತು ತಲೆ ಕೆಡಿಸಿಕೊಳ್ಳದಿರುವುದು ಅಪ್ಪಟ ಆಷಾಢಭೂತಿತನ.

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....