ಈ ದಿನ ಸಂಪಾದಕೀಯ | ಅನುದಾನಿತ ಪಿಯು ಕಾಲೇಜು ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವ ನಿರ್ಧಾರ ಸಲ್ಲದು

Date:

ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡ ದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅರೆ ಸರ್ಕಾರಿ ಉದ್ಯೋಗವೂ ಅತಂತ್ರವಾದರೆ ಅವರ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ.

ಸರ್ಕಾರಿ ಕಾಲೇಜುಗಳಲ್ಲಿ ಸದಾ ಅತಂತ್ರ ಅನಿಶ್ಚಯತೆಯಡಿ  ದಿನದೂಡುತ್ತಿದ್ದಾರೆ ಅತಿಥಿ ಉಪನ್ಯಾಸಕರು. ಕಡಿಮೆ ವೇತನಕ್ಕೆ ಹೆಚ್ಚು ದುಡಿಯುವ ‘ಜೀತದಾಳುಗಳು’ ಇವರು. ಕಾಯಂ ಶಿಕ್ಷಕರ ನೇಮಕ ಮಾಡದಿರುವ ಸರ್ಕಾರದ ನೀತಿಯೇ ಈ ದುರವಸ್ಥೆಗೆ ಕಾರಣ. ಹೀಗಾಗಿ ಸರ್ಕಾರಿ ಕಾಲೇಜುಗಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಇದರ ನೇರ ಪರಿಣಾಮ ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳ ಮೇಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳು ಹೆಚ್ಚು ಆಶ್ರಯಿಸುವುದು ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳನ್ನೇ. ಉಪನ್ಯಾಸಕರು/ ಶಿಕ್ಷಕರಾಗಿ ಉದ್ಯೋಗ ಅರಸಿ ಬರುವವರಲ್ಲಿಯೂ ಬಡ ಮತ್ತು ಮಧ್ಯಮ ವರ್ಗದವರೇ ಹೆಚ್ಚು. ಆದರೆ ಸರ್ಕಾರದ ಎಡವಟ್ಟು ನೀತಿಗಳಿಗೆ ಪಲಿಪಶುವಾಗುತ್ತಿರುವವರೂ ಇವರೇ ಎಂಬುದು ದುರಂತ.

ವಿದ್ಯಾರ್ಥಿಗಳ ಕೊರತೆಯ ನೆಪವೊಡ್ಡಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕೆಲಸದಿಂದ ಬಿಡುಗಡೆಗೊಳಿಸುವ ಆದೇಶವನ್ನು ಸರ್ಕಾರ ಆಯಾ ಕಾಲೇಜುಗಳ ಆಡಳಿತ ಮಂಡಳಿಗೆ ನೀಡಿದೆಯಂತೆ. ರಾಜ್ಯದಲ್ಲಿ 821 ಅನಿದಾನಿತ ಪದವಿಪೂರ್ವ ಕಾಲೇಜುಗಳಿವೆ. ಸರ್ಕಾರದ ನಿಯಮದಂತೆ ಕಾಯಂ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ವಿಷಯವಾರು ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠ 40 ಇರಬೇಕು. ಆದರೆ, ಕೆಲವು ಕಾಲೇಜುಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಈ ಕಾರಣದಿಂದ ಈಗ ಉಪನ್ಯಾಸಕರು ಈ ಅರೆಬರೆ ಉದ್ಯೋಗವನ್ನೂ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಾದ್ಯಂತ ಅನುದಾನಿತ ಕಾಲೇಜುಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಉಪನ್ಯಾಸಕ ಹುದ್ದೆಗಳು ಖಾಲಿ ಇವೆ. ನಿಧನ, ನಿವೃತ್ತಿ, ರಾಜೀನಾಮೆ ಕಾರಣಗಳಿಂದ ಖಾಲಿ ಇರುವ ವಿಷಯಗಳ ಉಪನ್ಯಾಸಕರನ್ನು ನೇಮಕ ಮಾಡಲು ಸರ್ಕಾರ ಸೂಚಿಸಿದ ಮೇರೆಗೆ ಕೆಲ ಕಾಲೇಜುಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಇದೇ ಸಮಯದಲ್ಲಿ ವಿದ್ಯಾರ್ಥಿಗಳ ಕೊರತೆ ಇರುವ ಕಾಲೇಜುಗಳ ಉಪನ್ಯಾಸಕರನ್ನು ಮನೆಗೆ ಕಳಿಸುತ್ತಿರುವುದು ಅಮಾನವೀಯ ನಡೆ. ವಿದ್ಯಾರ್ಥಿಗಳ ಕೊರತೆಯ ಕಾರಣದಿಂದಾಗಿ ಸುಮಾರು 426 ಕಾಲೇಜುಗಳ 379 ಉಪನ್ಯಾಸಕರ ವೇತನವನ್ನು ಕಳೆದ ಆರು ತಿಂಗಳಿನಿಂದ ತಡೆ ಹಿಡಿಯಲಾಗಿದೆಯಂತೆ.

ಒಂದು ಕಡೆ ಪದವಿ ಓದುವವರ ಸಂಖ್ಯೆಯೂ ಕುಸಿಯುತ್ತಿದೆ. ಗ್ರಾಮೀಣ ಭಾಗಗಳಲ್ಲಿಯೂ ಕಲಾ, ವಾಣಿಜ್ಯ ವಿಷಯದಲ್ಲಿ ಪಿಯು ಓದುವವರ ಸಂಖ್ಯೆ ಕುಸಿದಿದೆ. ಎಲ್ಲರೂ ವಿಜ್ಞಾನ ವಿಷಯ ತೆಗೆದುಕೊಂಡು ಎಂಜಿನಿಯರಿಂಗ್‌, ಮೆಡಿಕಲ್‌ ಅಥವಾ ಬೇರೆ ಯಾವುದಾದರೂ ತಾಂತ್ರಿಕ ಕೋರ್ಸ್‌ ಮಾಡುವುದರ ಕಡೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ವಿಜ್ಞಾನ ಪದವೀಧರರನ್ನು ಖಾಸಗಿ ಕಂಪನಿಗಳು ನೇರವಾಗಿ ಕ್ಯಾಂಪಸ್‌ ಸೆಲೆಕ್ಷನ್‌ ಮೂಲಕ ಕೆಲಸಕ್ಕೆ ನೇಮಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿಯೇ ಒಂದು ದಶಕ ಸಮೀಪಿಸುತ್ತಿದೆ. ಈ ಮಧ್ಯೆ ವಾಣಿಜ್ಯ ಮತ್ತು ಕಲಾ ಪದವಿ ಓದುವುದು ಅಪ್ರಯೋಜಕ ಎಂಬ ಭಾವನೆ ಗ್ರಾಮೀಣ ಭಾಗದ ಕುಟುಂಬಗಳಲ್ಲಿ ಇದೆ. ಈಗ ಏನಿದ್ದರೂ ಓದು ಮುಗಿಯುತ್ತಿದ್ದಂತೆ ಕೈ ತುಂಬ ಸಂಬಳ ಬರುವ ಕೆಲಸ ಸಿಗಬೇಕು. ಆಗ ‘ಲೈಫ್‌ ಸೆಟಲ್‌’ ಆಯ್ತು ಎಂದು ಭಾವಿಸುವವರೇ ಹೆಚ್ಚು. ಸಾಹಿತ್ಯದ ಅಭಿರುಚಿ ಇರುವವರು, ಮಾನವಿಕ ವಿಭಾಗಗಳಲ್ಲಿ ಕೆಲಸ ಮಾಡಬೇಕು ಎಂಬ ಆಸಕ್ತಿಯಿಂದ ಬರುವವರು ತೀರಾ ಕಡಿಮೆ. ಹಾಗೆ ಬರುವ ವಿದ್ಯಾರ್ಥಿಗಳಿಗೆ ವಿಷಯವಾರು ಉಪನ್ಯಾಸಕರ ಕೊರತೆ ಎದುರಾದರೆ ಅವರ ಭವಿಷ್ಯವೇನು? ಇನ್ನು ಅನೇಕ ಖಾಸಗಿ ಕಾಲೇಜುಗಳಲ್ಲಿ ಕಲಾ ವಿಭಾಗವೇ ಇಲ್ಲ. ಅದು ಪ್ರಯೋಜನಕ್ಕೆ ಬಾರದ, ದಡ್ಡರಿಗೆ ಮಾತ್ರ ಸೀಮಿತವಾದ ವಿಭಾಗ ಎಂಬ ಅಸಡ್ಡೆಯಿದೆ. ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗವನ್ನು ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವ ನಿರ್ಧಾರಕ್ಕೆ ವಿವಿ ಆಡಳಿತ ಬಂದಿದೆ. ಹಲವು ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿದ್ದಾರೆ. ಆದರೆ ವಿದ್ಯಾರ್ಥಿಗಳ ಕೊರತೆ ಇದೆ. ಈ ಉಪನ್ಯಾಸಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ ಇಲ್ಲ. ಹೆಚ್ಚೆಂದರೆ ವರ್ಗಾವಣೆಯಾಗಬಹುದು. ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ವಿದ್ಯಾರ್ಥಿಗಳ ಕೊರತೆಯೇ ಕಂಟಕವಾಗಿದೆ. ವಿದ್ಯಾರ್ಥಿಗಳನ್ನು ಸೆಳೆಯುವುದು ಸುಲಭದ ಕೆಲಸವಲ್ಲ.

ಒಂದೆಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ. ವಿದ್ಯಾರ್ಥಿಗಳು ಇರುವೆಡೆ ಶಿಕ್ಷಕರ ಕೊರತೆ, ಎರಡೂ ಇದ್ದರೆ ಮೂಲಸೌಕರ್ಯದ ಕೊರತೆ,  ಹೀಗೆ ಸರ್ಕಾರಿ ಶಾಲೆ ಕಾಲೇಜುಗಳು ಇಂದೋ ನಾಳೆಯೋ ಕೊನೆಯುಸಿರೆಳೆಯುವ ಸ್ಥಿತಿಯಲ್ಲಿವೆ. ಲಂಗು ಲಗಾಮು ಇಲ್ಲದೇ ಖಾಸಗಿಯವರಿಗೆ ಶಾಲೆ ತೆರೆಯಲು ಬಿಟ್ಟು ಈಗ ಸರ್ಕಾರಿ ಶಾಲೆ, ಕಾಲೇಜುಗಳನ್ನು ಉಳಿಸಲು ಪೇಚಾಡುವಂತಾಗಿದೆ.

ನಿರುದ್ಯೋಗ ತಾಂಡವ ಆಡುತ್ತಿದ್ದರೂ, ಖಾಲಿಬಿದ್ದ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿಲ್ಲ. ಬದಲಾಗಿ ಗುತ್ತಿಗೆ ಆಧಾರದಲ್ಲಿ ಕಡಿಮೆ ಸಂಬಳಕ್ಕೆ ನೇಮಕಾತಿ ಮಾಡಿಕೊಳ್ಳುವ ಸರ್ಕಾರಗಳ ನಡೆ ಸರಿಯಲ್ಲ. ಅತಿಥಿ ಉಪನ್ಯಾಸಕರು ನಿರಂತರ ಧರಣಿ, ಪ್ರತಿಭಟನೆಗಳು ಪರೀಕ್ಷಾ ಕರ್ತವ್ಯ, ಮೌಲ್ಯಮಾಪನ ಬಹಿಷ್ಕರಿಸಿ ಸರ್ಕಾರದ ಜೊತೆಗೆ ಕುಸ್ತಿಗಿಳಿಯುವುದು ನಡೆಯುತ್ತಲೇ ಇದೆ. ಈಗ ಅನುದಾನಿತ ಪಿಯು ಕಾಲೇಜು ಉಪನ್ಯಾಸಕರು ಬೀದಿಗಿಳಿಯುವ ಸ್ಥಿತಿ ಒದಗಿದೆ.

ಸರ್ಕಾರಿ ಶಾಲೆ -ಕಾಲೇಜುಗಳಿಗೆ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ ನೀಡುವತ್ತ ಸರ್ಕಾರ ಪರಿಣಾಮಕಾರಿ ಹೆಜ್ಜೆಯಿರಿಸಿದ್ದರೆ ಖಾಸಗಿ ಶಾಲೆ, ಕಾಲೇಜುಗಳಿಗೆ ಅನುದಾನ ನೀಡುವ ಸಂದರ್ಭವೇ ಬರುತ್ತಿರಲಿಲ್ಲ.  ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಸರ್ಕಾರದ ನೇರ ಹೊಣೆಗಾರಿಕೆಯಲ್ಲಿರುವ ಎರಡು ಪ್ರಮುಖ ಕ್ಷೇತ್ರಗಳು. ಅಷ್ಟೇ ನಿರ್ಲಕ್ಷ್ಯಕ್ಕೆ ಒಳಗಾದ ಕ್ಷೇತ್ರಗಳೂ ಹೌದು. ಎಂ ಎ, ಎಂಬಿಎ, ಎಂಜಿನಿಯರಿಂಗ್‌ ಪದವಿ ಪಡೆದವರು ಹತ್ತನೇ ತರಗತಿ ವಿದ್ಯಾರ್ಹತೆ ಬೇಡುವ ಅಡುಗೆ ಸಹಾಯಕ, ಡಿ ಗ್ರೂಪ್‌  ಹುದ್ದೆಗಳಿಗೆ ಅರ್ಜಿ ಹಾಕಿ ಸಂದರ್ಶನಕ್ಕೆ ಹಾಜರಾದ ಅನೇಕ ಉದಾಹರಣೆಗಳು ನಮ್ಮ ಮುಂದಿದೆ. ಬದುಕಿಗಾಗಿ ಒಂದು ಉದ್ಯೋಗ ಬೇಕೇ ಬೇಕು. ಸಣ್ಣದೇ ಆದರೂ ಸರ್ಕಾರಿ ಕೆಲಸ ಸುರಕ್ಷಿತ ಎಂಬ ಭಾವನೆ ಇದೆ. ಆದರೆ ಸರ್ಕಾರ ನಿಯಮಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅರೆ ಸರ್ಕಾರಿ ಉದ್ಯೋಗಕ್ಕೂ ಕುತ್ತು ಬಂದರೆ ಅವರ ಬದುಕು ಇನ್ನಷ್ಟು ಅತಂತ್ರವಾಗಲಿದೆ.

ಸರ್ಕಾರ ಇಂತಹ ನಿರ್ಧಾರ ತೆಗೆದುಕೊಳ್ಳುವಾಗ ಮುಂದೆ ಎದುರಾಗಬಹುದಾದ ಸಾಮಾಜಿಕ ಅಪಾಯಗಳತ್ತಲೂ  ಗಮನಹರಿಸಬೇಕಿದೆ. ಎಲ್ಲೆಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇದೆಯೋ ಅಲ್ಲಿಗೆ ವಿದ್ಯಾರ್ಥಿಗಳ ಕೊರತೆಯ ಕಾರಣದಿಂದ ಕೆಲಸ ಕಳೆದುಕೊಳ್ಳಲಿರುವ ಉಪನ್ಯಾಸಕರನ್ನು  ನಿಯೋಜನೆಗೊಳಿಸುವುದು ಮಾನವೀಯ ನಡೆಯಾದೀತು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....