ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

Date:

ಮೂರನೇ ಅವಧಿಗೆ ಪ್ರಧಾನಿಯಾದ ಮೋದಿಯವರಲ್ಲಿ ಕೊಂಚ ಮಾಗಿದ ನಡೆ ಕಾಣತೊಡಗಿತ್ತು. ದೇಶದ ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಪಾಠ ಕಲಿಸಿದ್ದು ಅವರ ನಡೆ ಮತ್ತು ನುಡಿಯಲ್ಲಿ ಕಾಣುತ್ತಿತ್ತು. ಆಡಳಿತದಲ್ಲಿ ಬದಲಾವಣೆ ಬರಬಹುದೆಂಬ ನಿರೀಕ್ಷೆ ಹುಟ್ಟಿಸಿತ್ತು. ಈ ಮೂರನೇ ಅವಧಿಯಲ್ಲಾದರೂ ದೇಶ ಬದಲಾಗಬಹುದೆಂಬ ಆಸೆ ಇತ್ತು. ಆದರೆ ಅವರ ನೂರು ದಿನಗಳ ಆಡಳಿತ...

ಸೆ. 17, ನರೇಂದ್ರ ಮೋದಿಯವರ ಜನ್ಮದಿನ. 74ನೇ ವಸಂತಕ್ಕೆ ಕಾಲಿಡುತ್ತಿರುವ ಮೋದಿಯವರಿಗೆ ದೇಶದ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ‘ಐತಿಹಾಸಿಕ’ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ, ತನ್ನ ಮೊದಲ 100 ದಿನಗಳನ್ನು ಪೂರೈಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೂಲಸೌಕರ್ಯ, ರೈತರು, ಮಧ್ಯಮ ವರ್ಗ, ಮಹಿಳೆಯರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು 15 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಿದೆ.

15 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಿದ ಪ್ರಧಾನಿ ಮೋದಿಯವರು, ದೇಶವನ್ನು ಮುನ್ನಡೆಸುವ ಮಾತುಗಳನ್ನು ಆಡುವ ಬದಲು; ಮೂರನೆಯ ಅವಧಿಯ ಮೊದಲ 100 ದಿನಗಳಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಅವಮಾನಿಸಿದವು, ಗೇಲಿ ಮಾಡಿದವು ಹಾಗೂ ಅಣಕಿಸಿದವು ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು, ವಿರೋಧ ಪಕ್ಷಗಳು ಮುಸ್ಲಿಮರ ತುಷ್ಟೀಕರಣಕ್ಕಾಗಿ ಯಾವ ಮಿತಿಯನ್ನು ಬೇಕಿದ್ದರೂ ಮೀರಬಲ್ಲರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಕಾರಾತ್ಮಕತೆ ತುಂಬಿದ ಕೆಲವರು ಭಾರತದ ಏಕತೆಯನ್ನು ಗುರಿಯಾಗಿಸಿಕೊಂಡಿದ್ದಾರೆ, ದೇಶವನ್ನು ಒಡೆಯುವ ಉದ್ದೇಶ ಹೊಂದಿದ್ದಾರೆ. ದ್ವೇಷ ತುಂಬಿಕೊಂಡಿರುವ ವ್ಯಕ್ತಿಗಳು ಭಾರತಕ್ಕೆ ಕೆಟ್ಟ ಹೆಸರು ತರುವ ಯಾವ ಅವಕಾಶವನ್ನೂ ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿಯವರ ಮಾತುಗಳನ್ನು ಕೇಳುತ್ತಿದ್ದರೆ, ದೇಶವನ್ನು ಒಡೆಯುವ, ದೇಶಕ್ಕೆ ಕೆಟ್ಟ ಹೆಸರು ತರುವ ವ್ಯಕ್ತಿಗಳ ಬಗ್ಗೆ ಸಿಟ್ಟು, ಆಕ್ರೋಶ ವ್ಯಕ್ತವಾಗುವುದು ಸಹಜ. ಅವರ ಉದ್ದೇಶವೂ ಅದೇ. ಮೋದಿಯವರ ಮನಸ್ಸಿನಲ್ಲಿರುವುದು, ಗುರಿಯಾಗಿರಿಸಿಕೊಂಡಿರುವುದು ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು.

ದೂರದ ಅಮೆರಿಕದಲ್ಲಿ ಮೀಸಲಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿಯ ವಿಡಿಯೋ ತುಣುಕನ್ನು, ತಮಗೆ ಬೇಕಾದಂತೆ ತಿರುಚಿ, ಖಳನಾಯಕನನ್ನಾಗಿ ಚಿತ್ರಿಸಿ, ಬಿಜೆಪಿ ಐಟಿ ಸೆಲ್ ಭಕ್ತರು ಇಡೀ ಪ್ರಪಂಚಕ್ಕೆ ಕ್ಷಣಮಾತ್ರದಲ್ಲಿ ಹಂಚಿದ್ದರು. ಭಕ್ತರ ಕಿಡಿಗೇಡಿ ಕೃತ್ಯವನ್ನು ಖಂಡಿಸಿ ತಿರಸ್ಕರಿಸಬೇಕಾದ ಪ್ರಧಾನಿ, ಪದವಿಯ ಘನತೆಯನ್ನು ಮರೆತು ಆ ಸುಳ್ಳಿನ ವಿಡಿಯೋ ತುಣುಕನ್ನೇ ಗುರಾಣಿಯನ್ನಾಗಿ ಮಾಡಿಕೊಂಡರು. ದೇಶ ಒಡೆಯುವ ದುಷ್ಟರ ಪಟ್ಟಿಗೆ ರಾಹುಲ್ ಸೇರಿಸಿ ಜನರಲ್ಲಿ ದ್ವೇಷ ಬಿತ್ತಿದರು.

ಇದು ಪ್ರಧಾನಿ ಮೋದಿಯವರ 100 ದಿನಗಳ ಮಹತ್ ಸಾಧನೆ.

ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ನಿರಂತರವಾಗಿ ಚಾಲ್ತಿಯಲ್ಲಿಟ್ಟಿದ್ದು ಈ ಫೇಕ್ ಫ್ಯಾಕ್ಟರಿಯನ್ನೇ. ಈ ಮೂರನೇ ಅವಧಿಯ 100 ದಿನಗಳಲ್ಲಿ ಈ ಫ್ಯಾಕ್ಟರಿಗೆ ಬೀಗ ಬಿದ್ದಿತ್ತು. ನೂರನೇ ದಿನವಾಗುತ್ತಿದ್ದಂತೆ ಮತ್ತೆ ಚಾಲ್ತಿಗೆ ಬಂದಿದೆ.

ಮೂರನೇ ಅವಧಿಗೆ ಪ್ರಧಾನಿಯಾದ ಮೋದಿಯವರಲ್ಲಿ ಕೊಂಚ ಮಾಗಿದ ನಡೆ ಕಾಣತೊಡಗಿತ್ತು. ದೇಶದ ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಪಾಠ ಕಲಿಸಿದ್ದು ಅವರ ನಡೆ ಮತ್ತು ನುಡಿಯಲ್ಲಿ ಕಾಣುತ್ತಿತ್ತು. ಮೋದಿಯವರ ಅಕ್ಕ-ಪಕ್ಕ ಮಿತ್ರ ಪಕ್ಷಗಳ ಇಕ್ಕಳ ಇರುವಂತೆ ನೋಡಿಕೊಂಡಿದ್ದು, ಆಡಳಿತದಲ್ಲಿ ಬದಲಾವಣೆ ಬರಬಹುದೆಂಬ ನಿರೀಕ್ಷೆ ಹುಟ್ಟಿಸಿತ್ತು. ದೇಶದ ಜನಕ್ಕೆ ಈ ಮೂರನೇ ಅವಧಿಯಲ್ಲಾದರೂ ದೇಶ ಬದಲಾಗಬಹುದೆಂಬ ಆಸೆ ಇತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

ಆದರೆ, ಗಿಡವಾಗಿ ಬಗ್ಗದು ಮರವಾಗಿ ಬಗ್ಗೀತೆ ಎನ್ನುವಂತೆ, ಮೂರನೇ ಅವಧಿಯಲ್ಲೂ ಮೋದಿಯವರು ಮತ್ತದೇ ವರಸೆಗಳ ಮೊರೆ ಹೋಗಿದ್ದಾರೆ. ಬಹುಮತವಿದೆ ಎಂಬ ಭಂಡ ಧೈರ್ಯದಲ್ಲಿ ಹಲವಾರು ಕಾಯ್ದೆ ಕಾನೂನುಗಳನ್ನು ಜಾರಿಗೆ ತರಲು ತವಕಿಸಿದರು. ಆದರೆ ಮಿತ್ರಪಕ್ಷಗಳೇ ಅಪಸ್ವರ ಎತ್ತಿದಾಗ ಹಿಂತೆಗೆದುಕೊಂಡು ಅವಮಾನಕ್ಕೊಳಗಾದರು.

ಅದಷ್ಟೇ ಅಲ್ಲ, ದತ್ತಾಂಶ ಸಂರಕ್ಷಣಾ ಮಸೂದೆ, ಬ್ರಾಡ್‌ಕಾಸ್ಟಿಂಗ್‌(ನಿಯಂತ್ರಣ) ಮಸೂದೆ, ಲ್ಯಾಟರಲ್ ಎಂಟ್ರಿ, ವಕ್ಫ್(ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ, ವಿರೋಧ ಪಕ್ಷಗಳ ತೀವ್ರ ದಾಳಿಗೆ ಬೆಚ್ಚಿ ಹಿಂತೆಗೆದುಕೊಳ್ಳುವಂತಹ ಹಿನ್ನಡೆಯನ್ನೂ ಅನುಭವಿಸಿದರು.

ಇನ್ನು ನೂರು ದಿನಗಳಲ್ಲಿ 38 ರೈಲುಗಳ ಅಪಘಾತವಾಗಿ 21 ಪ್ರಯಾಣಿಕರ ಪ್ರಾಣಪಕ್ಷಿ ಹಾರಿಹೋಗಿದೆ. ಭಯೋತ್ಪಾದನೆಗೆ 29 ಸೈನಿಕರು ಅಸುನೀಗಿದ್ದಾರೆ. ನೀಟ್‌-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ಯುವಜನತೆಯ ಭವಿಷ್ಯ ಬರಿದಾಗಿದೆ. ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಮಿತಿಮೀರಿದೆ. ಅತ್ಯಾಚಾರಗಳು ಅತಿಯಾಗಿವೆ. ನಿರುದ್ಯೋಗ, ಹಣದುಬ್ಬರ, ಬೆಲೆ ಏರಿಕೆ ನಿಯಂತ್ರಣಕ್ಕೆ ಸಿಗದಂತಾಗಿದೆ. ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಟೋಲ್ ಹೆಚ್ಚಳಕ್ಕೆ ತಡೆಯೇ ಇಲ್ಲದಂತಾಗಿದೆ.

ಇದರ ನಡುವೆ ವಿಮಾನ ನಿಲ್ದಾಣಗಳ ಛಾವಣಿಗಳು ಕುಸಿದು ಬಿದ್ದವು. ಹದಿನೈದು ಸೇತುವೆಗಳು ತುಂಡಾದವು. ಪ್ರತಿಷ್ಠಿತರ ಪ್ರತಿಮೆಗಳು ಉರುಳಿದವು. ರಸ್ತೆಗಳು ಬಿರುಕುಬಿಟ್ಟವು. ಸುರಂಗ ಮಾರ್ಗ ಕುಸಿಯಿತು. ಇದಲ್ಲದೆ ಮಣಿಪುರ ಮತ್ತೆ ಹತ್ತಿ ಉರಿಯಿತು. ಪ್ರಧಾನಿ ಮೋದಿಯಿಂದ ಉತ್ತರವೂ ಇಲ್ಲ, ಪರಿಹಾರವೂ ಇಲ್ಲ.   

ಆದರೆ ವೈಫಲ್ಯವನ್ನು ಮುಚ್ಚಿಕೊಳ್ಳಲು, ವಿರೋಧ ಪಕ್ಷಗಳು ತಮ್ಮನ್ನು ಅವಮಾನಿಸಿದವು, ಗೇಲಿ ಮಾಡಿದವು ಹಾಗೂ ಅಣಕಿಸಿದವು ಎಂದು ದೂರುವುದನ್ನೂ ಬಿಡಲಿಲ್ಲ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....