ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

Date:

ರಾಜ್ಯ ಸರ್ಕಾರವೇ ಮುಂದೆ ನಿಂತು ಕಾವೇರಿಗೆ ಆರತಿ ಎನ್ನುವ ಮೂಲಕ ಧಾರ್ಮಿಕವಾಗಿ, ಭಾವನಾತ್ಮಕವಾಗಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪ್ರಜ್ಞಾಪೂರ್ವಕವಾಗಿ ಹಿನ್ನೆಲೆಗೆ ಸರಿಸುತ್ತಿದೆ. ಬಿಜೆಪಿ ಮಾಡಿದ ಗಿಮಿಕ್ಕನ್ನೇ ಕಾಂಗ್ರೆಸ್ ಕೂಡ ಮಾಡಲು ಮುಂದಾಗಿದೆ. ಕಾವೇರಿ ಮಾತೆಗೆ ಆರತಿ ಎತ್ತುವ ಬದಲು, ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಂಗಳಾರತಿ ಎತ್ತಬೇಕಿದೆ.

ಕನ್ನಡ ನಾಡಿನ ಜೀವನದಿಗೆ ನಮನ ಸಲಿಸಲ್ಲು ಗಂಗೆಯಷ್ಟೇ ಪವಿತ್ರ ನದಿಯಾಗಿರುವ ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರ ರೂಪು ರೇಷೆಗಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಮೂರು ದಿನಗಳ ಕಾಲ ಗಂಗಾರತಿ ಮಾದರಿ ಅಧ್ಯಯನ ನಡೆಸಿ ‘ಗಂಗಾರತಿ ಮತ್ತು ಕಾವೇರಿ ಆರತಿ ಕುರಿತು ರಾಜ್ಯ‌ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದಿದ್ದಾರೆ.

ಅಷ್ಟೇ ಅಲ್ಲ, ‘ಹಿಂದೂಗಳ ಶ್ರೇಷ್ಠ ಸಂಪ್ರದಾಯಗಳಲ್ಲಿ ಒಂದಾಗಿರುವ, ವೇದಘೋಷ, ಮಂತ್ರಗಳೊಂದಿಗೆ ಪ್ರಸಿದ್ಧ ಯಾತ್ರಾಸ್ಥಳ ಹರಿದ್ವಾರದಲ್ಲಿ ನಡೆಯುವ ಗಂಗಾರತಿಯ ಮಾದರಿಯಲ್ಲಿ ಕಾವೇರಿ ಆರತಿ ನಡೆಯಲಿದೆ. ಹರಿದ್ವಾರದ ಗಂಗಾರತಿಗೆ ಸರ್ಕಾರದ ಅನುದಾನವಿಲ್ಲ. ಆದರೆ ನಮ್ಮ ಸರ್ಕಾರವೇ ಮುಂದೆ ನಿಂತು 5 ಕೋಟಿ ಖರ್ಚು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಲ್ಲಿ ಐತಿಹಾಸಿಕ ದಸರಾ ಸಂಭ್ರಮದ ಸಂದರ್ಭದಲ್ಲಿಯೇ ಕಾವೇರಿ ಆರತಿ ಆರಂಭಿಸಲು ಇಚ್ಛಿಸಿದ್ದಾರೆ. ಉದ್ದೇಶಿತ ಸ್ಥಳಗಳಾದ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಅಣೆಕಟ್ಟು ಪ್ರದೇಶದಲ್ಲಿ ಕಾವೇರಿ ಆರತಿ ಆರಂಭಿಸುವುದಾದರೆ, ಹರಿದ್ವಾರ ಅಥವಾ ವಾರಾಣಸಿಯಿಂದಲೇ ಸಾಧು ಸಂತರನ್ನು ಆಹ್ವಾನಿಸಿ ಅವರಿಂದ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಲಾಗುವುದು’ ಎಂದಿದ್ದಾರೆ.  

ಪ್ರಕೃತಿಯ ಮಡಿಲಲ್ಲಿ ಹುಟ್ಟಿ ಹರಿವ ಕಾವೇರಿಗೆ ಆರತಿಯ ಅಗತ್ಯವಿದೆಯೇ? ಇಷ್ಟು ವರ್ಷ ಇಲ್ಲದ್ದು ಈಗೇಕೆ? ಕಾವೇರಿ ಜಲಾನಯನದ ಫಲಾನುಭವಿಗಳಾದ ರೈತಮಕ್ಕಳಿಗೆ ಇದರಿಂದ ಏನಾದರೂ ಅನುಕೂಲವಾಗುತ್ತದೆಯೇ? ಇದರಿಂದ ನಾಡಿಗೆ ಏನಾದರೂ ಪ್ರಯೋಜನವಿದೆಯೇ? ರಾಜ್ಯ ಸರ್ಕಾರದ ಆದ್ಯತೆಗಳೇನು? ಈ ಎಲ್ಲ ಪ್ರಶ್ನೆಗಳು ಈಗ ಜನತೆಯಲ್ಲಿ ಏಳತೊಡಗಿವೆ. ಸಿದ್ದರಾಮಯ್ಯನವರ ಸರ್ಕಾರ ಉತ್ತರಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಮೊದಲಿಗೆ ‘ತುಂಗಾ ಆರತಿ’ ಯೋಜನೆಯನ್ನು ಘೋಷಿಸಲಾಯಿತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ, ತುಂಗಾ ಆರತಿಗೆ 30 ಕೋಟಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಎತ್ತಿಡಲಾಗಿದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಯಿತು. ಇದು ಹಿಂದುತ್ವದ ಪ್ರಚಾರಕ್ಕೆ ಅನುಗುಣವಾಗಿ ಮಾಡಿದ ಘೋಷಣೆಯಾಗಿತ್ತು. ಅದರ ಹಿಂದೆ ಬಿಜೆಪಿಯ ಸೈದ್ಧಾಂತಿಕ ಮುಖವಾದ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥರನ್ನು ಸಂತೃಪ್ತರನ್ನಾಗಿಸುವ ಇರಾದೆ ಇತ್ತು.

ಇದರ ಮುಂದುವರೆದ ಭಾಗವಾಗಿ ಅಕ್ಟೋಬರ್ 2022ರಂದು ಬಿಜೆಪಿಯ ಬಸವರಾಜ ಬೊಮ್ಮಾಯಿ ಸರ್ಕಾರ, ಕಾವೇರಿ ನದಿ ಉತ್ಸವದ ಅಂಗವಾಗಿ ಮೊದಲ ಬಾರಿಗೆ ಕೊಡಗು ಜಿಲ್ಲೆಯ ಭಾಗಮಂಡಲ, ಕುಶಾಲನಗರ, ಕಣಿವೆ ಕಾವೇರಿ ನದಿ ತಟದಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನೆರವೇರಿಸಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಜಮ್ಮು-ಕಾಶ್ಮೀರದಲ್ಲಿ ಮೋದಿ-ಶಾ ವಿರುದ್ಧ ಪ್ರತಿಪಕ್ಷಗಳು ಒಂದಾಗುವವೇ?

ಬಿಜೆಪಿಗರು ದೇವರು, ಧರ್ಮವನ್ನು ಮುನ್ನೆಲೆಗೆ ತಂದು ಮೌಢ್ಯ ಬಿತ್ತುವ, ಸಮಾಜವನ್ನು ವಿಭಜಿಸುವ, ಅದರಿಂದ ಶಾಂತಿ ಸಹಬಾಳ್ವೆಗೆ ಧಕ್ಕೆ ತರುವ ಕೆಲಸಗಳಲ್ಲಿ ನಿಷ್ಣಾತರು. ಹಿಂದುತ್ವದ ನೆಪದಲ್ಲಿ ಈ ಸಮಾಜವನ್ನು ಪುರಾತನ ಕಾಲಕ್ಕೆ ಕೊಂಡೊಯ್ದು ಕತ್ತಲಲ್ಲಿರಿಸುವುದು ಅವರ ಅಜೆಂಡ. ಅದನ್ನು ಕಟುವಾಗಿ ಟೀಕಿಸುವ ಸಮಾಜವಾದಿ ಸಿದ್ದರಾಮಯ್ಯನವರ ಸರ್ಕಾರವೂ ಈಗ ಅದನ್ನೇ ಮಾಡಲು ಮುಂದಾದರೆ, ಬಿಜೆಪಿಗಿಂತ ಕಾಂಗ್ರೆಸ್ ಹೇಗೆ ಭಿನ್ನ? ಬಿಜೆಪಿಯದು ಹಾರ್ಡ್ ಕೋರ್ ಹಿಂದುತ್ವವಾದರೆ, ಕಾಂಗ್ರೆಸ್ಸಿನದು ಸಾಫ್ಟ್ ಹಿಂದುತ್ವವೇ? ಕಾಂಗ್ರೆಸ್ ಪಕ್ಷ ಪಾಲಿಸಿಕೊಂಡು ಬಂದ ಜಾತ್ಯತೀತ ನಿಲುವು, ಸರ್ವಜನಾಂಗದ ಶಾಂತಿಯ ತೋಟಗಳೆಂಬ ಹೇಳಿಕೆಗಳು ಜನರ ಕಣ್ಣಿಗೆ ಮಣ್ಣೆರೆಚುವ ನಾಟಕವೇ?

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೇಡವೆಂದು ನಿರ್ಧರಿಸಿದ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರು. ತಂದದ್ದರ ಹಿಂದೆ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರಕ್ಕಿಂತ ಮುಖ್ಯವಾಗಿ ಶಾಂತಿ-ಸಹಬಾಳ್ವೆಗೆ ಧಕ್ಕೆ ತಂದ ಬಗ್ಗೆ ಭಾರಿ ಬೇಸರವಿತ್ತು. ಬದಲಾವಣೆ ತರಲೇಬೇಕೆಂದು ಬಯಸಿದ್ದರ ಹಿಂದೆ ಈ ರಾಜ್ಯದ ಜನರ ಪ್ರಬುದ್ಧ ಮನಸ್ಸಿತ್ತು. ಮಾನವೀಯತೆ ಕೆಲಸ ಮಾಡಿತ್ತು. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಾಗ, ಏನೋ ಒಂದು ನಿರಾಳತೆ ಮನೆಮಾಡಿತ್ತು. ಹಾಗೆಯೇ ಭಾರೀ ನಿರೀಕ್ಷೆಯೂ ಇತ್ತು.  

ಆದರೆ, ಈಗ ರಾಜ್ಯ ಸರ್ಕಾರವೇ ಮುಂದೆ ನಿಂತು, ಸಾರ್ವಜನಿಕರ ತೆರಿಗೆಯ ಹಣವಾದ ಐದು ಕೋಟಿ ಖರ್ಚು ಮಾಡಿ ಕಾವೇರಿಗೆ ಆರತಿ ಎನ್ನುವ ಮೂಲಕ ಧಾರ್ಮಿಕವಾಗಿ, ಭಾವನಾತ್ಮಕವಾಗಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪ್ರಜ್ಞಾಪೂರ್ವಕವಾಗಿ ಹಿನ್ನೆಲೆಗೆ ಸರಿಸುತ್ತಿದೆ. ಬಿಜೆಪಿ ಮಾಡಿದ ಗಿಮಿಕ್ಕನ್ನೇ ಕಾಂಗ್ರೆಸ್ ಕೂಡ ಮಾಡಲು ಮುಂದಾಗಿ ರಾಜ್ಯವನ್ನು ಮನುಯುಗದತ್ತ ಕೊಂಡೊಯ್ಯುತ್ತಿದೆ ಎನ್ನುವ ಭಾವನೆ ಜನರಲ್ಲಿ ಮೂಡತೊಡಗಿದೆ.  

ಹಾಗಾಗಿ ಕಾವೇರಿ ಮಾತೆಗೆ ಆರತಿ ಎತ್ತುವ ಬದಲು, ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಂಗಳಾರತಿ ಎತ್ತಬೇಕಿದೆ. ಈ ನಾಡನ್ನು ಬಸವ, ಕುವೆಂಪು, ಟಿಪ್ಪುಗಳ ಜಾತ್ಯತೀತ ನಾಡಾಗಿ, ವೈಚಾರಿಕತೆಯ ಬೀಡಾಗಿ ಉಳಿಸಿಕೊಳ್ಳುವ ಬಗ್ಗೆ ಯೋಚಿಸಬೇಕಿದೆ.  

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....