ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

Date:

ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ ನಿಲುವನ್ನು ನಿರೀಕ್ಷಿಸುವುದು ಎಷ್ಟು ಸರಿ?

ಬೆಳಗಾವಿಯಲ್ಲಿ ಸುದ್ದಿ ಮಾಧ್ಯಮಗಳ ಮುಂದೆ ಮಾತನಾಡಿದ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿಯವರು, ‘ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮುಡಾ ಹೋರಾಟ ಮಾಡ್ಲಿಕ್ಕತ್ತದ. ಪಾದಯಾತ್ರೆ ಹೊಂಟಾರ. ಅದು ಡಿ.ಕೆ. ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡ್ತಿದಾನ. ಅದು ಮುಖ್ಯಮಂತ್ರಿ ಕುರ್ಚಿಯಿಂದ ಸಿದ್ದರಾಮಯ್ಯರನ್ನು ಇಳಿಸಲಿಕ್ಕ. ಇದೆಲ್ಲ ಹೊಂದಾಣಿಕೆ ರಾಜಕಾರಣ. ಅದರಲ್ಲಿ ನಾವು ಭಾಗವಹಿಸ್ತಿಲ್ಲ. ನಾನು, ರಮೇಶ್ ಕೂಡಿ ಕೂಡಲಸಂಗಮದಿಂದ ಬಳ್ಳಾರಿವರಗ ಪಾದಯಾತ್ರೆ ಮಾಡೋರಿದೀವಿ, ಅದ್ಕ ಹೈಕಮಾಂಡ್ ಅನುಮತಿ ಕೇಳಿದೀವಿ. ಇಷ್ಟರಲ್ಲೇ ದಿನಾಂಕ ಕೂಡ ತಿಳಿಸ್ತೀವಿ’ ಎಂದರು.

ಇದು ಸ್ಪಷ್ಟವಾಗಿ ಬಿಜೆಪಿಯೊಳಗಿನ ಬೇಗುದಿ ಬಿಚ್ಚಿಡುವ, ಹೊಂದಾಣಿಕೆ ರಾಜಕಾರಣವನ್ನು ಬಯಲುಗೊಳಿಸುವ ವಿದ್ಯಮಾನ. ರಾಜಕೀಯ ಹೋರಾಟಗಳ ಅಸಲಿಯತ್ತನ್ನು ಬೆತ್ತಲೆಗೊಳಿಸುವ ಬೆಳವಣಿಗೆ.  

ಅಂದರೆ, ಬಿಜೆಪಿಯ ಪಾದಯಾತ್ರೆ ರಾಜಕೀಯಪ್ರೇರಿತ ಎನ್ನುವುದನ್ನು ಬಿಜೆಪಿ ನಾಯಕರೇ ಬಹಿರಂಗಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕಿತ್ತಾಟದ ಫಲವಾಗಿ, ಕಾಂಗ್ರೆಸ್ ನಾಯಕರ ಅನುಕೂಲಕ್ಕೆ ತಕ್ಕಂತೆ ಬಿಜೆಪಿ ನಾಯಕರು ಪ್ರತಿಭಟನೆ, ಹೋರಾಟ, ಪಾದಯಾತ್ರೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ ಎನ್ನುವುದು ಇದರಿಂದ ಸ್ಪಷ್ಟವಾಗುವುದಿಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪರ್ಯಾಸವೆಂದರೆ, ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಪಾದಯಾತ್ರೆಯನ್ನು ನಾಡಿನ ಪರವಾಗಿ ಮಾಡುತ್ತಿರುವ ಹೋರಾಟ ಎನ್ನುತ್ತಿದೆ. ಮುಡಾ ಮತ್ತು ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣಗಳನ್ನು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಯಲುಗೊಳಿಸಲು ಮಾಡುತ್ತಿರುವ ಜನಜಾಗೃತಯಾತ್ರೆ ಎಂದು ಸಾರುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ರಾಜ್ಯದ ಜನತೆಯ ಮುಂದಿಡಲು ಎನ್ನುತ್ತಿದೆ. ಅದಕ್ಕೆ ಬೇಕಾದ ಮಾತಿನ ಸಮರಕ್ಕೂ ಸಿದ್ಧವಾಗಿದೆ. ಸುದ್ದಿ ಮಾಧ್ಯಮಗಳಿಂದ ಸಾಕಷ್ಟು ಪ್ರಚಾರವನ್ನೂ ಪಡೆಯುತ್ತಿದೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ಒಂದು ವಿರೋಧಪಕ್ಷವಾಗಿ ಬಿಜೆಪಿ ಮಾಡುತ್ತಿರುವುದು ಸರಿ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೆ, ಅದನ್ನು ಖಂಡಿಸಿ, ದಾಖಲೆಗಳ ಮೂಲಕ ಹೊರಗೆಳೆದು, ಜನರ ಮುಂದಿಡುವುದು ಅದರ ಕರ್ತವ್ಯ. ಏಕೆಂದರೆ, ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಕೂಗೆಬ್ಬಿಸಿಯೇ ತಾನೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೂಡ ಅದೇ ಹಾದಿಯಲ್ಲಿದೆ ಎಂದರೆ, ಅದು ರಾಜ್ಯದ ಮತದಾರರಿಗೆ ಮಾಡಿದ ಮೋಸ ಎಂದೇ ಭಾವಿಸಬೇಕಾಗಿದೆ.

ಆದರೆ, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಜನರ ಮುಂದಿಡಬೇಕಾದ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರಲ್ಲಿಯೇ ಒಗ್ಗಟ್ಟಿಲ್ಲದಿರುವುದು ಎದ್ದು ಕಾಣುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಹಣಿಯುವುದು ಬಿಜೆಪಿಯ ದಿಲ್ಲಿ ನಾಯಕರ ಬಯಕೆಯಾಗಿದ್ದರೂ, ಅದಕ್ಕೆ ಭೇಷರತ್ ಬೆಂಬಲ ವ್ಯಕ್ತವಾಗುವುದು ಜೆಡಿಎಸ್ ಕಡೆಯಿಂದ ಮಾತ್ರ. ಅದು ವೈಯಕ್ತಿಕ ನೆಲೆಯದ್ದಾಗಿರಬಹುದು, ಕೊಡು-ಕೊಳ್ಳುವ ವ್ಯವಹಾರವಾಗಿರಬಹುದು. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆ ತಟ್ಟಿ ನಿಂತಿರುವುದು, ಅವರ ಹಲವು ರಾಜಕೀಯ ನಡೆಗಳಿಂದ ವ್ಯಕ್ತವಾಗುತ್ತದೆ.

ಅದೇ ಮಾತುಗಳನ್ನು ಬಿಜೆಪಿ ನಾಯಕರ ಬಗ್ಗೆ ಹೇಳಲಾಗುವುದಿಲ್ಲ. ಏಕೆಂದರೆ, ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಇತ್ತೀಚೆಗೆ ಪೋಕ್ಸೋ ಕಾಯ್ದೆಯಡಿ ಬಂಧನದಿಂದ ಬಚಾವಾಗಿದ್ದಾರೆ. ಅದಕ್ಕೆ ಕಾರಣ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗಿರುವ ಸ್ನೇಹ ಮತ್ತು ಹೊಂದಾಣಿಕೆ ಎನ್ನುವುದನ್ನು ಬಿಜೆಪಿ ನಾಯಕರೇ ಬಹಿರಂಗಪಡಿಸುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ‘ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಾಳು ಮಾಡಿದರು. ಚುನಾವಣೆ ಸೋಲಿಗೆ ಬೊಮ್ಮಾಯಿ ಆಗಲೀ, ಮೋದಿಯಾಗಲೀ ಕಾರಣ ಅಲ್ಲ, ಅಡ್ಜಸ್ಟ್‌ಮೆಂಟ್‌ ಗಿರಾಕಿಗಳು ಕಾರಣ’ ಎಂದಿರುವುದು ರಾಜಕೀಯ ಒಳಸುಳಿಗಳನ್ನು ಬಿಚ್ಚಿಟ್ಟಿದೆ.

ಬಿಜೆಪಿಯಲ್ಲಿದ್ದೂ ಬಿಜೆಪಿಯ ಮೈಸೂರು-ಬೆಂಗಳೂರು ಪಾದಯಾತ್ರೆಗೆ ಪರ್ಯಾಯ ಪಾದಯಾತ್ರೆ ಬಗ್ಗೆ ಮಾತನಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ, ಬಿಜೆಪಿಯ ಅಪ್ಪ-ಮಗನ ರಾಜಕಾರಣದ ಬಗ್ಗೆ ಅಸಮಾಧಾನವಿದೆ. ಅವರ ಭ್ರಷ್ಟಾಚಾರವನ್ನು ವಿರೋಧಿಸಿದ್ದರಿಂದ ಆದ ರಾಜಕೀಯ ಹಿನ್ನಡೆಯ ಬಗ್ಗೆ ಬೇಸರವಿದೆ. ಹಾಗೆಯೇ, ಮತ್ತೊಬ್ಬ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರಿಗೆ ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್ ಬಗ್ಗೆ ಸಿಟ್ಟಿದೆ. ಹೋದಲ್ಲಿ ಬಂದಲ್ಲಿ ಅವರನ್ನು ‘ಸಿಡಿ ಶಿವ’ ಎಂದು ಸಂಬೋಧಿಸುವುದು ಸಾಮಾನ್ಯವಾಗಿದೆ. ಈಗ ಈ ಸಿಟ್ಟು, ಬೇಸರ ಮತ್ತು ಅಸಮಾಧಾನ ಒಂದಾಗಿ, ಮತ್ತೊಂದು ಪಾದಯಾತ್ರೆಯ ಮೂಲಕ ಬಹಿರಂಗವಾಗಿದೆ. ಆ ಮೂಲಕ ಬಿಜೆಪಿಯ ಬಣ್ಣವೂ ಬಯಲಾಗಿದೆ.

ಹೀಗಾಗಿ ರಾಜಕೀಯ ನಾಯಕರ ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳು ಎನ್ನುವುದು ವೇದ್ಯವಾಗುತ್ತದೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ ನಿಲುವನ್ನು ನಿರೀಕ್ಷಿಸುವುದು ಎಷ್ಟು ಸರಿ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....