ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

Date:

2023ರ ಅಕ್ಟೋಬರ್ 15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರೊಂದರ ಬೆನ್ನು ಹತ್ತಿದಾಗ ಇಡೀ ಕರ್ನಾಟಕ ಬೆಚ್ಚಿ ಬೀಳುವಂಥ ಹಗರಣವೊಂದು ಬಯಲಾಗುತ್ತದೆಂದು ಭಾವಿಸಿದ್ದಿರಲಾರರು. ಅಂದು ಹಾಗೆ ಬೆಳಕಿಗೆ ಬಂದದ್ದು ಅಕ್ರಮ ಭ್ರೂಣ ಪತ್ತೆ ಮತ್ತು ಭ್ರೂಣ ಹತ್ಯೆ ಜಾಲ.

ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ಭ್ರೂಣ ಹತ್ಯೆ ಜಾಲವು, ಹಲವು ವರ್ಷಗಳಿಂದ ಕಾರ್ಯಾಚರಣೆ ಮಾಡುತ್ತಿತ್ತು. ಆ ಜಾಲದ ಹನ್ನೊಂದು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ಪೊಲೀಸರಿಗೆ ಅವರು ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆ ಮಾಡಿದ್ದಾರೆಂಬ ಆಘಾತಕಾರಿ ವಿಷಯ ತಿಳಿದುಬಂತು.

ಮೈಸೂರಿನ ಮಾತಾ ನರ್ಸಿಂಗ್‌ನ ಮಾಲೀಕ ಡಾ.ಚಂದನ್ ಬಲ್ಲಾಳ್ ಈ ಜಾಲದ ಪ್ರಮುಖ ಆರೋಪಿ. ಉಳಿದಂತೆ ಆತನ ಪತ್ನಿ, ಅವರ ಆಸ್ಪತ್ರೆಯ ತಂತ್ರಜ್ಞ, ಹಲವು ನರ್ಸ್‌ಗಳು, ಏಜೆಂಟ್‌ಗಳನ್ನು ಬಂಧಿಸಲಾಯಿತು. ಬಂಧಿತರಿಂದ ಹೊರಬಂದ ಮಾಹಿತಿ ಭಯಾನಕವಾಗಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡಲಾಗುತ್ತಿತ್ತು. ತಂತ್ರಜ್ಞರ ಬದಲಿಗೆ ಪಿಯುಸಿ ಓದಿದವರು ಸ್ಕ್ಯಾನಿಂಗ್ ಮಾಡುತ್ತಿದ್ದರು. ಕೆಲವೊಮ್ಮೆ ನರ್ಸ್‌ಗಳೇ ಗರ್ಭಪಾತ ನೆರವೇರಿಸುವ ಮೂಲಕ ಭ್ರೂಣ ಹತ್ಯೆ ಮಾಡುತ್ತಿದ್ದರು. ನರ್ಸ್‌ಗಳು ಹಾಗೂ ಆಶಾ ಕಾರ್ಯಕರ್ತೆಯರು ಗರ್ಭಿಣಿಯರನ್ನು ಹುಡುಕಿ ಕರೆತರುವ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದರು. ನೈರ್ಮಲ್ಯರಹಿತವಾದ ಸ್ಥಳಗಳಲ್ಲಿ, ಯಾವ ಮುಂಜಾಗರೂಕತೆ ವಹಿಸದೆಯೇ ಅಬಾರ್ಷನ್ ಮಾಡಲಾಗುತ್ತಿತ್ತು. ಸ್ವಲ್ಪ ಹೆಚ್ಚು ಕಡಿಮೆಯಾದರೂ ಗರ್ಭಿಣಿಯರ ಪ್ರಾಣಕ್ಕೆ ಕಂಟಕ ಬರುವುದು ನಿಶ್ಚಿತ. ಇಂಥ ಒಂದು ಶಸ್ತ್ರಚಿಕಿತ್ಸೆಗೆ 30 ಸಾವಿರ ರೂಪಾಯಿಯನ್ನು ಚಾರ್ಜ್ ಮಾಡಲಾಗುತ್ತಿತ್ತು. ವರ್ಷಕ್ಕೆ ಒಬ್ಬ ಏಜೆಂಟ್‌ಗೆ 1000 ಗರ್ಭಿಣಿಯರನ್ನು ಹುಡುಕಿ ತರುವ ಟಾರ್ಗೆಟ್ ನೀಡಲಾಗಿತ್ತು. ಮೈಸೂರು ಜಿಲ್ಲೆಯ ನೂರಾರು ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣ ಪತ್ತೆ ನಡೆಯುತ್ತಿದ್ದು, ಹಲವು ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಲಾಗುತ್ತಿದೆ ಎನ್ನುವ ಮಾತುಗಳಿವೆ. ನಾಗರಿಕ ಸಮಾಜವೊಂದು ತಲೆತಗ್ಗಿಸಬೇಕಾದ ಕೃತ್ಯವೊಂದು ಹೇಗೆ ಸಲೀಸಾಗಿ ನಡೆದುಹೋಗುತ್ತಿದೆ ಎನ್ನುವುದನ್ನು ಗಮನಿಸಿದರೆ, ನಮ್ಮ ಸಮಾಜ, ವೈದ್ಯಕೀಯ ಸಿಬ್ಬಂದಿ ಹಾಗೂ ಸರ್ಕಾರಿ ಯಂತ್ರ ಎಷ್ಟು ಅಧಃಪತನ ಕಂಡಿವೆ ಎನ್ನುವುದರ ಅರಿವಾಗುತ್ತದೆ. ಕರ್ನಾಟಕದ ಮಂಡ್ಯ, ಮೈಸೂರು, ಬೆಳಗಾವಿಯಂಥ ನೀರಾವರಿ ಸಮೃದ್ಧಿಯ ಜಿಲ್ಲೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ವ್ಯಾಪಕವಾಗಿರುವುದು ಗಮನಾರ್ಹ ವಿಚಾರವಾಗಿದೆ. ಶಿಕ್ಷಣ ಮತ್ತು ಇತರ ಸಾಮಾಜಿಕ ಸೂಚ್ಯಂಕಗಳಲ್ಲಿ ಪ್ರಗತಿಯ ಹೊರತಾಗಿಯೂ ಸಮಾಜದ ಮೇಲುಸ್ತರಗಳು ಗಂಡು ಮಗುವನ್ನು ಹೊಂದುವ ಗೀಳನ್ನು ಹೊಂದಿರುವುದು ಒಂದು ವಿಪರ್ಯಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಣ್ಣು ಶಕ್ತಿ, ದೇವತೆ ಎಂದೆಲ್ಲ ಆರಾಧಿಸುವ ನಾಡಿನಲ್ಲಿ ಭ್ರೂಣ ಹತ್ಯೆಗಳು ಸಹಜ ಎನ್ನುವಂತೆ ನಡೆಯುತ್ತಿವೆ. ಜೀವ ಉಳಿಸಬೇಕಾದ ವೈದ್ಯರು ತಾಯಿಯ ಹೊಟ್ಟೆಯಲ್ಲಿರುವಾಗಲೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿದ್ದಾರೆ. ಭಾರತದಲ್ಲಿ ಸದ್ಯ ವಾರ್ಷಿಕ ಐದು ಲಕ್ಷ ಭ್ರೂಣ ಹತ್ಯೆಗಳು ನಡೆಯುತ್ತಿವೆ ಎಂದು ಅಂದಾಜಿಸಲಾಗಿದೆ. ಮಧ್ಯಪ್ರದೇಶ, ಗುಜರಾತ್, ಛತ್ತೀಸ್‌ಗಢಗಳಲ್ಲಿ ಈ ದಂಧೆ ಹೆಚ್ಚು ವ್ಯಾಪಕವಾಗಿದೆ. ಕರ್ನಾಟಕವೂ ಕೂಡ ಭ್ರೂಣ ಹತ್ಯೆ ಹೆಚ್ಚಾಗಿ ನಡೆಯುವ ರಾಜ್ಯಗಳಲ್ಲಿ ಒಂದಾಗಿದೆ.

ಭ್ರೂಣ ಹತ್ಯೆಗೆ ಕಾರಣಗಳು ಹಲವು; ಪುತ್ರ ಸಂತಾನದ ಬಗ್ಗೆ ಧರ್ಮಶಾಸ್ತ್ರಗಳಲ್ಲಿರುವ ಉಲ್ಲೇಖಗಳು, ನಮ್ಮ ಸಂಸ್ಕೃತಿಯಲ್ಲಿರುವ ಹೆಣ್ಣನ್ನು ಕುರಿತ ಸಾಂಪ್ರದಾಯಿಕ ಧೋರಣೆ, ಅಜ್ಞಾನ, ವರದಕ್ಷಿಣೆ, ಲೈಂಗಿಕ ದೌರ್ಜನ್ಯಗಳಂಥ ಪಿಡುಗುಗಳು ಭ್ರೂಣ ಹತ್ಯೆಗೆ ಕಾರಣವಾಗುತ್ತಿವೆ. ಭ್ರೂಣ ಹತ್ಯೆಯಿಂದ ಲಿಂಗ ಅಸಮಾನತೆ ಹೆಚ್ಚಾಗುತ್ತಿದೆ.

ಭಾರತದ ಲಿಂಗ ಅನುಪಾತವು (ಪ್ರತಿ 1,000 ಪುರುಷರಿಗೆ ಹೆಣ್ಣು) 2022-23 ರಲ್ಲಿ 933 ರಷ್ಟಿತ್ತು, ಇದು 2015-17 ರಲ್ಲಿ ಸಾರ್ವಕಾಲಿಕ ಕನಿಷ್ಠ 896 ರಿಂದ ಈ ಮಟ್ಟಕ್ಕೆ ಏರಿಕೆಯಾಗಿದೆ. 2023ರ ಅಖಿಲ-ಭಾರತದ ಅನುಪಾತವು 943ಕ್ಕೆ ಹೆಚ್ಚಿದೆ. ಆದರೆ, ದಕ್ಷಿಣ ಭಾರತಕ್ಕೆ ಹೋಲಿಸಿದರೆ ಉತ್ತರ ಭಾರತದಲ್ಲಿ ಈ ಅನುಪಾತ ಕಡಿಮೆ ಇದೆ. ದಕ್ಷಿಣದ ಕೇರಳದಲ್ಲಿ ಲಿಂಗ ಅನುಪಾತವು 1084, ತಮಿಳುನಾಡು 995 ಮತ್ತು ಆಂಧ್ರಪ್ರದೇಶದಲ್ಲಿ 992 ಇದ್ದರೆ; ಗುಜರಾತ್‌ನಲ್ಲಿ 918, ಉತ್ತರ ಪ್ರದೇಶ 908 ಮತ್ತು ಹರಿಯಾಣದಲ್ಲಿ 877 ಇದೆ. ಕರ್ನಾಟಕದ ಅನುಪಾತವು 968 ರಷ್ಟಿದೆ. ಆದರೂ ಇದು ಹೆಮ್ಮೆಪಡಬೇಕಾದ ಸಂಗತಿಯೇನಲ್ಲ; ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಮಂಡ್ಯ ಮತ್ತು ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಇನ್ನೂ ವ್ಯಾಪಕವಾಗಿವೆ. ಮಂಡ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂದು ರೈತ ಯುವಕರು ಕೆಲವು ತಿಂಗಳ ಹಿಂದೆ ಕಾಲ್ನಡಿಗೆ ಜಾಥಾ ಮಾಡಿದ್ದರು. ಅದೇ ನಾಡಿನಲ್ಲಿ ಸಾವಿರಾರು ಹೆಣ್ಣು ಜೀವಗಳನ್ನು ಹುಟ್ಟುವ ಮೊದಲೇ ಸಾಯಿಸಲಾಗಿದೆ ಎನ್ನುವುದು ಎಂಥ ವೈರುಧ್ಯ!

ಹೆಣ್ಣು ಭ್ರೂಣಹತ್ಯೆ ಮತ್ತು ಶಿಶುಹತ್ಯೆ ಹೆಣ್ಣು ಮಗುವಿನ ವಿರುದ್ಧದ ತಾರತಮ್ಯದ ಎರಡು ಆರಂಭಿಕ ರೂಪಗಳಾಗಿವೆ. ಶಿಕ್ಷಣ, ಆರೋಗ್ಯ, ಕೆಲಸದ ಅವಕಾಶಗಳು, ವೇತನ ಮತ್ತು ಆಸ್ತಿ ಹಕ್ಕುಗಳಲ್ಲಿ ಇದು ಅವಳ ಜೀವನದುದ್ದಕ್ಕೂ ಮುಂದುವರಿಯುತ್ತದೆ. ಹರ್ಯಾಣ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಇನ್ನೂ ಪ್ರಸವಪೂರ್ವ ಲಿಂಗ ನಿರ್ಣಯ ಕ್ಲಿನಿಕ್‌ಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿವೆ.

ದೇಶದಲ್ಲಿ ಗರ್ಭಧಾರಣ ಮತ್ತು ಪ್ರಸವ ಪೂರ್ವ ರೋಗ ನಿಧಾನ ತಂತ್ರಗಳ (ಲಿಂಗ ಆಯ್ಕೆ ನಿಷೇಧ) ಅಧಿನಿಯಮ 1994 ಜಾರಿಯಲ್ಲಿದೆ. ಆದರೂ ಅವ್ಯಾಹತವಾಗಿ ಹೆಣ್ಣು ಭ್ರೂಣಗಳನ್ನು ದಮನ ಮಾಡಲಾಗುತ್ತಿದೆ. ಇಂಥ ಸ್ಥಿತಿಯಲ್ಲಿ 2030 ರ ವೇಳೆಗೆ ‘ಲಿಂಗ ಸಮಾನತೆ ಮತ್ತು ಎಲ್ಲ ಮಹಿಳೆಯರ ಸಬಲೀಕರಣ’ವನ್ನು ಸಾಧಿಸುವ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ ದೂರದ ಮಾತೇ ಸರಿ. ಬೇಟಿ ಬಚಾವ್ ಬೇಟಿ ಪಢಾವ್‌ ಎಂದು ಘೋಷಣೆ ಮೊಳಗಿಸುವಷ್ಟಕ್ಕೇ ಸೀಮಿತವಾಗಿರುವ ಸರ್ಕಾರಗಳು, ಆದಿಮ ಕಾಲಕ್ಕೆ ಕರೆದೊಯ್ಯುವ ಗಂಡಾಳ್ವಿಕೆ ನಡವಳಿಕೆಗಳು ಹೆಣ್ಣು ಜೀವಕ್ಕೆ ಕಂಟಕಪ್ರಾಯವಾಗಿವೆ. ಈ ವಿಚಾರದಲ್ಲಿ ಕಠಿಣ ಕಾನೂನು ಪಾಲನೆ ಆಗುವುದರ ಜೊತೆಗೆ ಜನರ ಮನಸ್ಥಿತಿಯಲ್ಲೂ ಬದಲಾವಣೆ ತರದ ಹೊರತು ಸುಧಾರಣೆ ಸಾಧ್ಯವೇ ಇಲ್ಲ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....