ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ

Date:

ಕರ್ನಾಟಕದಲ್ಲಿ ಪಕ್ಷಕ್ಕೆ ರಾಜ್ಯಾಧ್ಯಕ್ಷನನ್ನು ನೇಮಿಸಲು ಮತ್ತು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಸುಮಾರು ಆರು ತಿಂಗಳು ತೆಗೆದುಕೊಂಡಿತ್ತು. ಹೈಕಮಾಂಡ್ ಅಳೆದುಸುರಿದು ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕರನ್ನಾಗಿ ಆರ್ ಅಶೋಕ್ ಅವರನ್ನು ಆಯ್ಕೆ ಮಾಡಿತ್ತು. ಅಲ್ಲಿಗೆ ಪಕ್ಷದೊಳಗಿನ ಸಮಸ್ಯೆಗಳು ಬಗೆಹರಿದವು ಎಂದು ಹೈಕಮಾಂಡ್ ಅಂದುಕೊಂಡಿತ್ತೇನೋ. ವಾಸ್ತವವಾಗಿ, ಅಲ್ಲಿಂದ ಪಕ್ಷದೊಳಗಿನ ಅರಾಜಕತೆ, ಒಳಜಗಳಗಳು ಮತ್ತಷ್ಟು ಹೆಚ್ಚಾಗಿದ್ದು, ಬಿಜೆಪಿ ದಿನದಿಂದ ದಿನಕ್ಕೆ ರಗಳೆಗಳ ಕೇಂದ್ರಸ್ಥಾನವಾಗಿ ಪರಿಣಮಿಸಿದೆ.

ಸಾಮಾನ್ಯವಾಗಿ ವಿಧಾನ ಮಂಡಲ ಅಧಿವೇಶನ ನಡೆಯುವಾಗ ಆಡಳಿತ ಪಕ್ಷಕ್ಕೆ ವಿರೋಧ ಪಕ್ಷದ ಬಗ್ಗೆ ಕೊಂಚ ಆತಂಕ ಇರುತ್ತದೆ. ಸರ್ಕಾರದ ಹುಳುಕುಗಳು ಎಲ್ಲಿ ಬಯಲಾಗುತ್ತವೇ ಎನ್ನುವ ಭಯವಿರುತ್ತದೆ. ಆದರೆ, ಬೆಳಗಾವಿಯ ಅಧಿವೇಶನದಲ್ಲಿ ಕಾಂಗ್ರೆಸ್‌ಗಿಂತ ವಿರೋಧ ಪಕ್ಷ ಬಿಜೆಪಿಯ ಹುಳುಕುಗಳೇ ಹೆಚ್ಚಾಗಿ ಬಯಲಿಗೆ ಬಂದಿವೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಗದ್ದಲ ಮಾಡಿ ಆರ್ ಅಶೋಕ್ ಸಭಾತ್ಯಾಗ ಮಾಡಿ ಕೆಲವು ಬಿಜೆಪಿ ಶಾಸಕರೊಂದಿಗೆ ಹೊರಬಂದರು. ಆಗ ಆರ್ ಅಶೋಕ್ ವಿರುದ್ಧ ಕೆಂಡವಾದ ಅವರದ್ದೇ ಪಕ್ಷದ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ‘ಇಂತಹ …. ಮಕ್ಕಳನ್ನು ನಾಯಕರಾಗಿ ಮಾಡಿದರೆ ಪಕ್ಷ ಮುಳುಗದೇ ಇನ್ನೇನಾಗುತ್ತೆ? ಬಕೆಟ್ ಹಿಡಿದುಕೊಂಡು ರಾಜಕಾರಣ ಮಾಡುವವರು ಇನ್ನೇನು ಮಾಡುತ್ತಾರೆ’ ಎಂದು ಹರಿಹಾಯ್ದರು. ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದವರಿಂದ ಇನ್ನೇನು ತಾನೆ ನಿರೀಕ್ಷೆ ಮಾಡಲು ಸಾಧ್ಯ ಎಂದು ಎಲ್ಲರೆದುರೇ ಆರ್ ಅಶೋಕ್ ಅವರನ್ನು ನಿಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಬಿಜೆಪಿಯಲ್ಲಿ ಹಲವು ಗುಂಪುಗಳಿದ್ದು, ಎಸ್ ಆರ್ ವಿಶ್ವನಾಥ್ ಬಿ ವೈ ವಿಜಯೇಂದ್ರ ಗುಂಪಿಗೆ ಸೇರಿದವರು. ಅವರು ಎಂದೂ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರೇ ಅಲ್ಲ. ಅಂಥವರು ಈಗ ವಿಪಕ್ಷ ನಾಯಕ ಎನ್ನುವುದನ್ನೂ ನೋಡದೇ ಅಶೋಕ್ ವಿರುದ್ಧ ಹಾಗೆ ಮಾತನಾಡಲು ಬಿಎಸ್‌ವೈ ಹಾಗೂ ವಿಜಯೇಂದ್ರ ತಮ್ಮ ಬೆನ್ನಿಗಿದ್ದಾರೆ ಎನ್ನುವ ಧೈರ್ಯವೇ ಕಾರಣ. ಅಶೋಕ್ ಮೊದಲಿನಿಂದಲೂ ಯಾರನ್ನೂ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ, ದಿಢೀರ್ ತೀರ್ಮಾನ ಮಾಡುತ್ತಾರೆ ಎಂದು ಆರೋಪಿಸಿರುವ ವಿಶ್ವನಾಥ್, ಅಶೋಕ್ ಹೆಸರಿನ ನಾಮಫಲಕ ಇರುವವರೆಗೂ ತಾನು ವಿಪಕ್ಷ ನಾಯಕನ ಕೊಠಡಿಗೆ ಕಾಲಿಡುವುದಿಲ್ಲ ಎನ್ನುವ ಶಪಥವನ್ನೂ ಮಾಡಿದ್ದಾರೆ. ಕೇವಲ ಮಾತಿಗಷ್ಟೇ ಸೀಮಿತವಾಗದೇ, ಬೆಂಗಳೂರಿನ ಶಾಸಕರ ಸಭೆಯನ್ನೂ ವಿಶ್ವನಾಥ್ ಕರೆದಿದ್ದಾರೆ. ಬಿಜೆಪಿಯೊಳಗಿನ ಈ ಗೊಂದಲಕ್ಕೆ ಪಕ್ಷದಲ್ಲಿನ್ನೂ ಚೀಫ್ ವಿಪ್ ಹಾಗೂ ಉಪನಾಯಕರಿಲ್ಲದೇ ಇರುವುದೇ ಕಾರಣ ಎನ್ನಲಾಗುತ್ತಿದೆ.

ವಿಪಕ್ಷ ನಾಯಕರಾದ ಆರ್ ಅಶೋಕ್ ವಿರುದ್ಧ ಪರೋಕ್ಷವಾಗಿ ಬಿಎಸ್‌ವೈ ಮತ್ತು ಬಿ ವೈ ವಿಜಯೇಂದ್ರ ಪರೋಕ್ಷವಾಗಿ ಕತ್ತಿ ಮಸೆಯುತ್ತಿದ್ದಾರೆ. ಇನ್ನೊಂದೆಡೆ, ಇದೇ ಬಿಎಸ್‌ವೈ ಮತ್ತು ಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ್ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿ ಆಗಿದ್ದ ಕಾಲದಿಂದಲೂ ಯತ್ನಾಳ್ ಅವರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಲೇ ಇದ್ದಾರೆ. ಹೈಕಮಾಂಡ್ ಹಲವು ಬಾರಿ ನೋಟಿಸ್ ಕೊಟ್ಟರೂ, ಅವರ ಬಾಯಿ ಮುಚ್ಚಿಸಲು ಅವರಿಗೆ ಸಾಧ್ಯವಾಗಿಲ್ಲ. ಬಿಎಸ್‌ವೈ ಆಡಳಿತದ ಅವಧಿಯಲ್ಲಿ ಬಿ ವೈ ವಿಜಯೇಂದ್ರ ಹಣ ವಸೂಲು ಮಾಡುತ್ತಿದ್ದಾರೆ ಎಂದು ಯತ್ನಾಳ್ ನೇರವಾಗಿಯೇ ಆರೋಪಿಸಿದ್ದರು. ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ, ಯತ್ನಾಳ್ ಮನೆಗೆ ಹೋಗಿ ಅವರನ್ನು ಒಲಿಸಿಕೊಳ್ಳುವ ಮಾತು ಆಡಿದ್ದರು. ಆದರೆ, ಅದಕ್ಕೆ ಆಸ್ಪದ ನೀಡದ ಯತ್ನಾಳ್, ತನ್ನ ಮನೆಗೆ ಯಾರೂ ಬರುವ ಅಗತ್ಯವಿಲ್ಲ ಎಂದಿದ್ದರು. ಆ ಮೂಲಕ ತಮ್ಮ ವಾಗ್ದಾಳಿ ಮುಂದುವರೆಸುವ ಸೂಚನೆಯನ್ನು ಯತ್ನಾಳ್ ನೀಡಿದ್ದರು.

ಬಿಜೆಪಿಯಲ್ಲಿ ತಾನು ಒಂಟಿ ಸಲಗ ಎಂದು ಎಲ್ಲರ ಮೇಲೂ ಕೆಂಡ ಕಾರುತ್ತಿದ್ದ ಯತ್ನಾಳ್ ಟೀಕಾತೀತರಾಗಿಯೇನೂ ಉಳಿದಿಲ್ಲ. ಅವರ ವಿರುದ್ಧ ಅವರದೇ ಪಕ್ಷದ ಮುರುಗೇಶ್ ನಿರಾಣಿ ತಮ್ಮ ಮಾತಿನ ಸಮರವನ್ನು ಮುಂದುವರೆಸುತ್ತಿದ್ದಾರೆ. ಇಬ್ಬರೂ ಪಂಚಮಸಾಲಿಗಳೇ ಆಗಿದ್ದರೂ ಇಬ್ಬರ ನಡುವೆ ಸಮನ್ವಯವೇ ಇಲ್ಲವಾಗಿ ಪರಸ್ಪರ ಕೆಸರೆರಚಾಟ ಮುಂದುವರೆದಿದೆ.

ಇನ್ನು ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ ಸಿ ಟಿ ರವಿ, ಬಿ ವೈ ವಿಜಯೇಂದ್ರ ಅಧ್ಯಕ್ಷರಾಗಿ, ಆರ್ ಅಶೋಕ್ ವಿಪಕ್ಷ ನಾಯಕರಾಗುತ್ತಿದ್ದಂತೆ ಬಹುತೇಕ ಮೌನಕ್ಕೆ ಜಾರಿದ್ದಾರೆ. ಇದೇ ರೀತಿ ಸೋತವರ ಪೈಕಿ ಸೋಮಣ್ಣನ ಪರಿಸ್ಥಿತಿ ಚಿಂತಾಜನಕವಾಗಿದೆ. ರೇಣುಕಾಚಾರ್ಯ ಹೈಕಮಾಂಡ್ ಅನ್ನೇ ಆಗಾಗ ಜಾಡಿಸುತ್ತಿದ್ದಾರೆ, ಸುಧಾಕರ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ತಮ್ಮನ್ನು ಮಾತನಾಡಿಸುವವರೇ ಇಲ್ಲ ಎಂದು ತಮ್ಮಲ್ಲೇ ಗೊಣಗಾಡಿಕೊಂಡು ಸುಮ್ಮನಾಗುತ್ತಿದ್ದಾರೆ. ಹೀಗೆ ದಿನದಿಂದ ದಿನಕ್ಕೆ ಬಿಜೆಪಿ ಕುಸಿಯುತ್ತಿದೆ. ಪಕ್ಷದೊಳಗೆ ಅರಾಜಕತೆ ಹೆಚ್ಚಾಗುತ್ತಿದೆ.

ಸದ್ಯಕ್ಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಈರುಳ್ಳಿ ಬೆಳ್ಳುಳ್ಳಿ ಬೆಲೆಗಳು ಗಗನ ಮುಟ್ಟಿವೆ. ಇದರ ಕಾರಣಗಳೇನು ಎನ್ನುವುದನ್ನು ಪತ್ತೆ ಹಚ್ಚಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಾದದ್ದು ವಿರೋಧ ಪಕ್ಷದ ಜವಾಬ್ದಾರಿ. ಜೊತೆಗೆ ಬರಗಾಲದ ಪರಿಹಾರ ಕಾರ್ಯಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಬೇಕು. ಆದರೆ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋದರೆ ತಾವೇ ಬಿಕ್ಕಟ್ಟಿಗೆ ಸಿಲುಕುತ್ತೇವೆ ಎನ್ನುವುದು ಬಿಜೆಪಿ ಮುಖಂಡರಿಗೆ ಚೆನ್ನಾಗಿ ಗೊತ್ತಿದೆ. ಬರಗಾಲದ ಪರಿಹಾರಕ್ಕೆ, ಬೆಳೆ ನಾಶ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ನಯಾ ಪೈಸೆ ಬಂದಿಲ್ಲ. ಆ ಬಗ್ಗೆ ಕಾಂಗ್ರೆಸ್‌ನವರು ತಮ್ಮ ಮೇಲೆ ಮುಗಿಬೀಳುತ್ತಾರೆ. ಹಾಗಾಗಿ ಬಿಜೆಪಿ ಮುಖಂಡರು ನಿಜವಾದ ವಿಷಯಗಳ ತಂಟೆಗೆ ಹೋಗದೇ ಅಧಿವೇಶನ ಮುಗಿಯುವವರೆಗೆ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ, ಮುಸ್ಲಿಂ ದ್ವೇಷ, ಜಮೀರ್ ಹೇಳಿಕೆ ಇಂಥ ಹುಸಿವಿಚಾರಗಳಲ್ಲೇ ಕಾಲ ಕಳೆಯಲು ನಿರ್ಧರಿಸಿದಂತಿದೆ. ಪ್ರಜಾಪ್ರಭುತ್ವದಲ್ಲಿ ಆಡಳಿತಾರೂಢ ಸರ್ಕಾರ ಹೆಜ್ಜೆ ತಪ್ಪಿದಾಗ ವಿರೋಧ ಪಕ್ಷ ಎಚ್ಚರಿಸಬೇಕು. ಆದರೆ, ವಿರೋಧ ಪಕ್ಷವೇ ಹಾದಿ ತಪ್ಪಿದರೆ ಏನು ಮಾಡಬೇಕು?

ಒಂದು ಸಮರ್ಥ ವಿರೋಧ ಪಕ್ಷ ಇಲ್ಲದೇ ಇರುವುದು ಕರ್ನಾಟಕದ ಮಟ್ಟಿಗೆ ಒಂದು ಕೊರತೆಯೇ ಸರಿ. ಸದ್ಯಕ್ಕಂತೂ ಬೆರಳೆಣಿಕೆಯ ಜನಪರ ಮಾಧ್ಯಮಗಳು ಮತ್ತು ಪ್ರಗತಿಪರ ಸಂಘಟನೆಗಳು ಒತ್ತಡ ಗುಂಪುಗಳಾಗಿ ಕೆಲಸ ಮಾಡಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕಾಗಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....