ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

Date:

ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ. ಸರ್ಕಾರದ ಮುಖ್ಯಸ್ಥರು, ಸೌಜನ್ಯಳನ್ನು ಮತ್ತು ಹಾಸನದ ಸಂತ್ರಸ್ತೆಯರನ್ನು ಸರಿಸಿ, ಬಲಾಢ್ಯರ ಪರ ನಿಂತು, ಪ್ರಜಾಪ್ರಭುತ್ವವನ್ನು ಅಣಕಿಸುತ್ತಿಲ್ಲವೇ?

ಕಳೆದ ಶನಿವಾರ ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ, ಸಾಂಪ್ರದಾಯಿಕ ಉಡುಗೆ ಧರಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಸನ್ನಿಧಿಯಲ್ಲಿ ತೀರ್ಥ ಪ್ರಸಾದ ಸ್ವೀಕರಿಸಿದರು ಎಂದು ಸುದ್ದಿಯಾಗಿದೆ.

ಅದೇ ಶನಿವಾರ ಬೆಂಗಳೂರಿನಲ್ಲಿ ಪ್ರಗತಿಪರ ಚಿಂತಕರ ವೇದಿಕೆ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ನಾಡಿನ ಗಣ್ಯರು, ‘ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರಿಗೆ ಧೈರ್ಯ ತುಂಬುವ ಒಂದು ಹೇಳಿಕೆಯನ್ನೂ ನೀಡದ, ಹಾಸನಕ್ಕೂ ಭೇಟಿ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಸಮಾಧಾನ ಇದೆ. ನೊಂದವರಿಗೆ ನ್ಯಾಯ ಕಲ್ಪಿಸುತ್ತಾರೆ ಎನ್ನುವ ಭರವಸೆ ಇತ್ತು. ಅದು ಆಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಕೂಡ ಸುದ್ದಿಯಾಗಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ನಡೆ ಅನುಮಾನಕ್ಕೆ, ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿದೆ. ಸರ್ಕಾರ ಸಂತ್ರಸ್ತೆಯರ ಪರವಾಗಿಲ್ಲ, ಆರೋಪಿಗಳ ವಿರುದ್ಧ ದೃಢ ನಿಲುವು ತಾಳುತ್ತಿಲ್ಲ ಎಂಬ ಬಗ್ಗೆ ಬೇಸರವಿದೆ. ಹಾಗೆಯೇ, ಆರೋಪಿ ಸ್ಥಾನದಲ್ಲಿರುವವರ ಪರ ಮೃದು ಧೋರಣೆ ತಾಳುತ್ತಿದೆ ಎಂಬ ಆರೋಪ ಕೇಳಿಬರತೊಡಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಸ್ಥಳದ ಸೌಜನ್ಯ ಕೇಸ್‌ನಲ್ಲಿ ಕೋರ್ಟ್ ತೀರ್ಪು ಬಂದ ನಂತರ, ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ ಎಂಬುದು ಎಲ್ಲರ ಗಮನಕ್ಕೂ ಬಂದಿತ್ತು. ನ್ಯಾಯಕ್ಕಾಗಿ ಇಡೀ ರಾಜ್ಯವೇ ಒಂದಾಗಿ ಹೋರಾಡಿತ್ತು. ಧರ್ಮಸ್ಥಳದ ‘ಧರ್ಮಾಧಿಕಾರಿ’ಗಳ ವಿರುದ್ಧ ಸೆಟೆದು ನಿಂತಿತ್ತು. ನಾಡಿನ ಜನ ನ್ಯಾಯಕ್ಕಾಗಿ, ರಕ್ಷಣೆಗಾಗಿ ಧರ್ಮಸ್ಥಳದ ಮಂಜುನಾಥನ ಮೊರೆ ಹೋದರೆ, ತಮಗೆ ಎದುರಾದ ಸಂಕಷ್ಟ ನಿವಾರಣೆಗಾಗಿ ‘ಧರ್ಮಾಧಿಕಾರಿ’ಗಳು ನ್ಯಾಯಾಂಗದ ಮೊರೆ ಹೋಗಿದ್ದೂ ಆಗಿತ್ತು. ಇದರ ನಡುವೆ, ರಾಜ್ಯದ ಜನತೆ ಮುಖ್ಯಮಂತ್ರಿಗಳನ್ನು ಖುದ್ದಾಗಿ ಕಂಡು ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿಕೊಂಡಿದ್ದೂ ನಡೆದಿತ್ತು. ರಾಜ್ಯ ಸರ್ಕಾರ ಸಂತ್ರಸ್ತೆಯರ ಪರ ನಿಂತು ತನಿಖೆ ಕೈಗೆತ್ತಿಕೊಳ್ಳಬಹುದಿತ್ತು. ಲಕ್ಷಾಂತರ ಜನರು ಯಾರನ್ನು ಆರೋಪಿ ಎಂದು ಅನುಮಾನಿಸಿದರೋ ಅವರನ್ನು ತನಿಖೆಗೊಳಪಡಿಸಬಹುದಿತ್ತು. ಆ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬಹುದಿತ್ತು.

ಆದರೆ ಸರ್ಕಾರ ಆ ಕೆಲಸವನ್ನು ಮಾಡಲಿಲ್ಲ. ಸಾವಿರಾರು ಜನರು ಬೀದಿಗಿಳಿದು ಹೋರಾಟ ಮಾಡಿದರೂ, ಆ ಹೋರಾಟಕ್ಕೂ ಬೆಲೆ ಕೊಡಲಿಲ್ಲ. ಸಾಯುವವರೆಗೂ ಧರ್ಮಸ್ಥಳದ ‘ಧರ್ಮಾಧಿಕಾರಿ’ಯನ್ನು, ಅವರ ಅಕ್ರಮಗಳನ್ನು ವಿರೋಧಿಸುತ್ತಲೇ ಹೋರಾಟ ಮಾಡಿಕೊಂಡು ಬಂದ ವಸಂತ ಬಂಗೇರರ ನುಡಿ ನಮನದ ದಿನವೇ ಸರ್ಕಾರದ ಮುಖ್ಯಸ್ಥರು ಧರ್ಮಸ್ಥಳದಲ್ಲಿ ನಿಂತಿದ್ದಾರೆ. ‘ಧರ್ಮಾಧಿಕಾರಿ’ಯ ಆಶೀರ್ವಾದ ಪಡೆದಿದ್ದಾರೆ.

ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈಗಾಗಲೇ ಹಾಸನಕ್ಕೆ ಭೇಟಿ ನೀಡಿ, ಪ್ರಜ್ವಲ್ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಸಂತ್ರಸ್ತೆಯರನ್ನು ಕಂಡು ಸಾಂತ್ವನ ಹೇಳಬೇಕಿತ್ತು. ಸರ್ಕಾರ ನಿಮ್ಮ ಪರವಾಗಿದೆ, ಎಸ್ಐಟಿ ರಚನೆಯಾಗಿದೆ, ಅದರ ಮುಂದೆ ಬಂದು ನಿಮ್ಮ ದುಃಖ ದುಮ್ಮಾನಗಳನ್ನು ನಿವೇದಿಸಿಕೊಳ್ಳಿ, ನಿಮ್ಮ ರಕ್ಷಣೆ ನಮ್ಮ ಕರ್ತವ್ಯ ಎಂದು ಅವರಿಗೆ ಧೈರ್ಯ ತುಂಬಬೇಕಿತ್ತು. ಆದರೆ, ಘಟನೆ ಬೆಳಕಿಗೆ ಬಂದು ತಿಂಗಳಾಗುತ್ತಾ ಬಂದರೂ, ಸರ್ಕಾರದ ಮುಖ್ಯಸ್ಥರು ಹಾಸನದತ್ತ ತಲೆ ಹಾಕಿಲ್ಲ.

ಬದಲಿಗೆ, ಪ್ರಜ್ವಲ್ ರೇವಣ್ಣ ಕುಟುಂಬ ತಮ್ಮಿಂದ ಏನೂ ಆಗಿಯೇ ಇಲ್ಲವೆಂಬಂತೆ ವರ್ತಿಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಗೌಡರ ಕುಟುಂಬದ ಕಡೆಯಿಂದ ಕುಮಾರಸ್ವಾಮಿಯವರ ಕೀಳುಮಟ್ಟದ ರಾಜಕೀಯ ಹೇಳಿಕೆಗಳು ಬಾಣದಂತೆ ತೂರಿ ಬರುತ್ತಿವೆ. ಅದಕ್ಕೆ ಪ್ರತಿಯಾಗಿ ಸರ್ಕಾರದ ಕಡೆಯಿಂದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡ ತಿರುಗೇಟು ನೀಡುತ್ತಿದ್ದಾರೆ. ಇಬ್ಬರಿಗೂ ನ್ಯಾಯ ಬೇಕಾಗಿಲ್ಲ, ರಾಜಕೀಯ ಮುಖ್ಯವಾಗಿದೆ. ಅಂದರೆ, ಈ ಲೈಂಗಿಕ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಬದಲು, ಹೇಳಿಕೆ ಮತ್ತು ಪ್ರತಿಹೇಳಿಕೆಗಳಿಗಷ್ಟೇ ಸೀಮಿತವಾಗಿದೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಏತನ್ಮಧ್ಯೆ, ದೇಶ ತೊರೆದು ಹಾರಿಹೋಗಿರುವ ಆರೋಪಿಯನ್ನು ಕರೆತರುವುದಾಗಲಿ, ಆ ಬಗೆಗಿನ ತನಿಖೆಯನ್ನು ಚುರುಕುಗೊಳಿಸುವುದಾಗಲಿ ಮಾಡುತ್ತಿಲ್ಲ. ಇಲ್ಲೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರೋಪ-ಪ್ರತ್ಯಾರೋಪಗಳಿಂದ ಕಾಲಹರಣವಾಗುತ್ತಿದೆ. ಆರೋಪಿಯನ್ನು ಕರೆತರುವಲ್ಲಿ ಕೇಂದ್ರ ಮತ್ತು ರಾಜ್ಯದ ಪಾತ್ರವೇನು, ಕಾನೂನು ಕ್ರಮಗಳೇನು ಎಂಬುದು ಜನರಿಗೆ ತಿಳಿಯದಾಗಿದೆ.

ಏಕೆಂದರೆ, ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ಗಟ್ಟಿ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ.

ರಾಜ್ಯ ಸರ್ಕಾರದ ಈ ನಡೆ ಏನನ್ನು ಸೂಚಿಸುತ್ತದೆ ಮತ್ತು ಎಂತಹ ಸಂದೇಶವನ್ನು ರವಾನಿಸುತ್ತದೆ? ಪ್ರಜಾಪ್ರಭುತ್ವವೆಂದರೆ ಭೇದಭಾವವಿಲ್ಲದೆ ಪ್ರತಿಯೊಬ್ಬನ ಹಿತಕ್ಕೆ ಅನುಗುಣವಾದ ಆಡಳಿತ ನಡೆಸುವುದು ಎಂದು ವ್ಯಾಖ್ಯಾನಿಸುತ್ತಾರೆ ಚಿಂತಕರು. ಆದರೆ ಸರ್ಕಾರದ ಮುಖ್ಯಸ್ಥರು, ಸೌಜನ್ಯಳನ್ನು ಮತ್ತು ಹಾಸನದ ಸಂತ್ರಸ್ತೆಯರನ್ನು ಸರಿಸಿ, ಬಲಾಢ್ಯರ ಪರ ನಿಂತು, ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆಯೇ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....