ಈ ದಿನ ಸಂಪಾದಕೀಯ | ಜಾತಿ ಜನಗಣತಿ: ಬಲಾಢ್ಯ ಸಮುದಾಯಗಳಿಗೆ ಶರಣಾಯಿತೇ ಸರ್ಕಾರ?

Date:

ಈ ಬಾರಿಯಾದರೂ ರಾಜ್ಯ ಸರ್ಕಾರ ಹೇಳಿದ ಸಮಯದೊಳಗೆ ಸಮೀಕ್ಷೆ ಮುಗಿಸಿ, ವರದಿಯನ್ನು ಜಾರಿಗೆ ತರುವ ಬದ್ಧತೆ ತೋರಬೇಕಿದೆ.

1972ರಲ್ಲಿ ದೇವರಾಜ ಅರಸು ರಾಜ್ಯದ ಮುಖ್ಯಮಂತ್ರಿಯಾದರು. ಅರಸು ಅತಿ ಸಣ್ಣ ಸಮುದಾಯದಿಂದ ಬಂದು ಮುಖ್ಯಮಂತ್ರಿಯಾದವರು. ಇವರು ಮುಖ್ಯಮಂತ್ರಿಯಾಗುವುದಕ್ಕೂ ಮುಂಚೆ, ಕರ್ನಾಟಕದ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದವರು; ಉನ್ನತ ಹುದ್ದೆಗಳನ್ನು ಅಲಂಕರಿಸಿದವರು ಬಹುಸಂಖ್ಯಾತರಾದ ಲಿಂಗಾಯತರು ಮತ್ತು ಒಕ್ಕಲಿಗರು. ಸಣ್ಣ ಪುಟ್ಟ ಜಾತಿಯ ಜನ ಮುಖ್ಯಮಂತ್ರಿಯಾದ ಉದಾಹರಣೆ ಇರಲಿಲ್ಲ.

ಅಂತಹ ಸಂದಿಗ್ಧ ಸಂದರ್ಭದಲ್ಲಿ ಮುಖ್ಯಮಂತ್ರಿಯಾದ ಅರಸು, ಅಧಿಕಾರಕ್ಕೇರಿದ ಐದೇ ತಿಂಗಳಿಗೆ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ನೀಡಲು ಹಾವನೂರ್ ಆಯೋಗ ರಚಿಸಿದರು. ಅದಕ್ಕೆ ವಿರೋಧ ವ್ಯಕ್ತವಾಗಿ, ಕುರ್ಚಿಗೆ ಕಂಟಕ ತರುತ್ತದೆ ಎಂಬುದರ ಅರಿವಿತ್ತು. ಅರಿವಿದ್ದೂ ಸಮಿತಿ ರಚಿಸಿದ್ದು, 1975ರಲ್ಲಿ ವರದಿ ಸ್ವೀಕರಿಸಿದ್ದು, ಅನುಷ್ಠಾನಕ್ಕೆ ತಂದದ್ದು ಅರಸರ ರಾಜಕೀಯ ಇಚ್ಛಾಶಕ್ತಿಗೊಂದು ಉತ್ತಮ ಉದಾಹರಣೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಸು ಆಳ್ವಿಕೆಯ ಮುಂದುವರೆದ ಭಾಗವಾಗಿ, ಅದೇ ಹಿಂದುಳಿದ ವರ್ಗದಿಂದ ಬಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ನೀಡಲು 2015ರಲ್ಲಿ ಕಾಂತರಾಜ ಆಯೋಗದ ನೇತೃತ್ವದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾದರು. ಅದಕ್ಕಾಗಿ 160 ಕೋಟಿ ರೂ.ಗಳನ್ನು ಧಾರಾಳವಾಗಿ ನೀಡಿದರು. ಸಮೀಕ್ಷೆ ನಡೆದು, ವರದಿ ಸಿದ್ದವಾದಾಗ, ‘ವರದಿ ಅಂಗೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದರು. ಕಳೆದ ಹತ್ತು ವರ್ಷಗಳಲ್ಲಿ ಸ್ವತಃ ಸಿದ್ದರಾಮಯ್ಯನವರೇ ನೂರಾರು ಸಲ ‘ಬದ್ಧತೆ’ ಪದ ಬಳಸಿ, ಹೇಳುತ್ತಲೇ ಬಂದರು.

ಆದರೆ, ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ಸಂವಾದ, ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಕೊಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಸರ್ಕಾರ, ಆನಂತರ ಬಂದ ಕುಮಾರಸ್ವಾಮಿಯವರ ಮೈತ್ರಿ ಸರ್ಕಾರ, ಯಡಿಯೂರಪ್ಪನವರ ಬಿಜೆಪಿ ಸರ್ಕಾರ ಮತ್ತು ಈಗಿನ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಮನಸ್ಸು ಮಾಡಲಿಲ್ಲ. ಆ ಮೂಲಕ ಎಲ್ಲ ಪಕ್ಷಗಳ ರಾಜಕೀಯ ನಾಯಕರು ನಿಧಾನದ್ರೋಹ ಎಸಗಿದ ಅಪರಾಧಕ್ಕೆ ಒಳಗಾಗದೆ ಇರಲಿಲ್ಲ.

ಹತ್ತು ವರ್ಷಗಳ ಹಿಂದೆ ಸರಕಾರ ರಚಿಸಿದ್ದ ಕಾಂತರಾಜ ಆಯೋಗ ನಡೆಸಿದ ಸಮೀಕ್ಷಾ ವರದಿಯನ್ನು ಕಾಂಗ್ರೆಸ್ ಸರಕಾರ ತಿಂಗಳ ಹಿಂದೆಯಷ್ಟೇ ರಾಜ್ಯ ಸಚಿವ ಸಂಪುಟದ ಸಭೆ ಮುಂದೆ ಮಂಡಿಸಿತ್ತು. ಆ ವರದಿಗೆ ಅಂಗೀಕಾರ ಪಡೆಯುವ ನಿಟ್ಟಿನಲ್ಲಿ ಹಲವು ಬಾರಿ ಸಂಪುಟ ಸಭೆಯಲ್ಲಿ ಚರ್ಚೆ ನಡೆದರೂ ಒಮ್ಮತ ಏರ್ಪಡದ ಹಿನ್ನೆಲೆಯಲ್ಲಿ ಮುಂದೂಡುತ್ತಲೇ ಬರಲಾಗಿತ್ತು. ಇದೇ ವೇಳೆ ಈ ವರದಿಯ ಕುರಿತಂತೆ ಸಾಮಾಜಿಕ ಕಾರ್ಯಕರ್ತರು, ಮಠಾಧೀಶರು, ವಿವಿಧ ಸಮುದಾಯಗಳ ರಾಜಕೀಯ ನಾಯಕರು, ಸಂಘಟನೆಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಈಗ, ಹತ್ತು ವರ್ಷಗಳ ಹಿಂದೆ ನಡೆಸಲಾದ ಸಮೀಕ್ಷೆಯಿಂದ ಹೊರಗುಳಿದಿರುವ ಕೆಲವು ಸಮುದಾಯಗಳ ಆತಂಕಗಳನ್ನು ಪರಿಹರಿಸಲು ರಾಜ್ಯದಲ್ಲಿ ಜಾತಿ ದತ್ತಾಂಶಗಳ ಮರು ಎಣಿಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉನ್ನತ ನಾಯಕರು ತಿಳಿಸಿದ್ದಾರೆ. ಅಂದರೆ, ಹಳೆಯದಾಗಿದೆ, ಅಂಕಿ-ಅಂಶಗಳು ಬದಲಾಗಿವೆ ಎಂಬ ನೆಪ ಮುಂದಿಟ್ಟು, ಕಾಂತರಾಜ ವರದಿಯನ್ನು ತಿರಸ್ಕರಿಸಿದ್ದಾರೆ. ಪಕ್ಷದ ಹೈಕಮಾಂಡ್ ಆದೇಶಕ್ಕೆ ಮಣಿದು, ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ನಡೆಸುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಘೋಷಣೆ ಮತ್ತು ಸರ್ಕಾರದ ನಡೆ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ಸಾರ್ವಜನಿಕವಾಗಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಾತಿಗಣತಿಯನ್ನು ರಾಜಕೀಯ ಕಾರಣಗಳಿಗಾಗಿ ಒಂದು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವುದಕ್ಕಾಗಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಕಾಂತರಾಜ ಆಯೋಗದ ವರದಿಯನ್ನು ಬಲಾಢ್ಯ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರು ಅವೈಜ್ಞಾನಿಕ ಎಂದು ದೂರಿದ್ದರು, ಒಪ್ಪದೆ ವಿರೋಧಿಸಿದ್ದರು. ಈಗ ಮತ್ತೊಮ್ಮೆ ಜಾತಿಗಣತಿ ಎಂದಾಗ, ಆ ಬಲಾಢ್ಯರ ಜಾತಿ ದಬ್ಬಾಳಿಕೆಗೆ ಸರ್ಕಾರ ಶರಣಾಯಿತೇ ಎಂಬ ಅನುಮಾನ ಮೂಡತೊಡಗಿದೆ.

ಏಕೆಂದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರದ ಮೋದಿ ಸರ್ಕಾರ, 2021ರಲ್ಲಿ ಜಾತಿ ಜನಗಣತಿ ಮಾಡಬೇಕಿತ್ತು. ಕೋವಿಡ್ ನೆಪ ಮುಂದಿಟ್ಟು ತಪ್ಪಿಸಿಕೊಂಡಿತ್ತು. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ನೀಡಲು ಮೋದಿ ಹಿಂದೇಟು ಹಾಕುತ್ತಿದ್ದಾರೆಂದು ದೂರುತ್ತಿತ್ತು. ಈಗ ಬಿಜೆಪಿ ಮತ್ತು ಮೋದಿ ಆ ಅಪವಾದದಿಂದ ಮುಕ್ತರಾಗಲು ದೇಶದಾದ್ಯಂತ ಜಾತಿ ಜನಗಣತಿ ಮಾಡಲು ತೀರ್ಮಾನಿಸಿದ್ದಾರೆ. ಮುಂದಿನವರ್ಷ ಈ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧರಿಸಿ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡ ಜಾತಿ ಜನಗಣತಿಗೆ ಮುಂದಾಗಿದೆ. ಈ ಬಾರಿ ತಂತ್ರಜ್ಞಾನ ಆಧರಿತ ಆನ್‌ಲೈನ್‌ ಸಮೀಕ್ಷೆ ನಡೆಸಲು ಚಿಂತನೆ ನಡೆಸಿರುವ ಸರ್ಕಾರ, 90 ದಿನಗಳ ಒಳಗಾಗಿ ಇಡೀ ಸಮೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಹೇಳಿದೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಪಾಯಕಾರಿ ಪ್ಲಾಸ್ಟಿಕ್: ಮನ್ಸೂರ್ ಮಾತುಗಳನ್ನು ಸರ್ಕಾರ-ಜನ ಆಲಿಸುವರೇ?

ಈ ಬಾರಿಯಾದರೂ ರಾಜ್ಯ ಸರ್ಕಾರ ಹೇಳಿದ ಸಮಯದೊಳಗೆ ಸಮೀಕ್ಷೆ ಮುಗಿಸಿ, ವರದಿಯನ್ನು ಜಾರಿಗೆ ತರುವ ಬದ್ಧತೆ ತೋರಬೇಕಿದೆ. ಹಾಗೆಯೇ ಬಲಾಢ್ಯ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರು, ಆಗಲೂ ವರದಿ ಅವೈಜ್ಞಾನಿಕ ಎಂದು ಕ್ಯಾತೆ ತೆಗೆದರೆ, ನಿಮ್ಮ ನಿಲುವೇನು ಎಂಬುದನ್ನು ಈಗಲೇ ಖಾತ್ರಿಪಡಿಸಬೇಕಿದೆ. ಅವರಿಗೆ ಸೊಪ್ಪು ಹಾಕದೆ ಅದನ್ನು ಸಾರ್ವಜನಿಕ ಚರ್ಚೆಗೆ ಒಳಪಡಿಸುತ್ತೇವೆ, ಬಹುಮತದ ಮೂಲಕ, ಪ್ರಜಾತಾಂತ್ರಿಕವಾಗಿ ಜಾರಿಗೊಳಿಸುತ್ತೇವೆ‌ ಎನ್ನುವ ಇಚ್ಛಾಶಕ್ತಿಯನ್ನು ಸಿದ್ದರಾಮಯ್ಯನವರು ತೋರಬೇಕಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....