ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

Date:

ಹಬ್ಬಗಳು ಎಲ್ಲ ಕಾಲಕ್ಕೂ ಉಳ್ಳವರ ಸಂಭ್ರಮ-ಸಂತೋಷವನ್ನು ಹೆಚ್ಚು ಮಾಡುತ್ತವೆ. ಬಡವರನ್ನು ನೋಯಿಸಿ ನಲುಗುವಂತೆ ಮಾಡುತ್ತವೆ. ಹಾಗೆಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾದ ಚುನಾವಣೆ ಕೂಡ ಹಣ, ಅಧಿಕಾರವಿರುವವರ ಆರ್ಭಟಕ್ಕೆ, ಅಟ್ಟಹಾಸಕ್ಕೆ ಕುಮ್ಮಕ್ಕು ಕೊಡುತ್ತದೆ. ಪ್ರಜೆಗಳನ್ನು ಪಲ್ಟಿ ಹೊಡೆಸುತ್ತದೆ. ಹಾಗಾಗಿ ಭಾರತದ ಪ್ರಜಾಪ್ರಭುತ್ವದ ಹಬ್ಬಕ್ಕೆ ಚಿಕಿತ್ಸೆಯ ಅಗತ್ಯವಿದೆ.

ಇದು ಚುನಾವಣಾ ಕಾಲ. ಆಯೋಗಕ್ಕೆ, ಆಡಳಿತಾಂಗಕ್ಕೆ ಜವಾಬ್ದಾರಿಯ ಜಟಿಲ ಕಾಲ. ರಾಜಕೀಯ ಪಕ್ಷಗಳಿಗೆ ಬಿರುಸಿನ ಚಟುವಟಿಕೆಗಳ ಜಂಜಾಟದ ಕಾಲ. ಅಭ್ಯರ್ಥಿಗಳು ಮತದಾರರನ್ನು ಮುಖಾಮುಖಿಯಾಗುವ ಕಾಲ. ಇಡೀ ದೇಶವೇ ಚರ್ಚೆಗೆ ಒಡ್ಡಿಕೊಳ್ಳುವ, ಜನಜೀವನದ ಮೇಲೆ ಪರಿಣಾಮ ಬೀರುವ ಕಾಲ.

ಸಂವಿಧಾನದ 324 ವಿಧಿಯಡಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಚುನಾವಣಾ ಆಯೋಗದ ಮಹತ್ವವನ್ನು ಸಾರಿದ್ದಾರೆ. ಇದರ ಮೂಲಕ ಚುನಾವಣಾ ಆಯೋಗಕ್ಕೆ ನೀಡಿರುವ ವಿಶೇಷವಾದ ಅಧಿಕಾರದಿಂದಾಗಿ ದೇಶದಲ್ಲಿ ಶಾಂತಿ ಮತ್ತು ಶಿಸ್ತುಬದ್ಧ ರೀತಿಯಲ್ಲಿ, ನಿಷ್ಪಕ್ಷಪಾತ ವಿಧಾನದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗಿಸಿದ್ದಾರೆ. ಸರ್ವಕಾಲಕ್ಕೂ ಸಲ್ಲುವ ಮಾದರಿ ಸಂವಿಧಾನವನ್ನು ರೂಪಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಶ್ರಮಿಸಿದ್ದಾರೆ. ಕಟ್ಟ ಕಡೆಯ ವ್ಯಕ್ತಿಗೂ ಬೆಲೆ ಬರುವಂತಹ ಮತದಾನದ ಹಕ್ಕನ್ನು ಕಲ್ಪಿಸಿಕೊಟ್ಟಿದ್ದಾರೆ. ಕಲ್ಪಿಸಿಕೊಟ್ಟಿದ್ದಷ್ಟೇ ಅಲ್ಲ, ಚುನಾವಣೆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಳ್ಳಬೇಕು ಎಂದು ಕನಸು ಕಂಡಿದ್ದರು.

ಆದರೆ ಅಂಬೇಡ್ಕರ್ ಕಂಡ ಕನಸು ನನಸಾಯಿತೇ ಎಂಬ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ. ಅಲ್ಲಿಂದ ಇಲ್ಲಿಯವರೆಗೆ ಬಂದ ರಾಜಕೀಯ ಪಕ್ಷಗಳು, ನಾಯಕರು ಹಾಗೂ ಕಾಲಕಾಲಕ್ಕೆ ನಡೆದ ಚುನಾವಣೆಗಳು ಪ್ರಜಾಪ್ರಭುತ್ವವನ್ನು ಸಡಿಲಗೊಳಿಸುತ್ತಲೇ ಸಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮದು ಹಬ್ಬಗಳ ದೇಶ. ಹಬ್ಬಗಳು ಸದಾಚಾರ, ಸಂಪ್ರದಾಯಗಳಿಗಾಗಿ ಆಚರಿಸಲ್ಪಟ್ಟರೂ; ಸಂಭ್ರಮ, ಮೋಜು ಮತ್ತು ದುಂದುವೆಚ್ಚಗಳ ಮಗ್ಗುಲನ್ನೂ ಪರಿಚಯಿಸುತ್ತವೆ. ಜನರಿಗೆ ಸಮಸ್ಯೆಗಳನ್ನು ಸೃಷ್ಟಿಸಿ, ಜೀವನದ ಮೇಲೆ ಪರಿಣಾಮವನ್ನೂ ಬೀರುತ್ತವೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಕೂಡ ಹಬ್ಬ ಎಂದೇ ವ್ಯಾಖ್ಯಾನಿಸಲಾಗುತ್ತದೆ. ದೇಶದ ಚುನಾವಣೆಗಳು ಕೂಡ ಹಬ್ಬಗಳಂತೆಯೇ ವರ್ಷಪೂರ್ತಿ ನಡೆಯುತ್ತವೆ. ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳಿಗೆ ಚುನಾವಣೆಗೆ ಸಂಬಂಧಿಸಿದ ಚಟುವಟಿಕೆಗಳು ವರ್ಷಪೂರ್ತಿ ನಡೆಯುವ ಹಬ್ಬಗಳೇ ಆಗಿವೆ. ಹಣವಂತರಿಗೆ ಹಬ್ಬಗಳು ಸಮಸ್ಯೆಯಲ್ಲ. ಹಾಗೆಯೇ ಅಧಿಕಾರ ಮತ್ತು ಹಣ ಬಲವಿರುವ ರಾಜಕೀಯ ಪಕ್ಷಗಳಿಗೆ ಚುನಾವಣೆ ಎದುರಿಸುವುದು ಕಷ್ಟವಲ್ಲ.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ, ವಿವಿಧ ಮೂಲಗಳಿಂದ ಅಪಾರ ಸಂಪತ್ತನ್ನು ಸಂಗ್ರಹಿಸಿದೆ. ಬೆಂಬಲಕ್ಕೆ ಆರೆಸ್ಸೆಸ್ ಎಂಬ ಅಕ್ಷೋಹಿಣಿ ಸೈನ್ಯವಿದೆ. ಗೆಲುವಿಗೆ ಶ್ರಮಿಸುವ ಗೋದಿ ಮೀಡಿಯಾ ಇದೆ. ಅದರಲ್ಲೂ, ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದ ಬಿಜೆಪಿ, ಆ ಮೂಲವೊಂದರಿಂದಲೇ 6,987 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ತನ್ನ ಖಜಾನೆಗೆ ತುಂಬಿಕೊಂಡಿದೆ.

ಅತಿ ಹೆಚ್ಚು ಸಂಪನ್ಮೂಲ ಕ್ರೋಡೀಕರಿಸಿರುವ ಬಿಜೆಪಿಗೆ ಚುನಾವಣಾ ಪ್ರಚಾರಕಾರ್ಯಕ್ಕೆ ಒಡ್ಡಿಕೊಳ್ಳುವುದು, ಅಭ್ಯರ್ಥಿಗಳಿಗೆ ಹಣದ ಕೊರತೆಯಾಗದಂತೆ ನೋಡಿಕೊಳ್ಳುವುದು, ಚುನಾವಣಾ ಪ್ರಕ್ರಿಯೆ ಎಷ್ಟೇ ದೀರ್ಘಾವಧಿಯಾದರೂ ನಿಭಾಯಿಸುವುದು ಸಮಸ್ಯೆಯೇ ಅಲ್ಲ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕೆಂಬ ವಾದವಿದೆ. ಆದರೆ ಈ ಅವಕಾಶ ಮತ್ತು ಅನುಕೂಲಗಳಿಂದ ಪ್ರತಿಪಕ್ಷಗಳು ವಂಚಿತವಾಗಿವೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ 6,987 ಕೋಟಿ ಸಿಕ್ಕರೆ, 75 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ಗೆ ಕೇವಲ 1,334 ಕೋಟಿ ಸಿಕ್ಕಿದೆ. ಇನ್ನು ಸಣ್ಣ ಪುಟ್ಟ ಪಕ್ಷಗಳ ಆರ್ಥಿಕ ಸ್ಥಿತಿಯಂತೂ ಹೇಳತೀರದಾಗಿದೆ.

ಈ ಬಾರಿ 7 ಹಂತಗಳಲ್ಲಿ 46 ದಿನಗಳ ಕಾಲ ಮತದಾನ ನಡೆಯಲಿದ್ದು, ಒಟ್ಟಾರೆ ಎಂಬತ್ತು ದಿನಗಳ ಕಾಲ ಚುನಾವಣಾ ಪ್ರಕ್ರಿಯೆ ವಿಸ್ತರಿಸಿಕೊಂಡಿದೆ. ಈ ಎಂಬತ್ತು ದಿನಗಳ ಕಾಲ ಚುನಾವಣಾ ಪ್ರಕ್ರಿಯೆಯನ್ನು ನಿಭಾಯಿಸುವುದು ವಿರೋಧಪಕ್ಷಗಳಿಗೆ ಕಡು ಕಷ್ಟದ ಕೆಲಸವಾಗಿದೆ. ಇದು ಫಲಿತಾಂಶದ ಮೇಲೆ ಭಾರೀ ಪರಿಣಾಮ ಬೀರಲಿದೆ.

ಸದ್ಯದ ಸಂದರ್ಭದಲ್ಲಿ, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದ ಚುನಾವಣಾ ವ್ಯವಸ್ಥೆ ಮತ್ತು ಪ್ರಕ್ರಿಯೆ ಹೆಚ್ಚು ಶಾಂತಿ ಮತ್ತು ಶಿಸ್ತಿನಿಂದ ಕೂಡಿದೆ, ನಿಜ. ಆದರೆ ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಈ ಶಾಂತಿ ಮತ್ತು ಶಿಸ್ತಿಗೆ ಧಕ್ಕೆ ಬಂದಿದೆ. ಚುನಾವಣೆ ಎಂದರೆ ಯುದ್ಧವಾಗಿದೆ. ಮತದಾರರನ್ನು ಸೆಳೆಯಲು ಆಸೆ-ಆಮಿಷಗಳನ್ನು ಒಡ್ಡಲಾಗುತ್ತಿದೆ. ಇದಕ್ಕಿಂತಲೂ ಹೆಚ್ಚಾಗಿ, ಭಾವನಾತ್ಮಕ ನೆಲೆಯಲ್ಲಿ, ದೇವರು, ಧರ್ಮ, ದೇಶಭಕ್ತಿಗಳ ಮರೆಯಲ್ಲಿ ಮತದಾರರ ಮೆದುಳನ್ನು ಅಪಹರಿಸುತ್ತಿರುವುದು ಅಪಾಯಕಾರಿಯಾಗಿದೆ.

ರಾಜಕೀಯ ನಾಯಕರು ತತ್ವ-ಸಿದ್ಧಾಂತಗಳ ಮರೆಯಲ್ಲಿ, ಪ್ರಜಾಪ್ರಭುತ್ವದ ರೀತಿ-ನೀತಿಗಳಡಿಯಲ್ಲಿ ಮತ ಬೇಡುವುದು ಹಿನ್ನೆಲೆಗೆ ಸರಿದಿದೆ. ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವುದು, ಪ್ರಚೋದಿಸುವುದು, ಪ್ರೇರೇಪಿಸುವುದು ಹೆಚ್ಚಾಗುತ್ತಿದೆ. ಪಕ್ಷ-ನಾಯಕರ ಪರವಾಗಿ ಹೊಡೆದಾಡಿ-ಬಡಿದಾಡಿ ಸೈನಿಕರು ಸಾಯುವುದು ಸಾಮಾನ್ಯವಾಗಿದೆ.

ಹಬ್ಬಗಳು ಎಲ್ಲ ಕಾಲಕ್ಕೂ ಉಳ್ಳವರ ಸಂಭ್ರಮ-ಸಂತೋಷವನ್ನು ಹೆಚ್ಚು ಮಾಡುತ್ತವೆ. ಬಡವರನ್ನು ನೋಯಿಸಿ ನಲುಗುವಂತೆ ಮಾಡುತ್ತವೆ. ಹಾಗೆಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾದ ಚುನಾವಣೆ ಕೂಡ ಹಣ, ಅಧಿಕಾರವಿರುವವರ ಆರ್ಭಟಕ್ಕೆ, ಅಟ್ಟಹಾಸಕ್ಕೆ ಕುಮ್ಮಕ್ಕು ಕೊಡುತ್ತದೆ. ಪ್ರಜೆಗಳನ್ನು ಪಲ್ಟಿ ಹೊಡೆಸುತ್ತದೆ. ಹಾಗಾಗಿ ಭಾರತದ ಪ್ರಜಾಪ್ರಭುತ್ವದ ಹಬ್ಬಕ್ಕೆ ಚಿಕಿತ್ಸೆಯ ಅಗತ್ಯವಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....