ಈ ದಿನ ಸಂಪಾದಕೀಯ | ಬರ ಅಂದ್ರೆ ರಾಜಕಾರಣಿಗಳ ಚೆಲ್ಲಾಟ, ರೈತರಿಗೆ ಪ್ರಾಣಸಂಕಟ

Date:

ಬರಪೀಡಿತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತವಿದೆ. ಪರಿಹಾರ ನೀಡಬೇಕಾದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಅವರು ಕೊಡುವುದಿಲ್ಲ, ಇವರು ಬಿಡುವುದಿಲ್ಲ. ಪರಸ್ಪರ ದೋಷಾರೋಪಣೆ ಮಾತ್ರ ನಿಲ್ಲುವುದಿಲ್ಲ. ಬರ ಅಪ್ಪಳಿಸುವುದು, ರೈತ ಮೌನವಾಗಿ ಕೂತು ಬಿಕ್ಕಳಿಸುವುದು, ಬಿಕ್ಕಳಿಸುವ ರೈತನನ್ನೇ ಎತ್ತಿ ತೋರಿಸಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ತಿಂದುಂಡು ದುಂಡಾಗುವುದು- ಇವತ್ತಿಗೂ ನಿಂತಿಲ್ಲ, ನಿಲ್ಲುವುದೂ ಇಲ್ಲ.

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಅವರ ‘ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್ʼ ಎಂಬ ಕೃತಿ ಭಾರತದ ಬರ ಕುರಿತ ಕಣ್ಣೀರಿನ ಕಥನವನ್ನು ಓದುಗನ ಕರುಳಿಗಿಸುತ್ತದೆ. ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಬರ, ವರವಾಗಿ ಪರಿಣಮಿಸುವುದನ್ನು ಬಿಡಿಸಿಟ್ಟು, ವ್ಯವಸ್ಥೆಯನ್ನು ಬಯಲಲ್ಲಿ ನಿಲ್ಲಿಸಿ ಬೆತ್ತಲು ಮಾಡುತ್ತದೆ. ಆದರೆ ಬರ ಅಪ್ಪಳಿಸುವುದು, ರೈತ ಮೌನವಾಗಿ ಕೂತು ಬಿಕ್ಕಳಿಸುವುದು, ಬಿಕ್ಕಳಿಸುವ ರೈತನನ್ನೇ ಎತ್ತಿ ತೋರಿಸಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ತಿಂದುಂಡು ದುಂಡಾಗುವುದು- ಇವತ್ತಿಗೂ ನಿಂತಿಲ್ಲ, ನಿಲ್ಲುವುದೂ ಇಲ್ಲ.

ಅದಕ್ಕೊಂದು ಜ್ವಲಂತ ಸಾಕ್ಷಿಯಾಗಿ ನಮ್ಮ ರಾಜ್ಯ ಈ ವರ್ಷ ಮಳೆ ಕೊರತೆಯಿಂದ ಬರಕ್ಕೆ ತುತ್ತಾಗಿದೆ. ಬೆಳೆ ಹಾನಿಯಿಂದ ₹33,710 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಲಾಗಿದೆ. ರಾಜ್ಯದ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಇದರ ನಡುವೆಯೇ, ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ಬರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡಿದೆ. ಹಾಗೆಯೇ ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸಿ ಹಲವು ಭಾಗಗಳಲ್ಲಿ ಸಂಚರಿಸಿ, ಬೆಳೆ-ಮಳೆ ಪರಿಶೀಲಿಸಿ, ಸಂತ್ರಸ್ತ ರೈತರನ್ನು ಮಾತನಾಡಿಸಿ ದೆಹಲಿಗೆ ತೆರಳಿ ಆಗಲೇ ಒಂದು ತಿಂಗಳು ಕಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಡಿಆರ್‍‌ಎಫ್ ಮಾರ್ಗಸೂಚಿಗಳ ಪ್ರಕಾರ ರಾಜ್ಯಕ್ಕೆ ₹17,901.73 ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಸಾಲದು ಎಂದು ಕಂದಾಯ ಮತ್ತು ಕೃಷಿ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಖುದ್ದಾಗಿ ಕಂಡು ಮನವಿ ಅರ್ಪಿಸಿದ್ದೂ ಆಗಿದೆ. ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೂ ಆಗಿದೆ.

ಬರಪೀಡಿತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತವಿದೆ. ಪರಿಹಾರ ನೀಡಬೇಕಾದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಅವರು ಕೊಡುವುದಿಲ್ಲ, ಇವರು ಬಿಡುವುದಿಲ್ಲ. ಪರಸ್ಪರ ದೋಷಾರೋಪಣೆ ಮಾತ್ರ ನಿಲ್ಲುವುದಿಲ್ಲ. ಇದು ಸಹಜವಾಗಿಯೇ ಆಡಳಿತ ಪಕ್ಷಕ್ಕೆ ಬರಪೀಡಿತ ಪ್ರದೇಶಗಳ ಜನರ ಮುಂದೆ, ಕೇಂದ್ರ ಸರ್ಕಾರವನ್ನು ದೂರಲು, ಮೊಸಳೆ ಕಣ್ಣೀರು ಹಾಕಲು, ನುಣುಚಿಕೊಳ್ಳುವ ನಾಟಕವಾಡಲು ಅನುಕೂಲಕರ ವಾತಾವರಣ ಸೃಷ್ಟಿಸಿದೆ.

ವಿರೋಧಪಕ್ಷದಲ್ಲಿರುವ ಬಿಜೆಪಿ ಏನು ಸುಮ್ಮನೆ ಕೂತಿದೆಯೇ, ಮಾಧ್ಯಮಗಳ ದಂಡು ಕಟ್ಟಿಕೊಂಡು ಬರಪೀಡಿತ ಪ್ರದೇಶಗಳಿಗೆ ದಾಳಿ ಮಾಡಿದೆ. ರೈತರ ಮುಂದೆ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಬಿಡಿಸಿಡುತ್ತ, ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ‘ಪ್ರತಿನಿತ್ಯ ಪ್ರಧಾನಿ ಮೋದಿಯವನ್ನು ನಿಂದಿಸುತ್ತಿದ್ದರೆ, ಬರ ಪರಿಹಾರ ಸಿಗುತ್ತದೆಯೇ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸಿದ್ದಾರೆ. ಪ್ರಧಾನಿ ಮೋದಿ, ಅವರ ಮನೆಯ ಹಣ ತಂದು ಕೊಡುತ್ತಾರೆಯೇ? ಜನರ ತೆರಿಗೆ ಹಣವನ್ನು ಜನರಿಗೆ ಮರಳಿಸುತ್ತಾರೆ. ಟೀಕಿಸಿದ ಮಾತ್ರಕ್ಕೆ ಪರಿಹಾರ ಕೊಡಬಾರದೆನ್ನುವ ಕಾನೂನೇನಾದರೂ ಇದೆಯೇ? ಅಥವಾ ಟೀಕೆಗೆ ಪ್ರಧಾನಿ ಮೋದಿ ಅತೀತರೇ?

ಹಾಗೆಯೇ ಶಿಡ್ಲಘಟ್ಟಕ್ಕೆ ಭೇಟಿ ನೀಡಿದ ಬಿಜೆಪಿಯ ಸಿ.ಟಿ ರವಿ, ‘ನಿಮ್ಮ ಬೊಕ್ಕಸ ಖಾಲಿ ಆಗಿದೆ ಎಂದು ಒಪ್ಪಿಕೊಳ್ಳಿ. ಬರ ಪರಿಹಾರಕ್ಕೆ ನೀಡಲು ಹಣವಿಲ್ಲ, ನಮಗೆ ಯೋಗ್ಯತೆ ಇಲ್ಲ, ಪಾಪರ್ ಚೀಟಿ ತೆಗೆದುಕೊಂಡಿದ್ದೇವೆ ಎಂದು ಭಿಕ್ಷಾ ಪಾತ್ರೆ ಹಿಡಿದುಕೊಳ್ಳಿʼ ಎಂದು ರಾಜ್ಯ ಸರ್ಕಾರವನ್ನು ಲೇವಡಿ ಮಾಡಿ ಅಸಹಾಯಕ ರೈತರ ಮುಂದೆ ಬಣ್ಣವಿಲ್ಲದ ನಾಟಕ ಆಡಿದ್ದಾರೆ. ಅಸಲಿಗೆ, ರಾಜ್ಯ ಬಿಜೆಪಿ ನಾಯಕರಿಗೆ ಮತ್ತು 25 ಸಂಸದರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇದ್ದಿದ್ದರೆ ತಮ್ಮದೇ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ, ಪರಿಹಾರವನ್ನು ಕೇಳಿ ತರುವುದಕ್ಕಾಗುತ್ತಿಲ್ಲವೇಕೆ? ಏಕೆಂದರೆ, ಪ್ರಧಾನಿ ಮುಂದೆ ನಿಲ್ಲುವ ದಮ್ಮೂ ಇಲ್ಲ, ತಾಕತ್ತೂ ಇಲ್ಲ. ಇನ್ನು ಪರಿಹಾರ ಕೇಳುವುದೆಲ್ಲಿ?

ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ ಕೂಡ, ಇದಕ್ಕಿಂತ ಭಿನ್ನವಾಗಿಲ್ಲ. ಆತುರಾತುರವಾಗಿ ರೂ. 324 ಕೋಟಿ ಬಿಡುಗಡೆ ಮಾಡಿ, ಕುಡಿಯುವ ನೀರಿಗೆ, ಜಾನುವಾರುಗಳ ಮೇವಿಗೆ ಮೊದಲ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದೆ. ಆದರೆ ಆ ಅಧಿಕಾರಿ ಯಾರು? ಅಧಿಕಾರದಲ್ಲಿರುವವರಿಗೆ ಹಣ ಕೊಟ್ಟು ಆಯಕಟ್ಟಿನ ಜಾಗ ಹಿಡಿದವರು. ಅವರ ಕೈಗೆ ಹಣ ಬಂದರೆ, ಅವರು ಸಂತ್ರಸ್ತರಿಗೆ ಪರಿಹಾರ ನೀಡುವುದುಂಟೆ? ಪರಿಹಾರ ಪಡೆದು ಮತ್ತೆ ಬದುಕು ಕಟ್ಟಿಕೊಂಡವರುಂಟೆ?

ಆದರೆ ಆಳುವ ಸರ್ಕಾರಗಳಿಗೆ ರೈತರಿಗೆ ನೆರವಾಗುತ್ತಿದ್ದೇವೆ ಎಂದು ತೋರಿಸಿಕೊಳ್ಳುವ ತವಕ. ವಿರೋಧ ಪಕ್ಷಗಳಿಗೆ ಆಳುವ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಪರಿಹಾರ ಕೊಡಿಸಿದ್ದೇವೆಂದು ಪ್ರಚಾರ ಪಡೆಯುವ ಪಡಪೋಸಿತನ. ಇಬ್ಬರ ಆಟದಲ್ಲಿ ಬರಪೀಡಿತ ಬಡಪಾಯಿ ನಲುಗಬೇಕು. ನೆಲ ಹಿಡಿದು ಮಲಗಬೇಕು. ಮೈಯಲ್ಲಿ ಕೊಂಚ ಕಸುವಿದ್ದರೆ ಎದ್ದು ಗುಳೆ ಹೋಗಬೇಕು. ನರಕ ಕಾಣಬೇಕು. ಬರ ಅಂದ್ರೆ ಇಲ್ಲಿ ಯಾರಿಗೆ ಕಷ್ಟ, ಯಾರಿಗೆ ಇಷ್ಟ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....