ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

Date:

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು, ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸಿದ ವಿವಿಧ ತಂತ್ರಗಳ ಒಂದು ಭಾಗ. ಪಿಟಿಐ ಸುದ್ದಿ ಸಂಸ್ಥೆಯ ದತ್ತಾಂಶದ ಹೋಲಿಕೆ ಮತ್ತು ಭ್ರಷ್ಟರೆಲ್ಲ ಬಿಜೆಪಿ ಸೇರಿದ್ದು ಅದನ್ನು ಸಾಬೀತುಪಡಿಸಿದೆ. ಇದು ಇಡಿ ಎಂಬ ಸ್ವಾಯತ್ತ ಸರ್ಕಾರಿ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ ಮೋದಿಯವರ ‘ಮಹಾನ್’ ಸಾಧನೆ…

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಇತ್ತೀಚಿಗೆ ‘ದಿಲ್ ಸೇ ವಿಥ್ ಕಪಿಲ್ ಸಿಬಲ್’ ಎಂಬ ಯೂ ಟ್ಯೂಬ್ ಚಾನೆಲ್ ಮೂಲಕ ದೇಶದ ಗಂಭೀರ ಸಮಸ್ಯೆಗಳ ಕುರಿತು ಚರ್ಚಿಸುತ್ತಾರೆ. ಅಂಥದ್ದೇ ಒಂದು ಚರ್ಚೆಗೆ ಆಗಮಿಸಿದ್ದ ಪಶ್ಚಿಮ ಬಂಗಾಳದ ತೃಣಮೂಲ್ ಕಾಂಗ್ರೆಸ್ಸಿನ ಸಂಸದ ಡೆರೆಕ್ ಒಬ್ರಿಯಾನ್, ಮಾತಿನ ಮಧ್ಯೆ, ಮೋದಿಯವರ ಹತ್ತುವರ್ಷಗಳ ಅವಧಿಯಲ್ಲಿ ಜಾರಿ ನಿರ್ದೇಶನಾಲಯದ ಕಾರ್ಯವೈಖರಿ ಕುರಿತು ‘ಇಡಿ ಅಂದ್ರೆ ಎಲೆಕ್ಷನ್ ಡ್ಯೂಟಿ’ ಎಂದರು.

ಇದು ಒಂದು ಗಂಭೀರ ಆರೋಪ. ಅದನ್ನು ಅವರು ತಮಾಷೆಗಾಗಿ ಹೇಳಿದ್ದಲ್ಲ. ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ(ಎನ್ಫೋರ್‍ಸ್‌ಮೆಂಟ್ ಡೈರೆಕ್ಟರೇಟ್-ಇಡಿ)ದ ಕಾರ್ಯವೈಖರಿಯನ್ನು ಖುದ್ದಾಗಿ ಕಂಡು ಹೇಳಿದ್ದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ, ‘ಇಡಿ ಈಗ ಸ್ವಾಯತ್ತ ಸಂಸ್ಥೆಯಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ದಾಳಿ ಸಾಕ್ಷಿ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಬೇಕಿರುವುದು ಮಾತ್ರವಲ್ಲ, ತನಿಖಾ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ’ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್-ಪಿಎಂಎಲ್‌ಎ) ಅನ್ನು 2002ರಲ್ಲಿ ಜಾರಿಗೊಳಿಸಲಾಗಿದೆ. ತೆರಿಗೆ ವಂಚನೆ, ಕಪ್ಪು ಹಣ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಗಂಭೀರ ಅಪರಾಧಗಳ ಬಗ್ಗೆ ಕ್ರಮ ಕೈಗೊಳ್ಳಲಿಕ್ಕಾಗಿ 2005ರಿಂದ ಪಿಎಂಎಲ್‌ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದನ್ನು ಜಾರಿಗೊಳಿಸುವ ತನಿಖಾ ಸಂಸ್ಥೆಯಾಗಿ ಜಾರಿ ನಿರ್ದೇಶನಾಲಯ(ಇಡಿ) ಕಾರ್ಯ ನಿರ್ವಹಿಸುತ್ತದೆ.

ಕಳೆದ ವಾರ ಪಿಟಿಐ ಸುದ್ದಿ ಸಂಸ್ಥೆಯು ಜಾರಿ ನಿರ್ದೇಶನಾಲಯದ 2005ರಿಂದ 2024ರವರೆಗಿನ ದತ್ತಾಂಶವನ್ನು ಪಡೆದು, ಯುಪಿಎ ಮತ್ತು ಎನ್‌ಡಿಎ ಸರ್ಕಾರದ ಅವಧಿಯಲ್ಲಿನ ದತ್ತಾಂಶವನ್ನು ಹೋಲಿಕೆ ಮಾಡಿದೆ. ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ, ಜಪ್ತಿ, ವಿಚಾರಣೆ ಮತ್ತು ಶಿಕ್ಷೆ ತೀವ್ರಗೊಂಡಿರುವುದನ್ನು ಈ ವಿಶ್ಲೇಷಣೆಯು ಎತ್ತಿ ತೋರಿಸುತ್ತದೆ.

ಜುಲೈ 2005ರಿಂದ ಮಾರ್ಚ್ 2014ರವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ, ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ, 1,797 ಪಿಎಂಎಲ್ಎ ದೂರುಗಳು ದಾಖಲಾಗಿವೆ. ಇಡಿ ಅಧಿಕಾರಿಗಳು 5,086.43 ಕೋಟಿ ರೂ. ಜಪ್ತಿ ಮಾಡಿ, 43 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. 29 ಮಂದಿಯ ಬಂಧನವಾಗಿದ್ದು, ಯಾವ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ.

ಆದರೆ 2014ರಿಂದ 2024ರ ಅವಧಿಯಲ್ಲಿ, ಕಳೆದ 10 ವರ್ಷಗಳಲ್ಲಿ, ಮೋದಿಯವರ ಆಡಳಿತದಲ್ಲಿ 5,155 ಪಿಎಂಎಲ್‌ಎ ಪ್ರಕರಣಗಳು ದಾಖಲಾಗಿವೆ. ಇಡಿ ಅಧಿಕಾರಿಗಳು 7,264 ದಾಳಿಗಳನ್ನು ನಡೆಸಿ ಒಟ್ಟು 1,21,618 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿ, 2,310 ಕೋಟಿಗೂ ಹೆಚ್ಚಿನ ಮೌಲ್ಯದ ನಗದನ್ನು ವಶಪಡಿಸಿಕೊಳ್ಳಲಾಗಿದೆ. 755 ಜನರನ್ನು ಬಂಧಿಸಿ, 63 ಮಂದಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ನೋಡಿಕೊಂಡಿದೆ.

ಅಂದರೆ, ಯುಪಿಎ ಸರ್ಕಾರದ ಒಂಭತ್ತು ವರ್ಷಗಳ ಅವಧಿಯಲ್ಲಿ ಅಕ್ರಮ ಹಣ ವರ್ಗಾವಣೆ ದೂರುಗಳು, ದಾಳಿಗಳು, ಜಪ್ತಿ, ವಿಚಾರಣೆ ಮತ್ತು ಶಿಕ್ಷೆ ಅಲ್ಪ ಪ್ರಮಾಣದಲ್ಲಿದ್ದರೆ; ಎನ್‌ಡಿಎ ಸರ್ಕಾರದ ಅವಧಿಯ ಹತ್ತು ವರ್ಷಗಳಲ್ಲಿ ಅದು 86 ಪಟ್ಟು ಹೆಚ್ಚಳವಾಗಿದೆ.

ಇಲ್ಲಿ ಎರಡು ಪ್ರಶ್ನೆಗಳು ಉದ್ಭವವಾಗುತ್ತವೆ. ಒಂದು, ಮೋದಿಯವರ ಆಡಳಿತದಲ್ಲಿ ದೇಶದಲ್ಲಿ ಅಕ್ರಮ ಚಟುವಟಿಕೆಗಳು- ಕಪ್ಪು ಹಣ, ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ ಪ್ರಕರಣಗಳು ಹೆಚ್ಚಾಗಿವೆ. ಅವುಗಳನ್ನು ನಿಯಂತ್ರಿಸಿ ಉತ್ತಮ ಆಡಳಿತ ನೀಡುವಲ್ಲಿ ಪ್ರಧಾನಿ ಮೋದಿಯವರು ವಿಫಲರಾಗಿದ್ದಾರೆ.

ಇಲ್ಲ, ಸ್ವಾಯತ್ತ ಸರ್ಕಾರಿ ತನಿಖಾ ಸಂಸ್ಥೆಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ, ವಿರೋಧಿಗಳನ್ನು ಬಗ್ಗುಬಡಿಯಲು, ಅವರಿಂದ ವಂತಿಗೆ ವಸೂಲಿ ಮಾಡಲು, ಪಕ್ಷದ ಖಜಾನೆ ತುಂಬಿಕೊಳ್ಳಲು ದಾಳಿಯ ನೆಪದಲ್ಲಿ ದುರುಪಯೋಗಪಡಿಸಿಕೊಳ್ಳಲಾಗಿದೆ.

ಯಾವುದು ಸತ್ಯ?

ಸದ್ಯಕ್ಕೆ ನಮ್ಮ ಕಣ್ಮುಂದೆ ಕಾಣುತ್ತಿರುವುದು, ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿಗಳಲ್ಲಿ ಶೇ. 95ರಷ್ಟು ವಿರೋಧ ಪಕ್ಷಗಳ ನಾಯಕರ ಮೇಲೆ ನಡೆದ ದಾಳಿಗಳಾಗಿವೆ. ಇಡಿಯ ದಾಳಿ, ವಿಚಾರಣೆ ಮತ್ತು ಜಪ್ತಿಯನ್ನು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮತ್ತು ಪ್ರಚಾರ ಸಿಗುವಂತೆ ನೋಡಿಕೊಳ್ಳಲಾಗಿದೆ. ಆ ಮೂಲಕ ವಿರೋಧ ಪಕ್ಷವೆಂದರೆ ಲೂಟಿಕೋರರ ಪಕ್ಷ, ಭ್ರಷ್ಟರ ಗುಂಪು ಎನ್ನುವುದನ್ನು ಜನಮಾನಸದಲ್ಲಿ ವ್ಯವಸ್ಥಿತವಾಗಿ ಬಿತ್ತಲಾಗಿದೆ.

ಆದರೆ, ಕಾಲಾನಂತರ ಆ ಭ್ರಷ್ಟ ರಾಜಕಾರಣಿಗಳು- ಕಾಂಗ್ರೆಸ್‌ನಿಂದ 10, ಶಿವಸೇನಾ-ಎನ್‌ಸಿಪಿಯಿಂದ 8, ತೃಣಮೂಲ್ ಕಾಂಗ್ರೆಸ್ಸಿನಿಂದ 3, ಟಿಡಿಪಿಯಿಂದ 2, ಸಮಾಜವಾದಿ ಪಾರ್ಟಿ ಮತ್ತು ವೈಎಸ್ಆರ್‍‌ಸಿಪಿಯಿಂದ ತಲಾ ಒಬ್ಬರು- ಅಂದರೆ 25 ಜನರಲ್ಲಿ 23 ಜನ ಬಿಜೆಪಿ ಸೇರಿದ್ದಾರೆ. ಸೇರಿದಾಕ್ಷಣ ಅವರ ಮೇಲಿರುವ ಮೊಕದ್ದಮೆಗಳನ್ನು ಕೈಬಿಡಲಾಗಿದೆ ಅಥವಾ ಮುಂದೂಡಲಾಗಿದೆ.

ಹಾಗೆಯೇ ಕಾರ್ಪೊರೇಟ್ ಸಂಸ್ಥೆಗಳು, ದೊಡ್ಡ ದೊಡ್ಡ ಗುತ್ತಿಗೆದಾರರು, ಫಾರ್ಮಾ ಕಂಪನಿಗಳು, ಲಾಟರಿ ಏಜೆಂಟರು, ರಿಯಲ್ ಎಸ್ಟೇಟ್ ಬಿಲ್ಡರ್‍‌ಗಳ ಮೇಲೆಯೂ ಇಡಿ ದಾಳಿ ಮಾಡಿಸಲಾಗಿದೆ. ಅವರು ಬಿಜೆಪಿಗೆ ಶರಣಾದರೆ, ಚುನಾವಣಾ ಬಾಂಡ್ ಖರೀದಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳಲಾಗಿದೆ. ದಾಳಿಗೊಳಗಾದವರಿಂದ ಬಿಜೆಪಿ ಬಾಂಡ್ ಹೆಸರಲ್ಲಿ ಸಂಗ್ರಹಿಸಿರುವ ಮೊತ್ತ ಎಂಟು ಸಾವಿರ ಕೋಟಿಗೂ ಅಧಿಕ. ಇದು ಪ್ರಪಂಚದ ಅತಿ ದೊಡ್ಡ ಹಗರಣವೆಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಕಳೆದ ಒಂದು ದಶಕದ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು, ವಿರೋಧಿಗಳನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸಿದ ವಿವಿಧ ತಂತ್ರಗಳ ಒಂದು ಭಾಗ ಎನ್ನುವುದು ಇದರಿಂದ ನಿಚ್ಚಳವಾಗುತ್ತದೆ. ಆದರೆ, ಇಡಿ ನಡೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ, ಈ ಸಂಸ್ಥೆಯು ಸ್ವತಂತ್ರವಾಗಿ ಕೆಲಸ ಮಾಡುತ್ತಿದೆ, ಪ್ರಕರಣಗಳ ಸತ್ಯಾಸತ್ಯತೆಯನ್ನು ಆಧರಿಸಿ ತನಿಖೆ ನಡೆಸುತ್ತದೆ ಎಂದು ಹೇಳುತ್ತಲೇ ಇದೆ.

ದೇಶದ ಸ್ವಾಯತ್ತ ತನಿಖಾ ಸಂಸ್ಥೆಗಳ ಘನತೆಯನ್ನು ಮಣ್ಣುಪಾಲು ಮಾಡಿದ ‘ಕೀರ್ತಿ’ ಪ್ರಧಾನಿ ಮೋದಿಯವರಿಗೆ ಸಲ್ಲಲೇಬೇಕು. ‘ಇಡಿ ಎಂದರೆ ಎಲೆಕ್ಷನ್ ಡ್ಯೂಟಿ’ ಎಂದು ನಗೆಪಾಟಲಿಗೀಡಾಗುವಂತೆ ಮಾಡಿದ ಮೋದಿಯವರ ‘ಮಹಾನ್ ಸಾಧನೆ’ಯನ್ನು ಮತದಾರರು ನೆನಪು ಮಾಡಿಕೊಂಡು ಮತ ಚಲಾಯಿಸಬೇಕು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....