ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

Date:

ದುಬಾರಿ ಚುನಾವಣೆಗಳು ಒಟ್ಟು ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಲೇ ಸಾಗಿವೆ. ಇಂತಹ ವ್ಯವಸ್ಥೆಯಲ್ಲಿ ಸರಳರು, ಸಂಭಾವಿತರು, ಸಾಮಾನ್ಯರು ಸ್ಪರ್ಧಿಸಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಬರುವುದೇ? ಅಥವಾ ಕಾಸು ಖರ್ಚು ಮಾಡದೆ ಗೆದ್ದ ಸಸಿಕಾಂತ್‌ ಸೆಂಥಿಲ್‌ ತರಹದವರ ಗೆಲುವು ಭರವಸೆಯ ಬೆಳಕಿನಂತೆ ದಾರಿ ತೋರಬಲ್ಲದೇ?

ಚುನಾವಣೆಗಳು ಎಂದರೆ ಪ್ರಜಾಪ್ರಭುತ್ವದ ಹಬ್ಬ ಎನ್ನುತ್ತಾರೆ. ಆದರೆ, ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, 1.44 ಶತಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ, ಅವರೆಲ್ಲರಿಗೂ ಮತದಾನದ ಹಕ್ಕು ಇರುವುದರಿಂದ, ಚುನಾವಣೆಗಳನ್ನು ನಡೆಸುವುದು ಕಷ್ಟಕರ ಕೆಲಸ. ಈ ಮಹತ್ಕಾರ್ಯಕ್ಕೆ ಮಣಗಟ್ಟಲೆ ಹಣದ ಅಗತ್ಯವಿದೆ. ಅದರಲ್ಲೂ ಹೊಸಗಾಲದ ರಾಜಕಾರಣದಲ್ಲಿ ಚುನಾವಣೆ ನಡೆಸುವುದು ದುಬಾರಿ ವ್ಯವಹಾರವಾಗಿದೆ.

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕೋಟಿಗಟ್ಟಲೆ ಹಣ ಸುರಿದು ಚುನಾವಣೆ ನಡೆಸಬೇಕಾದ ಸ್ಥಿತಿ ಏರ್ಪಟ್ಟಿದೆ. ಸ್ಪರ್ಧಾಳುಗಳು ಕೂಡ ತಮ್ಮ ಆಸ್ತಿ ಘೋಷಣೆಯಲ್ಲಿ ನೂರಾರು ಕೋಟಿಗಳನ್ನು ಅಧಿಕೃತವಾಗಿಯೇ ಘೋಷಿಸಿಕೊಳ್ಳುತ್ತಿದ್ದಾರೆ. ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ, 5,785 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಈ ಚುನಾವಣೆಯಲ್ಲಿ ಇವರು ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ತನ್ನ ಅಭ್ಯರ್ಥಿಗಳಿಗೆ ನೀಡಿದ ಹಣ ಸೇರಿದಂತೆ ಚುನಾವಣಾ ವೆಚ್ಚವಾಗಿ ಒಟ್ಟು 18.44 ಕೋಟಿ ರೂ. ಖರ್ಚು ಮಾಡಿದೆ. ಹಾಗೆಯೇ ರಾಜ್ಯ ಕಾಂಗ್ರೆಸ್ ಒಟ್ಟು 25.04 ಕೋಟಿ ರೂ. ವೆಚ್ಚ ಮಾಡಿದೆ. ಇದು ಕೇವಲ 28 ಅಭ್ಯರ್ಥಿಗಳಿಗೆ ಅಧಿಕೃತವಾಗಿ ಪಕ್ಷಗಳು ತಮ್ಮ ಅಭ್ಯರ್ಥಿಗಳಿಗೆ ಖರ್ಚು ಮಾಡಿದ ಮೊತ್ತ. ಇದಲ್ಲದೆ, ಪ್ರತಿ ಅಭ್ಯರ್ಥಿಯೂ ವೈಯಕ್ತಿಕವಾಗಿ ಖರ್ಚು ಮಾಡುವ ಅನಧಿಕೃತ ಹಣವೆಷ್ಟು ಎಂಬುದರ ಲೆಕ್ಕವನ್ನು ಯಾರು ಕೊಟ್ಟಿದ್ದಾರೆ? ಅದು ಊಹೆಗೂ ನಿಲುಕದ ವಿಚಾರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಅಂಕಿ-ಅಂಶಗಳ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ವೆಚ್ಚವಾಗಿದೆ. 2019ರಲ್ಲಿ 60 ಸಾವಿರ ಕೋಟಿ ಖರ್ಚಾಗಿದ್ದರೆ, ಈ ಬಾರಿ 1.35 ಲಕ್ಷ ಕೋಟಿ ವೆಚ್ಚವಾಗಲಿದೆ ಎಂದು ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ (ಸಿಎಂಎಸ್) ಅಂದಾಜಿಸಿದೆ. 96.6 ಕೋಟಿ ಮತದಾರರನ್ನು ಹೊಂದಿರುವ ದೇಶದ ಪ್ರತಿಯೊಬ್ಬ ಮತದಾರರಿಗೆ ಸುಮಾರು 1,400 ರೂ. ವೆಚ್ಚವಾಗುತ್ತದೆಂದು ಲೆಕ್ಕಹಾಕಿದೆ. ಈ ಸಮಗ್ರ ವೆಚ್ಚವು ರಾಜಕೀಯ ಪಕ್ಷಗಳು, ಸಂಘಟನೆಗಳು, ಅಭ್ಯರ್ಥಿಗಳು, ಸರ್ಕಾರ ಮತ್ತು ಚುನಾವಣಾ ಆಯೋಗ ಸೇರಿದಂತೆ ಚುನಾವಣೆಗಳಿಗೆ ಸಂಬಂಧಿಸಿದ ಎಲ್ಲಾ ಖರ್ಚುಗಳನ್ನು ಪ್ರತ್ಯಕ್ಷ-ಪರೋಕ್ಷವಾಗಿ ಒಳಗೊಂಡಿರುತ್ತದೆ ಎನ್ನುವುದನ್ನು ಬಹಿರಂಗ ಪಡಿಸಿದೆ.

ಭಾರತೀಯ ಜನತಾ ಪಕ್ಷದ ಮುಖಂಡ ಮೋದಿಯವರು, ಈ ಬಾರಿ ಗೆದ್ದು ಮೂರನೇ ಬಾರಿಗೆ ಪ್ರಧಾನಿಯಾಗಲೇಬೇಕೆಂಬ ಹಠಕ್ಕೆ ಬಿದ್ದಿದ್ದರು. ಹಣಕಾಸಿನ ಥೈಲಿಗಳಂತಹ ಅದಾನಿ-ಅಂಬಾನಿಗಳನ್ನು ಎಡ-ಬಲಕ್ಕೆ ಇಟ್ಟುಕೊಂಡಿದ್ದರು. ಸಾಲದೆಂದು ಚುನಾವಣಾ ಬಾಂಡ್‌ಗಳ ಮೂಲಕ ಸಂಗ್ರಹಿಸಿದ ಸಾವಿರಾರು ಕೋಟಿ ರೂ.ಗಳನ್ನು ಸಿದ್ಧವಾಗಿಟ್ಟುಕೊಂಡಿದ್ದರು. ಈ ಸಂಪನ್ಮೂಲ ಬಳಸಿ 75 ದಿನಗಳಲ್ಲಿ 180 ರೋಡ್‌ ಶೋಗಳು, ರ್ಯಾಲಿಗಳು, ಪ್ರಚಾರ ಭಾಷಣಗಳನ್ನು ಮಾಡಿದ್ದರು. ಸುಮಾರು 80 ಸುದ್ದಿ ಸಂಸ್ಥೆಗಳಿಗೆ ಪ್ರಾಯೋಜಿತ ಸಂದರ್ಶನಗಳನ್ನು ಕೊಟ್ಟಿದ್ದರು. ಹೆಚ್ಚಿನ ಜನರನ್ನು ತಲುಪಲು ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಮತದಾರರನ್ನು ಆಕರ್ಷಿಸಲು ಡಿಜಿಟಲ್ ಮೀಡಿಯಾಗಳ ಜಾಹೀರಾತುಗಳಿಗೆ ಶಕ್ತಿಮೀರಿ ಹಣ ಸುರಿದಿದ್ದರು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹತಾಶೆಯಿಂದ ಆಶಾವಾದದೆಡೆಗೆ ಕರೆದೊಯ್ಯುವ ಜನಾದೇಶ

ಹೀಗೆ ವ್ಯವಸ್ಥೆಯನ್ನೇ ಭ್ರಷ್ಟಗೊಳಿಸಿ ಅಧಿಕಾರಕ್ಕೆ ಬಂದವರು, ಭ್ರಷ್ಟಾಚಾರದಿಂದ ಮುಕ್ತರಾಗಿರುತ್ತಾರೆಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ಅದಕ್ಕೆ ಪೂರಕವಾಗಿ, ಕಳೆದ ಹತ್ತುವರ್ಷಗಳಲ್ಲಿ ಅಭಿವೃದ್ಧಿಗಾಗಿ ಖರ್ಚು ಮಾಡಿದ ಹಣದ ಅಂಕಿ ಅಂಶಗಳನ್ನು ಗಮನಿಸಿದರೆ, ದೇಶದಲ್ಲಿ ಬಡವರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿರಬೇಕಿತ್ತು. ಆದರೆ, ಚುನಾವಣಾ ಭಾಷಣಗಳಲ್ಲಿ ಮೋದಿಯವರೇ ʼನಮ್ಮ ಸರ್ಕಾರ 80 ಕೋಟಿ ಬಡವರಿಗೆ ಉಚಿತ ಅಕ್ಕಿ ವಿತರಿಸುತ್ತಿದೆʼ ಎಂದು ನಾಚಿಕೆ ಇಲ್ಲದೆ ಹೇಳುತ್ತಾರೆ. ಅಂದರೆ, ವಾಸ್ತವದಲ್ಲಿ ಅಭಿವೃದ್ಧಿ ಕಣ್ಣಿಗೆ ಕಾಣುತ್ತಿಲ್ಲ ಮತ್ತು ಜನಸಾಮಾನ್ಯರಿಗೆ ತಲುಪುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಲ್ಯಾಣ ಕಾರ್ಯಕ್ರಮಗಳ ಕುರಿತು ಮಾತನಾಡುವ ರಾಜಕೀಯ ವಿಶ್ಲೇಷಕರು ಹೆಚ್ಚು ಹಣ ಒದಗಿಸುವುದರ ಬಗ್ಗೆ ಒತ್ತುಕೊಡುತ್ತಾರೆ. ಸುದ್ದಿ ಮಾಧ್ಯಮಗಳು ಕೂಡ ಅಂಕಿ-ಅಂಶಗಳನ್ನು ದೊಡ್ಡದು ಮಾಡಿ ಹೇಳುತ್ತವೆ. ಜನರ ನಡುವೆ ಅದೇ ದೊಡ್ಡ ಚರ್ಚೆಯಾಗುತ್ತದೆ. ಆದರೆ ಎತ್ತಿಟ್ಟ ಹಣ ಸಮರ್ಪಕವಾಗಿ ಬಳಕೆಯಾಗಿದ್ದರ ಬಗ್ಗೆ ಯಾರೂ ಗಮನ ಹರಿಸುವುದಿಲ್ಲ.

ಅಧಿಕಾರಿಗಳು, ಅಧಿಕಾರಸ್ಥರು ಮತ್ತು ಅರ್ಥಶಾಸ್ತ್ರಜ್ಞರು ಕೂಡ ಭ್ರಷ್ಟಾಚಾರವನ್ನು ವ್ಯವಸ್ಥೆಯ ಭಾಗವೆಂದು ಒಪ್ಪಿಕೊಂಡಂತಿದೆ. ಆದರೆ, ಭ್ರಷ್ಟಾಚಾರ ಎನ್ನುವುದು ಈ ಕ್ಷಣಕ್ಕೂ ರಾಜಕಾರಣಿಗಳಿಗೆ ಆರೋಪ-ಪ್ರತ್ಯಾರೋಪದ ಪ್ರಮುಖ ವಿಷಯವಾಗಿದೆ. ಅಷ್ಟೇ ಅಲ್ಲ, ಪ್ರತಿಯೊಬ್ಬ ರಾಜಕಾರಣಿಯೂ ತಾನು ಮಾತ್ರ ಸತ್ಯಸಂಧ, ಮಿಕ್ಕವರೆಲ್ಲ ಭ್ರಷ್ಟರು ಎಂದು ಬಿಂಬಿಸಿಕೊಳ್ಳುವುದು ಸಾಮಾನ್ಯವಾಗಿದೆ. ದುಬಾರಿ ಚುನಾವಣೆಗಳಿಂದಲೇ ಭ್ರಷ್ಟನಾದೆ ಎಂದು ಬಹಿರಂಗವಾಗಿ ಒಪ್ಪಿಕೊಂಡ ಉದಾಹರಣೆಯೇ ಇಲ್ಲವಾಗಿದೆ.

ದುಬಾರಿ ಚುನಾವಣೆಗಳು ಒಟ್ಟು ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಲೇ ಸಾಗಿವೆ. ಇಂತಹ ವ್ಯವಸ್ಥೆಯಲ್ಲಿ ಸರಳರು, ಸಂಭಾವಿತರು, ಸಾಮಾನ್ಯರು ಸ್ಪರ್ಧಿಸಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಬರುವುದೇ? ಅಥವಾ ಕಾಸು ಖರ್ಚು ಮಾಡದೆ ಗೆದ್ದ ಸಸಿಕಾಂತ್‌ ಸೆಂಥಿಲ್‌ ತರಹದವರ ಗೆಲುವು ಭರವಸೆಯ ಬೆಳಕಿನಂತೆ ದಾರಿ ತೋರಬಲ್ಲದೇ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....