ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

Date:

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ರಾಜಕೀಯ ದ್ವೇಷಾಸೂಯೆಗಳಲ್ಲಿ ಮುಳುಗಿ, ದೋಷಾರೋಪಣೆಗಳಲ್ಲೇ ಕಾಲಹರಣ ಮಾಡುವುದು ಜವಾಬ್ದಾರಿಯುತ ಸರ್ಕಾರಗಳ ನಡೆಯಲ್ಲ; ಯಾವುದೇ ಕಾರಣಕ್ಕೂ ಕ್ಷಮಿಸುವಂಥದ್ದಲ್ಲ. ಕೇಂದ್ರದಿಂದ ಪರಿಹಾರ ಬರಲಿ, ಬರದಿರಲಿ ರೈತರನ್ನು ಆತ್ಮಹತ್ಯೆಯಿಂದ ಪಾರು ಮಾಡುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಲಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿ. 19ರಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ. ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ 236 ತಾಲೂಕುಗಳಲ್ಲಿ 223 ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದಕ್ಕಾಗಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಿದ್ದರಾಮಯ್ಯನವರನ್ನು ಆತ್ಮೀಯವಾಗಿಯೇ ಬರಮಾಡಿಕೊಂಡು, ಅವರು ಕೊಟ್ಟ ಮನವಿ ಸ್ವೀಕರಿಸಿ, ಸಹಕರಿಸುವುದಾಗಿ ಹೇಳಿದ್ದಾರೆ. ಅಲ್ಲಿಗೆ, ಕರ್ನಾಟಕದಿಂದ ದೆಹಲಿಗೆ ಹೋದ ಮುಖ್ಯಮಂತ್ರಿಗಳ ಜವಾಬ್ದಾರಿ ಹಾಗೂ ಅಹವಾಲು ಸ್ವೀಕರಿಸಿದ ಪ್ರಧಾನಿ-ಗೃಹ ಸಚಿವರುಗಳ ಆದರಣೀಯ ನಡವಳಿಕೆ- ಎರಡೂ ಮುಗಿದಿದೆ. ಅದು ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ಜನತೆಯ ಗಮನಕ್ಕೂ ಬಂದಿದೆ. ಆದರೆ ನಾಡಿನ ರೈತನ ಬದುಕು ಮಾತ್ರ ಹಾಗೆಯೇ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳು ಕೊಟ್ಟ ಮನವಿ ಕೇವಲ ಕಾಗದದ ಹಾಳೆಯಲ್ಲ. ಆ ಮನವಿ ಪತ್ರದಲ್ಲಿರುವುದು ಕೇವಲ ಅಂಕಿ-ಸಂಖ್ಯೆಗಳಲ್ಲ. ಆ ಮನವಿ ಪತ್ರದ ಹಿಂದೆ ಕೃಷಿ-ಕಂದಾಯ ಸಚಿವರು ಮತ್ತವರ ಇಲಾಖೆಯ ಅಧಿಕಾರಿಗಳ ಮೂರು ತಿಂಗಳ ಸಮಯ, ಶ್ರಮ, ಸರ್ವೇ ಕಾರ್ಯವಿದೆ; ಆರು ತಿಂಗಳ ರೈತರ ದಿಕ್ಕೆಟ್ಟ ಬದುಕಿನ ದಾಖಲಾತಿ ಇದೆ. ನಾಡಿನ ಬರಗಾಲದ ಬರ್ಬರ ಚಿತ್ರಣವಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ, ರಾಜ್ಯ ಬರಗಾಲಕ್ಕೆ ತುತ್ತಾಗಿರುವುದನ್ನು ಕಣ್ಣಾರೆ ಕಂಡರೂ, ಕೃಷಿ-ಕಂದಾಯ ಸಚಿವರು ಕೃಷಿ ಕುಟುಂಬದಿಂದ ಬಂದವರಾಗಿದ್ದರೂ, ರೈತರ ಕಷ್ಟ-ನಷ್ಟಗಳಿಗೆ ಸ್ಪಂದಿಸುತ್ತಿಲ್ಲ. ದೇಶಕ್ಕೇ ಉಣಬಡಿಸುವ ರೈತ ತನ್ನ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಒಂದೊತ್ತು ಹಸಿದುಕೊಂಡು ಮಲಗಬಲ್ಲ; ಆದರೆ ತನ್ನ ಬದುಕಿನ ಭಾಗವೇ ಆದ ಜಾನುವಾರುಗಳಿಗೆ ಹಿಡಿ ಹುಲ್ಲು ಹಾಕದಿದ್ದರೆ, ಆತ ಆತ್ಮಹತ್ಯೆಗೂ ಒಳಗಾಗಬಲ್ಲ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಮೇವು ಸಿಗದ ಸ್ಥಿತಿ ನಿರ್ಮಾಣಗೊಂಡಿದೆ. ಈ ಕಟು ಸತ್ಯ ಅರಿಯದ, ಅರಿವಿಗೆ ಬಂದರೂ ಹೇಳಿಕೆಗಳಿಗೆ, ಭಾಷಣಗಳಿಗೆ, ಸಬೂಬುಗಳಿಗೇ ಸೀಮಿತವಾಗಿರುವ ಕೃಷಿ-ಕಂದಾಯ ಸಚಿವರ ವರ್ತನೆ ರೈತ ಸಮುದಾಯದಲ್ಲಿ ರೇಜಿಗೆ ತರಿಸಿದ್ದರೆ ಆಶ್ಚರ್ಯವಿಲ್ಲ.

ಆರು ತಿಂಗಳಿನ ಬೆಳೆ ನಾಶ ಮತ್ತು ಸಾಲಬಾಧೆಯಿಂದ 2023ರ ಏಪ್ರಿಲ್ ನಿಂದ ನವೆಂಬರ್‌ ವರೆಗೆ ಒಟ್ಟು 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅರ್ಹ ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಮತ್ತು ಮಾಸಿಕ 2,000 ರೂ. ಪಿಂಚಣಿ ನೀಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಅದು ಕೂಡ ಘೋಷಣೆಯಾಗಿಯೇ ಉಳಿದಿದೆ.

ರಾಜ್ಯದ ಸ್ಥಿತಿ ಹೀಗಾದರೆ, ದೇಶವನ್ನು ಆಳುತ್ತಿರುವ ಮೋದಿಯವರ ಮೂಗಿನ ಕೆಳಗೆ, 2014ರಿಂದ 2022ರವರೆಗೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್‌ಸಿಆರ್‍‌ಬಿ) ವರದಿಯ ಪ್ರಕಾರ, 1,00,474 ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ. ಅಂದರೆ, ದಿನಕ್ಕೆ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಕಣ್ಣಿಗೆ ರಾಚುತ್ತಿದ್ದರೂ, ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ, ʼಮೋದಿಯವರ ಆಡಳಿತದಲ್ಲಿ ಒಂದೇ ಒಂದು ರೈತ ಆತ್ಮಹತ್ಯೆ ವರದಿಯಾಗಿಲ್ಲʼ ಎಂದು ಹೇಳುತ್ತಾರೆ. ಗೋದಿ ಬಿಸ್ಕೆಟ್ ತಿಂದು ತೇಲಾಡುತ್ತಿರುವ ಪತ್ರಕರ್ತರು, ಅನ್ನದಾತನ ಬಗ್ಗೆ ಬರೆಯುವುದುಂಟೆ?

ಕೈಗಾರಿಕಾ ಮತ್ತು ಸೇವಾ ವಲಯದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಶೇ.35ರಷ್ಟಿದ್ದ ಭಾರತದ ಜಿಡಿಪಿಯಲ್ಲಿನ ಕೃಷಿ ಪಾಲು ಕಳೆದ 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರವೇ ಮಾಹಿತಿ ನೀಡಿದರೂ, ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪುಡಿಗಾಸಿನ ಪುರಾಣ ಹೇಳುತ್ತಾ ಕೂತಿದ್ದಾರೆ.

ರೈತನ ಕುರಿತು ಕೇಂದ್ರದ ಧೋರಣೆ ಇದಾದರೆ, ರಾಜ್ಯದಲ್ಲಿ ಗಂಭೀರ ಬರಗಾಲವಿದೆ. ಕುಡಿಯಲು ನೀರು, ಜಾನುವಾರುಗಳಿಗೆ ಮೇವು ಕೂಡ ಸಿಗದ ದುಃಸ್ಥಿತಿ ಎದುರಾಗಿದೆ. ಬ್ಯಾಂಕ್‌ ಗಳು ಸಾಲದ ನೋಟಿಸ್‌ ಹಿಡಿದು ರೈತನ ಮನೆ ಬಾಗಿಲು ಬಡಿಯುತ್ತಿವೆ. ಇಂತಹ ಸ್ಥಿತಿಯಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ರಾಜಕೀಯ ದ್ವೇಷಾಸೂಯೆಗಳಲ್ಲಿ ಮುಳುಗಿ, ದೋಷಾರೋಪಣೆಗಳಲ್ಲೇ ಕಾಲಹರಣ ಮಾಡುವುದು ಜವಾಬ್ದಾರಿಯುತ ಸರ್ಕಾರಗಳ ನಡೆಯಲ್ಲ; ಯಾವುದೇ ಕಾರಣಕ್ಕೂ ಕ್ಷಮಿಸುವಂಥದ್ದಲ್ಲ. ಕೇಂದ್ರದಿಂದ ಪರಿಹಾರ ಬರಲಿ, ಬರದಿರಲಿ ರೈತರನ್ನು ಆತ್ಮಹತ್ಯೆಯಿಂದ ಪಾರು ಮಾಡುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಲಿ.

ರೈತರಿಂದಲೇ ಅಧಿಕಾರಕ್ಕೆ ಏರಿದವರು, ಅಧಿಕಾರದ ಪಿತ್ಥ ನೆತ್ತಿಗೇರಿಸಿಕೊಂಡಿರಬಹುದು; ಆದರೆ ಅದನ್ನು ಇಳಿಸುವುದು ಹೇಗೆ ಎನ್ನುವುದು ರೈತರಿಗೆ ಗೊತ್ತಿದೆ. ಅದಕ್ಕೆ ಆಸ್ಪದ ಕೊಡದೆ, ಅವರೂ ಉಳಿದು, ರೈತರನ್ನೂ ಉಳಿಸುವ ಕೆಲಸವಾಗಲಿ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....