ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಮೇಲಿನ ಕಾಳಜಿ ಮೋದಿಯವರಿಗೆ ಕೇವಲ ಭಾಷಣದ ವಸ್ತು ಅಷ್ಟೇ…

Date:

ಹೆಣ್ಣುಮಕ್ಕಳ ಮೇಲಿನ ಕಾಳಜಿ ಮೋದಿಜಿಗೆ ಭಾಷಣದ ವಸ್ತು ಅಷ್ಟೇ. ಅವರ ಸರ್ಕಾರದ ಮಹಿಳಾ ಮಂತ್ರಿಗಳನ್ನು ಪ್ರಶ್ನೆ ಮಾಡಿದ್ರೆ ಕಾಲ್ಕೀಳುತ್ತಿದ್ದಾರೆ. ಬಿಜೆಪಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರು ಉನ್ನತ ಸ್ಥಾನದಲ್ಲಿದ್ದಾರೆ. ಅದೇ ಕಾರಣದಿಂದ ಅವರು ಯಾವುದೇ ಮುಜುಗರ ಇಲ್ಲದೇ ಅತ್ಯಾಚಾರಿಗಳನ್ನು ನೇರವಾಗಿಯೇ ಬೆಂಬಲಿಸುತ್ತಾರೆ!

ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟುಗಳು ಒಂದು ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಧರಣಿ ಕುಳಿತಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ಅವರ ಆರೋಪ. ಜನವರಿಯಲ್ಲೇ ದೂರು ಕೊಟ್ಟರೂ ಪೊಲೀಸರು ಎಫ್‌ಐಆರ್‌ ಮಾಡದೇ ಕಾಲಹರಣ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ನಂತರ ಎರಡು ಎಫ್‌ಐಆರ್‌ ದಾಖಲಾಗಿವೆ. ಮೊದಲನೆಯ ಎಫ್.ಐ.ಆರ್. ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆಯಡಿ (ಪೋಕ್ಸೋ) ದಾಖಲಾಗಿದೆ. ಆದರೆ ಇದುವರೆಗೆ ಬ್ರಿಜ್‌ ಭೂಷಣ್‌ ಸಿಂಗ್ ನನ್ನು ಬಂಧಿಸಿಲ್ಲ. ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿಲ್ಲ, ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಪಡೆಯುವ ವಿಚಾರವಂತೂ ಬಹುದೂರ ಉಳಿಯಿತು. ತಮ್ಮ ನಾಯಕರು, ಸಂಸದರು, ಶಾಸಕರು, ಮಂತ್ರಿಗಳು ಅಪರಾಧಿ ಸ್ಥಾನದಲ್ಲಿ ನಿಲ್ಲುವ ಅತ್ಯಾಚಾರ ಪ್ರಕರಣಗಳಲ್ಲಿ ಮೋದಿ ಸರ್ಕಾರದ್ದು 9 ವರ್ಷಗಳಲ್ಲಿ ನಿರಂತರ ಮೌನ.

ಒಲಿಂಪಿಕ್ಸ್ ನಲ್ಲಿ ಪದಕ ಪಡೆದ ಕ್ರೀಡಾಪಟುಗಳು ನ್ಯಾಯಕ್ಕಾಗಿ ಆಗ್ರಹಿಸಿ ಬೀದಿಯಲ್ಲಿ ಕುಳಿತಿದ್ದರೆ ಪ್ರಧಾನಿ ಹೊಸ ಸಂಸತ್ ಭವನದ ಪ್ರವೇಶ ಮಾಡಿ ಸಂಭ್ರಮಿಸಿದ್ದರು. ಅವರ ಸರ್ಕಾರದ ಮಂತ್ರಿಣಿಯರು ಈ ಬಗ್ಗೆ ಪ್ರಶ್ನೆಗಳಿಂದ ತಪ್ಪಿಸಿಕೊಂಡು ಕಾಲು ಕೀಳುತ್ತಿದ್ದಾರೆ. ಬಿಜೆಪಿಯಲ್ಲಿ ಅತ್ಯಾಚಾರ ಪ್ರಕರಣಗಳ ಆರೋಪಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸಿರುತ್ತಾರೆ.

2018ರ ಜನವರಿ 10. ಜಮ್ಮು ಕಾಶ್ಮೀರದ ಕಥುವಾದ ಸಮೀಪದ ರಸಾನಾ ಗ್ರಾಮದಲ್ಲಿ ಬಕರ್ವಾಲ್‌ ಎಂಬ ಅಲೆಮಾರಿ ಸಮುದಾಯದ ಎಂಟು ವರ್ಷದ ಬಾಲಕಿ ಅಸೀಫಾ ಬಾನೋ ಮಧ್ಯಾಹ್ನ 12.30ರ ಸುಮಾರಿಗೆ ಕುದುರೆ ಮೇಯಿಸುತ್ತಾ ದೇವಸ್ಥಾನವೊಂದರ ಬಳಿ ಹೋಗಿದ್ದಾಳೆ. ಸಂಜೆ ನಾಲ್ಕಕ್ಕೆ ಕುದುರೆಗಳಷ್ಟೇ ಮನೆಗೆ ವಾಪಾಸಾಗಿವೆ. ಅಸೀಫಾ ಪುಟ್ಟಿ ನಾಪತ್ತೆ. ವಾರದ ನಂತರ ಅಸೀಫಾ ಮೃತದೇಹ ಪೊದೆಯೊಂದರಲ್ಲಿ ಸಿಗುತ್ತದೆ. ದೇವಸ್ಥಾನದ ಅರ್ಚಕನ ಮಗ ವಿಶಾಲ್‌ ಮತ್ತು ಸಂಬಂಧಿ ಅಸೀಫಾಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ದೇವಸ್ಥಾನದಲ್ಲಿ ಕೂಡಿ ಹಾಕಿರುತ್ತಾರೆ. ಮತ್ತು ಬರುವ ಔಷಧಿ ತಿನ್ನಿಸಿ ಅರ್ಚಕ, ಇಬ್ಬರು ಪೊಲೀಸರು ಸೇರಿದಂತೆ ಐವರು ವಾರವಿಡೀ ನಿರಂತರ ಅತ್ಯಾಚಾರಗೈದು ಕತ್ತು ಹಿಸುಕಿ ಕೊಂದು, ತಲೆಯನ್ನು ಕಲ್ಲಿನಿಂದ ಜಜ್ಜಿ ಎಸೆದಿದ್ದರು. ಮನುಕುಲ ತಲೆತಗ್ಗಿಸಬೇಕಾದ ಅಮಾನುಷ ಕೃತ್ಯವಿದು. ಆದರೆ ಆರೋಪಿಗಳನ್ನು ಬೆಂಬಲಿಸಿ ʼಹಿಂದೂ ಏಕ್ತಾ ಮಂಚ್‌ʼ ರ್ಯಾಲಿ ಮಾಡಿತ್ತು. ದುರಂತವೆಂದರೆ ಪ್ರತಿಭಟನೆಗೆ ಬೆಂಬಲ ನೀಡಿದವರು ಬಿಜೆಪಿಯ ನಾಯಕರಾದ ಲಾಲ್‌ಸಿಂಗ್‌ ಚೌಧರಿ ಮತ್ತು ಚಂದನ್‌ ಪ್ರಕಾಶ್‌ ಗಂಗಾ! ಬಾಲಕಿ ಮುಸ್ಲಿಂ ಧರ್ಮೀಯಳು ಎಂಬ ಕಾರಣದಿಂದಾಗಿ ಬಿಜೆಪಿಗರು ಅಮಾನವೀಯ ಹೇಳಿಕೆಗಳನ್ನು ಕೊಟ್ಟರು. ನರೇಂದ್ರ ಮೋದಿಯವರು ಈ ನಿರ್ಲಜ್ಜ ಕೃತ್ಯ ಕುರಿತು ಬಾಯಿ ಬಿಡಲಿಲ್ಲ. ಘಟನೆಯ ನಂತರ ಘಟನೆ ಜರುಗುತ್ತಿದ್ದರೂ ಪ್ರಧಾನಿ ಮೌನ ಚೋದ್ಯವೇ ಸರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಉನ್ನಾವೋನಲ್ಲಿ 2017ರಲ್ಲಿ ಬಿಜೆಪಿ ಶಾಸಕ ಕುಲ್‌ದೀಪ್‌ ಸೆಂಗರ್‌ 17 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ. ಆತನ ಬಂಧನವಾಗುವವರೆಗೆ ಬಿಜೆಪಿ ಆತನನ್ನು ಪಕ್ಷದಿಂದ ವಜಾ ಮಾಡದೆ ಸಮರ್ಥಿಸಿಕೊಂಡಿತು. ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಸೆಂಗರ್ ಕಾಡಿದ ಪರಿ ಎದೆ ನಡುಗಿಸುವಂತಹುದು. ಸಂತ್ರಸ್ತೆಯ ತಂದೆಯನ್ನು ಪೊಲೀಸರು ಕರೆದೊಯ್ದು ಶವವಾಗಿ ಕಳಿಸಿಕೊಟ್ಟಿದ್ದರು. ಕೋರ್ಟ್‌ಗೆ ತೆರಳುತ್ತಿದ್ದ ಸಂತ್ರಸ್ತೆಯ ಕಾರಿನ ಮೇಲೆ ಟ್ರಕ್‌ ಹತ್ತಿಸಿ ಇಬ್ಬರು ಸಂಬಂಧಿಗಳ ಹತ್ಯೆ ಮಾಡಲಾಯಿತು. ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು, ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆಯ ನಂತರ ಸೆಂಗರ್‌ನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಯಿತು. ಸೆಂಗರ್ ಈಗ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ.

2011ರಲ್ಲಿ ಉತ್ತರಪ್ರದೇಶದ ಶಹಜಹಾನ್‌ಪುರದ ಸಂಸದ, ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ. ಆತನ ಶಿಕ್ಷಣ ಸಂಸ್ಥೆಯ ಹಾಸ್ಟೆಲ್‌ನಲ್ಲಿ ವಾಸವಿದ್ದ ಕಾನೂನು ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರದ ಆರೋಪ ಹೊತ್ತಿದ್ದ. ಹಾಸ್ಟೆಲ್‌ನ ಬಾತ್‌ರೂಮಿನಲ್ಲಿ ಸ್ನಾನ ಮಾಡುತ್ತಿರುವಾಗ ವಿಡಿಯೊ ಚಿತ್ರಿಸಿ ಅದನ್ನಿಟ್ಟುಕೊಂಡು ಒಂದು ವರ್ಷ ಕಾಲ ಅತ್ಯಾಚಾರ ನಡೆಸಿದ ದೂರು ದಾಖಲಾಗಿತ್ತು. ಆರೋಪಕ್ಕೆ ಪೂರಕವಾಗಿ 43 ವಿಡಿಯೊ ಕ್ಲಿಪ್ಪಿಂಗ್‌ಗಳನ್ನು ಎಸ್‌ಐಟಿಗೆ ಒಪ್ಪಿಸಲಾಗಿತ್ತು. ಆದರೆ, ಪೊಲೀಸರು ಚಿನ್ಮಯಾನಂದನ ಬದಲು ಸಂತ್ರಸ್ತೆಯನ್ನೇ ಬಂಧಿಸಿದ್ದರು. ಯೋಗಿ ಸರ್ಕಾರ ಚಿನ್ಮಯಾನಂದನ ವಿರುದ್ಧದ ಪ್ರಕರಣವನ್ನು ಕೈಬಿಟ್ಟಿತ್ತು. ಇದನ್ನು ಆಕ್ಷೇಪಿಸಿದ ಸಂತ್ರಸ್ತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದರು. ಕಡೆಗೂ ಆರೋಪಿಗೆ ಶಿಕ್ಷೆ ಆಗಿದೆ.

ಇದೇ ಉತ್ತರ ಪ್ರದೇಶದ ಹಥರಸ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಸ್ಪತ್ರೆಯಲ್ಲಿ ಮೃತಪಟ್ಟ ಸಂತ್ರಸ್ತೆಯ ದೇಹವನ್ನು ಕುಟುಂಬದವರಿಗೆ ನೀಡದೆ ಪೊಲೀಸರೇ ಕತ್ತಲಲ್ಲಿ ಗುಟ್ಟಾಗಿ ಸುಟ್ಟರು. ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಸಾಮಾಜಿಕ ಕಾರ್ಯಕರ್ತರು, ರಾಜಕೀಯ ವ್ಯಕ್ತಿಗಳು ಮತ್ತು ಸಮೂಹ ಮಾಧ್ಯಮಗಳಿಗೆ ಅವಕಾಶ ನಿರಾಕರಿಸಲಾಯಿತು. ಮೋದಿ ಸರ್ಕಾರ ಈ ಯಾವ ಪ್ರಕರಣವನ್ನೂ ಖಂಡಿಸಿ ಬಾಯಿ ತೆರೆದಿಲ್ಲ. ಹೆಣ್ಣುಮಕ್ಕಳ ಮೇಲಿನ ಕಾಳಜಿ ಮೋದಿಜೀಗೆ ಕೇವಲ ಭಾಷಣದ ವಸ್ತು ಅಷ್ಟೇ.

ಹೆಣ್ಣುಮಕ್ಕಳ ಪಾಲಿಗೆ ಅತ್ಯಾಚಾರವೆಂಬುದೇ ಭಯಾನಕ ನರಕ. ಅದಕ್ಕಿಂತ ಭೀಕರ ಅದನ್ನು ಬಹಿರಂಗಪಡಿಸಿ ಆರೋಪಿಗಳ ವಿರುದ್ಧ ಕಾನೂನು ಹೋರಾಟ ನಡೆಸುವುದು ಮತ್ತು ತಮ್ಮನ್ನು ರಕ್ಷಿಸಿಕೊಳ್ಳುವುದು. ಕುರುಡು ಕಿವುಡು ಸರ್ಕಾರವನ್ನು ಅಮಾನವೀಯ ಸಮಾಜವನ್ನು ಎದುರಿಸಲು ನಿಜಕ್ಕೂ ಗಟ್ಟಿ ಗುಂಡಿಗೆ ಬೇಕು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....