ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

Date:

ಫೆ.15ರಿಂದ ಮಾ. 30ರವರೆಗೆ, ಬಾಂಡ್ ಹಗರಣ ಬಹಿರಂಗವಾದ ನಂತರದ ನಲವತ್ತೈದು ದಿನಗಳಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಗಮನಿಸಿದರೆ, ದೇಶದ ರಾಜಕಾರಣದಲ್ಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಮೋದಿಯವರ ಈ ಕೃತ್ಯ ಯಾವ ಭಯೋತ್ಪಾದನೆಗೆ ಕಡಿಮೆ ಇಲ್ಲವೆನಿಸುತ್ತದೆ. 

ಚುನಾವಣಾ ಬಾಂಡ್ ಯಾವುದೇ ಕಾರಣಕ್ಕೂ ಬಹಿರಂಗವಾಗುವುದಿಲ್ಲ ಎಂದು ಭಾರತೀಯ ಜನತಾ ಪಕ್ಷ ಭಾವಿಸಿತ್ತು. ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಚ್ಚಿಡಲು ಶಕ್ತಿಮೀರಿ ಶ್ರಮಿಸಿತ್ತು. ಬಾಂಡ್ ದೇಣಿಗೆ ಸಂಗ್ರಹವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಡುತ್ತಿತ್ತು. ಅದರ ಛೇರ್ಮನ್ ಆಯ್ಕೆಯೂ ಕೇಂದ್ರ ಸರ್ಕಾರದ ಕೈಯಲ್ಲಿತ್ತು.

ಅಕಸ್ಮಾತ್, ಬಾಂಡ್ ಬಗ್ಗೆ ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದರೆ, ಪ್ರಾಮಾಣಿಕತೆ, ಪಾರದರ್ಶಕತೆಯ ಪಾಠ ಮಾಡಿ, ಪ್ರಶ್ನಿಸಿದವರನ್ನೇ ಕಳ್ಳರಂತೆ ಚಿತ್ರಿಸಲಾಗುತ್ತಿತ್ತು. ಚಿತ್ರಿಸಲು ಗೋದಿ ಮೀಡಿಯಾಗಳನ್ನು, ಸರ್ಕಾರಿ ಏಜೆನ್ಸಿಗಳನ್ನು, ಬಿಜೆಪಿಯ ಅಕ್ಷೋಹಿಣಿ(ಐಟಿ ಸೆಲ್) ಸೈನ್ಯವನ್ನು ಬಳಸಲಾಗುತ್ತಿತ್ತು.

ಆದರೆ ದೇಶದ ಸರ್ವೋಚ್ಚ ನ್ಯಾಯಾಲಯ ಫೆ. 15ರಂದು ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿ, ರದ್ದುಗೊಳಿಸಿತು. ಅಷ್ಟೇ ಅಲ್ಲ, ಯಾರ್‍ಯಾರು ಯಾವ್ಯಾವ ರಾಜಕೀಯ ಪಕ್ಷಗಳಿಗೆ ಎಷ್ಟೆಷ್ಟು ಹಣ ಕೊಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಕೇಳಿತು. ಅದನ್ನು ಚುನಾವಣಾ ಆಯೋಗ ದೇಶದ ಜನತೆಯ ಮುಂದಿಡಬೇಕು ಎಂದು ತಾಕೀತು ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಯಿಂದ ಬೆಚ್ಚಿದ ಮೋದಿ ಮೌನಕ್ಕೆ ಶರಣಾದರು. ಸಂಘ ಪರಿವಾರದ ಸದ್ದಡಗಿತು. ಬಿಜೆಪಿ ನಾಯಕರು ಬಾಯಿಬಿಟ್ಟರೆ ಬಣ್ಣಗೇಡು ಎಂದರಿತು, ಬಿಲ ಸೇರಿಕೊಂಡರು.

ಫೆ.15ರಿಂದ ಮಾ. 30ರವರೆಗೆ, ಬಾಂಡ್ ಹಗರಣ ಬಹಿರಂಗವಾದ ನಂತರದ ನಲವತ್ತೈದು ದಿನಗಳಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಗಮನಿಸಿದರೆ, ದೇಶದ ರಾಜಕಾರಣದಲ್ಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಮೋದಿಯವರ ವಿಚಲಿತ ವರ್ತನೆಯ ವಿರಾಟರೂಪ ಅನಾವರಣಗೊಳ್ಳುತ್ತದೆ.

ಸುಪ್ರೀಂ ಕೋರ್ಟಿನ ಆದೇಶ ಹೊರಬಂದ ನಂತರ, ಫೆ. 20ರಂದು ಬಾಯಿಬಿಟ್ಟ ಮೋದಿಯವರು, ಚುನಾವಣಾ ಬಾಂಡ್ ಹಗರಣವನ್ನು ಕೃಷ್ಣ-ಸುಧಾಮನ ಕತೆಗೆ ಹೋಲಿಸಿ ತಮಾಷೆ ಮಾಡಿದ್ದರು. ತಮ್ಮನ್ನು ಕೃಷ್ಣ ಪರಮಾತ್ಮನಿಗೆ ಹೋಲಿಸಿಕೊಂಡಿದ್ದರು. ಸುಧಾಮನ ಅವಲಕ್ಕಿಯನ್ನು ದೇಣಿಗೆಗೆ ಸಮೀಕರಿಸಿ, ದೇಶದ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಗೇಲಿ ಮಾಡಿದ್ದರು. ನ್ಯಾಯಾಂಗದ ಘನತೆಗೆ ಪ್ರಧಾನಿಗಳೇ ಧಕ್ಕೆ ತಂದಿದ್ದರು.

ಫೆ. 22ರಂದು ತೆರಿಗೆ ಪಾವತಿಸಿಲ್ಲ ಎಂಬ ನೆಪವೊಡ್ಡಿ, ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಯಿತು. ಆ ಮೂಲಕ ಕಾಂಗ್ರೆಸ್ ಪಕ್ಷ ಆರ್ಥಿಕ ಸಂಪನ್ಮೂಲಗಳ ಕೊರತೆಯಿಂದ ನರಳುವಂತೆ, ಚುನಾವಣೆ ಎದುರಿಸಲಾಗದೆ ಸೊರಗುವಂತೆ, ಸೋಲಿನ ದವಡೆಗೆ ಸಿಲುಕುವಂತೆ ನೋಡಿಕೊಳ್ಳಲಾಯಿತು.

ಫೆ. 28ರಂದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು, ಮನಿ ಲಾಂಡರಿಂಗ್ ಕೇಸ್‌ನಲ್ಲಿ ಇಡಿ ಮೂಲಕ ಬಂಧಿಸಲಾಯಿತು. ಜಾರ್ಖಂಡ್‌ನಲ್ಲಾದ ರಾಜಕೀಯ ಅರಾಜಕತೆ ಮತ್ತು ಮುಖ್ಯಮಂತ್ರಿಯ ಬಂಧನವನ್ನು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುವಂತೆ ನೋಡಿಕೊಳ್ಳಲಾಯಿತು. ಆ ಮೂಲಕ ಇಂಡಿಯಾ ಒಕ್ಕೂಟದ ಬಲವನ್ನು ಕುಗ್ಗಿಸಲು ಹವಣಿಸಿತು.

ಮಾ. 11ರಂದು ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತು. ಇದು ದೇಶದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳಾಗಿ, ಜನರನ್ನು ಕೋಮು ಗಲಭೆಗೆ ಪ್ರಚೋದಿಸುತ್ತದೆ ಎಂದು ಭಾವಿಸಿತು. ಆ ಗಲಭೆಗಳಿಂದಾಗಿ ಬಾಂಡ್ ಹಗರಣ ಹಿನ್ನೆಲೆಗೆ ಸರಿಯುತ್ತದೆಂದು ಬಿಜೆಪಿ ಭ್ರಮಿಸಿತು. ಆದರೆ ದೇಶದ ಜನ ಪ್ರಬುದ್ಧತೆ ಪ್ರದರ್ಶಿಸಿ, ಬಿಜೆಪಿ ಆಟ ನಡೆಯದಾಯಿತು.

ಮಾ. 19ರಂದು ತೆಲಂಗಾಣದ ಬಿಆರ್‍ಎಸ್ ಪಕ್ಷದ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರನ್ನು ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊರಿಸಿ, ಇಡಿ ಮೂಲಕ ಬಂಧಿಸಲಾಯಿತು. ಇದೇ ಹಗರಣದ ಮುಂದುವರೆದ ಭಾಗವಾಗಿ, ಆಮ್ ಆದ್ಮಿ ಪಕ್ಷದ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಕೂಡ ಇಡಿ ಬಳಸಿ, ಮಾ. 21ರಂದು ಬಂಧಿಸಲಾಯಿತು.

ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿರುವ ಆಮ್ ಆದ್ಮಿ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ಮತ್ತು ಮೋದಿ, ಅಬಕಾರಿ ನೀತಿ ಹಗರಣವನ್ನು ಮುಂದಿಟ್ಟು ಕೇಜ್ರಿವಾಲ್‌ರನ್ನು ಕಟ್ಟಿಹಾಕಲು, ಆ ಮೂಲಕ ಇಂಡಿಯಾ ಒಕ್ಕೂಟವನ್ನು ಬಲಹೀನಗೊಳಿಸಲು ನೋಡಿತು.

ಏತನ್ಮಧ್ಯೆ, ಮಾ. 26ರಂದು ನ್ಯಾಯಾಂಗದ ಮೇಲೆ ಪ್ರಭಾವ ಬೀರಲು ಪಟ್ಟಭದ್ರರ ನಿರ್ದಿಷ್ಟ ಗುಂಪು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಹರೀಶ್ ಸಾಳ್ವೆ ನೇತೃತ್ವದ 600ಕ್ಕೂ ಹೆಚ್ಚು ವಕೀಲರು ಪತ್ರ ಬರೆದರು. ಆ ಪತ್ರಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ವಿರೋಧ ಪಕ್ಷಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ’ ಎಂದು ಟ್ವೀಟ್ ಮಾಡಿದರು. ಅಸಲಿಗೆ, ಹರೀಶ್ ಸಾಳ್ವೆ, ಬಾಂಡ್ ಹಗರಣದಲ್ಲಿ ಎಸ್‌ಬಿಐ ಪರ ವಾದ ಮಂಡಿಸಿದ ವಕೀಲರು.

ಇದಾದ ಮೂರು ದಿನಕ್ಕೆ, ಮಾ. 29ರಂದು, ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಪಕ್ಷಕ್ಕೆ 1,823 ಕೋಟಿ ತೆರಿಗೆ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಿತು.

ಎಲೆಕ್ಷನ್ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ, ದೇಶದ ಜನತೆಯ ಮುಂದೆ ಸತ್ಯ ಬಿಚ್ಚಿಡಲಾಗದೆ ಪಲಾಯನವಾದಕ್ಕಿಳಿದಿದೆ. ತನ್ನ ಮಾನ ಮುಚ್ಚಿಕೊಳ್ಳಲು ಚಿಲ್ಲರೆ ಕಾಸು ಪಡೆದ ವಿರೋಧ ಪಕ್ಷಗಳ ನಾಯಕರನ್ನು ಕಳ್ಳರಂತೆ ಚಿತ್ರಿಸುತ್ತಿದೆ. ಇಂಡಿಯಾ ಒಕ್ಕೂಟದ ಶಕ್ತಿ ಕುಂದಿಸಲು ಸರ್ಕಾರಿ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ.

ನಲವತ್ತೈದು ದಿನಗಳ ಈ ಘಟನಾವಳಿಗಳು ದೇಶದ ಜನತೆಗೆ ಎಂತಹ ಸಂದೇಶವನ್ನು ರವಾನಿಸುತ್ತವೆ? ವಿರೋಧ ಪಕ್ಷಗಳ ನಾಯಕರನ್ನು ಕಳ್ಳರಂತೆ ಚಿತ್ರಿಸಲು ಮತ್ತು ಒಕ್ಕೂಟವನ್ನು ಛಿದ್ರಗೊಳಿಸಲು ಬಿಜೆಪಿ ಮತ್ತು ಮೋದಿಯವರ ಈ ಕೃತ್ಯ ಯಾವ ಭಯೋತ್ಪಾದನೆಗೆ ಕಡಿಮೆ ಇದೆ? ವಿರೋಧ ಪಕ್ಷಗಳಿಲ್ಲದಂತೆ ಮಾಡುವುದು ಪ್ರಜಾಪ್ರಭುತ್ವವೇ? ಮೋದಿ ಸರ್ವಾಧಿಕಾರಿಯಲ್ಲವೇ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....