ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

Date:

ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ ಅನ್ನದಾತರನ್ನು ಹೇಗೆಲ್ಲ ಸದೆಬಡಿಯಲು ನೋಡಿತ್ತೋ, ಅದಕ್ಕೆ ಮತ್ತೊಮ್ಮೆ ಚಾಲನೆ ಕೊಟ್ಟಂತೆ ಕಾಣುತ್ತಿದೆ. ಮೋದಿಯವರಿಗೆ ಈಗ ಅನ್ನದಾತರ ಅಗತ್ಯವಿಲ್ಲವೇ? ಅಥವಾ ಭಾಷಣಕ್ಕೆ ಮಾತ್ರ ಸೀಮಿತವೇ?

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳಿರುವಾಗ ದೆಹಲಿಯ ಗಡಿಭಾಗ ಮತ್ತೆ ರೈತ ಪ್ರತಿಭಟನೆಯ ಕಾವು ಏರಿಸಿಕೊಳ್ಳಲು ಸಜ್ಜಾಗುತ್ತಿದೆ. ಚುನಾವಣಾ ಸಮಯದಲ್ಲಿ ಸುಮಾರು 200 ರೈತ ಸಂಘಟನೆಗಳು ದೆಹಲಿಯತ್ತ ಪ್ರತಿಭಟನೆಗಾಗಿ ಸಾಗಲು ಸಿದ್ಧವಾಗುತ್ತಿವೆ.

ನಾಡಿನ ರೈತನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ ಜನ್ಮದಿನವಾದ ಫೆ. 13ರಂದೇ ‘ದೆಹಲಿ ಚಲೋ’ ಆಯೋಜಿಸಲಾಗಿದೆ. ಫೆ. 16ರಿಂದ ‘ಗ್ರಾಮೀಣ ಭಾರತ್ ಬಂದ್‌’ಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಕೃಷಿ ವಲಯಕ್ಕೆ ನೀಡಿರುವ ಭರವಸೆಗಳನ್ನು ಈಡೇರಿಸದ ಮೋದಿಯವರ ಕೇಂದ್ರ ಸರ್ಕಾರದ ವಿರುದ್ಧ ಈ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಕೃಷಿ ಸಾಲ ಮನ್ನಾ ಸಂಬಂಧಿಸಿ ಕೇಂದ್ರ ಸರ್ಕಾರ ನೀಡಿರುವ ಭರವಸೆಗಳನ್ನು ಈಡೇರಿಸದಿರುವ ವಿರುದ್ಧ ರೈತಸಂಘಟನೆಗಳು ಚಳವಳಿ ನಡೆಸಲಿವೆ. ಈ ಚಳವಳಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, 2020ರಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಪ್ರತಿಭಟನೆ ಪುನರಾವರ್ತನೆಯಾಗುವ ಎಲ್ಲ ಸೂಚನೆಗಳು ಕಾಣುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್‌ 2020ರಲ್ಲಿ ದೇಶ ಕೋವಿಡ್ ಕಷ್ಟಕ್ಕೆ ಸಿಕ್ಕು ದಿಕ್ಕೆಟ್ಟು ಕೂತಿದ್ದಾಗ, ಜನಪ್ರತಿನಿಧಿಗಳು ಮಾಸ್ಕ್ ಏರಿಸಿಕೊಂಡು ಮಾತನಾಡದಂತಹ ಸ್ಥಿತಿಯಲ್ಲಿದ್ದಾಗ, ಮೋದಿಯವರ ನೇತೃತ್ವದ ಎನ್‌ಡಿಎ ಸರಕಾರ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿಟ್ಟು ತರಾತುರಿಯಲ್ಲಿ ಪಾಸು ಮಾಡಿಕೊಂಡಿತ್ತು. ಸೆಪ್ಟೆಂಬರ್‌ನಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ದೇಶದ ರೈತರ ಬದುಕಿಗೆ ಬಿಸಿನೀರು ಸುರಿದಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಬಿಜೆಪಿ, ಎರಡನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ಅಹಂನಲ್ಲಿದ್ದ ಮೋದಿಯವರು, ತಮ್ಮ ಕಾರ್ಪೊರೇಟ್ ಗೆಳೆಯರಿಗೆ ಅನುಕೂಲ ಕಲ್ಪಿಸಲು, ಕೃಷಿ ಕಾಯ್ದೆಗಳ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ಕೊಡದೆ, ಪಾಸು ಮಾಡಿಕೊಂಡಿದ್ದರು. ಈ ಕರಾಳ ಕಾಯ್ದೆಗಳು ಜಾರಿಗೆ ಬಂದರೆ, ಕೃಷಿ ಕ್ಷೇತ್ರಕ್ಕೆ ಕತ್ತಲಾವರಿಸಿ, ರೈತ ಸಮೂಹ ಒಕ್ಕಲೆದ್ದುಹೋಗುವುದು ನಿಶ್ಚಿತ ಎಂದರಿತ ಪಂಜಾಬ್ ರೈತರು ಮೊದಲಿಗೆ ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕಿಳಿದರು. ಅಕ್ಟೋಬರ್ 25, 2020ರಂದು ‘ಪಂಜಾಬ್ ಬಂದ್’ಗೆ ಕರೆ ಕೊಟ್ಟರು.

ಒಡೆದು ಚೂರಾಗಿ ಹೋಗಿದ್ದ ರೈತ ಸಂಘಟನೆಗಳು ಒಂದಾದವು. ಪಕ್ಷಭೇದ ಮರೆತು ರಾಜಕೀಯ ಪಕ್ಷಗಳು ಬೆಂಬಲಿಸಿದವು. ಕ್ರೀಡಾಪಟುಗಳು, ಕಲಾವಿದರು, ಸಾಹಿತಿಗಳು, ಬುದ್ಧಿಜೀವಿಗಳು, ಪತ್ರಕರ್ತರು, ಅನಿವಾಸಿ ಭಾರತೀಯರು, ಸಾಮಾನ್ಯರು ರೈತರ ಪರ ನಿಂತರು. ಧಾರ್ಮಿಕ ಗುರುಗಳು ಕೈಜೋಡಿಸಿದರು. ‘ಪಂಜಾಬ್‌ ಬಂದ್‌’ ಯಶಸ್ವಿಯಾಯಿತು. ಇದು ಕೃಷಿಯ ಅಸ್ತಿತ್ವವನ್ನೇ ಅಲ್ಲಾಡಿಸಲು ಹವಣಿಸಿದ ಮೋದಿಯವರ ಮುಂದಾಳತ್ವದ ಕೇಂದ್ರ ಸರಕಾರಕ್ಕೆ ಎದುರಾದ ದೇಶದ ಮೊದಲ ಪ್ರತಿರೋಧ.

ಈ ಪ್ರತಿರೋಧಕ್ಕೆ ಅಂದಿನ ಹರಿಯಾಣದ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌, ಹೆದ್ದಾರಿಗೆ ಪೊಲೀಸರನ್ನು ನಿಯೋಜಿಸಿ ಬ್ಯಾರಿಕೇಡ್‌ ಹಾಕಿಸಿ, ರಸ್ತೆಗೆ ಗುಂಡಿ ತೋಡಿಸಿ, ರೈತರತ್ತ ರಬ್ಬರ್‌ ಬುಲೆಟ್‌ ಹಾರಿಸಿ, ಜಲಫಿರಂಗಿ ಮಾಡಿಸಿ ದಿಕ್ಕೆಡಿಸಲು ನೋಡಿದರು. ಮೋದಿ ಪ್ರಣೀತ ಗೋದಿ ಮೀಡಿಯಾದ ಪತ್ರಕರ್ತರು ರೈತರನ್ನು ಭಯೋತ್ಪಾದಕರು, ನಗರ ನಕ್ಸಲರು ಎಂದು ಬಿಂಬಿಸಲು ಹವಣಿಸಿದರು.

ಕೊನೆಗೆ 700ಕ್ಕೂ ಹೆಚ್ಚು ರೈತರ ಬಲಿದಾನ, ಒಂದು ವರ್ಷ ನಿರಂತರವಾಗಿ ನಡೆದ ರೈತ ಹೋರಾಟಕ್ಕೆ ಮಣಿದ ಮೋದಿಯವರ ಕೇಂದ್ರ ಸರಕಾರ ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡಿತು. ಅಷ್ಟೇ ಅಲ್ಲ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಕೃಷಿ ಸಾಲ ಮನ್ನಾ ಮಾಡುವುದಾಗಿ ದೇಶದ ರೈತರಿಗೆ ಭರವಸೆ ನೀಡಿತು.

ಪ್ರಧಾನಿ ಮೋದಿಯವರು ರೈತರಿಗೆ ಈ ಭರವಸೆ ನೀಡಿ ಇಂದಿಗೆ ಮೂರು ವರ್ಷಗಳು ಕಳೆದುಹೋಗಿವೆ. ಬಾಯಿ ಬಿಟ್ಟರೆ ಸಬ್ ಕ ಸಾಥ್… ಎಂದು ಭಾಷಣ ಬಿಗಿಯುವ ಮೋದಿಯವರು, ದೇಶದ ಅನ್ನದಾತರ ವಿಕಾಸ್ ಬಗ್ಗೆ ಬಾಯಿ ಬಿಡಲಿಲ್ಲ. ಆದರೆ, ಆರೆಸೆಸ್‌ ಅಜೆಂಡಾವನ್ನು ಜಾರಿಗೆ ತರುವಲ್ಲಿ ಮತ್ತು ಬಿಜೆಪಿಯವರಿಗೆ ಬೇಕಾಗಿದ್ದ ಆರ್ಟಿಕಲ್‌ 370, ತ್ರಿವಳಿ ತಲಾಕ್‌ ಕಾನೂನನ್ನು ಜಾರಿಗೊಳಿಸುವಲ್ಲಿ ಅತಿ ಉತ್ಸಾಹ ತೋರಿದರು. ರಾಮ ಮಂದಿರವನ್ನೂ ನಿರ್ಮಾಣ ಮಾಡಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ ಎಂದು ದೂರುತ್ತಲೇ; ಕೋಮು ವಿಷಬೀಜ ಬಿತ್ತುತ್ತಲೇ; ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುವುದರೊಳಗೆ ಸಿಎಎ ಮತ್ತು ಯುಸಿಸಿ ಜಾರಿ ಮಾಡಲು ಹವಣಿಸುತ್ತಿದ್ದಾರೆ. ಅಂದರೆ, ಅವರಿಗೆ ಬೇಕಾಗಿದ್ದು, ಚುನಾವಣೆ ಗೆದ್ದು ಅಧಿಕಾರ ಹಿಡಿಯಲು ಅನುಕೂಲವಾಗುವಂಥದ್ದು ಯಾವ ಅಡೆತಡೆ ಇಲ್ಲದೆ ಜಾರಿಯಾಗುತ್ತದೆ.

ಆದರೆ ದೇಶದ ಕೃಷಿ ಕ್ಷೇತ್ರ ಕಾಪಾಡುವ ಕಾಯ್ದೆ, ರೈತರಿಗೆ ನೀಡಿದ ಭರವಸೆ ಮಾತ್ರ ಭರವಸೆಯಾಗಿಯೇ ಉಳಿಯುತ್ತದೆ. ಮಾತು ತಪ್ಪಿದ ಮೋದಿಯವರಿಗೆ ತಮ್ಮ ಮಾತನ್ನು ನೆನಪಿಸಲು ರೈತರು ಮತ್ತೊಮ್ಮೆ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ಯಥಾಪ್ರಕಾರ ಬಿಜೆಪಿ ಸರ್ಕಾರ ರೈತರ ನ್ಯಾಯಯುತ ಪ್ರತಿಭಟನೆಗೆ ಸರ್ಕಾರಿ ಯಂತ್ರವನ್ನು ಬಳಸಿ ತಡೆಯೊಡ್ಡಲು ತಯಾರಾಗಿದೆ. ಹರಿಯಾಣದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ನಡಿಗೆ ಅಥವಾ ಟ್ರಾಕ್ಟರ್‌ಗಳ ಮೂಲಕ ನಡೆಯುವ ಮೆರವಣಿಗೆ ಹಾಗೂ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ಫೆ.13ರವರೆಗೆ ಗಡಿ ಪ್ರದೇಶದ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 50 ತುಕಡಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಪಂಚ್‌ಕುಲಾ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ದೆಹಲಿಯ ಗಡಿ ಪ್ರದೇಶಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ದೇಶದ ಧರಣಿನಿರತ ರೈತರಿಗೆ ಏನೆಲ್ಲ ಕಿರುಕುಳ ಕೊಟ್ಟಿತ್ತೋ, ಅದಕ್ಕೆ ಮತ್ತೊಮ್ಮೆ ಚಾಲನೆ ಕೊಟ್ಟಂತೆ ಕಾಣುತ್ತಿದೆ. ಪ್ರಧಾನಿ ಮೋದಿಯವರಿಗೆ ದೇಶದ ಕೃಷಿ ಕ್ಷೇತ್ರ ಅಭಿವೃದ್ಧಿ ಹೊಂದುವುದು ಬೇಕಿಲ್ಲವೇ? ಈಗ ಅನ್ನದಾತರ ಅಗತ್ಯವಿಲ್ಲವೇ? ಅಥವಾ ಭಾಷಣಕ್ಕೆ ಮಾತ್ರ ಸೀಮಿತವೇ?

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....