ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

Date:

ಯಾವುದೇ ಪ್ರಕರಣವಾಗಲಿ, ಅದು ಹೊರಬಂದ ಹೊಸದರಲ್ಲಿ ಭಾರೀ ಸುದ್ದಿಯಾಗುತ್ತದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಯುದ್ಧವೇ ನಡೆದುಹೋಗುತ್ತದೆ. ಅದಕ್ಕೆ ತಕ್ಕಂತೆ ಸುದ್ದಿ ಮಾಧ್ಯಮಗಳು ಕಾವು ಕೊಟ್ಟು ಬೆಂಕಿ ಹಚ್ಚಿ ಜ್ವಲಂತ ಸಮಸ್ಯೆ ಎಂಬಂತೆ ಬಿಂಬಿಸುತ್ತವೆ. ಆದರೆ, ದಿನಗಳೆದಂತೆ ತಣ್ಣಗಾಗುತ್ತದೆ, ನೇಪಥ್ಯಕ್ಕೆ ಸರಿಯುತ್ತದೆ. ಮನುಷ್ಯರ ಮರೆವಿನ ಗುಣ, ಅಧಿಕಾರಸ್ಥರಿಗೆ ಅನುಕೂಲಕರ ವಾತಾವರಣ ನಿರ್ಮಿಸಿಕೊಡುತ್ತದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಅಧೀಕ್ಷಕ ಚಂದ್ರಶೇಖರ್(48) ಅವರು ತಮ್ಮ ಹುಟ್ಟೂರು ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾಗಿ ಇಲ್ಲಿಗೆ ಒಂದು ವಾರ ಕಳೆಯಿತು.

ಈ ಒಂದು ವಾರದಲ್ಲಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಸಮರ ನಡೆದಿದೆಯೇ ಹೊರತು, ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಗೆ ನ್ಯಾಯ ಸಿಗಲಿಲ್ಲ.

ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಮೊತ್ತದ ಅವ್ಯವಹಾರ, ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿಟ್ಟ ಡೆತ್ ನೋಟ್ ಮೂಲಕ ಬಯಲಾಗಿದೆ. ಡೆತ್ ನೋಟ್‌ನಲ್ಲಿ ಹಗರಣದ ಕುರಿತು ಹಲವು ಮಹತ್ವದ ಮಾಹಿತಿಗಳನ್ನು ದಾಖಲಿಸಲಾಗಿದೆ. 94 ಕೋಟಿ ಸಣ್ಣ ಮೊತ್ತವಲ್ಲ, ಇದು ನಿರ್ಲಕ್ಷಿಸುವಂತಹ ಆರೋಪವಲ್ಲ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಕೂಡ ಅದನ್ನು ಅಲ್ಲಗಳೆದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏತನ್ಮಧ್ಯೆ, ಮೃತ ಅಧಿಕಾರಿ ಚಂದ್ರಶೇಖರ್ ಪತ್ನಿ ಶಿವಮೊಗ್ಗದಲ್ಲಿ ದೂರು ನೀಡಿದ್ದಾರೆ. ನಿಗಮದ ವತಿಯಿಂದ ಮುಖ್ಯನಿಬಂಧಕ ರಾಜಶೇಖರ್ ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎರಡು ಕ್ರಿಮಿನಲ್ ಮೊಕದ್ದಮೆಗಳ ಹಿನ್ನೆಲೆಯಲ್ಲಿ, ಪ್ರಕರಣದ ಗಂಭೀರತೆಯನ್ನು ಅರಿತ ಸರ್ಕಾರ, ಸಮಗ್ರ ತನಿಖೆಗಾಗಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳು, ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ, ಹಣ ದುರ್ಬಳಕೆ ಆರೋಪ ಸಂಬಂಧ ಯೂನಿಯನ್ ಬ್ಯಾಂಕ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸೇರಿದಂತೆ ಸಮಗ್ರ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಬೇಕೆಂದು ಸರ್ಕಾರ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದ ಅವಧಿಯಲ್ಲಿ, ಮೂರು ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಮೂರನೇ ಎಸ್ಐಟಿ ನಿಯೋಜಿಸಿದಂತಾಗಿದೆ. ಬಿಟ್ ಕಾಯಿನ್ ಹಗರಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹಾಗೂ‌ ಇದೀಗ ವಾಲ್ಮೀಕಿ ನಿಗಮ ಲೆಕ್ಕಾಧಿಕಾರಿ ಸಾವು ಹಾಗೂ ಬಹುಕೋಟಿ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.

ವಾಲ್ಮೀಕಿ ನಿಗಮದ ಅವ್ಯವಹಾರ ಕುರಿತ ಎಸ್ಐಟಿ ತನಿಖೆಯೂ ಚುರುಕುಗೊಂಡಿದೆ. ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಕೋಟ್ಯಂತರ ರೂಪಾಯಿಗಳ ಹಣ ದುರ್ಬಳಕೆಯ ಹಗರಣ. ಈ ಭಾರೀ ಮೊತ್ತದ ಹಗರಣವನ್ನು ಒಬ್ಬರು ಅಥವಾ ಇಬ್ಬರು ಅಧಿಕಾರಿಗಳು ಸೇರಿ ಮಾಡಲು ಸಾಧ್ಯವಿಲ್ಲ ಎಂಬುದು ಎಂತಹವರಿಗೂ ಅರ್ಥವಾಗುತ್ತದೆ. ಇದರ ಸಮಗ್ರ ತನಿಖೆಯ ಅಗತ್ಯವಿದೆ. ಸತ್ಯ ಆದಷ್ಟು ಬೇಗ ಹೊರಬರಬೇಕಾಗಿದೆ. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲಿದೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಬಿಟ್ ಕಾಯಿನ್ ಹಗರಣ ಬಿಜೆಪಿ ಸರ್ಕಾರದ ಕೊಡುಗೆ. ಶ್ರೀಕಿ ಎಂಬ ಮಾದಕವ್ಯಸನಿ ರಾಜ್ಯ ಸರ್ಕಾರದ ಜಾಲತಾಣವನ್ನೇ ಹ್ಯಾಕ್ ಮಾಡಿ 46 ಕೋಟಿ ದೋಚಿದ್ದನೆಂಬ ಸಂಗತಿಯನ್ನು ಸಿಸಿಬಿ ಪೊಲೀಸರ ತನಿಖೆಯಿಂದ ಪತ್ತೆ ಹಚ್ಚಿದ್ದರು. ಆ ಭಾರೀ ಮೊತ್ತ ಹಲವರ ಖಾತೆಗೆ ವರ್ಗವಾಗಿದೆ. ಈ ಹಗರಣದಲ್ಲಿ ಹಲವು ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರ ಪುತ್ರರು ಶಾಮೀಲಾಗಿದ್ದಾರೆಂಬ ಸುದ್ದಿ ಇದೆ. ಹಗರಣ ತಂತ್ರಜ್ಞಾನಕ್ಕೆ ಸಂಬಂಧಿಸಿದ್ದು, ಪರಿಣತರ ಕೊರತೆ ಎದ್ದು ಕಾಣುತ್ತಿದೆ, ತನಿಖೆ ಕುಂಟುತ್ತಾ ಸಾಗಿದೆ. ಜೊತೆಗೆ ತಾಂತ್ರಿಕ ಹಾಗೂ ಅಂತಾರಾಷ್ಟ್ರೀಯ ವಿಚಾರಗಳಿರುವ ಕಾರಣ ತನಿಖೆಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸರ್ಕಾರವೇ ಸಮಜಾಯಿಷಿ ನೀಡಿಬಿಟ್ಟಿದೆ.

ಇನ್ನು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗನಾದ್ದರಿಂದ, ಇಲ್ಲಿ ಆರೋಪಿಯೇ ತನಿಖಾಧಿಕಾರಿಗಳನ್ನು ‘ನೋಡ್ಕೋತೀನಿ’ ಎಂದು ಹೆದರಿಸುತ್ತಿರುವ ಸುದ್ದಿ ಹೊರಬಿದ್ದಿದೆ.

ಕಾಂಗ್ರೆಸ್ ಸರ್ಕಾರ ರಚನೆಯಾದ ಕೆಲವೇ ತಿಂಗಳುಗಳ ಅಂತರದಲ್ಲಿ, ಅಕ್ಟೋಬರ್ 2023ರಲ್ಲಿ, ಆದಾಯ ತೆರಿಗೆ ಅಧಿಕಾರಿಗಳು ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ಮಾಡಿ 42 ಕೋಟಿ ವಶಪಡಿಸಿಕೊಂಡರು. ಇದಾದ ಕೆಲವೇ ದಿನಗಳಲ್ಲಿ ಬಿಬಿಎಂಪಿ ಗುತ್ತಿಗೆದಾರ ಅಂಬಿಕಾಪತಿ, ಆತ್ಮಹತ್ಯೆಗೆ ಶರಣಾದರು. ಈ ಹಣ ಯಾರದ್ದು, ಇವರ ಆತ್ಮಹತ್ಯೆಗೆ ಕಾರಣವೇನು ಎಂಬ ಸತ್ಯ ಹೊರಬರಲೇ ಇಲ್ಲ. ಸರ್ಕಾರವೂ ಸಮಜಾಯಿಷಿ ನೀಡಲಿಲ್ಲ. ವಿರೋಧ ಪಕ್ಷಗಳೂ ಕೇಳಲಿಲ್ಲ.

ಒಂದಂತೂ ಸ್ಪಷ್ಟ, ಗುತ್ತಿಗೆದಾರ ಅಂಬಿಕಾಪತಿ ಆತ್ಮಹತ್ಯೆಯಿಂದ ಹಿಡಿದು ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯ ವರೆಗಿನ ಈ ಎಲ್ಲ ಪ್ರಕರಣಗಳಲ್ಲಿ ಅಪಾರ ಹಣದ ಹರಿವಿದೆ, ಅವ್ಯವಹಾರವಿದೆ, ಅಧಿಕಾರ ದುರ್ಬಳಕೆಯಿದೆ. ಈ ಪ್ರಕರಣಗಳಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಮತ್ತು ರಾಜಕೀಯ ನಾಯಕರೆಂಬ ಪ್ರಭಾವಿಗಳ ಅನೈತಿಕ ಸಂಬಂಧವಿದೆ. ಇದನ್ನು ತನಿಖೆ ಮಾಡುತ್ತಿರುವ ಎಸ್ಐಟಿ ಅಧಿಕಾರಿಗಳು, ಅಧಿಕಾರಸ್ಥರ ಮರ್ಜಿ-ಮುಲಾಜುಗಳ ಅಡಿಯಲ್ಲಿಯೇ ಕೆಲಸ ಮಾಡಬೇಕಿರುವುದರಿಂದ, ಅದೇ ಕಷ್ಟದ ಕೆಲಸವಾಗಿದೆ.

ಯಾವುದೇ ಪ್ರಕರಣವಾಗಲಿ, ಅದು ಹೊರಬಂದ ಹೊಸದರಲ್ಲಿ ಭಾರೀ ಸುದ್ದಿಯಾಗುತ್ತದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಯುದ್ಧವೇ ನಡೆದುಹೋಗುತ್ತದೆ. ಅದಕ್ಕೆ ತಕ್ಕಂತೆ ಸುದ್ದಿ ಮಾಧ್ಯಮಗಳು ಕಾವು ಕೊಟ್ಟು ಬೆಂಕಿ ಹಚ್ಚಿ ಜ್ವಲಂತ ಸಮಸ್ಯೆ ಎಂಬಂತೆ ಬಿಂಬಿಸುತ್ತವೆ. ಆದರೆ, ದಿನಗಳೆದಂತೆ ತಣ್ಣಗಾಗುತ್ತದೆ, ನೇಪಥ್ಯಕ್ಕೆ ಸರಿಯುತ್ತದೆ. ಮನುಷ್ಯರ ಮರೆವಿನ ಗುಣ, ಅಧಿಕಾರಸ್ಥರಿಗೆ ಅನುಕೂಲಕರ ವಾತಾವರಣ ನಿರ್ಮಿಸಿಕೊಡುತ್ತದೆ.

ಅಂದರೆ, ಈ ಆತ್ಮಹತ್ಯೆಗಳು, ಅವ್ಯವಹಾರಗಳು, ಬಂಧನಗಳು, ತನಿಖೆಗಳು, ವಿಚಾರಣೆಗಳು, ಮಾಧ್ಯಮಗಳ ಸುದ್ದಿಗಳು ಎಲ್ಲವೂ ಕಣ್ಣೊರೆಸುವ ತಂತ್ರಗಳೇ? ಪ್ರಭಾವಿಗಳಿಗೆ ಶಿಕ್ಷೆಯಾದ ಉದಾಹರಣೆಗಳಿವೆಯೇ? ಕಾಯ್ದೆ-ಕಾನೂನುಗಳೆಲ್ಲ ಬಡವರಿಗೆ ಮಾತ್ರ ಅನ್ವಯಿಸುತ್ತವೆಯೇ? ಎಂಬ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....