ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

Date:

ದೇಶದ ಯುವ ಜನತೆಯ ಕೈಗೆ ಕೆಲಸ ಕೊಟ್ಟು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ನೆರವಾಗಬೇಕಾದ, ನ್ಯಾಯ ಒದಗಿಸಬೇಕಾದ ವಿಚಾರದಲ್ಲಿ ಮೋದಿಯವರು ಕಳೆದ 10 ವರ್ಷಗಳಲ್ಲಿ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ. ದೇಶದ ಯುವಶಕ್ತಿಯನ್ನು ಬಳಸಿಕೊಂಡು ದೇಶದ ಕೀರ್ತಿಯನ್ನು ಜಗತ್ತಿನ ಬಲಾಢ್ಯ ದೇಶಗಳ ಮಟ್ಟಕ್ಕೆ ಏರಿಸಬೇಕಾದವರು- ಓಟಿಗಾಗಿ, ಕುರ್ಚಿಗಾಗಿ, ಸ್ವಾರ್ಥಕ್ಕಾಗಿ ಜೈ ಶ್ರೀರಾಮ್ ಮೊರೆ ಹೋಗಿದ್ದಾರೆ.

ಜನವರಿ 12, ಸ್ವಾಮಿ ವಿವೇಕಾನಂದರ ಜನ್ಮದಿನ. ಆ ದಿನವನ್ನು ರಾಷ್ಟ್ರೀಯ ‘ಯುವದಿನ’ವೆಂದು ಆಚರಿಸಲಾಗುತ್ತದೆ. ಆ ಯುವದಿನದಂದೇ ದೇಶದ ಯುವಜನತೆಗೆ ಸಂಬಂಧಿಸಿದಂತೆ ಮೂರು ಮಹತ್ವದ ಘಟನೆಗಳು ಜರುಗಿವೆ.

ಒಂದು, ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರದ ನಾಸಿಕ್‌ನ ತಪೋವನದಲ್ಲಿ ನಡೆದ ರಾಷ್ಟ್ರೀಯ ಯುವ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ‘ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ದಿನದಂದು ದೇಶಾದ್ಯಂತ ದೇಗುಲಗಳು ಹಾಗೂ ಪುಣ್ಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು’ ಎಂದು ಯುವ ಜನತೆಗೆ ಕರೆ ಕೊಟ್ಟಿದ್ದಾರೆ.

ಎರಡು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿವೇಕಾನಂದ ಅವರ ಜಯಂತಿ ದಿನವೇ ಯುವನಿಧಿ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಿ, ‘2022-23ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ 6 ತಿಂಗಳಿನಿಂದ ಉದ್ಯೋಗ ಸಿಗದೇ ಇರುವ ಪದವೀಧರ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ ಮತ್ತು ಡಿಪ್ಲೊಮಾ ತೇರ್ಗಡೆಯಾದ ನಿರುದ್ಯೋಗಿಗಳಿಗೆ ತಿಂಗಳಿಗೆ ₹1,500 ಸಿಗಲಿದೆ. ಎರಡು ವರ್ಷದವರೆಗೆ ಭತ್ಯೆ ಕೊಡುತ್ತೇವೆ. ಸ್ಕಿಲ್ ಟ್ರೈನಿಂಗ್ ಸಹ ಕೊಡುತ್ತೇವೆ. ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ಯುವಕ-ಯುವತಿಯರಿಗೆ ಆತ್ಮಸ್ಥೈರ್ಯ ಹೆಚ್ಚಿಸಬೇಕು’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು, ಕರ್ನಾಟಕ ಲೋಕಸೇವಾ ಆಯೋಗವು ಭ್ರಷ್ಟಾಚಾರದಿಂದ ಕೂಡಿದ್ದು, ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಗಳವರೆಗೆ, ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಕೂಡ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟಿಸಿದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿ ಕಂಬಿ ಹಿಂದಿ ಕೂರಿಸಿದ್ದಾರೆ.

ಪ್ರಧಾನಿ ಮೋದಿ ದೇಶದ ಯುವಜನತೆಗೆ ದೇಗುಲಗಳ ಕಸ ಗುಡಿಸಲು, ಭಜನೆ ಮಾಡಲು ಹೇಳಿದರೆ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರುದ್ಯೋಗಿ ಯುವಕರಿಗೆ ಭತ್ಯೆ ಕೊಡುತ್ತೇನೆ ಎಂದಿದ್ದಾರೆ. ಇವುಗಳ ನಡುವೆಯೇ, ನಿರುದ್ಯೋಗಿ ಪದವೀಧರರೊಬ್ಬರು ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ವಿಳಂಬನೀತಿಯ ಬಗ್ಗೆ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ದಾರೆ.

ಮೇಲಿನ ಮೂರೂ ಘಟನೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಸ್ವಾಮಿ ವಿವೇಕಾನಂದರು ದೇಶಕ್ಕೆ ಕೊಟ್ಟ ಕೊಡುಗೆ ಹಾಗೂ ಅವರ ಜನ್ಮದಿನದಂದು ನಾವು ಅವರಿಗೆ ತೋರುತ್ತಿರುವ ಗೌರವ ಗಮನಕ್ಕೆ ಬಂದು ಬೇಸರವಾಗುತ್ತದೆ. ಹಾಗೆಯೇ, ದೇಶದ ಯುವ ಜನತೆಯ ಘನಘೋರ ವಾಸ್ತವ ಸ್ಥಿತಿಯನ್ನು ಅನಾವರಣಗೊಳಿಸುತ್ತದೆ.

ದೇಶದ ಜನರ ಓದು, ತಿಳಿವಳಿಕೆ, ಜ್ಞಾನ ಕೌಶಲಗಳಿಗೆ ಅನುಗುಣವಾದ ದುಡಿಮೆಗಳು ದೊರೆತರೆ, ಆ ದುಡಿಮೆಗೆ ತಕ್ಕ ಸಂಭಾವನೆ ಸಿಕ್ಕರೆ, ಅದು ಸಾಮಾಜಿಕ ಚಲನಶೀಲತೆಗೆ ಕಾರಣವಾಗುತ್ತದೆ. ಜನರ ಕೈಯಲ್ಲಿ ಕಾಸು ಓಡಾಡಿದರೆ, ಅದು ಸಮಾಜ ಪ್ರಗತಿಯತ್ತ ದಾಪುಗಾಲು ಹಾಕಿ ದೇಶದ ಆರ್ಥಿಕತೆಗೆ ವೇಗ ಬರುತ್ತದೆ. ದೇಶವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತವರಿಗೆ ಇಷ್ಟು ಜ್ಞಾನವಿಲ್ಲದೆ ಹೋದರೆ, ಅಂಥ ದೇಶ ಅರಾಜಕತೆಯತ್ತ ಸಾಗಿ ಅಧೋಗತಿಗೆ ಇಳಿಯುತ್ತದೆ.

2016ರ ನವೆಂಬರ್‍‌ನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನೋಟು ರದ್ದತಿ ನಿರ್ಧಾರದಿಂದಾಗಿ ನಿರುದ್ಯೋಗ ಸಮಸ್ಯೆ ಉಲ್ಬಣಗೊಂಡಿತು. 2017ರ ಜೂನ್ 30ರ ಮಧ್ಯರಾತ್ರಿ ದೇಶದಾದ್ಯಂತ ಅಧಿಕೃತವಾಗಿ ಏಕರೂಪ ತೆರಿಗೆ ವ್ಯವಸ್ಥೆ(ಜಿಎಸ್‌ಟಿ) ಜಾರಿಗೆ ತಂದ ಪರಿಣಾಮವಾಗಿ ಸಣ್ಣ ಕೈಗಾರಿಕೆಗಳು ಸೊರಗಿದವು. 2018ರಲ್ಲಿ ನಿರುದ್ಯೋಗ ಪ್ರಮಾಣವು 45 ವರ್ಷಗಳಲ್ಲಿಯೇ ಗರಿಷ್ಠ ಮಟ್ಟ ತಲುಪಿ ಆಘಾತ ಮೂಡಿಸಿತು. 2019 ಮತ್ತು 2020ರ ಬಳಿಕ, ಕೋವಿಡ್ ಸಾಂಕ್ರಾಮಿಕ ರೋಗ ಉಲ್ಭಣಗೊಂಡು ಪರಿಸ್ಥಿತಿ ಇನ್ನಷ್ಟು ಹದಗೆಡುವಂತೆ ಮಾಡಿತು. ಈ ಅವಧಿಯಲ್ಲಿ ಕನಿಷ್ಠ ಒಂದು ಕೋಟಿ ಉದ್ಯೋಗಗಳು ನಷ್ಟವಾಗಿದ್ದವು.

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ, ಭಾರೀ ಪ್ರಚಾರ ಪಡೆದ ಪ್ರಧಾನಿ ಮೋದಿಯವರು, ಯುವ ಜನತೆ ಕೆಲಸ ಕೇಳಿದಾಗ ಪಕೋಡ ಮಾರಿ ಎಂದರು. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿರುವ ಈಗ, ಪ್ರಧಾನಿಯವರು ಶ್ರೀರಾಮನ ಭಜನೆ ಶುರು ಮಾಡಿದ್ದಾರೆ. ದೇವರು-ಧರ್ಮದ ಅಮಲು ಏರಿಸಿ, ದೇಗುಲದ ಕಸ ಗುಡಿಸಿ ಎಂದು ಯುವ ಜನತೆಗೆ ಕರೆ ಕೊಟ್ಟಿದ್ದಾರೆ.

ದೇಶದ ಯುವ ಜನತೆಯ ಕೈಗೆ ಕೆಲಸ ಕೊಟ್ಟು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ನೆರವಾಗಬೇಕಾದ, ನ್ಯಾಯ ಒದಗಿಸಬೇಕಾದ ವಿಚಾರದಲ್ಲಿ ಮೋದಿಯವರು ಕಳೆದ 10 ವರ್ಷಗಳಲ್ಲಿ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ. ದೇಶದ ಯುವಶಕ್ತಿಯನ್ನು ಬಳಸಿಕೊಂಡು ದೇಶದ ಕೀರ್ತಿಯನ್ನು ಜಗತ್ತಿನ ಬಲಾಢ್ಯ ದೇಶಗಳ ಮಟ್ಟಕ್ಕೆ ಏರಿಸಬೇಕಾದವರು- ಓಟಿಗಾಗಿ, ಕುರ್ಚಿಗಾಗಿ, ಸ್ವಾರ್ಥಕ್ಕಾಗಿ ಜೈ ಶ್ರೀರಾಮ್ ಮೊರೆ ಹೋಗಿದ್ದಾರೆ.

‘ಯಾವ ಸಮಾಜ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಆ ಸಮಾಜದಲ್ಲಿ, ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ’ ಎಂದಿದ್ದ ವಿವೇಕಾನಂದರ ಈ ಮಾತು- ದೇಶದ ಯುವ ಜನತೆಗೆ ಅರ್ಥವಾದರೆ, ಅದು 2024ರ ಚುನಾವಣೆಯಲ್ಲಿ ಪ್ರತಿಬಿಂಬಿತವಾದರೆ, ದೇಶ ಮತ್ತು ಜನ- ಇಬ್ಬರೂ ಉಳಿಯುತ್ತಾರೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....