ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

Date:

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ಅಧ್ಯಕ್ಷನಾಗಿ, ಐಸಿಸಿ ಅಧ್ಯಕ್ಷನಾಗಿ ಮೆರೆಯತೊಡಗಿದರು. ಆಟಗಾರನಲ್ಲದ ಜಯ್ ಶಾ, ಗೌತಮ್ ಗಂಭೀರ್‍‌ನಂತಹ ಕೋಮುವಾದಿಯನ್ನು ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ನೇಮಕ ಮಾಡಿದರು. ಮೋದಿಯ ಕಾಲದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಕೇಸರಿಕರಣವಾದಂತೆ, ಆಟದ ಅಂಗಳವೂ ಕೇಸರಿಕರಣವಾಯಿತು. 

ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಪ್ರದರ್ಶನ ಕಂಡು ಅಭಿಮಾನಿಗಳು ಭಾರಿ ಬೇಸರದಲ್ಲಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನೇ ಸೋಲದ ಭಾರತ, ಈ ಬಾರಿ ಆಟಗಾರರ ಕಳಪೆ ಪ್ರದರ್ಶನದಿಂದ ಸರಣಿ ಸೋತಿದೆ. ಸೋಲನ್ನು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸಬೇಕಾದ ಮಾಜಿ ಕ್ರಿಕೆಟಿಗರು ಕೂಡ ಭಾರತ ತಂಡದ ಪ್ರದರ್ಶನಕ್ಕೆ ಕಿಡಿ ಕಾರಿದ್ದಾರೆ. ಮೊದಲು ಆಟಗಾರರ ಮೇಲಿದ್ದ ಕೋಪ ಈಗ ಮುಖ್ಯ ಕೋಚ್ ಗೌತಮ್ ಗಂಭೀರ್ ಕಡೆ ತಿರುಗಿದೆ.

ರಾಹುಲ್ ದ್ರಾವಿಡ್‌ರಂತಹ ಅಪರೂಪದ ಆಟಗಾರ ಮುಖ್ಯ ಕೋಚ್ ಹುದ್ದೆಯಿಂದ ನಿರ್ಗಮಿಸಿದ ನಂತರ, ಆರು ತಿಂಗಳ ಹಿಂದೆ ಆ ಸ್ಥಾನಕ್ಕೆ ಮತ್ತೊಬ್ಬ ಹಿರಿಯ ಆಟಗಾರ ಗೌತಮ್ ಗಂಭೀರ್ ನೇಮಕವಾದರು. ಮೊದಲಿಗೆ ಶ್ರೀಲಂಕಾದಲ್ಲಿ ಟಿ20 ಸರಣಿ ಗೆದ್ದರು. ಅದೇ ಹುಮ್ಮಸ್ಸಿನಲ್ಲಿ ಆಟಗಾರರನ್ನು ಆಯ್ಕೆ ಮಾಡಿಕೊಂಡ ಗಂಭೀರ್, ಏಕದಿನ ಮತ್ತು ಟಿಸ್ಟ್ ಸರಣಿ ಸೋತು ಭಾರಿ ಮುಖಭಂಗಕ್ಕೀಡಾದರು.

ಶ್ರೀಲಂಕಾ ವಿರುದ್ಧ ಭಾರತ ಕಳೆದ 27 ವರ್ಷಗಳಲ್ಲಿ ಯಾವುದೇ ಸರಣಿ ಸೋತಿರಲಿಲ್ಲ. ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಸೋತಿದ್ದು ಹಲವರ ಕೆಂಗಣ್ಣಿಗೆ ಗುರಿಯಾಯಿತು. ಆಗಲೇ ಅವರನ್ನು ಕೋಚ್ ಸ್ಥಾನದಿಂದ ವಜಾ ಮಾಡಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಅನುಭವಿಗಳನ್ನು ನೇಮಿಸುವಂತೆ ಬಿಸಿಸಿಐಗೆ ಒತ್ತಾಯಿಸಲಾಗಿತ್ತು. ಆದರೂ ಅವರನ್ನೇ ಮುಂದುವರೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನಂತರ, ನ್ಯೂಜಿಲೆಂಡ್ ವಿರುದ್ಧದ ಸರಣಿ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಮೊದಲನೇ ಇನ್ನಿಂಗ್ಸ್‌ನಲ್ಲಿ 46 ರನ್‌ಗಳಿಗೆ ಆಲೌಟ್ ಆಗಿದ್ದು ಮತ್ತೊಂದು ಆಘಾತ ನೀಡಿತ್ತು. ಕಳೆದ 12 ವರ್ಷಗಳಲ್ಲಿ ಒಂದೇ ಒಂದು ಟೆಸ್ಟ್ ಸರಣಿಯನ್ನು ಸೋಲದೆ ಮೆರೆಯುತ್ತಿದ್ದ ಭಾರತ ತಂಡ ತವರಿನಲ್ಲೇ ಸರಣಿ ಸೋಲಿನ ಅವಮಾನ ಅನುಭವಿಸಿತು.

ಇದನ್ನು ಓದಿದ್ದೀರಾ?: ತನ್ನ ಕಳಪೆ ಪ್ರದರ್ಶನವನ್ನು ಒಪ್ಪಿಕೊಂಡ ವಿರಾಟ್ ಕೊಹ್ಲಿ

ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತಾಗಲೇ ಭಾರತ ಕ್ರಿಕೆಟ್ ತಂಡ, ಮುಖ್ಯ ಕೋಚ್ ಮತ್ತು ಬಿಸಿಸಿಐ ಎಚ್ಚೆತ್ತುಕೊಳ್ಳಬೇಕಾಗಿತ್ತು. ನಿಸ್ಸೀಮ ಉದಾಸೀನತೆಯಲ್ಲಿಯೇ ಆಸ್ಟ್ರೇಲಿಯಾಕ್ಕೆ ತೆರಳಿದರು. ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಗೆದ್ದಾಗ, ಟೆಸ್ಟ್ ರ್‍ಯಾಕಿಂಗ್‌ನಲ್ಲಿ ಭಾರತ ಕ್ರಿಕೆಟ್ ತಂಡ ಮೊದಲ ಸ್ಥಾನದಲ್ಲಿದ್ದಾಗ, ಕೊಬ್ಬಿನಿಂದ ಕುಣಿದಾಡಿದರು.

ಆನಂತರ ನಡೆದದ್ದೇ ಬೇರೆ. ಮೂರು ಪಂದ್ಯಗಳನ್ನು ಗೆದ್ದು ಬೀಗಿದ ಆಸ್ಟ್ರೇಲಿಯಾ ತಂಡ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವ ಭಾರತದ ಭರವಸೆಯನ್ನು ಭಗ್ನಗೊಳಿಸಿತು. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ಭಾರತವೇ ಅವಕಾಶ ಮಾಡಿಕೊಟ್ಟಿತು.

ಆಸ್ಟ್ರೇಲಿಯಾ ಬಲಿಷ್ಠ ತಂಡವಾಗಿರಬಹುದು. ಅದಕ್ಕೂ ಕೂಡ ಪೈಪೋಟಿ ನೀಡಬಲ್ಲ ಪ್ರತಿಭಾನ್ವಿತ ಆಟಗಾರರು ನಮ್ಮ ತಂಡದಲ್ಲಿದ್ದರು. ಆದರೂ ಸೋತರು. ಸೋಲಿಗೆ ಕಾರಣ ಹುಡುಕಿದರೆ, ಮೊದಲಿಗೆ ಸಮರ್ಥ ನಾಯಕನಿಲ್ಲದ್ದು, ಆಟಗಾರರ ನಡುವೆ ಒಮ್ಮತವಿಲ್ಲದ್ದು ಎದ್ದು ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಆಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸದಾ ಸಿಡುಕುವ ಗಂಭೀರ ಸ್ವಭಾವದ ಗಂಭೀರ್‍‌ನಿಂದಾಗಿಯೇ ಆಟ ಹಾಳಾಗಿದ್ದು ಮನವರಿಕೆಯಾಗಿದೆ.

ಗೌತಮ್ ಗಂಭೀರ್‍‌ಗೂ ಮುಂಚೆ ರಾಹುಲ್ ದ್ರಾವಿಡ್‌ರಂತಹ ಸಹನಾಮೂರ್ತಿ, ಭಾರತ ತಂಡದ ಮುಖ್ಯ ಕೋಚ್ ಆಗಿದ್ದರು. ಅವರ ಅಪಾರ ಅನುಭವ ಮತ್ತು ಶಿಸ್ತುಬದ್ಧ ತರಬೇತಿಯಿಂದ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಿದ್ದರು. ಅಷ್ಟೇ ಅಲ್ಲ, 2025ರ ಚಾಂಪಿಯನ್ಸ್ ಟ್ರೋಫಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, 2026ರಲ್ಲಿ ನಡೆಯುವ ಟಿ20 ವಿಶ್ವಕಪ್, 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸಿದ್ದರು.

ದ್ರಾವಿಡ್ ಎಂದಾಕ್ಷಣ ಎಲ್ಲರೂ ಹೇಳುವ ಮಾತು ಒಂದೆ- ಜಂಟಲ್‌ಮನ್. ಮೃದು ಮಾತಿನ, ಸೌಮ್ಯ ಸ್ವಭಾವದ, ಅಪಾರ ತಾಳ್ಮೆ, ಸಹನೆಯ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರಥಮ ಕ್ರಿಕೆಟಿಗ. ಗೆದ್ದಾಗ ಮೆರೆಯದ, ಸೋತಾಗ ಸೊರಗದ ಸ್ಥಿತಪ್ರಜ್ಞ. ಮೈದಾನದಿಂದ ಒಳಗೆ ಮತ್ತು ಹೊರಗೆ, ಸಂಯಮದ ನಡೆ-ನುಡಿಗೆ ಹೆಸರಾದವರು. ತಾನೊಬ್ಬ ಸ್ಟಾರ್ ಎಂಬ ಅಹಂನಿಂದ ಆಚೆಗೆ ನಿಂತವರು.

ಆದರೆ ಇದೇ ಮಾತುಗಳನ್ನು ಗೌತಮ್ ಗಂಭೀರ್ ಅವರಿಗೆ ಅನ್ವಯಿಸಿ ಹೇಳಲಾಗುವುದಿಲ್ಲ. ಗಂಭೀರ್ ಭಾರತ ತಂಡವನ್ನು ಪ್ರತಿನಿಧಿಸುವಾಗ, ಉತ್ತಮ ಓಪನರ್ ಆಗಿ, ತಂಡವನ್ನು ಗೆಲ್ಲಿಸಿದ್ದರೂ, ಸಿಡುಕಿನ ಸ್ವಭಾವದಿಂದಾಗಿ ಆಟದ ಸೊಗಸನ್ನು ಹಾಳು ಮಾಡಿದವರು. ಅದರಲ್ಲೂ ಪಾಕಿಸ್ತಾನದ ಆಟಗಾರರೊಂದಿಗೆ ವಿನಾಕಾರಣ ಕಾಲು ಕೆರೆದು ಜಗಳಕ್ಕೆ ನಿಲ್ಲುವ, ವಿವಾದ ಹುಟ್ಟುಹಾಕುವ, ಆಟದಲ್ಲೂ ಧರ್ಮ ಎಳೆದು ತರುವ ಜಗಳಗಂಟರು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ಇದು ಸಹಜವಾಗಿಯೇ ಸಂಘಪರಿವಾರ ಮತ್ತು ಬಿಜೆಪಿಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಪಾಕಿಸ್ತಾನ ಮತ್ತು ಮುಸ್ಲಿಮರನ್ನು ದ್ವೇಷಿಸುವ ಜನರ ಕಣ್ಣಿಗೆ ಗಂಭೀರ್ ಉಗ್ರ ಹಿಂದುತ್ವವಾದಿಯಂತೆ ಕಾಣತೊಡಗಿತ್ತು. ಹಳಸಿದ ಬಿಜೆಪಿ ಮತ್ತು ಹಸಿದ ಗಂಭೀರ್ ಒಂದಾದರು. ಜನಪ್ರಿಯ ಆಟಗಾರ ರಾಜಕಾರಣಿಯಾದರು. 2019ರಲ್ಲಿ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದರು. ಗಂಭೀರ್ ಗೆದ್ದು ಸಂಸದರಾದರು. ಗೆದ್ದ ಸಂಸದನಿಗೆ ಬಿಜೆಪಿ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತು. ಅಲ್ಲಿಗೆ ಒಬ್ಬ ಉತ್ತಮ ಆಟಗಾರ ಮರೆಯಾಗಿ, ಸಂಘಪರಿವಾರ ಮತ್ತು ಬಿಜೆಪಿ ಬಯಸುವ ಕೋಮುವಾದಿಯಾಗಿ ಮಾರ್ಪಟ್ಟಿದ್ದರು.

ಅದಕ್ಕೆ ಪೂರಕವಾಗಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ಅಧ್ಯಕ್ಷನಾಗಿ, ಐಸಿಸಿ ಅಧ್ಯಕ್ಷನಾಗಿ ಮೆರೆಯತೊಡಗಿದರು. ಆಟಗಾರನಲ್ಲದ ಜಯ್ ಶಾ, ಗೌತಮ್ ಗಂಭೀರ್‍‌ನಂತಹ ಕೋಮುವಾದಿಯನ್ನು ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ನೇಮಕ ಮಾಡಿದರು. ಮೋದಿಯ ಕಾಲದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಕೇಸರಿಕರಣವಾದಂತೆ, ಆಟದ ಅಂಗಳವೂ ಕೇಸರಿಕರಣವಾಯಿತು. ಪರಿಶುದ್ಧ ಆಟ ಪರಲೋಕವಾಸಿಯಾಯಿತು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....