ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

Date:

ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಹಣದುಬ್ಬರದಿಂದ ತತ್ತರಿಸಿಹೋಗಿರುವ ದೇಶದ ಜನತೆ, ಬಿಜೆಪಿ ನಾಯಕರು ಎದುರಾದಲ್ಲೆಲ್ಲ ಚುನಾವಣಾ ಬಾಂಡ್ ಎಂಬ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸುವ ಧೈರ್ಯ ತೋರಬೇಕಾಗಿದೆ. ಉತ್ತರ ಪಡೆಯುವ ಹಕ್ಕು ಅವರಿಗಿದೆ. ಅದನ್ನು ನಮ್ಮ ನ್ಯಾಯಾಂಗ ವ್ಯವಸ್ಥೆ ಮತ್ತು ಸಂವಿಧಾನ ಕಲ್ಪಿಸಿಕೊಟ್ಟಿದೆ.

ರಾಜಕೀಯ ಪಕ್ಷಗಳಿಗೆ ಹೆಸರು ಬಹಿರಂಗಪಡಿಸದೆ ದೇಣಿಗೆಯನ್ನು ನೀಡಲು ಅವಕಾಶ ಮಾಡಿಕೊಟ್ಟಿದ್ದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ, ಮಾಹಿತಿ ಹಕ್ಕಿನ ಉಲ್ಲಂಘನೆ ಹಾಗೂ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಖಾತರಿಪಡಿಸುವ ಸಂವಿಧಾನದ 14ನೇ ವಿಧಿಯ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ತಕ್ಷಣದಿಂದಲೇ ಚುನಾವಣಾ ಬಾಂಡ್‌ಗಳ ಮಾರಾಟ ನಿಲ್ಲಿಸುವಂತೆ ನ್ಯಾಯಾಲಯ ಸೂಚಿಸಿ ಇಲ್ಲಿಗೆ ಒಂದು ವಾರ ಕಳೆದಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದ ಬಿಜೆಪಿ, 2018ರಿಂದ ಇಲ್ಲಿಯವರೆಗೆ ಬಾಂಡ್ ಬಗೆಗಿನ ಆಕ್ಷೇಪಗಳಿಗೆ ಉತ್ತರಿಸದೇ ನಿರ್ಲಕ್ಷಿಸಿತ್ತು. ಕೆಲವರು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದಾಗ, ದೇಣಿಗೆಯ ಮೂಲವನ್ನು ತಿಳಿಯುವ ಹಕ್ಕು ನಾಗರಿಕರಿಗಿಲ್ಲ ಎಂದು ವಾದಿಸಿತ್ತು. ಚುನಾವಣಾ ಬಾಂಡ್ ಮೂಲಕ ಬರುವ ದೇಣಿಗೆಯನ್ನು ಕಾನೂನುಬದ್ಧ ಎಂದು ಸಮರ್ಥಿಸಿಕೊಂಡಿತ್ತು.

ಈಗ ಅದೇ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಕಾನೂನುಬಾಹಿರವೆಂದು ರದ್ದುಗೊಳಿಸಿದೆ. ಈ ತೀರ್ಪು ಪ್ರಜಾಪ್ರಭುತ್ವದ ಮೂಲ ತತ್ವವನ್ನು ಎತ್ತಿ ಹಿಡಿದಿದೆ. ದೇಶದ ಜನರ ಪ್ರಶ್ನಿಸುವ ಹಕ್ಕನ್ನು ಜೀವಂತವಾಗಿರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುತೂಹಲಕರ ಸಂಗತಿ ಎಂದರೆ, ಸುಪ್ರೀಂ ಕೋರ್ಟ್ ತೀರ್ಪು ಬಂದು ಒಂದು ವಾರ ಕಳೆದಿದೆ. ಚುನಾವಣಾ ಬಾಂಡ್ ಎಂಬ ಕಾನೂನುಬದ್ಧ ಲಂಚವನ್ನು ಹುಟ್ಟುಹಾಕಿದ, ಕೋಟ್ಯಂತರ ರೂಪಾಯಿಗಳ ಕಾರ್ಪೊರೇಟ್ ದೇಣಿಗೆಯನ್ನು ತಿಜೋರಿಗೆ ತುಂಬಿಕೊಂಡ, ಅದರ ಬಲದಿಂದ ಅಕ್ರಮವಾಗಿ ಚುನಾವಣೆಗಳನ್ನು ಗೆದ್ದು ಅಧಿಕಾರಕ್ಕೇರಿದ ಬಿಜೆಪಿ- ಪ್ರತಿಕ್ರಿಯಿಸದೆ ಮೌನಕ್ಕೆ ಶರಣಾಗಿದೆ.

ಮಾತನಾಡಬೇಕಾದ ಪ್ರಧಾನಿ ಮೋದಿಯವರು, ತಮ್ಮನ್ನು ತಾವು ಶ್ರೀಕೃಷ್ಣ ಪರಮಾತ್ಮನ ಅಪರಾವತಾರ ಎಂದಿದ್ದಾರೆ. ಕೃಷ್ಣ-ಕುಚೇಲನ ಅವಲಕ್ಕಿ ಪ್ರಸಂಗವನ್ನು ಪ್ರಸ್ತಾಪಿಸಿ, ಸಾವಿರಾರು ಕೋಟಿಗಳ ದೇಣಿಗೆಯನ್ನು ಅವಲಕ್ಕಿ ಎಂದಿದ್ದಾರೆ. ಇದೊಂದು ಲಘು ಪ್ರಸಂಗ ಎಂದು ದೇಶದ ಜನತೆಗೆ ಸಂದೇಶ ರವಾನಿಸಿದ್ದಾರೆ. ಆ ಮೂಲಕ ಸುಪ್ರೀಂ ಕೋರ್ಟಿನ ಐತಿಹಾಸಿಕ ತೀರ್ಪನ್ನು ಲೇವಡಿ ಮಾಡಿದ್ದಾರೆ.

ಫೆ. 19ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿಯವರು, ‘ಸುಧಾಮನು ಶ್ರೀಕೃಷ್ಣನಿಗೆ ಅವಲಕ್ಕಿ ನೀಡುವುದು ಈ ಕಾಲದಲ್ಲಾಗಿದ್ದರೆ, ಬದಲಾದ ಕಾಲದಲ್ಲಿ ಆ ವಿಡಿಯೊ ಹೊರಬಂದರೆ, ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗುತ್ತದೆ. ಇಲ್ಲಿ ಭ್ರಷ್ಟಾಚಾರ ನಡೆದಿದೆ, ಶ್ರೀಕೃಷ್ಣನು ಭ್ರಷ್ಟಾಚಾರ ಮಾಡುತ್ತಿದ್ದಾನೆ ಎಂಬ ತೀರ್ಪು ಬರುತ್ತದೆ’ ಎಂದು ಸಾರ್ವಜನಿಕ ಸಮಾರಂಭದಲ್ಲಿ ವ್ಯಂಗ್ಯವಾಡಿದ್ದಾರೆ. ಚುನಾವಣಾ ಬಾಂಡ್ ಅಸಂವಿಧಾನಿಕ ಎಂಬ ಸುಪ್ರೀಂ ತೀರ್ಪಿಗೆ ತಿಪ್ಪೆ ಸಾರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್‌ಗಳ ಕತೆ ಆರ್‍‌ಟಿಐ ಮಾಹಿತಿಗಳ ಮೂಲಕ ಒಂದೊಂದಾಗಿ ಬಿಚ್ಚಿಕೊಳ್ಳತೊಡಗಿದೆ. ಕಳೆದ ಕೆಲವು ವರ್ಷಗಳಲ್ಲಿ ಚುನಾವಣಾ ಬಾಂಡ್ ಖರೀದಿಸಿದ, ಖರೀದಿಸದೆ ದಾಳಿಗೆ ತುತ್ತಾದ 30 ಕಂಪನಿಗಳ ಕತೆ ಹೊರಬಿದ್ದಿದೆ. ಈ 30 ಕಂಪನಿಗಳಿಂದ ಬಿಜೆಪಿಯ ತಿಜೋರಿಗೆ ಒಟ್ಟು 335 ಕೋಟಿ ರೂಪಾಯಿಗಳು ದೇಣಿಗೆಯ ರೂಪದಲ್ಲಿ ಹರಿದು ಬಂದಿದೆ. ಕುತೂಹಲಕರ ವಿಷಯವೆಂದರೆ, ಈ 30 ಕಂಪನಿಗಳು ಇದೇ ಅವಧಿಯಲ್ಲಿ ಕೇಂದ್ರ ಸರಕಾರದ ಏಜೆನ್ಸಿಗಳಿಂದ ದಾಳಿಯನ್ನು ಎದುರಿಸಿದ್ದವು. ಕೆಲವು ಕಂಪನಿಗಳು ಈ ಏಜೆನ್ಸಿಗಳ ದಾಳಿಗೆ ಗುರಿಯಾದ ಬಳಿಕ ಬಿಜೆಪಿಗೆ ಹೆಚ್ಚಿನ ದೇಣಿಗೆಯನ್ನೂ ನೀಡಿದ್ದವು. ಈ 30 ಕಂಪನಿಗಳಷ್ಟೇ ಅಲ್ಲ, ಇನ್ನೂ ಹಲವಾರು ಕಾರ್ಪೊರೇಟ್ ಕಂಪನಿಗಳಿಂದ ಹಣ ಹರಿದು ಬಂದಿದೆ. ಆ ಕಂಪನಿಗಳು ಯಾವುವು, ಅವುಗಳ ಮೇಲೆ ಹೊರಿಸಲಾದ ಆರೋಪವೇನು, ಬೆದರಿಸಲಾದ ಕ್ರಮವೇನು ಎಂಬ ಸತ್ಯ ಕೂಡ ಹೊರಬರಬೇಕಾಗಿದೆ. ಸತ್ತಂತಿರುವ ವಿರೋಧ ಪಕ್ಷಗಳು ಎಚ್ಚರಗೊಳ್ಳದಿದ್ದರೆ, ಭವಿಷ್ಯದಲ್ಲಿ ಭಾರತ ಸರ್ವಾಧಿಕಾರಿಯ ತೆಕ್ಕೆಗೆ ಸರಿಯಲಿದೆ.

2014ರಲ್ಲಿ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದೆ ಎಂದು 2ಜಿ ಸ್ಪೆಕ್ಟ್ರಮ್ ಹಗರಣವನ್ನು ಬಯಲಿಗೆಳೆದು ಭಾರೀ ಸದ್ದು ಮಾಡಿ, ಅಧಿಕಾರಕ್ಕೆ ಬಂದ ಬಿಜೆಪಿ, ಈಗ ಅದಕ್ಕಿಂತ ನೂರಾರುಪಟ್ಟು ಹೆಚ್ಚಿನ ಭಾರೀ ಬಾಂಡ್ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದೆ. ಬಿಜೆಪಿಗೆ ಬಗ್ಗದ ವ್ಯಕ್ತಿ, ಸಂಸ್ಥೆಗಳ ಮೇಲೆ ಸರ್ಕಾರಿ ಏಜೆನ್ಸಿಗಳಾದ ಐಟಿ, ಇಡಿ, ಸಿಬಿಐಗಳ ಮೂಲಕ ದಾಳಿ ಮಾಡಿಸಿ, ಬೆದರಿಸಿ ಚುನಾವಣಾ ಬಾಂಡ್ ಎಂಬ ದೇಣಿಗೆಯ ರೂಪದಲ್ಲಿ ಹಣ ಸಂಗ್ರಹಿಸಿದೆ. ಇದು ಬಿಜೆಪಿಯ ಅಧಿಕಾರ ದುರುಪಯೋಗ, ಇದು ಬಿಜೆಪಿಯ ಬ್ಲ್ಯಾಕ್ ಮೇಲ್ ರಾಜಕಾರಣ, ಇದು ಲಂಚವನ್ನು ದೇಣಿಗೆ ಎಂದು ಕಾನೂನುಬದ್ಧಗೊಳಿಸಿದ ನೀಚ ಕ್ರಮ.

ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಹಣದುಬ್ಬರದಿಂದ ತತ್ತರಿಸಿಹೋಗಿರುವ ದೇಶದ ಜನತೆ, ಬಿಜೆಪಿ ನಾಯಕರು ಎದುರಾದಲ್ಲೆಲ್ಲ ಚುನಾವಣಾ ಬಾಂಡ್ ಎಂಬ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸುವ ಧೈರ್ಯ ತೋರಬೇಕಾಗಿದೆ. ಉತ್ತರ ಪಡೆಯುವ ಹಕ್ಕು ಅವರಿಗಿದೆ. ಅದನ್ನು ನಮ್ಮ ನ್ಯಾಯಾಂಗ ವ್ಯವಸ್ಥೆ ಮತ್ತು ಸಂವಿಧಾನ ಕಲ್ಪಿಸಿಕೊಟ್ಟಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....