ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

Date:

ಪ್ರಧಾನಿ ಮೋದಿಯವರು ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳುತ್ತಾರೆಂದರೆ, ಅದು ಸಂವಿಧಾನ ಉಳಿಸುವುದಕ್ಕಲ್ಲ, ಕಾಂಗ್ರೆಸ್ಸನ್ನು ತೆಗಳುವುದಕ್ಕೆ. ಇದು ಬೂತದ ಬಾಯಲ್ಲಿ ಭಗವದ್ಗೀತೆಯಷ್ಟೇ. ಇದನ್ನು ದೇಶದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ, ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೊಂದೇ ಸರಿಯಾದ ಅಸ್ತ್ರ ಎನ್ನುವುದನ್ನು ಅರಿಯಬೇಕಾಗಿದೆ.

ಜೂನ್ 25- ಭಾರತ ದೇಶ ಕಂಡ ಕರಾಳ ದಿನ. 1975ರಲ್ಲಿ ಕಾಂಗ್ರೆಸ್ ಪಕ್ಷದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಜೂನ್ 25 ರಂದು ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಪಾರ್ಲಿಮೆಂಟಿನ ಜಂಟಿ ಸಮಿತಿಯ ಬೆಂಗಳೂರಿನ ಸಭೆಗೆ ಆಗಮಿಸಿದ್ದ ಅಂದಿನ ಜನಸಂಘದ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಎಲ್.ಕೆ. ಅಡ್ವಾಣಿ ಸಹಿತ 29 ಲೋಕಸಭಾ ಸದಸ್ಯರನ್ನು ತುರ್ತುಪರಿಸ್ಥಿತಿಯ ಘೋಷಣೆಯ ಕಾರಣಕ್ಕಾಗಿ ಬಂಧಿಸಲಾಗಿತ್ತು. ದೇಶದಲ್ಲಿ 21 ತಿಂಗಳ ಕಾಲ ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ಕಾಂಗ್ರೆಸ್ ಪಕ್ಷದ ಅಂದಿನ ಆ ಕರಾಳ ಕ್ರಮದಿಂದ ಲೋಕಸಭಾ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರ ಸಹಿತವಾಗಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನ್ನು ಅನುಭವಿಸಿತು.

ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ಜನಸಂಘಿಗಳು ಪ್ರತಿವ‍ರ್ಷ ಜ್ಞಾಪಿಸಿಕೊಳ್ಳುತ್ತಾರೆ. ಮನಸೋಇಚ್ಛೆ ಕಾಂಗ್ರೆಸ್ಸಿನ ಸಂವಿಧಾನವಿರೋಧಿ ಕ್ರಮವನ್ನು ಖಂಡಿಸುತ್ತಾರೆ. ಅಸಲಿಗೆ ಜನಸಂಘಿಗಳು ರಾಜಕಾರಣದತ್ತ ಹೊರಳಲು ಕಾರಣವಾಗಿದ್ದೇ ತುರ್ತು ಪರಿಸ್ಥಿತಿ. ಅದನ್ನು ಅವರು ಮರೆಮಾಚಿ, ಸಂವಿಧಾನ ರಕ್ಷಕರು ನಾವೇ ಎಂಬ ಪೋಸು ಕೊಡಲು ಹವಣಿಸುತ್ತಾರೆ.

ಅದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮುಂದುವರೆಸಿದ್ದಾರೆ. ನಿನ್ನೆ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ‘ಜೂನ್ 25ಕ್ಕೆ ಭಾರತದ ಪ್ರಜಾಪ್ರಭುತ್ವಕ್ಕೆ ಕಳಂಕ ತಂದು 50 ವರ್ಷಗಳು ಕಳೆದಿವೆ. ಸಂವಿಧಾನವನ್ನು ತಿರಸ್ಕರಿಸಿದ್ದನ್ನು, ಸಂವಿಧಾನ ಪ್ರತಿಯನ್ನು ಚೂರು ಚೂರಾಗಿ ಹರಿದಿದ್ದನ್ನು, ದೇಶವನ್ನೇ ಜೈಲಾಗಿಸಿದ್ದನ್ನು, ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹತ್ತಿಕ್ಕಿದ್ದನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ. ಅಂತಹ ಕೆಡುಕಿನ ಕೃತ್ಯಕ್ಕೆ ದೇಶವಾಸಿಗಳು ಕೈಹಾಕುವುದಿಲ್ಲ. ಅದೊಂದು ಕರಾಳ ಅಧ್ಯಾಯ. ನಾವು ಇನ್ನುಮುಂದೆ ಭಾರತದ ಸಂವಿಧಾನದ ನಿರ್ದೇಶನದಂತೆ ಸಾಮಾನ್ಯ ಜನರ ಕನಸುಗಳನ್ನು ಈಡೇರಿಸುವ ನಿರ್ಣಯವನ್ನು ತೆಗೆದುಕೊಳ್ಳುತ್ತೇವೆ’ ಎಂದು ಭರವಸೆಯನ್ನಿತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿಯವರು ಪ್ರಮಾಣ ವಚನ ಸ್ವೀಕರಿಸಲು ಸಿದ್ಧವಾಗುತ್ತಿದ್ದಂತೆ ಇಂಡಿಯಾ ಒಕ್ಕೂಟದ ಸದಸ್ಯರು, ಸಂವಿಧಾನ ಪ್ರತಿಯನ್ನು ಎತ್ತಿ ಹಿಡಿಯುವ ಮೂಲಕ, ಸಂವಿಧಾನವನ್ನು ನೆನಪಿಸಿದರು. ಅಲ್ಲದೆ ರಾಹುಲ್ ಗಾಂಧಿ, ‘ಸಂವಿಧಾನ ಉಳಿಸಲು ನಾವು ಕಟಿಬದ್ಧರಾಗಿದ್ದೇವೆ. ಆದ್ದರಿಂದ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸಂವಿಧಾನ ಪುಸ್ತಕ ಹಿಡಿದಿದ್ದೇವೆ. ಯಾವ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನಾವು ಸಾರುತ್ತಿದ್ದೇವೆ’ ಎಂದರು.

ರಾಹುಲ್ ಗಾಂಧಿ ಹೀಗೆ ಹೇಳಲು ಕಾರಣ ಬಿಜೆಪಿಯೇ. ಕಳೆದ ಹತ್ತು ವರ್ಷಗಳ ಉದ್ದಕ್ಕೂ ಬಿಜೆಪಿ ಸರ್ಕಾರ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಬಹಿರಂಗವಾಗಿ ಹೇಳಲಿಲ್ಲ. ಬದಲಿಗೆ, ಸಂವಿಧಾನದ ಕೀಳುಗಳನ್ನು ಕಳಚುತ್ತಾ, ಇಂಚಿಂಚು ಕೊಲ್ಲುತ್ತಾ ಸಾಗಿತ್ತು. ದೇಶದ ಶಾಶ್ವತ ವಿರೋಧ ಪಕ್ಷವಾದ ಸುದ್ದಿ ಮಾಧ್ಯಮಗಳನ್ನು ಖರೀದಿಸಿ, ಪ್ರಭುತ್ವದ ಹುಳುಕುಗಳನ್ನು ಹೆಕ್ಕಿ ದೇಶದ ಜನತೆಯ ಮುಂದಿಡದಂತೆ ತುರ್ತುಸ್ಥಿತಿಯನ್ನು ಹೇರಿತ್ತು. ರಾಮ-ಕೃಷ್ಣರು ಹಿನ್ನೆಲೆಗೆ ಸರಿದು, ಮೋದಿಯೇ ಪರಮಾತ್ಮನಾಗುವಂತಾಗಿತ್ತು. ಸಂವಿಧಾನದ ಬದಲಿಗೆ ಸರ್ವಾಧಿಕಾರಿ ಆಳ್ವಿಕೆ ಮತ್ತು ಅಘೋಷಿತ ತುರ್ತುಸ್ಥಿತಿ ಜಾರಿಯಲ್ಲಿತ್ತು.

ಅದಕ್ಕೆ ಪೂರಕವಾಗಿ ಬಿಜೆಪಿಯ ಉತ್ತರ ಕನ್ನಡದ ಅನಂತಕುಮಾರ್ ಹೆಗಡೆ, ನಾಗೌರ್‍‌ನ ಜ್ಯೋತಿ ಮಿರ್ದಾ, ಅಯೋಧ್ಯೆಯ ಲಲ್ಲು ಸಿಂಗ್, ಮೀರತ್‌ನ ಅರುಣ್ ಗೋವಿಲ್‌ಗಳು ಸಂವಿಧಾನ ಬದಲಾಯಿಸುವ ಬಗ್ಗೆ ಬಹಿರಂಗವಾಗಿಯೇ ಬಡಬಡಿಸುತ್ತಿದ್ದರು. ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ, ‘ನಾವು ಆರ್ಟಿಕಲ್ 370 ತೆಗೆದುಹಾಕಿದ್ದೇವೆ. ಹಾಗೆಯೇ ಅನೇಕ ಬದಲಾವಣೆಗಳನ್ನು ಮಾಡಬೇಕಾಗಿದೆ. ಅದಕ್ಕಾಗಿ ನಮಗೆ ಸಂಸತ್ತಿನಲ್ಲಿ ಬಹುಮತದ ಅಗತ್ಯವಿದೆ’ ಎಂದು ಸತ್ಯವನ್ನೇ ಸಾರಿದ್ದರು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಸಿದ್ದರಾಮಯ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆಯೇ?

ಇಂದಿರಾ ಗಾಂಧಿಯವರ ತುರ್ತುಸ್ಥಿತಿಯ ಬಗ್ಗೆ, ‘ಬ್ರಿಟಿಷ್ ಆಳ್ವಿಕೆಯಲ್ಲಿ ಕೂಡಾ ಇಂತಹ ಬರ್ಬರ ಹಿಂಸಾಚಾರಕ್ಕೆ ನಾವು ತುತ್ತಾಗಿರಲಿಲ್ಲ. ನಾನು ಬದುಕುಳಿದರೆ ಇದಕ್ಕೆ ಜವಾಬ್ದಾರರಾದ ಜನರನ್ನು ಸರಿದಾರಿಗೆ ತರುವೆ’ ಎಂದು ಲೋಕನಾಯಕ ಜಯಪ್ರಕಾಶ್ ನಾರಾಯಣ ಅಂದು ಹೇಳಿದ್ದರು. ಇಂದು ಈ ಬಿಜೆಪಿಗರು ಸಂವಿಧಾನಕ್ಕೆ ಹಣೆಯಿಟ್ಟು ನಮಿಸುವ ನಖರಾಗಳಿಗೆ ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಸರಿಯಾದ ಉತ್ತರ ಕೊಡುತ್ತಿದ್ದಾರೆ.

ರಾಹುಲ್ ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ನ್ಯಾಯ ಯಾತ್ರೆಯಲ್ಲಿ ಮಣಿಪುರದಿಂದ ಮುಂಬೈವರೆಗೆ ‘ಸಂವಿಧಾನ್ ಬಚಾವೋ’ ಯಾತ್ರೆ ಕೈಗೊಂಡರು. ಸಂವಿಧಾನದ ತತ್ವಗಳು, ಮೌಲ್ಯಗಳು ಮತ್ತು ಮೂಲ ರಚನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಾ ಬಂದರು.

ಅಷ್ಟೇ ಅಲ್ಲ, ದಲಿತರು, ಬುಡಕಟ್ಟು ಸಮುದಾಯಗಳು, ಆದಿವಾಸಿಗಳು, ಅಲ್ಪಸಂಖ್ಯಾತರು, ಒಬಿಸಿಗಳ ಭವಿಷ್ಯವೇ ಸಂವಿಧಾನ. ಇದು ಸಾಮಾನ್ಯ ಪುಸ್ತಕವಲ್ಲ, ಇದು ನಿಮ್ಮ ಧ್ವನಿ. ಈ ಧ್ವನಿಯನ್ನು ಅಡಗಿಸಲು ಬಿಜೆಪಿ ಬಯಸುತ್ತಿದೆ ಎಂದು ರಾಹುಲ್ ಗಾಂಧಿ ಜನರ ಮನದಲ್ಲಿ ಸಂವಿಧಾನದ ಮಹತ್ವವನ್ನು ಬಿತ್ತತೊಡಗಿದರು.

ಇವತ್ತು ಇದರ ಪರಿಣಾಮವನ್ನು ಕಾಣುತ್ತಿದ್ದೇವೆ. ಹೂಂಕರಿಸುತ್ತಿದ್ದ ಮೋದಿಯವರ ಬಿಜೆಪಿಯನ್ನು 240 ಸ್ಥಾನಕ್ಕಿಳಿಸಲಾಗಿದೆ, ಐವತ್ತಾರು ಇಂಚಿನ ಎದೆ ಕುಗ್ಗಿದೆ, ಸಮ್ಮಿಶ್ರ ಸರ್ಕಾರಕ್ಕೆ ಸಹಕರಿಸಿದವರ ಮುಂದೆ ಮೋದಿ ತಗ್ಗಿ-ಬಗ್ಗಿ ನಡೆಯುವಂತಾಗಿದೆ. ಅಷ್ಟೇ ಅಲ್ಲ, ಸಂವಿಧಾನ ಕೃತಿಗೆ ಹಣೆ ಮುಟ್ಟಿ ನಮಸ್ಕರಿಸುವಂತೆ ಮಾಡಿದೆ.

ಇಂತಹ ಪ್ರಧಾನಿ ಮೋದಿಯವರು ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳುತ್ತಾರೆಂದರೆ, ಅದು ಸಂವಿಧಾನ ಉಳಿಸುವುದಕ್ಕಲ್ಲ, ಕಾಂಗ್ರೆಸ್ಸನ್ನು ತೆಗಳುವುದಕ್ಕೆ. ಇದು ಬೂತದ ಬಾಯಲ್ಲಿ ಭಗವದ್ಗೀತೆಯಷ್ಟೇ. ಇದನ್ನು ದೇಶದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ, ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೊಂದೇ ಸರಿಯಾದ ಅಸ್ತ್ರ ಎನ್ನುವುದನ್ನು ಅರಿಯಬೇಕಾಗಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....