ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

Date:

‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಸಾಧನೆ ಕಂಡು ಕೃತಕೃತ್ಯರಾದಂತಿದೆ. ಆದರೆ, ರಾಜ್ಯದ ವಾಸ್ತವ ಚಿತ್ರಣ ಭಿನ್ನವಾಗಿದೆ, ಭೀಕರವಾಗಿದೆ.

ಮೈಸೂರು ದಸರಾ ಸರ್ಕಾರದ ಅಧಿಕೃತ ಆಚರಣೆ. ಸರ್ಕಾರವೇ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಡೆಸುವ ಹಬ್ಬ. ಬರಗಾಲದ ನಡುವೆಯೂ ಸರಳ ದಸರಾ ಎನ್ನುತ್ತಲೇ ಸರ್ಕಾರದ ಹಣವನ್ನು ಉದಾರವಾಗಿಯೇ ಖರ್ಚು ಮಾಡಿ ನಾಡಹಬ್ಬ ಆಚರಿಸಲಾಗಿದೆ. ಒಂದು ಸಣ್ಣ ಸಂಗೀತ ಕಚೇರಿಗೆ ಅವಕಾಶ ಕೊಡಲು ಅಧಿಕಾರಿಗಳು 3 ಲಕ್ಷ ರೂಪಾಯಿ ಲಂಚ ಕೇಳಿರುವ ಆಚರಣೆಯನ್ನು ಸರಳ ಎನ್ನಲು ಸಾಧ್ಯವಿಲ್ಲ. ಆದರೆ, ಜನ ನಿಜಕ್ಕೂ ಸಂತೋಷದಿಂದಿದ್ದಾರೆಯೋ ಇಲ್ಲವೋ ಎನ್ನುವುದನ್ನು ತಿಳಿಯಲು ಸಿದ್ದರಾಮಯ್ಯನವರು ನಾಡಿನ ವಿವಿಧೆಡೆಗಳ ವಾಸ್ತವ ಚಿತ್ರಣವನ್ನು ಕೊಂಚ ಪರಿಶೀಲಿಸಬೇಕು.

ನವರಾತ್ರಿ ಕಳೆದು ದೀಪಾವಳಿ ಆಗಮನವಾಗುತ್ತಿದೆ ಎಂದರೆ, ಅದು ಸುಗ್ಗಿಯ ಕಾಲ. ಸಹಜವಾಗಿಯೇ ರೈತರಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಸಡಗರ ತುಂಬಿರಬೇಕಿತ್ತು. ಆದರೆ, ಬರದಿಂದಾಗಿ ರಾಜ್ಯದ ಹಳ್ಳಿಗಳಲ್ಲಿ ಈ ಬಾರಿ ಪ್ರೇತ ಕಳೆ ಆವರಿಸಿದೆ. ಕೈಯಲ್ಲಿ ಹಣವಿಲ್ಲ. ಸಾಲ ಮಾಡಿ ಹಾಕಿದ ಬೀಜ ಗೊಬ್ಬರ ಎಲ್ಲ ಮಣ್ಣು ಪಾಲಾಗಿವೆ. ಹೊಲದಲ್ಲಿ ಬೆಳೆ ಬಿಸಿಲಿಗೆ ಸುಟ್ಟು ಕಮರಿಹೋಗಿದೆ. ಮಳೆಗಾಲವಾದರೂ ಬಿಸಿಲು ಬೇಸಿಗೆಯನ್ನು ಮೀರಿಸುವಂತಿದೆ. ಮುಂಗಾರು ಹಾಗೂ ಹಿಂಗಾರು ಎರಡೂ ಈ ಬಾರಿ ವಿಫಲವಾಗಿವೆ. 1973ರಿಂದ, ಅಂದರೆ, ಐವತ್ತು ವರ್ಷಗಳಲ್ಲಿ, ರಾಜ್ಯವನ್ನು ಕಾಡಿದ ಮೂರನೇ ಅತ್ಯಂತ ಕರಾಳ ಬರ ಇದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಕರ್ನಾಟಕದಲ್ಲಿ ಬರ ಹೊಸದೇನಲ್ಲ. ಅವರ ಜೊತೆಗೆ ಈ ವರ್ಷ ಹಳೇ ಮೈಸೂರು, ಮಲೆನಾಡು, ಕರಾವಳಿ ಭಾಗಗಳಲ್ಲೂ ಬರದ ಪರಿಣಾಮ ಗೋಚರಿಸುತ್ತಿದೆ. ಮಳೆಯ ಕೊರತೆಯಿಂದಾಗಿ ಅನೇಕ ಪಂಪ್‌ಸೆಟ್‌ಗಳು ನೀರೆತ್ತದೇ ಸ್ಥಗಿತಗೊಂಡಿವೆ. ಅಲ್ಪಸ್ವಲ್ಪ ನೀರು ಬರುವ ಕಡೆ, ವಿದ್ಯುತ್ ಕೊರತೆಯಿಂದಾಗಿ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಪ್ರಕಾರ, ಎಲ್ಲವೂ ಸರಿಯಾಗಿಯೇ ನಡೆಯುತ್ತಿದೆ. ರೈತರಿಗೆ ಐದು ತಾಸು ನಿರಂತರವಾಗಿ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ವಾಸ್ತವದಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಅನೇಕ ಭಾಗಗಳಲ್ಲಿ ದಿನಕ್ಕೆ ಎರಡು ತಾಸು ಕೂಡ ನಿರಂತರವಾಗಿ ವಿದ್ಯುತ್ ಪೂರೈಸುತ್ತಿಲ್ಲ. ರಾತ್ರಿ ಹೊತ್ತಲ್ಲದ ಹೊತ್ತಿನಲ್ಲಿಯೂ ರೈತರು ಬೆಳೆಗಳಿಗೆ ನೀರು ಹಾಯಿಸಲು ಹೋಗಬೇಕಾಗಿದೆ. ಹೀಗೆ ಹೋದ ವಿಜಯಪುರದ ರೈತನೊಬ್ಬನಿಗೆ ಜಮೀನಿನಲ್ಲಿ ಮೊಸಳೆ ಕಂಡುಬಂದಿದೆ. ಆತ ಅದನ್ನು ಹಿಡಿದು ತಂದು ಹೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ ಘಟನೆಯೂ ನಡೆದಿದೆ. ಅಪರಾತ್ರಿಯಲ್ಲಿ ಹೀಗೆ ನೀರು ಕಟ್ಟಲು ಹೋಗಿ ಹಾವು ಮತ್ತಿತರ ಪ್ರಾಣಿಗಳಿಂದ ಕಡಿತಕ್ಕೊಳಗಾಗಿ ರೈತರು ಸತ್ತ ಉದಾಹರಣೆಗಳೂ ಇವೆ. ರಾಜ್ಯದ ಒಂದಿಲ್ಲೊಂದು ಭಾಗದಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ರೈತರು ಬೀದಿಗಿಳಿಯುತ್ತಿದ್ದಾರೆ. ಇದೆಲ್ಲ ಹವಾ ನಿಯಂತ್ರಿತ ಕಚೇರಿಯಲ್ಲಿ ಕೂತ ಅಧಿಕಾರಿಗಳಿಗೆ, ಬರಗಾಲದಲ್ಲೂ 30 ಲಕ್ಷ ರೂಪಾಯಿಯ ಐಷಾರಾಮಿ ಕಾರುಗಳನ್ನು ಕೊಂಡು ಅವುಗಳಲ್ಲಿ ಓಡಾಡುವ ರಾಜ್ಯದ 33 ಸಚಿವರಿಗೆ ಸುಲಭಕ್ಕೆ ಅರ್ಥವಾಗುವುದು ಸಾಧ್ಯವಿಲ್ಲ.

ಬರ ಬಂದಾಗಲೆಲ್ಲ ಗುಳೆ ಹೋಗುವುದು ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳ ಜನರಿಗೆ ಅನಿವಾರ್ಯ. ಈ ವರ್ಷ ಗುಳೆ ಕೊಂಚ ತಡವಾಗಿ ಆರಂಭವಾಗಿದೆ. ಅದಕ್ಕೆ ಕಾರಣ ಸರ್ಕಾರ ಜಾರಿಗೆ ತಂದ ಗ್ಯಾರಂಟಿಗಳು. ಸರ್ಕಾರ ನೀಡುತ್ತಿರುವ ಉಚಿತ ಅಕ್ಕಿ ಬಹಳ ಮಟ್ಟಿಗೆ ಬಡವರ ಹಸಿವು ನೀಗಿಸುತ್ತಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆ ಬಡ ಕುಟುಂಬಗಳಿಗೆ ಒಂದಿಷ್ಟು ತ್ರಾಣ ನೀಡಿದೆ. ಆದರೆ, ಮಹಿಳೆಯರಿಗೆ ಉಚಿತ ಬಸ್ ಸಂಚಾರ ಕಲ್ಪಿಸುವ ಶಕ್ತಿ ಯೋಜನೆ ಸಂಪೂರ್ಣ ಜಾರಿಯಾಗಿದೆ ಎನ್ನುವುದು ಬಿಟ್ಟರೆ ಉಳಿದ ಗ್ಯಾರಂಟಿಗಳು ಇನ್ನೂ ಪೂರ್ಣವಾಗಿ ಜಾರಿಗೆ ಬಂದಿಲ್ಲ. ಕುಟುಂಬದ ಯಜಮಾನಿಗೆ ಮಾಸಿಕ 2,000 ನೀಡುವ ಗೃಹಲಕ್ಷ್ಮಿ ಯೋಜನೆ ಸುಮಾರು 10 ಲಕ್ಷ ಜನರಿಗೆ ಇನ್ನೂ ತಲುಪಿಲ್ಲ. ಬಿಪಿಎಲ್ ಕಾರ್ಡ್‌ದಾರರಿಗೆ ಭರವಸೆ ನೀಡಿದಂತೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ. ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನೀಡುವ ಯುವನಿಧಿ ಇನ್ನೂ ಜಾರಿಯೇ ಆಗಿಲ್ಲ. ಹೀಗಾಗಿಯೇ ಗ್ಯಾರಂಟಿ ಜಾರಿಯ ನಡುವೆಯೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ಬಾರಿ ಗುಳೆ ಆರಂಭವಾಗಿದೆ. ರಾಜ್ಯದ ಇತರ ಭಾಗಗಳಲ್ಲೂ ಪರಿಸ್ಥಿತಿ ದಿನೇ ದಿನೆ ಹದಗೆಡುತ್ತಿದೆ. ಬೆಂಗಳೂರಿಗೆ 100 ಕಿಲೋಮೀಟರ್ ದೂರವಿರುವ ಬಾಗೇಪಲ್ಲಿಯಂಥ ಪುಟ್ಟ ಪಟ್ಟಣಕ್ಕೆ ದಿನವೂ ನೂರಾರು ಕೂಲಿ ಕಾರ್ಮಿಕರು ವಿವಿಧ ಗ್ರಾಮಗಳಿಂದ ಕೆಲಸ ಅರಸಿ ಬಂದು ನಿಲ್ಲುತ್ತಾರೆ ಎಂದರೆ, ಪರಿಸ್ಥಿತಿಯ ಗಂಭೀರತೆಯನ್ನು ಆಡಳಿತ ನಡೆಸುವವರು ಅರ್ಥ ಮಾಡಿಕೊಳ್ಳಬೇಕಿದೆ.

ಈ ಬಾರಿ ಬರದ ತೀವ್ರತೆ ಅಷ್ಟು ಕಾಣುತ್ತಿಲ್ಲ ಎಂದರೆ, ಅದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳು ಜನರಿಗೆ ಕೊಂಚ ಮಟ್ಟಿಗೆ ಸ್ಪಂದಿಸುತ್ತಿರುವುದು ಕಾರಣ. ಆದರೆ, ಎಲ್ಲ ಇಲಾಖೆಗಳ ಹಾಗೂ ಎಲ್ಲ ಭಾಗಗಳ ಪರಿಸ್ಥಿತಿ ಅಷ್ಟು ಆಶಾದಾಯಕವಾಗಿಲ್ಲ. ಸರ್ಕಾರ ಅನಗತ್ಯ ವಿವಾದಗಳಲ್ಲಿ, ಅನಗತ್ಯ ಯೋಜನೆಗಳ ವಿಚಾರದಲ್ಲಿ ಕಾಲಹರಣ ಮಾಡುತ್ತಿದೆ. ಮುಖ್ಯವಾಗಿ, ಬೆಂಗಳೂರಿನಲ್ಲಿ 195 ಕಿಮೀ ಉದ್ದದ 50,000 ಕೋಟಿ ರೂಪಾಯಿ ಖರ್ಚಿನ ಸುರಂಗ ನಿರ್ಮಾಣ, ಅತಿ ಎತ್ತರದ ಸ್ಕೈ ಡೆಕ್ ನಿರ್ಮಾಣ, ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದರಂಥ ಅನಗತ್ಯ ವಿಚಾರಗಳಿಗೆ ಕೊಟ್ಟಷ್ಟು ಒತ್ತನ್ನು ಬರ ಪರಿಹಾರಕ್ಕೆ ಹಾಗೂ ವಾಸ್ತವಿಕ ಯೋಜನಗಳಿಗೆ ನೀಡುತ್ತಿಲ್ಲ ಎನ್ನುವ ಆರೋಪವೂ ಇದೆ.

ಗ್ಯಾರಂಟಿಗಳ ಜಾರಿಗಾಗಿಯೇ ಇನ್ನೂ ತಿಣುಕುತ್ತಿರುವ ಸರ್ಕಾರ, ಬರ ಪರಿಹಾರವೂ ಸೇರಿದಂತೆ ಇತರ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡು ಪೂರೈಸುವುದು ಎಂದು ಎನ್ನುವ ಪ್ರಶ್ನೆ ಜನರಲ್ಲಿ ಹುಟ್ಟಿಕೊಂಡಿದೆ. ಅದಕ್ಕೆ ಉತ್ತರ ನೀಡುವ ಜವಾಬ್ದಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರದ್ದು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....