ಈ ದಿನ ಸಂಪಾದಕೀಯ | ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷಗಿರಿ; ಸರ್ಕಾರಕ್ಕೆ ಇರಲಿ ಎಚ್ಚರ

Date:

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅಡ್ಡಂಡ ಕಾರ್ಯಪ್ಪರಂಥ ಕೆಲವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೆಲವು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇಂಥವರನ್ನು ಸರ್ಕಾರ ಹೊರಗೆ ಕಳಿಸಬೇಕಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಅನೇಕ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡುತ್ತಿದ್ದಾರೆ. ಹಾಗೆ ಭೇಟಿ ಮಾಡುವವರ ಪೈಕಿ ಹೆಚ್ಚಿನವರು ಕಾಂಗ್ರೆಸ್ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಬಯಸುವವರು ಎನ್ನಲಾಗುತ್ತಿದೆ. ವಿವಿಧ ನಿಗಮ ಮಂಡಳಿ ಅಕಾಡೆಮಿ ಪ್ರಾಧಿಕಾರಗಳಿಗೆ ಅಧ್ಯಕ್ಷರಾಗಲು ಬಯಸಿದವರು, ವಿಧಾನ ಪರಿಷತ್ ಸದಸ್ಯರಾಗಲು ಹೊರಟವರು ಎಲ್ಲರೂ ಈ ಪಟ್ಟಿಯಲ್ಲಿದ್ದಾರೆ. ಅವರ ಪೈಕಿ ಕೆಲವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರಾಗಿದ್ದವರೂ ಇದ್ದಾರೆ. ಅದಕ್ಕಿಂತಲೂ ವಿಚಿತ್ರ ಎಂದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅದರೊಂದಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಗುರುತಿಸಿಕೊಂಡಿದ್ದ ಚಂದ್ರಶೇಖರ ಕಂಬಾರರಂಥವರೂ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಹಾಗೆ ಭೇಟಿಯಾದವರ ಪೈಕಿ ಹೆಚ್ಚಿನವರು ಈ ಬಾರಿ ನಿಗಮ ಮಂಡಳಿ ಅಕಾಡೆಮಿ ಪ್ರಾಧಿಕಾರಗಳ ಅಧ್ಯಕ್ಷರಾಗಲು ಹೊರಟವರ ಯಾದಿಯಲ್ಲಿದ್ದಾರೆ ಎನ್ನುವ ಮಾತುಗಳಿವೆ.         

ಇದರ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಯುತ್ತಿದೆ. ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ಕೊಡಬೇಕೆಂಬ ಒತ್ತಾಯ ಕೇಳಿಬರತೊಡಗಿದೆ. ಅದರಲ್ಲೂ ಸೈದ್ಧಾಂತಿಕವಾಗಿ ಸ್ಪಷ್ಟತೆ ಮತ್ತು ಬದ್ಧತೆ ಇರುವ, ತಮ್ಮ ಬದುಕಿನಲ್ಲಿ ಜನಪರ ಮೌಲ್ಯಗಳನ್ನು ಕೊಂಚವಾದರೂ ಅಳವಡಿಸಿಕೊಂಡಿರುವವರಿಗೆ ಆದ್ಯತೆ ನೀಡಬೇಕೆಂದು ಕೆಲವರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದ ಪುಢಾರಿಗಳಂತೆ ಇರುವವರನ್ನು ನೇಮಕ ಮಾಡಬಾರದೆನ್ನುವ ಕೂಗು ಜೋರಾಗಿದೆ.

ಒಂದು ನಾಡಿನ ಶಿಕ್ಷಣ, ಸಂಸ್ಕೃತಿ, ಸಾಹಿತ್ಯಕ್ಕೆ ಸಂಬಂಧಿಸಿದ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷಗಿರಿ ಎಷ್ಟು ಮುಖ್ಯ ಎನ್ನುವುದನ್ನು ಈ ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅವುಗಳ ಅಧ್ಯಕ್ಷರಾಗಿ ನೇಮಕವಾಗಿದ್ದವರು, ಅವರು ಮಾಡಿದ ಕೆಲಸಗಳನ್ನು ನೋಡಿದರೆ ಮನದಟ್ಟಾಗುತ್ತದೆ. ಆಗ ಅಧ್ಯಕ್ಷರಾಗಿದ್ದ ಬಹುತೇಕರು ಅಕಾಡೆಮಿ, ಪ್ರಾಧಿಕಾರಗಳನ್ನು ಆರ್‌ಎಸ್‌ಎಸ್‌ಮಯ ಮಾಡಿದ್ದರು. ಸರ್ಕಾರದ ಹಣ ಖರ್ಚು ಮಾಡಿ ಸಂಘ ಪರಿವಾರದ ಸಿದ್ಧಾಂತವನ್ನು ಹರಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಾಯಣದ ನಿರ್ದೇಶಕರಾಗಿದ್ದ ಅಡ್ಡಂಡ ಕಾರ್ಯಪ್ಪ ಅವರಂತೂ ಬಿಜೆಪಿಯ ಹಿಡನ್ ಅಜೆಂಡಾವನ್ನು ನೇರವಾಗಿ ಕೃತಿರೂಪಕ್ಕಿಳಿಸಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆಗೆ ತಂದರೆಂದು ಅದರ ವಿರುದ್ಧವಾಗಿ ‘ಟಿಪ್ಪು ನಿಜ ಕನಸುಗಳು’ ಎನ್ನುವ ನಾಟಕ ಬರೆದು ಅದನ್ನು ರಂಗಾಯಣದ ಮೂಲಕ ಪ್ರಯೋಗಿಸಿದ್ದರು. ಮುಸ್ಲಿಮರ ಬಗ್ಗೆ, ಟಿಪ್ಪು ಬಗ್ಗೆ ಸುಳ್ಳುಗಳನ್ನು ಹರಡುವ ಆ ಪುಸ್ತಕವನ್ನು ನಿಷೇಧಿಸಬೇಕೆನ್ನುವ ಕೂಗೆದ್ದಿತು. ಕೊನೆಗೆ ಆ ವಿವಾದ ಕೋರ್ಟ್ ಮೆಟ್ಟಿಲೇರಿತ್ತು.     

ಸಾಹಿತ್ಯ ಅಕಾಡೆಮಿಯಲ್ಲೂ ಇಂಥದ್ದೇ ಸ್ಥಿತಿ. ವೃತ್ತಿಯಿಂದ ಪ್ರಾಧ್ಯಾಪಕರೂ ಪ್ರವೃತ್ತಿಯಿಂದ ಆರ್‌ಎಸ್‌ಎಸ್‌ ಪ್ರಚಾರಕರೂ ಆದ ಬಿ ವಿ ವಸಂತಕುಮಾರ್ ಅವಧಿಯಲ್ಲಿ ಅಲ್ಲಿ ಹೆಚ್ಚು ಮನ್ನಣೆ ಪಡೆದವರು ಜಿ ಬಿ ಹರೀಶ್ ತರಹದ ಮನುವಾದದ ಪ್ರಸಾರಕರು. ಮಾಧ್ಯಮ ಅಕಾಡೆಮಿಯಲ್ಲಿ ಪ್ರಶಸ್ತಿ ಪುರಸ್ಕಾರ ಸಿಕ್ಕಿದ್ದು ಕೂಡ ಇಂಥವರಿಗೇ; ಜನಪರ ಮೌಲ್ಯಗಳಿಗೆ ವಿರುದ್ಧವಾದ ಹಾಗೂ ಕಾಂಗ್ರೆಸ್‌ನ ತತ್ವ ಸಿದ್ಧಾಂತವನ್ನು ನಖಶಿಖಾಂತ ವಿರೋಧಿಸುವ ಹರಿಪ್ರಕಾಶ್ ಕೋಣೆಮನೆ, ಅಜಿತ್ ಹನುಮಕ್ಕನವರ್, ಶಂಕರಾಚಾರ್ಯರ ಬಗ್ಗೆ, ವೇದ ಪುರಾಣಗಳ ಬಗ್ಗೆ ಬರೆಯುವುದನ್ನೇ ಪತ್ರಿಕೋದ್ಯಮ ಎಂದುಕೊಂಡಿರುವ ಸೂರ್ಯಪ್ರಕಾಶ್ ಪಂಡಿತ್ ಮುಂತಾದವರಿಗೆ ಪ್ರಶಸ್ತಿಯನ್ನು ಕೊಡಲಾಯಿತು. ಸರ್ಕಾರದ ಬಹುತೇಕ ಎಲ್ಲ ಅಕಾಡೆಮಿ, ಪ್ರಾಧಿಕಾರಗಳದ್ದೂ ಇದೇ ಕಥೆ. ಸರ್ಕಾರದ ಅಡಿಯಲ್ಲಿ ಬಾರದ ಬೆಂಗಳೂರು ಪ್ರೆಸ್ ಕ್ಲಬ್‌ನಂಥ ಕಡೆ ಕೂಡ ಮೋದಿಯವರನ್ನು ಮೆಚ್ಚಿ ಕೊಂಡಾಡುವ ಪ್ರಕಾಶ್ ಬೆಳವಾಡಿಯಂಥವರಿಗೆ, ಎಂದೋ ಒಂದು ಕಾಲದಲ್ಲಿ ಅಲ್ಪಾವಧಿಗೆ ಪತ್ರಕರ್ತರಾಗಿದ್ದರು ಎನ್ನುವ ನೆಪ ಹುಡುಕಿ, ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಎಲ್ಲೆಲ್ಲೂ ಸಂಘದ ಸಿದ್ಧಾಂತ ಹರಡುವವರೇ ಸಲ್ಲತೊಡಗಿದ್ದರು.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅಡ್ಡಂಡ ಕಾರ್ಯಪ್ಪರಂಥ ಕೆಲವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊರಹೋಗಿದ್ದಾರೆ. ಕೆಲವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇಂಥವರು ಕಾಂಗ್ರೆಸ್ ಸರ್ಕಾರಕ್ಕೂ ಈ ನಾಡಿಗೂ ಹೆಚ್ಚು ಅಪಾಯಕಾರಿಗಳು. ಇಂಥ ಎಲ್ಲರನ್ನೂ ಸಿದ್ದರಾಮಯ್ಯನವರು ಹೊರಗೆ ಕಳಿಸಿ, ನಿಜವಾದ ಅರ್ಥದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳನ್ನು ಆಚರಣೆಗೆ ತರುವಂಥ ಪ್ರಾಮಾಣಿಕರನ್ನು ಹಾಗೂ ದಕ್ಷರನ್ನು ಅಕಾಡೆಮಿ, ಪ್ರಾಧಿಕಾರಗಳಿಗೆ ತರಬೇಕಾಗಿದೆ. ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿರುವ ಕಾಂಗ್ರೆಸ್‌, ಅದರ ತತ್ವ ಸಿದ್ಧಾಂತಗಳನ್ನೂ ಜನಮಾನಸದಲ್ಲಿ ಸೋಲಿಸಲು ಕಾರ್ಯೋನ್ಮುಖವಾಗಬೇಕಿದೆ; ಸಂವಿಧಾನವಿರೋಧಿ ಶಕ್ತಿಗಳನ್ನು ಸರ್ವ ರೀತಿಯಲ್ಲೂ ಸದೆಬಡಿಯಬೇಕಾಗಿದೆ.                                     

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....