ಈ ದಿನ ಸಂಪಾದಕೀಯ | ಮಳೆ ಸಮಸ್ಯೆಯಾಗಿದ್ದು ಯಾಕೆ ಮತ್ತು ಯಾರಿಗೆಲ್ಲ ಅನುಕೂಲ?  

Date:

ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು ಸೃಷ್ಟಿಸುತ್ತಿದೆ.

ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಇದೇ ಸಮಯದಲ್ಲಿ ಮುಂಗಾರು ಅಧಿವೇಶನವೂ ನಡೆಯುತ್ತಿದೆ. ರಾಜಕಾರಣಿಗಳ ಮಾತಿನ ಮಳೆಯೂ ಜೋರಾಗಿದೆ. ಆದರೆ ಆ ಮಾತಿನಲ್ಲಿ ಮಳೆ ಮಾಡಿದ ಅನಾಹುತ ಮತ್ತು ಸರ್ಕಾರದ ಪರಿಹಾರಕಾರ್ಯ ಕುರಿತ ತೋರಿಕೆಯ ಮಾತಾಡಿದ್ದು ಖೇದವೆನಿಸುತ್ತದೆ.

ಇಲ್ಲಿಯವರೆಗೆ ಎಂಟು ಜಿಲ್ಲೆಗಳು ಮುಂಗಾರು ಮಳೆಯ ಅನಾಹುತಕ್ಕೆ ಒಳಗಾಗಿವೆ. ಆರು ಜಿಲ್ಲೆಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುಮಾರು 150 ಮನೆಗಳು ಧರೆಗೆ ಉರುಳಿವೆ, 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅತಿಯಾದ ಮಳೆಯಿಂದ 20,244 ರೈತರು ಕಷ್ಟಕ್ಕೀಡಾಗಿದ್ದಾರೆ. ಒಟ್ಟು 5 ಲಕ್ಷ ಹೆಕ್ಟೇರ್‌ ಪ್ರದೇಶದ ವಿವಿಧ ಬೆಳೆಗಳು ಹಾನಿಯಾಗಿವೆ. ಜನರ ಜೀವನ ಅಸ್ತವ್ಯಸ್ತವಾಗಿದೆ.

ಮಳೆ ಎನ್ನುವುದು ನಗರವಾಸಿಗಳಿಗೆ ಅನಿಷ್ಟ, ಅಲರ್ಜಿಯಾದರೆ; ಗ್ರಾಮೀಣ ಭಾಗದ ಜನರಿಗೆ ಜೀವಜಲ. ಕೃಷಿ ಚಟುವಟಿಕೆಗಳು ಗರಿಗೆದರುವ ಕಾಲ. ಆದರೆ, ಈ ಬಾರಿಯ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿಲ್ಲ. ಅವಧಿಗೆ ಮುನ್ನವೇ ಬಂದ ಮುಂಗಾರು ಮಳೆ, ರೈತರನ್ನು ಹೈರಾಣಾಗಿಸಿದೆ. ಆದರೂ ಹೊಲ-ಗದ್ದೆ-ತೋಟಗಳನ್ನು ಹಸನು ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಸಮಯಕ್ಕೆ ಸರಿಯಾಗಿ ಸಿಗದೆ ಕಡು ಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದ ಬೆಳೆ ಕಣ್ಣಮುಂದೆಯೇ ಕೊಚ್ಚಿ ಹೋಗುವುದನ್ನು ಕಂಡು ಕಂಗಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಸೌಜನ್ಯ ಕೇಸ್‌ನಲ್ಲಿ ಮತ್ತೆಮತ್ತೆ ಸಂತೋಷ್ ರಾವ್‌ನನ್ನು ಎಳೆತಂದು ಯಾರನ್ನು ರಕ್ಷಿಸಲಾಗುತ್ತಿದೆ?

ಮುಂಗಾರು ಮಳೆ ಇಂತಹ ಅವಧಿಯಲ್ಲಿಯೇ ಕಾಣಿಸಿಕೊಳ್ಳುತ್ತದೆ ಎನ್ನುವುದು ಹವಾಮಾನ, ಕೃಷಿ, ತೋಟಗಾರಿಕೆ, ನೀರಾವರಿ ಇಲಾಖೆಗಳಿಗೆ ತಿಳಿದ ವಿಷಯವೇ ಆಗಿದೆ. ಆದರೆ, ಅದನ್ನು ಎದುರಿಸಲು, ರೈತರಿಗೆ ಎಚ್ಚರಿಸಲು ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ, ಜನಪ್ರತಿನಿಧಿಗಳಾಗಲಿ ಸಿದ್ಧರಾಗಿರುವುದಿಲ್ಲ. ಸಮಸ್ಯೆ ಎದುರಾದಾಗ ಎಚ್ಚರಗೊಂಡು ಓಡಾಡುವುದು, ಒಂದಷ್ಟು ಕಾಳಜಿ ತೋರುವುದು ಎಲ್ಲ ಸರ್ಕಾರಗಳ ಕಣ್ಣೊರೆಸುವ ತಂತ್ರದ ಭಾಗವೇ ಆಗಿಹೋಗಿದೆ.

ನೆಲ ನಂಬಿ ಬದುಕುವವರಿಗೆ ಮಳೆಯಿಂದಾದ ಅನಾಹುತಗಳು, ಒಂದು ರೀತಿಯಲ್ಲಿ ಹೃದಯ ಹೆಪ್ಪುಗಟ್ಟುವ ವಿಷಯವಾದರೆ; ತುರ್ತು ಕಾರ್ಯಾಚರಣೆ, ಪರಿಹಾರ, ಗಂಜಿಕೇಂದ್ರ, ಸಂತ್ರಸ್ತರ ನೆರವಿನ ನೆಪದಲ್ಲಿ ನಡೆಯುವ ‘ಕಾಮಗಾರಿ’ ಕಂಗಾಲಾಗಿಸುತ್ತದೆ. ಮಳೆಯಿಂದಾಗುವ ಅವಘಡ ಪರೋಕ್ಷವಾಗಿ ಅಧಿಕಾರಸ್ಥರಿಗೆ ಮತ್ತು ಅಧಿಕಾರಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸುತ್ತದೆ. ‘ತುರ್ತು’ ನೆಪದಲ್ಲಿ ಕೋಟ್ಯಂತರ ರೂಪಾಯಿಗಳು ಮಳೆನೀರಿನಂತೆಯೇ ಹರಿದುಹೋಗುತ್ತದೆ.

ರಕ್ಷಣಾ ಕಾರ್ಯಾಚರಣೆ, ಸುರಕ್ಷಿತ ತಾಣಗಳತ್ತ ಸಂತ್ರಸ್ತರ ರವಾನೆ, ತಾತ್ಕಾಲಿಕ ಊಟ-ವಸತಿ ವ್ಯವಸ್ಥೆಯತ್ತ ಗಮನ ಹರಿಸುವ ಜಿಲ್ಲಾಡಳಿತ, ಆ ನಂತರ ಕೊಚ್ಚಿಹೋದ ರಸ್ತೆಗಳು, ಮುರಿದುಬಿದ್ದ ಸೇತುವೆಗಳ ಮರು ನಿರ್ಮಾಣದ ‘ಕಾಮಗಾರಿ’ಗಳತ್ತ ನೋಡುತ್ತದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಗಳಿಗೆ ಕೈ ತುಂಬಾ ಕೆಲಸ, ಅಧಿಕಾರಿಗಳ ಸರಬರ ಓಡಾಟ, ಗುತ್ತಿಗೆದಾರರ ಗೆಬರಾಟ- ಎಲ್ಲವೂ ತಿಂಗಳೊಪ್ಪತ್ತಿನಲ್ಲಿ ಮುಗಿದುಹೋಗಿರುತ್ತದೆ.

ಇನ್ನು ಮಳೆ ನಗರವಾಸಿಗಳ ಪಾಲಿಗೆ ಅನಿಷ್ಟದ ವಿಷಯ. ಮಳೆ ಎಂದಾಕ್ಷಣ ಮೊದಲಿಗೆ ಸುದ್ದಿಯಾಗುವುದು ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ. ಅದರಲ್ಲೂ ಈಗ ನಗರದ ಬಹುಪಾಲು ರಸ್ತೆಗಳು ಸ್ಮಾರ್ಟ್‌ ಸಿಟಿಯ ಅಭಿವೃದ್ಧಿಯ ನೆಪದಲ್ಲಿ ವೈಟ್ ಟ್ಯಾಪಿಂಗ್ ಕಾಣುತ್ತಿವೆ. ಬಹುತೇಕ ರಸ್ತೆಗಳಲ್ಲಿ ಆಳುದ್ದ ಗುಂಡಿ ತೋಡಿ ಬಿಡಲಾಗಿದೆ. ಮಳೆ ನೀರು ತುಂಬಿ ರಸ್ತೆ ಯಾವುದು, ಗುಂಡಿ ಯಾವುದು ತಿಳಿಯದೆ ಜನ ನಿತ್ಯ ನರಕದೊಂದಿಗೇ ಬದುಕುತ್ತಿದ್ದಾರೆ. ಬಡವರು, ಮಧ್ಯಮವರ್ಗದವರು, ಕೊಳೆಗೇರಿ ನಿವಾಸಿಗಳು- ಮಳೆ ಬಂದಾಗ ಜೀವವನ್ನು ಕೈಯಲ್ಲಿಡಿದು ಬದುಕುವುದು ಅನಿವಾರ್ಯವಾಗಿದೆ.

ಇದನ್ನು ಕಂಡ ಕೂಗುಮಾರಿಗಳಂತಹ ದೃಶ್ಯ ಮಾಧ್ಯಮಗಳು ಎದ್ದು ನಿಲ್ಲುತ್ತವೆ. ನಗರದ ಭಯಾನಕತೆಯನ್ನು ಬಿಡಿಸಿಡುತ್ತವೆ. ಜನ ಆಕ್ರೋಶಗೊಂಡು, ಅಧಿಕಾರಿಗಳನ್ನು ಮತ್ತು ಆಳುವ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ತೋರಿಸುತ್ತವೆ. ಮೀಡಿಯಾಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ, ಬಿಬಿಎಂಪಿಯ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವರು ನಗರ ವೀಕ್ಷಣೆಗೆ ಇಳಿಯುತ್ತಾರೆ. ಮತ್ತದೇ ತುರ್ತು ಕಾಮಗಾರಿಗಳ ಆಶ್ವಾಸನೆಗಳು, ಪರಿಹಾರದ ಘೋಷಣೆಗಳು, ಜನರ ಮುಂದೆ ಅಧಿಕಾರಿಗಳಿಗೆ ತರಾಟೆ, ಕಷ್ಟಕ್ಕೊಳಗಾದವರ ಬಗ್ಗೆ ಕಣ್ಣೀರು- ಎಲ್ಲವೂ ಕ್ಯಾಮರಾಗಳ ಮುಂದೆ. ಸಚಿವರ ಜನಪರ ಕಾಳಜಿ ಸುದ್ದಿಯಾಗುತ್ತದೆ. ‘ತುರ್ತು’ ಕಾಮಗಾರಿಗಳ ನೆಪದಲ್ಲಿ ನೂರಾರು ಕೋಟಿ ರೂಪಾಯಿಗಳು ಬಿಡುಗಡೆಯಾಗುತ್ತದೆ. ಆದರೆ ಬೆಂಗಳೂರು ನಗರದ ಸಿಟಿ ಮಾರ್ಕೆಟ್ಟು, ಚಿಕ್ಕಪೇಟೆ ಗಲ್ಲಿ, ಆನಂದರಾವ್ ಸರ್ಕಲ್ಲಿನ ಅಂಡರ್ ಪಾಸ್, ಅಪಾರ್ಟಮೆಂಟುಗಳಿಗೆ ನೀರು, ರಾಜಕಾಲುವೆಗಳ ಒತ್ತುವರಿ- ಎಲ್ಲವೂ ಯಥಾರೀತಿ.

ಇದನ್ನು ಓದಿದ್ದೀರಾ?: ಒಳಮೀಸಲಾತಿಯ ಆಂತರ್ಯದಲ್ಲಿ ಬುದ್ಧಪ್ರಜ್ಞೆ

ಬೆಂಗಳೂರು ನಗರ ಅಭಿವೃದ್ಧಿ ಖಾತೆ ಸಚಿವ ಡಿ.ಕೆ. ಶಿವಕುಮಾರ್, ಅಪಾರ ಅನುಭವ ಮತ್ತು ದೂರದೃಷ್ಟಿಯುಳ್ಳ ವ್ಯಕ್ತಿ ಎನ್ನಲಾಗುತ್ತದೆ. ಅದಕ್ಕೆ ಪೂರಕವಾಗಿ ಅವರು ಬೆಂಗಳೂರಿಗೆ ಸ್ಕೈ-ಡೆಕ್, ಸುರಂಗ ರಸ್ತೆ, ಫ್ಲೈ ಓವರ್, ಮೆಟ್ರೋ, ಎರಡನೇ ವಿಮಾನ ನಿಲ್ದಾಣ, ಸಿಲಿಕಾನ್ ಸಿಟಿಯನ್ನು ವಿಶ್ವಮಟ್ಟಕ್ಕೆ ಏರಿಸಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎನ್ನುತ್ತಾರೆ. ಆದರೆ, ಮೂಲಭೂತ ಸಮಸ್ಯೆಗಳಾದ ರಸ್ತೆಗಳು, ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಬಿಬಿಎಂಪಿ ಶಾಲೆಗಳ ಬಗ್ಗೆ ಗಮನವೇ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಧಿಕಾರಿಗಳು, ಜನರ ಜೇಬು ಬಿಟ್ಟು ಬೇರೆ ನೋಡುತ್ತಿಲ್ಲ. ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎ ಸೇರಿದಂತೆ ನಗರ ಯೋಜನೆಗೆ ಸಂಬಂಧಿಸಿದ ಸಂಸ್ಥೆಗಳು, ಇಲಾಖೆಗಳ ನಡುವೆ ಸಮನ್ವಯತೆಯೇ ಇಲ್ಲ.

ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದ ವಿರುದ್ಧ ಜನ ಬೀದಿಗಿಳಿದು ಪ್ರಶ್ನಿಸುವ, ಪ್ರತಿಭಟಿಸುವ ಕೆಚ್ಚನ್ನೇ ಕಳೆದುಕೊಂಡಿದ್ದಾರೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು ಸೃಷ್ಟಿಸುತ್ತಿದೆ. ತಾಲೂಕಿಗೊಬ್ಬರು ಶಾಸಕರಿದ್ದಾರೆ, ಜಿಲ್ಲೆಗೊಬ್ಬರು ಉಸ್ತುವಾರಿ ಸಚಿವರಿದ್ದಾರೆ, ಆಡಳಿತಯಂತ್ರವಿದೆ. ಆದರೂ ಆಳುವ ಸರಕಾರಕ್ಕೆ ಮಳೆಯನ್ನು ನಿರ್ವಹಿಸುವ ಬುದ್ಧಿವಂತಿಕೆಯೂ ಬರಲಿಲ್ಲ. ಪ್ರಕೃತಿಯ ಮೇಲೆ ನಡೆಸುವ ಅತ್ಯಾಚಾರಕ್ಕೆ ಅಡೆತಡೆಯೂ ಇಲ್ಲ.  

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....