ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

Date:

ತೀರ್ಪಿನ ಚಾರಿತ್ರಿಕ ಮಹತ್ವವನ್ನು ಹಲವು ಮಾಧ್ಯಮ ಸಂಸ್ಥೆಗಳು ಅರಿಯಲಿಲ್ಲ. ಬಹುಕೋಟಿ ಹಗರಣ ನಾಡಿನ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಉಂಟು ಮಾಡಿದ ಪಲ್ಲಟಗಳ ಕುರಿತು ಗಂಭೀರ ಚರ್ಚೆಗಳಾಗಲಿಲ್ಲ. ಅಕ್ರಮ ಗಣಿಗಾರಿಕೆ ಮತ್ತು ಕಳ್ಳಸಾಗಾಣಿಕೆ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದನ್ನು ಜನರಿಗೆ ಮನದಟ್ಟು ಮಾಡಿಸಲಿಲ್ಲ.

ನ್ಯಾಯಾಂಗದ ಅಂಗಳದಿಂದ ಮರಕುಂಬಿ ಪ್ರಕರಣಕ್ಕೆ ಸಿಕ್ಕ ನ್ಯಾಯದ ಬೆನ್ನಿಗೇ, ಬೇಲೆಕೇರಿ ಬಹುಕೋಟಿ ಹಗರಣದಲ್ಲೂ ದಿಟ್ಟ ತೀರ್ಪು ಪ್ರಕಟವಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಕಾರವಾರ–ಅಂಕೋಲಾ ಶಾಸಕ ಸತೀಶ್ ಸೈಲ್‌ರನ್ನು ಅದಿರು ಕಳ್ಳ ಎಂದು ತೀರ್ಮಾನಿಸಿ 7 ವರ್ಷಗಳ ಕಠಿಣ ಶಿಕ್ಷೆ, 42 ಕೋಟಿ ದಂಡ ವಿಧಿಸಿದ್ದಾರೆ.

ಅಕ್ಟೋಬರ್ 24, 2024ರಂದು ಪ್ರಕಟವಾದ ಈ ತೀರ್ಪು, ನ್ಯಾಯಾಂಗ ವ್ಯವಸ್ಥೆಯಲ್ಲಿ ಚಾರಿತ್ರಿಕವಾದುದು. ಮಾದರಿಯಾಗಿ ನಿಲ್ಲುವಂಥದು. ಉಲ್ಲೇಖಕ್ಕೆ ಯೋಗ್ಯವಾದುದು. ನ್ಯಾಯ ವ್ಯವಸ್ಥೆ ಬಗೆಗಿದ್ದ ಜನರ ನಂಬಿಕೆಯನ್ನು ಗಟ್ಟಿಗೊಳಿಸುವಂಥದು. ಸಮಾಜದಲ್ಲಿ ಜನಸಾಮಾನ್ಯರಾಗಲೀ, ಜನನಾಯಕರೇ ಆಗಲೀ, ತಪ್ಪೆಸಗಿದಾಗ ಕಾನೂನು ಎಲ್ಲರಿಗೂ ಒಂದೇ ಎನ್ನುವ ಸಂದೇಶವನ್ನು ಸಾರುವಂಥದು. ಹಾಗೆಯೇ, ಸಂವಿಧಾನದ ಮುಂದೆ ಯಾರೂ ದೊಡ್ಡವರಿಲ್ಲ ಎಂಬುದನ್ನು ಹೇಳುವಂಥದು.

ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯದಲ್ಲಿ ಈ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ, ರಾಜ್ಯದ ಸುದ್ದಿ ಮಾಧ್ಯಮಗಳಲ್ಲಿ ಇದು ಬಹುಕೋಟಿ ಹಗರಣವೆಂದು ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರತಿಕ್ಷಣವೂ ಬಹುಕೋಟಿ ಬೇಲೆಕೇರಿಯದೇ ಸುದ್ದಿಯಾಗಿತ್ತು. ಆದರೆ, ತೀರ್ಪು ಪ್ರಕಟವಾಗುತ್ತಿದ್ದಂತೆ, ಅದು ಒಂದು ಸುದ್ದಿಗಷ್ಟೇ ಸೀಮಿತವಾಯಿತು. ಕೆಲವು ಮಾಧ್ಯಮಗಳು ಸುದ್ದಿಯನ್ನು ಜೀವಂತವಾಗಿದ್ದು ಬಿಟ್ಟರೆ, ಹಲವು ಮಾಧ್ಯಮಗಳು ಈ ತೀರ್ಪಿಗೆ ತಿಪ್ಪೆ ಸಾರಿಸಿ, ಬಹಳ ದೊಡ್ಡ ಮೋಸವೆಸಗಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀರ್ಪಿನ ಚಾರಿತ್ರಿಕ ಮಹತ್ವವನ್ನು ಹಲವು ಮಾಧ್ಯಮ ಸಂಸ್ಥೆಗಳು ಅರಿಯಲಿಲ್ಲ. ಬಹುಕೋಟಿ ಹಗರಣ ನಾಡಿನ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಉಂಟು ಮಾಡಿದ ಪಲ್ಲಟಗಳ ಕುರಿತು ಗಂಭೀರ ಚರ್ಚೆಗಳಾಗಲಿಲ್ಲ. ಅಕ್ರಮ ಗಣಿಗಾರಿಕೆ ಮತ್ತು ಕಳ್ಳಸಾಗಾಣಿಕೆ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದನ್ನು ಜನರಿಗೆ ಮನದಟ್ಟು ಮಾಡಿಸಲಿಲ್ಲ.

ಅದಕ್ಕಿಂತ ಹೆಚ್ಚಾಗಿ ಬೇಲೆಕೇರಿ ಅದಿರು ಹಗರಣವನ್ನು ಹೊರಗೆಳೆದ ಲೋಕಾಯುಕ್ತ ನ್ಯಾ. ಸಂತೋಷ್ ಹೆಗಡೆ, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ದಕ್ಷತೆ ಮತ್ತು ಪ್ರಾಮಾಣಿಕತೆ ಬಗ್ಗೆ ಬಾಯಿಮಾತಿನ ಪ್ರಶಂಸೆಯೂ ವ್ಯಕ್ತವಾಗಲಿಲ್ಲ. ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿ ಹೋರಾಟ ಮಾಡಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠರ ಜನಪರ ಕಾಳಜಿಯನ್ನು ಗುರುತಿಸುವ, ಗೌರವಿಸುವ ಕೆಲಸವೂ ಆಗಲಿಲ್ಲ.

ನೈತಿಕ ಸ್ಥೈರ್ಯ ಕಳೆದುಕೊಂಡ ಮಾಧ್ಯಮಗಳಿಗೆ ಜನಪ್ರತಿನಿಧಿಗಳ ಭ್ರಷ್ಟಾಚಾರ ಇವತ್ತು ಇಷ್ಯೂ ಅಲ್ಲ. ಜನನಾಯಕರ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಟಿಆರ್‍‌ಪಿ ಏರುವುದಿಲ್ಲ. ಅದರ ಬದಲಿಗೆ ನಟ ದರ್ಶನ್ ಕ್ಯಾಮರಾಗಳಿಗೆ ಬೆರಳು ತೋರಿದ್ದು ಮಹಾಪರಾಧವಾಗಿ ಕಾಣುತ್ತದೆ. ದಿನವಿಡೀ ಸುದ್ದಿಯಾಗುತ್ತದೆ. ಚರ್ಚೆಯಾಗುತ್ತದೆ. ಏಕೆಂದರೆ ಅದರಲ್ಲಿ ಸೆಕ್ಸ್, ಕ್ರೈಮ್, ಗ್ಲ್ಯಾಮರ್ ಇದೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

ಅಕ್ರಮ ಗಣಿಗಾರಿಕೆ ಮತ್ತು ಕಳ್ಳಸಾಗಾಣಿಕೆಯಲ್ಲಿ ಅತಿರಥ ಮಹಾರಥರಿದ್ದಾರೆ. ಎಂಟು ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರಿನ ಹಿಂದೆ ಸಾವಿರಾರು ಕೋಟಿ ರೂ.ಗಳ ವಹಿವಾಟಿದೆ. ಅದರಿಂದ ಸುಮಾರು ಇನ್ನೂರು ಕೋಟಿ ಸರ್ಕಾರಕ್ಕೆ ನಷ್ಟವಾಗಿದೆ. ಅದರಲ್ಲಿ ಭಾಗಿಯಾದವರು- ಬಿಜೆಪಿ, ಕಾಂಗ್ರೆಸ್, ಜೆಡಿಎಸ್- ಮೂರೂ ಪಕ್ಷಗಳಲ್ಲಿ ಹರಿದು ಹಂಚಿಹೋಗಿದ್ದಾರೆ. ಅದರಲ್ಲೂ ದೇಶಭಕ್ತ ಬಿಜೆಪಿ 2008ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಏರಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ಅಕ್ರಮ ಗಣಿಗಾರಿಕೆಯ ಹಣದಿಂದ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅಷ್ಟೇ ಅಲ್ಲ, ಗಣಿ ಕುಳಗಳು ರಾಜಕೀಯ ರಂಗ ಪ್ರವೇಶಿಸಿ, ಶಾಸಕ, ಸಂಸದ, ಸಚಿವರಾಗಿದ್ದು ಕೂಡ ಬಿಜೆಪಿಯಿಂದ ಎಂಬುದು ತಿಳಿದಿದೆ.  

ರಾಜಕೀಯ ಪಕ್ಷಗಳು ಮತ್ತು ನಾಯಕರು ಅಕ್ರಮ ಗಣಿಗಾರಿಕೆಯನ್ನು ಅಧಿಕಾರ ಮತ್ತು ಹಣದ ಬಲದಿಂದ ಸಕ್ರಮಗೊಳಿಸಿರಬಹುದು. ಗಣಿ ಕುಳಗಳನ್ನೇ ಶಾಸಕ, ಸಚಿವರನ್ನಾಗಿ ಮಾಡಿ ರಾಜಕೀಯ ಕ್ಷೇತ್ರವನ್ನು ಯಾರೂ ಗಂಭೀರವಾಗಿ ಪರಿಗಣಿಸದಂತೆ ಮಾಡಿರಬಹುದು. ಆದರೆ, ನಾಡಿನ ಪ್ರಜ್ಞಾವಂತ ನಾಗರಿಕರು, ಪ್ರಾಮಾಣಿಕ ಅಧಿಕಾರಿಗಳು ನೆಲದ ಕಾನೂನಿನಡಿ ಅನಿಲ್ ಲಾಡ್, ನಾಗೇಂದ್ರ, ಆನಂದ್ ಸಿಂಗ್, ಜನಾರ್ದನ ರೆಡ್ಡಿ ಮತ್ತು ಸತೀಶ್ ಸೈಲ್ ಗಳಂತಹ ವ್ಯಕ್ತಿಗಳನ್ನು ಜೈಲಿಗೆ ತಳ್ಳಿರುವುದನ್ನು ಮರೆಯಬಾರದು.

ಮೂರು ಉಪಚುನಾವಣೆಯ ಬಿಸಿಯಲ್ಲಿರುವ ಮೂರೂ ಪಕ್ಷಗಳ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ನುಂಗಲಾರದ ತುತ್ತಾಗಿದೆ. ನಾಯಕರಾರೂ ತೀರ್ಪಿನ ಕುರಿತು ಸ್ವತಂತ್ರ ಹೇಳಿಕೆ ಕೊಡುವ ಧೈರ್ಯ ಮಾಡದಂತಾಗಿದೆ. ಏಕೆಂದರೆ, ಅಕ್ರಮ ಗಣಿಗಾರಿಕೆಯಲ್ಲಿ ಮೂರೂ ಪಕ್ಷಗಳು ಭಾಗಿಯಾಗಿವೆ. ಉಪ ಚುನಾವಣೆಯಲ್ಲಿ ಗಣಿ ಹಣ ಹರಿದಾಡುತ್ತಿದೆ. ಎಲ್ಲರೂ ಗಾಜಿನ ಮನೆಯಲ್ಲಿದ್ದಾರೆ. ಕಳ್ಳರು ಹೆದರಿದ್ದಾರೆ. ಹಾಗಾಗಿ ಮೂರೂ ಪಕ್ಷಗಳ ನಾಯಕರು ಬುದ್ಧಿಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ.

ಈಗ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯದ ಕಠಿಣ ಶಿಕ್ಷೆಗೆ ಗುರಿಯಾಗಿರುವ ಶಾಸಕ ಸತೀಶ್ ಸೈಲ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು. ಅವರ ಅಕ್ರಮ ವ್ಯವಹಾರದ ಪೋಷಕರು ಗಾಲಿ ಜನಾರ್ದನ ರೆಡ್ಡಿಯವರು. ರೆಡ್ಡಿಯವರನ್ನು ಬಿಜೆಪಿ ಬೆಳೆಸಿದೆ ಮತ್ತು ಬಿಗಿದಪ್ಪಿಕೊಂಡಿದೆ. ಈ ಬಗ್ಗೆ ಮಾತನಾಡಬೇಕಾದ ಕೇಂದ್ರದ ಕೈಗಾರಿಕಾ ಸಚಿವ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ವಿಧಾನಸಭೆಯಲ್ಲಿ ಗುಡುಗಿ, 400 ಕಿ.ಮೀ. ಪಾದಯಾತ್ರೆ ಮಾಡಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರೇ ಈಗಲೂ ಅಧಿಕಾರದಲ್ಲಿದ್ದಾರೆ. ತೀರ್ಪು ಕುರಿತು ಪ್ರತಿಕ್ರಿಯಿಸದೆ ಮೌನವಾಗಿದ್ದಾರೆ.

ರಾಜಕೀಯ ಪಕ್ಷಗಳಿಗೆ, ನಾಯಕರಿಗೆ ಅಧಿಕಾರ ಮತ್ತು ಭ್ರಷ್ಟಾಚಾರ ಅನಿವಾರ್ಯವಾಗಿರಬಹುದು. ಅಕ್ರಮ ಗಣಿಗಾರಿಕೆ ಹಣ ಬಾಯ್ಕಟ್ಟಿರಬಹುದು. ಆದರೆ ಮಾಧ್ಯಮಗಳು ಮೌನಕ್ಕೆ ಜಾರಬೇಕಿಲ್ಲ. ಪ್ರಭುತ್ವದ ಪರವಿದ್ದು, ತಮಗೆ ಬೇಕಾದ್ದನ್ನು ತೋರಿದರೆ, ಪ್ರಭುಗಳ ತಿರಸ್ಕಾರಕ್ಕೆ ಒಳಗಾಗುವುದರಲ್ಲಿ ಅನುಮಾನವಿಲ್ಲ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....