‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

Date:

ನೂತನ ಕಾರ್ಯಪಡೆಯ ಉದ್ದೇಶಗಳನ್ನು ಹೇಳುವಾಗ, ಎಲ್ಲ ಬಗೆಯ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್‌ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಮಾತ್ರ ಎಲ್ಲಿಯೂ ಇಲ್ಲ

ವನ್ಯಜೀವಿಗಳೊಂದಿಗಿನ ಮಾನವ ಸಂಘರ್ಷಕ್ಕೆ ಕಡಿವಾಣ ಮತ್ತು ಅರಣ್ಯ ಒತ್ತುವರಿ ತೆರವು ಉದ್ದೇಶಗಳನ್ನು ಇಟ್ಟುಕೊಂಡು ನೂತನ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಇಲಾಖೆ, ಗೃಹ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕಾರ್ಯಪಡೆಯ ಭಾಗವಾಗಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ಉದ್ದೇಶ ಮತ್ತು ತಂಡದ ವಿನ್ಯಾಸ ಗಮನಿಸಿದರೆ, ಮೇಲ್ನೋಟಕ್ಕೆ ಸಮತೋಲನ ಸಾಧಿಸಲಾಗಿದೆ ಮತ್ತು ಈ ಸಂದರ್ಭಕ್ಕೆ ಇದು ಅವಶ್ಯವಾಗಿ ಆಗಬೇಕಿದ್ದ ಕೆಲಸ. ಆದರೆ, ಕಾರ್ಯಪಡೆ ಸುಗಮವಾಗಿ ಕಾರ್ಯನಿರ್ವಹಿಸಬೇಕೆಂದರೆ, ಕೆಲವು ತಾಂತ್ರಿಕ ಸಂಗತಿಗಳನ್ನು ಮೊದಲೇ ಬಗೆಹರಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ರಾಜ್ಯದಲ್ಲಿ ಎರಡು ಲಕ್ಷ ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿಯಾಗಿದೆ ಎಂಬುದು ಅರಣ್ಯ ಇಲಾಖೆಯ ಅಂದಾಜು. ಕಾರ್ಯಪಡೆಯ ಉದ್ದೇಶಗಳನ್ನು ವಿಸ್ತರಿಸಿ ಹೇಳುವಾಗ, ಈ ಎಲ್ಲ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್‌ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಎಲ್ಲಿಯೂ ಇಲ್ಲ. ಹಿಂದೊಮ್ಮೆ ಅರಣ್ಯವಾಗಿದ್ದ ಭೂಮಿಯನ್ನು ನಿಯಮಗಳ ಅನುಸಾರ ಕಂದಾಯ ಇಲಾಖೆಯ ಸುಪರ್ದಿಗೆ ಕೊಡಲಾಗಿತ್ತು. ಅದಾದ ಹಲವು ವರ್ಷಗಳ ನಂತರ, ಅರಣ್ಯ ಇಲಾಖೆಯು ಹಳೆಯ ದಾಖಲಾತಿಗಳನ್ನು ಇಟ್ಟುಕೊಂಡು, ಕಂದಾಯ ಇಲಾಖೆಯಿಂದ ಭೂಮಿ ಸಾಗುವಳಿ ಪಡೆದವರಿಗೆ ಅಕ್ಷರಶಃ ಕಿರುಕುಳ ಕೊಡಲು ಆರಂಭಿಸಿತು. ಹೀಗೆ ಶುರುವಾದ ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಜಟಾಪಟಿಯಿಂದ, ಸಾಗುವಳಿ ಪಡೆದ ರೈತರಷ್ಟೇ ಅಲ್ಲದೆ, ಇನ್ನೇನು ಸಾಗುವಳಿ ಚೀಟಿ ಪಡೆಯಲಿದ್ದ ರೈತರು ಕೂಡ ಸಂಕಷ್ಟಕ್ಕೆ ಸಿಲುಕಿದರು. ಇದೇ ಕಾರಣಕ್ಕೆ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಉಳುಮೆ ಮಾಡುತ್ತಿರುವ (ಬಗರ್‌ ಹುಕುಂ) ರೈತರ ಬದುಕು ಹಲವು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದೆ. ಸರ್ಕಾರಗಳು, ಸರ್ಕಾರಗಳನ್ನು ರಚಿಸಿದ ಪಕ್ಷಗಳು ಬದಲಾಗುತ್ತಲೇ ಇದ್ದರೂ, ಅಧಿಕಾರ ಹಿಡಿಯುವ ಎಲ್ಲ ಪಕ್ಷಗಳೂ ತಮ್ಮದು ರೈತಪರ ಸರ್ಕಾರ ಅಂತ ಎಷ್ಟೇ ಬೀಗಿದರೂ, ಈ ರೈತರ ವಿಷಯದಲ್ಲಿನ ನಯವಂಚನೆ ತಪ್ಪಿಲ್ಲ.

ಗಾಯದ ಮೇಲೆ ಬರೆ ಹಾಕಿದಂತೆ, ಮಳೆಯಾಶ್ರಿತ ಜಮೀನುಗಳ ರೈತರನ್ನು ಬರ, ಅತಿವೃಷ್ಟಿ, ಬೆಲೆ ಏರಿಳಿತ, ಮಾರುಕಟ್ಟೆಯ ಅನಿಶ್ಚಿತತೆ ಕಂಗಾಲು ಮಾಡುತ್ತಿವೆ. ಈ ರೈತರು, ಬೆಳೆ ಬೆಳೆಯಲು ಬ್ಯಾಂಕ್‌ಗಳಿಂದ ಸಾಲ ಪಡೆಯಲಾಗಲೀ, ಹೈನುಗಾರಿಕೆಯಂತಹ ಉಪಕಸುಬುಗಳನ್ನು ಮಾಡಲೆಂದು ಸರ್ಕಾರದಿಂದ ಸಹಾಯಧನ ಪಡೆಯಲಾಗಲೀ, ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿಗಳನ್ನು ಪಡೆಯಲಾಗಲೀ ಸಾಧ್ಯವೇ ಇಲ್ಲ. ಏಕೆಂದರೆ, ಉಳುಮೆ ಮಾಡುತ್ತಿರುವ ಭೂಮಿ ಅವರದಲ್ಲ. ಈ ಸಮಸ್ಯೆ ಬಗೆಹರಿಯಬೇಕೆಂದರೆ, ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವೆ ಸಮನ್ವಯ ಸಾಧ್ಯವಾಗಬೇಕು. ಜೊತೆಗೆ, ಅರಣ್ಯ ಸಚಿವರು, ಉಪಮುಖ್ಯಮಂತ್ರಿ, ವಿರೋಧ ಪಕ್ಷಗಳ ನಾಯಕರು ಹಾಗೂ ಮುಖ್ಯಮಂತ್ರಿಗಳ ಒತ್ತಾಸೆ ಕೂಡ ಅತ್ಯವಶ್ಯ. ಇದು ಸಾಧ್ಯವಾದರೆ ಮಾತ್ರ ನೂತನ ಕಾರ್ಯಪಡೆಯ ಉದ್ದೇಶಗಳು ಈಡೇರಬಲ್ಲವು. ಇಲ್ಲದಿದ್ದರೆ, ಅರಣ್ಯ ಒತ್ತುವರಿ ತೆರವು ಈಗ ಹೇಗೆ ಅತಂತ್ರ ಸ್ಥಿತಿಯಲ್ಲಿದೆಯೋ ಮುಂದೆಯೂ ಅದೇ ರೀತಿ ಇರಲಿದೆ. ವನ್ಯಜೀವಿಗಳ ಜೊತೆಗಿನ ಮಾನವ ಸಂಘರ್ಷವೂ ತಾರಕಕ್ಕೆ ಏರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....