ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

Date:

ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು, ಬಿಜೆಪಿ ಕ್ಯಾಂಡಿಡೇಟ್ ಮುಖೇಶ್ ದಲಾಲ್ ಹೊರತುಪಡಿಸಿ ಉಳಿದೆಲ್ಲವರೂ ಉಮೇದುವಾರಿಕೆ ವಾಪಸ್ ಪಡೆದ ಕಾರಣ, ಬಿಜೆಪಿ ಅಭ್ಯರ್ಥಿಯನ್ನು ವಿಜಯಶಾಲಿ ಎಂದು ಘೋಷಿಸಲಾಗಿದೆ. ಇದೇ ರೀತಿಯ ಪ್ರಹಸನ ಅರುಣಾಚಲ ಪ್ರದೇಶದಲ್ಲೂ ನಡೆದಿದೆ. ಲೋಕಸಭೆ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆಯುತ್ತಿರುವ ರಾಜ್ಯ ಅರುಣಾಚಲ. 60 ಅಸೆಂಬ್ಲಿ ಕ್ಷೇತ್ರಗಳ ಪೈಕಿ ಹತ್ತರಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ! ಆರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿದ್ದರೆ, ನಾಲ್ಕರಲ್ಲಿ ಪ್ರತಿಸ್ಪರ್ಧಿಗಳೆಲ್ಲ ನಾಮಪತ್ರ ವಾಪಸ್ ಪಡೆದು ಬಿಜೆಪಿ ಗೆಲುವಿಗೆ ಕಾರಣವಾಗಿದ್ದಾರೆ.

ಎದುರಾಳಿಯೇ ಇಲ್ಲದೇ ಆಯ್ಕೆಯಾಗುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ. ಕಾಂಗ್ರೆಸ್ ಅಭ್ಯರ್ಥಿ ಕಣದಲ್ಲಿ ಇರದಿದ್ದಾಗ ಉಳಿದವರೆಲ್ಲರೂ ನಾಮಪತ್ರ ವಾಪಸ್ ಪಡೆದಿರುವುದು ಮತ್ತು ಯಾರೂ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವುದು ಅಕ್ರಮಗಳ ವಾಸನೆಯನ್ನು ರಾಚಿದೆ. ಹೀಗಾಗಿಯೇ ನೋಟಾ (None of the above- ಮೇಲಿನ ಯಾರೂ ಅಲ್ಲ) ಆಯ್ಕೆ ಚರ್ಚೆಗೆ ಬಂದಿದೆ. ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಿ ಮತದಾನಕ್ಕೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಟಾ ಮತಗಳೇ ಹೆಚ್ಚಿದ್ದಾಗ ಸದರಿ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಬೇಕೆಂದು ಬರಹಗಾರ ಶಿವ ಖೇರಾ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಪಡೆಯಲು ಸುಪ್ರೀಂಕೋರ್ಟ್ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ನೋಟಾ ಮತಗಳು ಇತರ ಅಭ್ಯರ್ಥಿಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಕುರಿತು ನಿಯಮಗಳನ್ನು ರೂಪಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಸೂರತ್‌ನ ಬಿಜೆಪಿ ಅಭ್ಯರ್ಥಿ ವಿರುದ್ಧ ನೋಟಾವನ್ನು ಅಭ್ಯರ್ಥಿ ಎಂದು ಭಾವಿಸಿ ಮತ ಚಲಾಯಿಸುವುದು ಸಾಧ್ಯವಾಗಿದ್ದರೆ ಜನರ ನಿಜವಾದ ಆಯ್ಕೆ ಸ್ಪಷ್ಟವಾಗುತ್ತಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ನೋಟಾಕ್ಕೆ ಮತ ಹಾಕುವವರ ವೋಟಿಗೂ ಇತರರಿಗೆ ಚಲಾವಣೆಯಾಗುವ ಮತದಷ್ಟೇ ಮಹತ್ವವಿದೆ, ಮೌಲ್ಯವಿದೆ. ಯಾವುದೇ ಕ್ಷೇತ್ರದಲ್ಲಿ ಮತ ಚಲಾಯಿಸುವ ಹಕ್ಕನ್ನು ಮತದಾರರಿಗೆ ನಿರಾಕರಿಸಬಾರದು. ಚುನಾವಣಾ ಕಣದಲ್ಲಿ ಒಬ್ಬರೇ ಅಭ್ಯರ್ಥಿ ಇದ್ದರೂ ಆ ಅಭ್ಯರ್ಥಿಯ ಪರ ಅಥವಾ ವಿರುದ್ಧವಾಗಿ ಮತ ಚಲಾಯಿಸುವ ಅವಕಾಶವನ್ನು ನೀಡಬೇಕು. ಹೀಗಾಗಿ ಯಾವುದೇ ಪ್ರತಿಸ್ಪರ್ಧಿ ಇಲ್ಲದೆ ಅಭ್ಯರ್ಥಿಯೊಬ್ಬರನ್ನು ವಿಜೇತ ಎಂದು ಘೋಷಿಸುವುದು ತಪ್ಪಾಗುತ್ತದೆ.

ನೋಟಾ ಚಾಲ್ತಿಗೆ ಬರುವ ಮುನ್ನ ಫಾರ್ಮ್ 27 ಜಾರಿಯಲ್ಲಿತ್ತು. ಯಾರಿಗೂ ಮತ ಹಾಕಲು ಇಷ್ಟವಿಲ್ಲ ಎನ್ನುವ ಮತದಾರರು ಫಾರ್ಮ್  27 ಮೂಲಕ ತಿಳಿಸಬಹುದಿತ್ತು. ಆದರೆ ಅದು ಮತದಾರನ ಗೌಪ್ಯತೆಯನ್ನು ಕಾಪಾಡುತ್ತಿರಲಿಲ್ಲ. ಈ ವಿಚಾರ ಸುಪ್ರೀಂಕೋರ್ಟ್ ಮುಂದೆ ಬಂದಾಗ 2013ರಲ್ಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ನೋಟಾವನ್ನು ಪರಿಚಯಿಸಲಾಯಿತು. ಮತದಾರರ ಆಯ್ಕೆಯ ಅಭಿವ್ಯಕ್ತಿಯನ್ನು ಸಶಕ್ತಗೊಳಿಸುವ ಮಹತ್ವದ ಹೆಜ್ಜೆಯೂ ಇದಾಗಿತ್ತು. ನೋಟಾ ನಕಾರಾತ್ಮಕ ಮತವಾಗಿ ಕಂಡುಬಂದರೂ, ಇದು ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆ. ಆದರೆ ಇದು ಹಲ್ಲಿಲ್ಲದ ಹುಲಿಯಾಗಿದೆ. ನೋಟಾಕ್ಕೆ ಹೆಚ್ಚು ಮತ ಬಂದರೂ ಪ್ರಯೋಜನವಾಗುತ್ತಿಲ್ಲ. ಯಾಕೆಂದರೆ ನೋಟಾವನ್ನು ಒಂದು ಅಭ್ಯರ್ಥಿಯನ್ನಾಗಿ ಪರಿಗಣಿಸುತ್ತಿಲ್ಲ.

ಮಹಾರಾಷ್ಟ್ರ ಮತ್ತು ಹರಿಯಾಣದ ರಾಜ್ಯ ಚುನಾವಣಾ ಆಯೋಗಗಳು ನೋಟಾವನ್ನು ಕಾಲ್ಪನಿಕ ಅಭ್ಯರ್ಥಿಯನ್ನಾಗಿ ಮಾಡಿ ಅಧಿಸೂಚನೆಗಳನ್ನು ಹೊರಡಿಸಿವೆ. ನೋಟಾಕ್ಕೆ ಇತರ ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದರೆ ಚುನಾವಣೆಯನ್ನು ಅನೂರ್ಜಿತಗೊಳಿಸಲಾಗುತ್ತದೆ ಮತ್ತು ಮರುಚುನಾವಣೆ ನಡೆಸಲಾಗುವುದು ಎಂದು ಘೋಷಿಸಲಾಗಿದೆ. ಇಂತಹ ನಿಯಮಗಳನ್ನು ಇತರ ರಾಜ್ಯಗಳಿಗೂ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ವಿಸ್ತರಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇಂಡೋನೇಷಿಯಾದಂತಹ ರಾಷ್ಟ್ರಗಳಲ್ಲಿ ಇಂತಹ ನಿಬಂಧನೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಸ್ವೀಡನ್, ಡೆನ್ಮಾರ್ಕ್‌ನಂತಹ ದೇಶಗಳಲ್ಲಿ ನೋಟಾಕ್ಕೆ ಹೆಚ್ಚು ಮತ ಬಂದರೆ, ಈಗಾಗಲೇ ಕಣದಲ್ಲಿದ್ದ ಅಭ್ಯರ್ಥಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಬಾರದೆಂಬ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿರುವುದನ್ನು ಗಮನಿಸಬೇಕು.

ಮಧ್ಯಪ್ರದೇಶದ ಇಂಧೋರ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಕ್ಷಯ ಬಮ್ ಅವರು ನಾಮಪತ್ರ ವಾಪಸ್ ಪಡೆದು ಬಿಜೆಪಿ ಸೇರಿಕೊಂಡರು. ಆ ಮೂಲಕ ಚುನಾವಣಾ ಅಕ್ರಮಗಳಿಗೆ ಸಾಕ್ಷಿಯಾಗಿ ಅಕ್ಷಯ್‌ ನಿಂತಿದ್ದಾರೆ. ಆಘಾತಗೊಂಡಿರುವ ಕಾಂಗ್ರೆಸ್‌, “ನೋಟಾಕ್ಕೆ ಮತ ಹಾಕಿ” ಎಂದು ಕರೆ ನೀಡಿದೆ. ಎದುರಾಳಿಯೇ ಇಲ್ಲದೇ ಆಯ್ಕೆ ಆಗುವುದನ್ನು ತಪ್ಪಿಸಲು, ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸುವುದಕ್ಕೆ ಇದು ಸಕಾಲ.

ಕೊನೆಯಲ್ಲಿ ಒಂದು ಮಾತು: ನಾಡಿನ ಎರಡು ಪ್ರಮುಖ ದಿನಪತ್ರಿಕೆಗಳಾದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಈ ಕುರಿತು ನಿಷ್ಠುರ ಸಂಪಾದಕೀಯಗಳನ್ನು ಬರೆದಿರುವುದು ಅಭಿನಂದನೀಯ ಸಂಗತಿ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....