ಈ ದಿನ ಸಂಪಾದಕೀಯ | ಒಬಿಸಿಗಳಿಗೆ ಸಿಗಬೇಕಿದೆ ಶಾಸನಸಭೆಗಳಲ್ಲಿ ಮೀಸಲಾತಿ

Date:

ಮಂಡಲ್‌ ರಾಜಕಾರಣದ ವಿರುದ್ಧ ಕಮಂಡಲ ರಾಜಕಾರಣ ಶುರುವಾಗಿ ಒಬಿಸಿಗಳ ದನಿಯನ್ನು ಹತ್ತಿಕ್ಕುವ ಷಡ್ಯಂತ್ರ ವ್ಯವಸ್ಥಿತವಾಗಿ ನಡೆಯಿತು. ಅಂದು ಹಳಿತಪ್ಪಿದ ಒಬಿಸಿಗಳು ನಿಧಾನಕ್ಕೆ ಎಚ್ಚೆತ್ತುಕೊಳ್ಳುವ ಸೂಚನೆಗಳು ಸಿಗುತ್ತಿವೆ.

ಆಗಸ್ಟ್ 30ರಂದು ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆ ನಡೆಸಿದ ‘ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ’ ವಿಚಾರಸಂಕಿರಣವು ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿತು. ಒಬಿಸಿ ಪ್ರಾತಿನಿಧ್ಯಕ್ಕೆ ಸಂಬಂಧಪಟ್ಟ ನಿರ್ಣಯ ಮುಂದಿನ ದಿನಗಳಲ್ಲಿ ಬಹುಚರ್ಚೆಗೆ ಒಳಗಾಗಬೇಕಿದೆ. ”ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶಾಸನಸಭೆಗಳಲ್ಲಿ ಮೀಸಲಾತಿ ಕಲ್ಪಿಸಿರುವುದು ನ್ಯಾಯಕ್ಕೆ ಪೂರಕವಾದ ಕ್ರಮವಾಗಿದೆ. ಅದೇ ರೀತಿ ಹಿಂದುಳಿದ ವರ್ಗಗಳಿಗೂ ಶಾಸನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವುದು ಅಗತ್ಯವಿದೆ. ಮುಂಬರುವ ಜಾತಿ ಸಮೀಕ್ಷೆಯಲ್ಲಿ ಬರುವ ದತ್ತಾಂಶಗಳನ್ನು ಆಧರಿಸಿ ಆ ನಿಟ್ಟಿನಲ್ಲಿ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂಬ ಆಗ್ರಹ ನ್ಯಾಯೋಚಿತವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ 25 ಸಂಸದರು ಬಿಜೆಪಿಯಿಂದ ಆಯ್ಕೆಯಾಗಿದ್ದರು. 28 ಸಂಸದರ ಪೈಕಿ ಒಬ್ಬನೇ ಒಬ್ಬ ಇತರೆ ಹಿಂದುಳಿದ ವರ್ಗಕ್ಕೆ ಸೇರಿರಲಿಲ್ಲ. ಇದು ಒಬಿಸಿಗಳಲ್ಲಿ ಕ್ಷೀಣಿಸುತ್ತಿರುವ ರಾಜಕೀಯ ಜಾಗೃತಿಯ ಸೂಚನೆಯೂ ಆಗಿತ್ತು. 2024ರ ವೇಳೆಗೆ ಜಾತಿ ಪ್ರಾತಿನಿಧ್ಯ ಮುನ್ನೆಲೆಗೆ ಬಂದಿದ್ದರಿಂದ ಇಬ್ಬರಾದರೂ ಒಬಿಸಿಗಳು ಆಯ್ಕೆಯಾದರು. ಆದರೆ ಕರ್ನಾಟಕದ ಜನಸಂಖ್ಯೆಯಲ್ಲಿ ಒಬಿಸಿಗಳು ಹೆಚ್ಚಿದ್ದಾರೆ ಎಂಬುದು ಮೇಲುನೋಟಕ್ಕೆ ಕಾಣುತ್ತದೆ. ”ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿಯನ್ನು ನಡೆಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ವೇಳೆ ಪ್ರಚಾರ ಮಾಡಿದರು. ಇದನ್ನು ಪ್ರಧಾನಿ ಮೋದಿಯವರು, ”ಜಾತಿಗಳ ಹೆಸರಲ್ಲಿ ದೇಶವನ್ನು ಒಡೆಯಲಾಗುತ್ತಿದೆ” ಎಂದು ಬಿಂಬಿಸಿದರು. ಆದರೆ ಕಾಲಚಕ್ರ ಬೇಗ ತಿರುಗಿದೆ. ಜಾತಿ ಗಣತಿ ಮಾಡುವುದಾಗಿ ಈಗ ಕೇಂದ್ರ ಸರ್ಕಾರವೇ ಹೇಳಿಕೊಂಡಿದೆ. ಒಬಿಸಿಗಳು ನಿಧಾನಕ್ಕೆ ಎಚ್ಚೆತ್ತುಕೊಳ್ಳುತ್ತಿರುವ ಸೂಚನೆಯೂ ಇದಾಗಿದೆ.

ಇದನ್ನೂ ಓದಿರಿ: ಈ ದಿನ ಸಂಪಾದಕೀಯ | ತಬ್ಬಲಿ ಅಲೆಮಾರಿಗಳನ್ನು ‘ಶವಪೆಟ್ಟಿಗೆ’ಗೆ ಹಾಕಿದ ಕಾಂಗ್ರೆಸ್ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬಿಸಿ ಪಟ್ಟಿಯಲ್ಲಿದ್ದ ಮಾತ್ರಕ್ಕೆ ಎಲ್ಲರೂ ಒಬಿಸಿಗಳಾಗುವುದಿಲ್ಲ. ಪ್ರವರ್ಗ 1, ಪ್ರವರ್ಗ 2ಎ ಮತ್ತು 2ಬಿಯಲ್ಲಿ ಬರುವ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮುಖ್ಯವಾಗಿಟ್ಟುಕೊಂಡು ನಾವು ಚರ್ಚೆ ನಡೆಸಬೇಕು” ಎಂದು ಅಭಿಪ್ರಾಯ ತಾಳುವ ರಾಜಕೀಯ ವಿಶ್ಲೇಷಕ ಎ.ನಾರಾಯಣ ಅವರ ಮಾತು ಇಲ್ಲಿ ಉಲ್ಲೇಖಾರ್ಹ. ಒಬಿಸಿ ಪಟ್ಟಿಯಲ್ಲಿ ಬರುವ ಕೆಲವೇ ಕೆಲವು ಬಲಾಢ್ಯ ಸಮುದಾಯಗಳೇ ರಾಜಕೀಯದಲ್ಲಿ ಮುಂದುವರಿದಿವೆ. ಒಬಿಸಿ ಮೀಸಲಾತಿ ಎಂದು ಬಂದಾಗ ಅತ್ಯಂತ ಹಿಂದುಳಿದ ಸಮುದಾಯಗಳು ತಮ್ಮ ಪಾಲಿಗಾಗಿ ದನಿ ಎತ್ತುತ್ತವೆ ಎಂಬುದನ್ನು ನಾವು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.

ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ಇರುವುದರಿಂದ ದನಿ ಇಲ್ಲದ ಒಬಿಸಿಗಳಿಗೆ ಪ್ರಾತಿನಿಧ್ಯ ಸಿಕ್ಕಿದೆ. ದುರದೃಷ್ಟವಶಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಂದೂಡಲ್ಪಡುತ್ತಿರುವುದರಿಂದ ಒಬಿಸಿಗಳಿಗೆ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಇದರ ಬಗ್ಗೆ ಕಣ್ಣು ತೆರೆದು ನೋಡಬೇಕಾಗಿದೆ. ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೆಂದರೆ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಸಮರ್ಪಕವಾಗಿ ಆಗಬೇಕಿದೆ. ವೈಜ್ಞಾನಿಕ ದತ್ತಾಂಶ ಸರ್ಕಾರದ ಬಳಿ ಇದ್ದಾಗ ಮಾತ್ರ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಜಾತಿ ಸಮೀಕ್ಷೆಯ ವರದಿ ಬಿಡುಗಡೆ ಮಾಡಲು ಪ್ರಬಲ ಸಮುದಾಯಗಳು ಬಿಡಲೇ ಇಲ್ಲ. ಅದು ಅವೈಜ್ಞಾನಿಕವಾಗಿದೆ ಎಂಬ ಆಕ್ರೋಶ ವ್ಯಕ್ತವಾಯಿತು. ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಮತ್ತೊಂದು ಸಮೀಕ್ಷೆಯನ್ನು ಸೆಪ್ಟೆಂಬರ್ 22ರಿಂದ ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ ಮತ್ತೆ ತಕರಾರುಗಳನ್ನು ಮುಂದೆ ತಂದು ವರದಿ ಬಿಡುಗಡೆಯಾಗದಂತೆ ಅಡ್ಡಿಪಡಿಸುವ ಹುನ್ನಾರಗಳು ಇದ್ದೇ ಇರುತ್ತವೆ. ಇವುಗಳನ್ನು ಮನಗಂಡು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳು ಜಾಗೃತರಾಗಬೇಕು. ತಮ್ಮ ನಿಜಸ್ಥಿತಿಗಳನ್ನು ತಿಳಿಯಲು ಇರುವ ಪ್ರಬಲ ಅಸ್ತ್ರ ಜಾತಿ ಸಮೀಕ್ಷೆ ಎಂಬುದನ್ನು ಅವಕಾಶ ವಂಚಿತ ಸಮುದಾಯಗಳು ಮರೆಯಬಾರದು.

ಕೇಂದ್ರ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಜಾತಿಗಣತಿಯನ್ನು ನಡೆಸುವಾಗ, ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಬೆಲೆ ಇದೆಯೇ? ಪ್ರಯೋಜನವಿದೆಯೇ? ಎಂಬ ಪ್ರಶ್ನೆಗಳೂ ಈಗಾಗಲೇ ಬಂದಿವೆ. ಆದರೆ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗಗಳು ಕಾಲಕಾಲಕ್ಕೆ ಅಧ್ಯಯನ ಮಾಡಬೇಕೆಂದು ಇಂದ್ರಾ ಸಹಾನಿ ಪ್ರಕರಣದ ತೀರ್ಪಿನಲ್ಲೇ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಕೆಲಸವನ್ನು ಮಾಡಬೇಕಾದದ್ದು ರಾಜ್ಯ ಸರ್ಕಾರದ ಸಾಂವಿಧಾನಿಕ ಪಾಲನೆಯಾಗುತ್ತದೆ. ಅಷ್ಟೇ ಅಲ್ಲದೆ ಜಾತಿಗಳ ವಾಸ್ತವ ಸ್ಥಿತಿಗಳು ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರಗಳಿಗೆ ಹೆಚ್ಚು ತಿಳಿದಿರುತ್ತದೆ ಎಂಬುದು ಮುಖ್ಯವಾಗುತ್ತದೆ. ಕೇಂದ್ರ ಸರ್ಕಾರ ಕೇವಲ ತಲೆ ಎಣಿಕೆ ಮಾಡಿಬಿಡಬಹುದು, ಆದರೆ ರಾಜ್ಯ ಸರ್ಕಾರ ಜಾತಿಗಳ ವಾಸ್ತವ ಸ್ಥಿತಿಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿರಿ: ಈ ದಿನ ಸಂಪಾದಕೀಯ | ಕಾಲವೆಂಬ ಗಾಲಿಯಡಿ ಡಿ.ಕೆ.ಶಿ.; ಏಳುವರೇ, ಬೀಳುವರೇ?

ಮುಂದಿನ ರಾಜಕೀಯ ಪಲ್ಲಟಗಳಿಗೆ ಜಾತಿಗಣತಿ ನಾಂದಿ ಹಾಡಬೇಕಾದರೆ ಈಗಿನಿಂದಲೇ ಶಾಸನ ಸಭೆಗಳಲ್ಲಿ ಒಬಿಸಿ ಮೀಸಲಾತಿಗಾಗಿ ಚಳವಳಿ ಶುರುವಾಗಬೇಕು. ಅದಕ್ಕೆ ಕರ್ನಾಟಕ ರಾಜ್ಯವು ಮುಂದಡಿ ಇಡಬೇಕು. ಮಂಡಲ್‌ ರಾಜಕಾರಣದ ವಿರುದ್ಧ ಕಮಂಡಲ ರಾಜಕಾರಣ ಶುರುವಾಗಿ ಒಬಿಸಿಗಳ ದನಿಯನ್ನು ಹತ್ತಿಕ್ಕುವ ಷಡ್ಯಂತ್ರ ವ್ಯವಸ್ಥಿತವಾಗಿ ನಡೆಯಿತು. ಅಂದು ಹಳಿತಪ್ಪಿದ ಒಬಿಸಿಗಳು ನಿಧಾನಕ್ಕೆ ಎಚ್ಚೆತ್ತುಕೊಳ್ಳುವ ಸೂಚನೆಗಳು ಸಿಗುತ್ತಿವೆ. ಒಡೆದು ಹೋದವರು ಒಗ್ಗೂಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆ ಕಾರ್ಯ ಸಫಲವಾದರೆ ಮಾತ್ರ ದೀರ್ಘಕಾಲೀನ ಫಲಿತಾಂಶಗಳನ್ನು ನಿರೀಕ್ಷಿಸಬಹುದು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....