‘ಈ ದಿನ’ ಸಂಪಾದಕೀಯ | ಒಡಿಶಾ ರೈಲು ಅಪಘಾತ; ಪರಿಹಾರಕ್ಕೆ ಪರಮ ಆದ್ಯತೆಯಿರಲಿ

Date:

ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿಯವರ ಭೇಟಿ ಮತ್ತು ರಾಜ್ಯದ ಪ್ರಯಾಣಿಕರಿಗೆ ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿಕೊಟ್ಟಿರುವುದು ಸೂಕ್ತ ಬೆಳವಣಿಗೆ. ವಿಪತ್ತುಗಳನ್ನು ಎದುರಿಸಲು ಇಂತಹ ಸಂಘಟಿತ ಪ್ರಯತ್ನ ಅತ್ಯವಶ್ಯ

ಒಡಿಶಾ ರಾಜ್ಯದ ಬಾಹಾನ್‌ಗಾ ಬಾಜಾರ್ ರೈಲು ನಿಲ್ದಾಣದ ಬಳಿ ನಡೆದ ಭೀಕರ ಅಪಘಾತ ಅತ್ಯಂತ ಆಘಾತಕಾರಿ. ದುರಂತದಲ್ಲಿ 300ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಘಟನೆ ನಡೆದ ಜೂನ್ 2ರ ಶುಕ್ರವಾರ ಇಡೀ ರಾತ್ರಿ ಮತ್ತು ಜೂನ್ 3ರ ಶನಿವಾರ ಹಗಲಿಡೀ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವುದು ನಿಶ್ಚಿತ. ಈ ದಾರುಣ ದುರಂತದ ಸಂದರ್ಭವನ್ನು ನಿಭಾಯಿಸುವಲ್ಲಿ ಒಕ್ಕೂಟ ಸರ್ಕಾರ ಮತ್ತು ಸಂಬಂಧಿಸಿದ ರಾಜ್ಯ ಸರ್ಕಾರಗಳು ಪ್ರಾಮಾಣಿಕ ಕಾಳಜಿ ಮತ್ತು ಹೊಣೆಗಾರಿಕೆ ತೋರಬೇಕಿದೆ.

1960-61ರಲ್ಲಿ ವಾರ್ಷಿಕ 2,131ರಷ್ಟಿದ್ದ ರೈಲು ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತ, ಈಗ 100ರೊಳಕ್ಕೆ ಬಂದು ನಿಂತಿದೆ. ಇದರ ಸಂಪೂರ್ಣ ಶ್ರೇಯ ಭಾರತೀಯ ರೈಲ್ವೆಯ ತಾಂತ್ರಿಕ ವಿಭಾಗಕ್ಕೆ ಸಲ್ಲಬೇಕು. ರೈಲುಗಳಲ್ಲಿ ಅತ್ಯಂತ ಹೆಚ್ಚು ಮಂದಿ ಪ್ರಯಾಣಿಕರು ಸಂಚರಿಸುವ ಇಂಡಿಯಾದಂಥ ದೇಶದಲ್ಲಿ ರೈಲ್ವೆ ವ್ಯವಸ್ಥೆಯನ್ನು ತಾಂತ್ರಿಕವಾಗಿ ಸುಧಾರಿಸುವುದು ಬಹುದೊಡ್ಡ ಸಾಹಸವೇ ಸರಿ. ರೈಲುಮಾರ್ಗಗಳ ಸುಧಾರಣೆ, ಕಣ್ಗಾವಲು ವ್ಯವಸ್ಥೆಯ ಉನ್ನತೀಕರಣ, ಪ್ರಾಕೃತಿಕ ವಿಕೋಪಗಳು ರೈಲುಮಾರ್ಗಗಳ ಮೇಲೆ ಗಂಭೀರ ಪರಿಣಾಮ ಉಂಟುಮಾಡದಂತೆ ನೋಡಿಕೊಳ್ಳುವ ಮುನ್ನೆಚ್ಚರಿಕೆ ಮತ್ತು ಸಿದ್ಧತೆ, ತಾಂತ್ರಿಕ ದೋಷಗಳ ನಿವಾರಣೆ… ಮುಂತಾದ ಹಲವು ಸವಾಲುಗಳನ್ನು ರೈಲ್ವೆ ತಾಂತ್ರಿಕ ವಿಭಾಗ ಸಮರ್ಕಪವಾಗಿಯೇ ನಿಭಾಯಿಸುತ್ತ ಬಂದಿದೆ. ಆದರೂ, ಮಾನವನಿಂದ ಆಗುವ ಎಡವಟ್ಟುಗಳು (ಹ್ಯೂಮನ್ ಎರರ್ಸ್) ಮತ್ತು ತಾಂತ್ರಿಕ ದೋಷಗಳು ನಿರಂತರ ಸವಾಲೊಡ್ಡುತ್ತ ಬರುತ್ತಿವೆ.

ಈ ಸಂಪಾದಕೀಯ ಓದಿದ್ದೀರಾ?: ಕುಸ್ತಿಪಟುಗಳ ಕಣ್ಣೀರು ಮತ್ತು ಪ್ರಚಂಡ ಪ್ರಧಾನಿಯ ಮೌನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಒಡಿಶಾ ರಾಜ್ಯದಲ್ಲಿ ನಡೆದಿರುವ ರೈಲು ದುರಂತವು, ಅಪಘಾತಗಳ ಸಂಖ್ಯೆ ಕಡಿಮೆ ಮಾಡಿದೆವೆಂಬ ಖುಷಿಯಲ್ಲಿ ಮೈಮರೆಯುವಂತಿಲ್ಲ ಎಂಬ ಎಚ್ಚರಿಕೆಯನ್ನು ರೈಲ್ವೆ ತಾಂತ್ರಿಕ ವಿಭಾಗಕ್ಕೆ ರವಾನಿಸಿದೆ. ಈ ಅಪಘಾತವು ಮೇಲ್ನೋಟಕ್ಕೆ ರೈಲ್ವೆ ಸಿಬ್ಬಂದಿಯ ಎಡವಟ್ಟಿನಿಂದ ಸಂಭವಿಸಿದಂತೆ ಕಾಣುತ್ತಿದ್ದು, ಸಂಪೂರ್ಣ ತನಿಖೆಯ ನಂತರ ಅಸಲು ಸಂಗತಿ  ಹೊರಬೀಳಲಿದೆ. ಸಿಬ್ಬಂದಿಯ ಎಡವಟ್ಟಿನಿಂದ ಈ ಅಪಘಾತ ಸಂಭವಿಸಿದೆ ಎಂದು ಸಾಬೀತಾದರೂ, ಅಪಘಾತದ ತೀವ್ರತೆಯನ್ನು ತಗ್ಗಿಸುವಲ್ಲಿ ಏನು ಮಾಡಬಹುದಿತ್ತು ಎಂಬ ಕುರಿತು ರೈಲ್ವೆ ತಾಂತ್ರಿಕ ವಿಭಾಗ ಗಂಭೀರವಾಗಿ ಆಲೋಚಿಸಲೇಬೇಕು.

ಅಪಘಾತ ಸಂಭವಿಸಿದ ಮರುಕ್ಷಣದಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಹಲವರ ಜೀವ ಕಾಪಾಡಿದ ಬಾಹಾನ್‌ಗಾ ಮತ್ತು ಸುತ್ತಮುತ್ತಲ ಊರುಗಳ ಜನರ ಧೈರ್ಯ ಮತ್ತು ಮಾನವೀಯತೆಗೆ ಸಲಾಂ ಹೇಳಲೇಬೇಕು. ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಸಹಾಯವಾಣಿಗಳನ್ನು ತೆರೆದ ಬಾಲಾಸೋರ್ ಜಿಲ್ಲಾಡಳಿತದ ಕಾರ್ಯ, ಒಡಿಶಾ ಸರ್ಕಾರದ ತುರ್ತು ಕ್ರಮ ಕೂಡ ಶ್ಲಾಘನೀಯ. ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿಯವರ ಭೇಟಿ ಮತ್ತು ರಾಜ್ಯದ ಪ್ರಯಾಣಿಕರಿಗೆ ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿಕೊಟ್ಟಿರುವುದು ಸೂಕ್ತ ಬೆಳವಣಿಗೆ. ವಿಪತ್ತುಗಳನ್ನು ಎದುರಿಸಲು ಇಂತಹ ಸಂಘಟಿತ ಪ್ರಯತ್ನಗಳು ಅತ್ಯವಶ್ಯ. ಅಲ್ಲದೆ, ಭೀಕರ ರೈಲು ಅಪಘಾತಗಳು ಪ್ರಯಾಣಿಕರ ಮೇಲೆ ಮಾನಸಿಕ ದುಷ್ಪರಿಣಾಮ ಬೀರದಂತೆ ತಡೆಯುವಲ್ಲಿ ಕೂಡ ಅತ್ಯಂತ ಪರಿಣಾಮಕಾರಿ. ಕೊರೊನಾದಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಸಹಜ ಸ್ಥಿತಿಗೆ ಮರಳಿದ್ದ ರೈಲ್ವೆ ವ್ಯವಸ್ಥೆಗೆ ಈ ಅಪಘಾತವು ದೊಡ್ಡ ಹಿನ್ನಡೆ ಆಗದಂತೆ ಕಾಯಬೇಕಾದದ್ದು ಒಕ್ಕೂಟ ಸರ್ಕಾರ ಮತ್ತು ಸಂಬಂಧಿಸಿದ ರಾಜ್ಯ ಸರ್ಕಾರಗಳ ಜವಾಬ್ದಾರಿ. ಅಪಘಾತದಲ್ಲಿ ನೊಂದವರಿಗೆ ಪರಿಹಾರ ಕಾರ್ಯಕ್ರಮಗಳನ್ನು ಯಾವ ಲೋಪವೂ ಇಲ್ಲದಂತೆ ಜರುಗಿಸಲು ಪರಮ ಆದ್ಯತೆ ನೀಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....