ಈ ದಿನ ಸಂಪಾದಕೀಯ | ಸಂಸತ್‌ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ

Date:

ಮೋದಿ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ಮತ್ತು ಅದಕ್ಕಾಗಿ ವಿರೋಧ ಪಕ್ಷಗಳನ್ನು ನಾಶ ಮಾಡಲು ಯಾವ ಮಟ್ಟಿನ ಅಕ್ರಮ ಹಾದಿ ಹಿಡಿಯುತ್ತಿದೆ ಎಂಬುದಕ್ಕೆ ಇದು ಒಂದು ಉದಾಹರಣೆಯಷ್ಟೇ

 

ಕಳೆದ ಡಿಸೆಂಬರ್‌ನಲ್ಲಿ ಸಂಸತ್‌ ಅಧಿವೇಶನ ನಡೆಯುವ ವೇಳೆ ಕೆಲ ಯುವಕರು ವೀಕ್ಷಕರ ಗ್ಯಾಲರಿಯಿಂದ ಲೋಕಸಭೆ ಸದನಕ್ಕೆ ಧುಮುಕಿ, ಬಣ್ಣದ ಹೊಗೆ ಹಬ್ಬಿಸಿದ್ದ ಘಟನೆ ಜನತಂತ್ರ ಮಂದಿರದ ಭದ್ರತೆ ಬಗ್ಗೆ ಅನುಮಾನ ಮೂಡುವಂತೆ ಮಾಡಿತ್ತು. ನೂತನ ಸಂಸತ್‌ ಭವನಕ್ಕೆ ಪಾಸು ಪಡೆದವರು ಏನು ಬೇಕಿದ್ರೂ ಜೊತೆಗೆ ಕೊಂಡೊಯ್ಯಬಹುದೇ? ತಪಾಸಣೆ ಮಾಡುತ್ತಿಲ್ಲವೇ ಎಂಬೆಲ್ಲ ಪ್ರಶ್ನೆ ಎದ್ದಿತ್ತು. ಹಾಗೆ ನುಗ್ಗಿದ ಯುವಕರು ಉಗ್ರರಲ್ಲ, ನಿರುದ್ಯೋಗ ಸಮಸ್ಯೆಯಿಂದ ಹತಾಶರಾದವರು ಎಂದು ಗೊತ್ತಾಗಲು ಒಂದು ತಾಸು ಕೂಡ ಹಿಡಿಯಲಿಲ್ಲ. ಸಂಸತ್ತಿನ ಹೊರಗೆ ಪ್ರತಿಭಟಿಸಿದ್ದ ಯುವತಿ, ಪೊಲೀಸರು ಎಳೆದೊಯ್ಯುವಾಗ ನೀಡಿದ ಹೇಳಿಕೆಗಳನ್ನು ದೇಶವೇ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶವೇ ಬೆಚ್ಚಿ ಬಿದ್ದು ಗಮನಿಸಿದ್ದ ಸುದ್ದಿಯಿದು. ಇಂದು ಅದಕ್ಕಿಂತ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಆರೋಪಿಗಳಿಗೆ ವಿರೋಧ ಪಕ್ಷಗಳ ನಂಟಿದೆ ಎಂದು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ಬಂಧಿತ ಆರು ಮಂದಿ ಆರೋಪಿಗಳಲ್ಲಿ ಐವರು ದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಹರ್ದೀಪ್‌ ಕೌರ್‌ ಮುಂದೆ ಹೇಳಿಕೆ ನೀಡಿರುವುದಾಗಿ ಪಿ.ಟಿ.ಐ. ವರದಿ ಮಾಡಿದೆ.

ಈ ಘಟನೆ ನಡೆ ತಕ್ಷಣವೇ ಪ್ರಮುಖ ಆರೋಪಿ ಮನೋರಂಜನ್‌ಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಸಂಸತ್‌ ಅಧಿವೇಶನ ವೀಕ್ಷಣೆಗೆ ಪಾಸ್‌ ನೀಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿತ್ತು. ಆರೋಪಿಗಳಲ್ಲಿ ಒಬ್ಬರಾದ ನೀಲಂ ಆಜಾದ್‌ ಈ ಹಿಂದೆ ಸಿಎಎ ವಿರೋಧದ ಹೋರಾಟ ಸೇರಿದಂತೆ ಹಲವು ಜನಪರ ಚಳವಳಿಗಳಲ್ಲಿ ಭಾಗಿಯಾಗಿದ್ದರು. ಆ ಫೋಟೋಗಳನ್ನು ಇಟ್ಟುಕೊಂಡು ಸಂಸತ್‌ ದಾಳಿಯನ್ನು ವಿರೋಧ ಪಕ್ಷಗಳ ಅದರಲ್ಲೂ ಕಾಂಗ್ರೆಸ್‌ ಪಕ್ಷದ ತಲೆಗೆ ಕಟ್ಟುವ ಪ್ರಯತ್ನವನ್ನು ಬಿಜೆಪಿ ನಾಯಕರು, ಕಾರ್ಯಕರ್ತರು ಮಾಡಿದ್ದರು. ಮನೋರಂಜನ್‌ ಎಸ್‌ಎಫ್‌ಐ ಸಂಘಟನೆಯ ಸದಸ್ಯ ಎಂದು ಬೇರೊಬ್ಬರ ಫೋಟೋವನ್ನು ವೈರಲ್‌ ಮಾಡಲಾಗಿತ್ತು. ಈಗ ಪೊಲೀಸ್‌ ಕಸ್ಟಡಿಯಲ್ಲೂ ಬೇರೆ ಪಕ್ಷಗಳ ಜೊತೆ ಸಂಪರ್ಕ ಇದೆ ಎಂದು ಸುಳ್ಳು ಹೇಳಿಕೆ ಪಡೆಯುವ ಷಡ್ಯಂತ್ರ ನಡೆಯುತ್ತಿದೆ ಎಂಬುದು ಜಗಜ್ಜಾಹೀರಾಗಿದೆ.

“ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆಯ ವೇಳೆ ವಿದ್ಯುತ್‌ ಶಾಕ್‌ ನೀಡಿ ಚಿತ್ರಹಿಂಸೆ ಕೊಡಲಾಗಿದೆ. ಸುಮಾರು 70 ಖಾಲಿ ಹಾಳೆಗಳ ಮೇಲೆ ಸಹಿ ಮಾಡುವಂತೆ, ರಾಷ್ಟ್ರೀಯ ಪಕ್ಷಗಳು ಮತ್ತು ಅದರ ಮುಖಂಡರ ಜೊತೆ ಒಡನಾಟ ಇರುವುದಾಗಿ ಬರೆದುಕೊಡುವಂತೆ ಇಬ್ಬರು ಆರೋಪಿಗಳ ಮೇಲೆ ಒತ್ತಡ ಹೇರಲಾಗಿದೆ” ಎಂದು ಆರೋಪಿಗಳಾದ ಡಿ ಮನೋರಂಜನ್‌, ಸಾಗರ್‌ ಶರ್ಮಾ, ಅಮೋಲ್‌ ಶಿಂದೆ, ಮಹೇಶ್‌ ಕುಮಾವತ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಸಂಯುಕ್ತ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರಂತೆ. ಖಾಲಿ ಹಾಳೆಯ ಮೇಲೆ ಸಹಿ ಹಾಕುವಂತೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ನೀಲಂ ಈ ಹಿಂದೆಯೂ ಆರೋಪ ಮಾಡಿದ್ದರು. ಈ ಸಂಯುಕ್ತ ಹೇಳಿಕೆ ಕುರಿತ ವಿಚಾರಣೆಗೆ ಇದೇ 17ರಂದು ಹಾಜರಾಗುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಮೋದಿ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ಮತ್ತು ವಿರೋಧ ಪಕ್ಷಗಳನ್ನು ನಾಶ ಮಾಡಲು ಯಾವ ಮಟ್ಟಿನ ಅಕ್ರಮ ಹಾದಿ ಹಿಡಿಯುತ್ತಿದೆ ಎಂಬುದಕ್ಕೆ ಇದೂ ಒಂದು ಉದಾಹರಣೆಯಷ್ಟೇ. ಸಂಸತ್‌ನ ಭದ್ರತೆ ಸರ್ಕಾರದ ಕೆಲಸ. ಜನತಂತ್ರದ ದೇಗುಲವೆಂದು ಪ್ರಧಾನಿಯವರೂ ಅದರ ಸೋಪನಗಳಿಗೆ ಹಣೆ ತಾಗಿಸಿರುವುದುಂಟು. ಅಧಿವೇಶನದ ಸಂದರ್ಭದಲ್ಲಿ ವಿರೋಧ ಪಕ್ಷಗಳಷ್ಟೇ ಅಲ್ಲದೆ, ಆಳುವ ಪಕ್ಷದ ಸದಸ್ಯರು ಮತ್ತು ಪ್ರಧಾನಿಯವರು ಮತ್ತು ಅವರ ಮಂತ್ರಿ ಮಂಡಲವೇ ಅಲ್ಲಿರುತ್ತದೆ. ಪ್ರಧಾನಿ ಮೋದಿ ಅವರು ಸಂಸತ್ತಿಗೆ ಬರುವುದು ಅಪರೂಪ. ಇಡೀ ದಿನ ಚರ್ಚೆಯನ್ನು ಆಲಿಸುವ ಅಭ್ಯಾಸ ಅವರಿಗೆ ಇಲ್ಲ. ಆದರೆ ಮಿಕ್ಕ ಸಚಿವರು ಅಧಿಕಾರಿಗಳ ಭದ್ರತೆಯೂ ಮುಖ್ಯ ಅಲ್ಲವೇ? ಆದ ಭದ್ರತಾ ಲೋಪವನ್ನು ಒಪ್ಪಿಕೊಂಡು, ಲೋಪ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ದೇಶದ ಜನತೆಗೆ ಭದ್ರತೆಯ ಗ್ಯಾರಂಟಿ ಕೊಡಬೇಕಾದ ಸರ್ಕಾರ ಇಷ್ಟು ಕೀಳು ಮಟ್ಟದ ಕೆಲಸಕ್ಕೆ ಕೈ ಹಾಕಿರುವುದು ನಾಚಿಕೆಗೇಡಿನ ಸಂಗತಿ.

ವಿರೋಧಪಕ್ಷಗಳು ಪ್ರಜಾಪ್ರಭುತ್ವದ ಪ್ರಮುಖ ಅಂಗ. ಅವುಗಳಿಲ್ಲದ ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲ ಎಂದು ಸಂವಿಧಾನವೇ ವಿಧಿಸಿದೆ. ಆಡಳಿತ ಪಕ್ಷ ಅಥವಾ ಸರ್ಕಾರಕ್ಕೆ ವಿರೋಧ ಪಕ್ಷಗಳ ಜೊತೆ ಆರೋಗ್ಯಕರ ಗುದ್ದಾಟ ಇರಬೇಕೇ ಹೊರತು ಜನತಂತ್ರ ವ್ಯವಸ್ಥೆಯನ್ನು ವಿರೋಧಪಕ್ಷಗಳಿಂದ ಮುಕ್ತ ಮಾಡುತ್ತೇವೆ ಎನ್ನುವುದು, ಅವುಗಳನ್ನು ದೇಶದ್ರೋಹಿಗಳೆಂದು ಬಿಂಬಿಸಲು ಆಡಳಿತ ಯಂತ್ರವನ್ನು ದುರುಪಯೋಗ ಮಾಡುವುದು ಸರಿಯಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾದ ನಡವಳಿಕೆ.

ದೇಶದ್ರೋಹ/ ದೇಶದ್ರೋಹಿ ಎಂಬುದು ಬಹಳ ಗಂಭೀರ ಪದಪ್ರಯೋಗ. ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಯಾರು ಯಾರನ್ನು ಬೇಕಾದರೂ ದೇಶದ್ರೋಹಿ ಎಂದು ಕರೆಯಬಹುದು! ಸರ್ಕಾರದ ವಿರುದ್ಧ ಮಾತನಾಡಿದರೆ, ಬರೆದರೆ, ಪ್ರತಿಭಟಿಸಿದರೆ ಸುಲಭವಾಗಿ ದೇಶದ್ರೋಹದ ಪ್ರಕರಣ ದಾಖಲಿಸಲಾಗುತ್ತಿದೆ. ಈ ಪದದ ಅಸಲಿ ಅರ್ಥವನ್ನು ತಿರುಚಲಾಗಿದೆ. ಇದು ಅಪಾಯಕಾರಿ ಬೆಳವಣಿಗೆ. ಸಂಸತ್‌ ದಾಳಿ ಆರೋಪಿಗಳ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಅಂತಹ ಕೃತ್ಯಕ್ಕೆ ಮುಂದಾದ ಪೊಲೀಸರು ಮತ್ತು ಅವರ ಮೇಲೆ ಒತ್ತಡ ಹೇರಿದವರ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆಗೆ ವಿರೋಧಪಕ್ಷಗಳು ಮುಂದಾಗಬೇಕಿದೆ. ದೇಶ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿದೆ. ವಿರೋಧ ಪಕ್ಷಗಳು ಈ ವಿಚಾರವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....