ಈ ದಿನ ಸಂಪಾದಕೀಯ | ಗ್ರಾಮ ಪಂಚಾಯ್ತಿಗಳ ನೈಜ ಶಕ್ತಿ ಪ್ರದರ್ಶನಕ್ಕೆ ಇದು ಸಕಾಲ

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಚಾರ ಕಳೆಗಟ್ಟುತ್ತಿದೆ. ಪ್ರತೀ ಚುನಾವಣೆ ಸಂದರ್ಭದಲ್ಲಿ ಆದಂತೆ ಈ ಬಾರಿಯೂ ಶಾಸಕರಿಗೆ ಗ್ರಾಮಸ್ಥರು ಘೇರಾವ್ ಹಾಕಿದ ಸುದ್ದಿಗಳ ಸರಣಿ ಶುರುವಾಗಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಏನು ಮಾಡಬಹುದು?

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸದಿ ವರ ಎಂಬ ಗ್ರಾಮ ಸದ್ಯ ಸುದ್ದಿಯಲ್ಲಿದೆ. ಕೇವಲ 15 ದಿನಗಳಲ್ಲಿ ‘ಪ್ಲಾಸ್ಟಿಕ್ ಮುಕ್ತ ಗ್ರಾಮ’ ಎನಿಸಿಕೊಂಡಿದ್ದು ಇದಕ್ಕೆ ಕಾರಣ. ದೊಡ್ಡ ಪ್ರಮಾಣದಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಿಕೊಟ್ಟರೆ ಚಿನ್ನದ ನಾಣ್ಯಗಳನ್ನು ಕೊಡುವುದಾಗಿ ಗ್ರಾಮ ಪಂಚಾಯ್ತಿಯಿಂದ ಘೋಷಣೆ ಹೊರಬಿದ್ದ ನಂತರ ಈ ಚಮತ್ಕಾರ ನಡೆದಿದೆ. ಇಂಥದ್ದೊಂದು ಕ್ರಾಂತಿ ಸಾಧ್ಯವಾಗಿಸಿದ್ದು ಸರಪಂಚ್ ಫಾರೂಕ್ ಅಹ್ಮದ್ ಗನೈ. ಇನ್ನೊಂದೆಡೆ, ಮಹಾರಾಷ್ಟ್ರದ ಹಿವ್ರೆ ಬಜಾರ್ ಎಂಬ ಹಳ್ಳಿ ಕಳೆದ 20 ವರ್ಷಗಳಿಂದ ನಿರಂತರವಾಗಿ ಸುದ್ದಿಯಲ್ಲಿದೆ. ಇದಕ್ಕೆ ಕಾರಣ, ದೇಶದಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಮಂತ ರೈತರಿರುವುದು. ಇದನ್ನು ಆಗುಮಾಡಿದ್ದು ಅಲ್ಲಿನ ಸರಪಂಚ್ ಪೋಪಟ್ ರಾವ್ ಪವಾರ್. ಹೆಣ್ಣುಮಕ್ಕಳು ಹುಟ್ಟಿದರೆ ಇಡೀ ಊರಿಗೆ ಸಿಹಿ ಹಂಚುವ ಕಾರ್ಯಕ್ರಮ ರೂಪಿಸಿದ ಹರ್ಯಾಣದ ಚಾಪ್ಪರ್ ಗ್ರಾಮ ಪಂಚಾಯ್ತಿ ಕೂಡ ಹಿಂದೊಮ್ಮೆ ಸುದ್ದಿಯಲ್ಲಿತ್ತು. ಇದರ ಹಿಂದೆ ಇದ್ದುದು ಸರಪಂಚ್ ನೀಲಮ್ ಕೌರ್.

ಆದಾಯಕ್ಕಾಗಿ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡ ಗ್ರಾಮ ಪಂಚಾಯ್ತಿಯೊಂದು ಪ್ಲಾಸ್ಟಿಕ್ ವಿಲೇವಾರಿಗೆ ಆಕರ್ಷಕ ಯೋಜನೆ ರೂಪಿಸುತ್ತದೆ. ಬರದಿಂದ ಕಂಗೆಟ್ಟ ಪ್ರದೇಶದ ಗ್ರಾಮ ಪಂಚಾಯ್ತಿಯೊಂದು ಸತತ ಪ್ರಯತ್ನದಿಂದಾಗಿ ರೈತರ ಬದುಕನ್ನು ಹಸನಾಗಿಸುತ್ತದೆ. ಲಿಂಗಾನುಪಾತದಲ್ಲಿ ಆಘಾತಕಾರಿ ಅಂಕಿ-ಅಂಶ ಹೊಂದಿದ ಗ್ರಾಮ ಪಂಚಾಯ್ತಿಯೊಂದು ಹೆಣ್ಣು ಭ್ರೂಣ ಹತ್ಯೆ ವಿರುದ್ಧ ವಿನೂತನ ಕಾರ್ಯಕ್ರಮ ರೂಪಿಸುತ್ತದೆ. ಹತ್ತಿರದ ಉದಾಹರಣೆಗಳನ್ನೇ ಹೇಳುವುದಾದರೆ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಗ್ರಾಮ ಪಂಚಾಯ್ತಿಗಳು ಲಭ್ಯವಿರುವ ಸಂಪನ್ಮೂಲಗಳನ್ನೇ ಬಳಸಿಕೊಂಡು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿವೆ. ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಕೆಲವು ಗ್ರಾಮ ಪಂಚಾಯ್ತಿಗಳು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ಊರನ್ನು ಚಂದ ಮಾಡಿಕೊಂಡ ನಿದರ್ಶನಗಳಿವೆ. ಹೀಗೆ, ಗ್ರಾಮ ಪಂಚಾಯ್ತಿಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮನಸ್ಸು ಮಾಡಿದರೆ ಸ್ವಾವಲಂಬನೆ ಸಾಧಿಸುವುದು ದೊಡ್ಡ ವಿಷಯವೇನಲ್ಲ.

ಈ ಲೇಖನ ಓದಿದ್ದೀರಾ?: ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ ಏರಿಕೆ ಚುನಾವಣಾ ವಿಷಯವಲ್ಲವೇ?

ಕರ್ನಾಟಕ ಸರ್ಕಾರವು ಕಳೆದ ಡಿಸೆಂಬರ್‌ನಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಿತ್ತು. ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡೇ ಗೌರವಧನ ಹೆಚ್ಚಿಸಲಾಗಿದೆ ಎಂಬ ಆರೋಪ ಕೂಡ ಉಂಟು. ಅದೇನೇ ಇರಲಿ, ಈ ಬೆಳವಣಿಗೆಯು ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳ ಹುಮ್ಮಸ್ಸು ಹೆಚ್ಚಿಸುವಂತಾಗಬೇಕು. ತಾವು ದೊಡ್ಡ ಮಟ್ಟದ ರಾಜಕಾರಣಿಗಳಂತೆ ಅಧಿಕಾರಕ್ಕೆ ಅಂಟಿಕೊಂಡವರಲ್ಲ, ಭ್ರಷ್ಟಾಚಾರಕ್ಕೆ ಮುಂದಾಗುವವರಲ್ಲ ಎಂಬುದನ್ನು ಸಾಬೀತು ಮಾಡಿ ತೋರಿಸಬೇಕು. ತಾವು ಪ್ರತಿನಿಧಿಸುವ ಜನರಿಗೆ ಮೂಲಸೌಲಭ್ಯಗಳನ್ನು ಒದಗಿಸುವ ಮಹತ್ತರ ಹೊಣೆ ತಮ್ಮ ಹೆಗಲ ಮೇಲಿದೆ, ಅದೇ ತಮ್ಮೆದುರಿನ ಮುಖ್ಯ ಕೆಲಸ ಎಂಬ ಅರಿವು ಸಾಧ್ಯವಾಗಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ದಿನದ ಹಿಂದೆ (ಏ.4), ಬೆಳಗಾವಿಯ ಹಳೇ ದಿಗ್ಗೇವಾಡಿ ಗ್ರಾಮಕ್ಕೆ ತೆರಳಿದ ಶಾಸಕ ಡಿ ಎಂ ಐಹೊಳೆ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ವಾಪಸು ಕಳಿಸಿದ ಘಟನೆ ನಡೆದಿದೆ. ಗೆದ್ದ ಮೇಲೆ ತಮ್ಮೂರಿನತ್ತ ಇಣುಕದವರು ಚುನಾವಣೆ ಘೋಷಣೆಯಾದ ನಂತರವಷ್ಟೇ ಬಂದಿದ್ದಾರೆ ಎಂಬ ಸಿಟ್ಟು ಇದಕ್ಕೆ ಕಾರಣ. ಚುನಾವಣಾ ಪ್ರಚಾರ ಕಳೆಗಟ್ಟುತ್ತಿರುವ ಈ ಹೊತ್ತಿನಲ್ಲಿ ಸಹಜವಾಗಿಯೇ ಇಂತಹ ನೂರಾರು ಘಟನೆಗಳು ನಡೆಯಲಿವೆ. ಅಂತಹ ಸಂದರ್ಭಗಳಲ್ಲಿ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ತಮ್ಮ ಊರುಗಳ ಜನರೊಂದಿಗೆ ನಿಂತು ಒಗ್ಗಟ್ಟು ಪ್ರದರ್ಶಿಸುವುದು ಅತ್ಯಂತ ಅಗತ್ಯ. ಆಗ ಮಾತ್ರವೇ ಜನತೆಗೆ ತಾವು ಯಾರಿಗೆ ಮತ ಹಾಕಬೇಕು ಎಂಬ ಸ್ಪಷ್ಟತೆ ಮೂಡೀತು. ಜೊತೆಗೆ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಸ್ವಾವಲಂಬನೆ ಸಾಧಿಸಿದರೆ, ಯಾವ ಶಾಸಕರನ್ನೂ, ಮಂತ್ರಿಯನ್ನೂ, ಮುಖ್ಯಮಂತ್ರಿಯನ್ನೂ ಬೇಡುವ ಪರಿಸ್ಥಿತಿ ಬರುವುದಿಲ್ಲ ಎಂಬ ವಾಸ್ತವ ಅರಿವಾದೀತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....