ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

Date:

ಸರ್ಕಾರದ ಕೋಟಿ ಕೋಟಿ ಅನುದಾನ ನೀಡಿ ಬೆಂಗಳೂರು ಹಬ್ಬಗಳಂಥ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮುನ್ನ, ಸಿಲಿಕಾನ್ ಸಿಟಿಯನ್ನು ಜಾಗತಿಕ ಮಟ್ಟದಲ್ಲಿ ಮೆರೆಸುವ ಮುನ್ನ, ನಗರವನ್ನು ಬಡವರು, ಮಹಿಳೆಯರು, ಮಕ್ಕಳು ಎಲ್ಲರೂ ಯಾವುದೇ ಆತಂಕವಿಲ್ಲದೆ ಬದುಕುವ ತಾಣವನ್ನಾಗಿ ಮಾಡುವ, ಇಲ್ಲಿನ ರಸ್ತೆ, ಚರಂಡಿ, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಮನುಷ್ಯರು ನಿರಾತಂಕವಾಗಿ ಬಳಸುವಂತೆ ರೂಪಿಸುವ ಜವಾಬ್ದಾರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರದ್ದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದಂತೆ ಸದ್ಯ ಎರಡು ಚಿತ್ರಗಳು ಪ್ರಧಾನವಾಗಿ ಎದ್ದುಕಾಣುತ್ತಿವೆ. ಒಂದು, ಡಿಸೆಂಬರ್ ಮೊದಲ ವಾರದಲ್ಲಿ ನಡೆಯಲಿರುವ ಬೆಂಗಳೂರು ಹಬ್ಬದ ಸುದ್ದಿ; ಎರಡನೆಯದು, ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಮಗು ಸತ್ತಿರುವ ಪ್ರಕರಣ.

ಬೆಂಗಳೂರು ಹಬ್ಬ, ಇದು ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ನಡೆಸುತ್ತಿರುವ ಕಾರ್ಯಕ್ರಮ. ಈ ಫೌಂಡೇಶನ್ ಹೊರತಂದಿರುವ ಇಂಗ್ಲಿಷ್ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಲೋಕಾರ್ಪಣೆಗೊಳಿಸಿದ್ದರು. ಅವರು ಡಿಸೆಂಬರ್ ಮೊದಲ ವಾರದಲ್ಲಿ ಹಮ್ಮಿಕೊಂಡಿರುವ ಬೆಂಗಳೂರು ಹಬ್ಬಕ್ಕೆ ಸಕಲ ಪ್ರೋತ್ಸಾಹ ನೀಡುವುದಾಗಿ ಸಿಎಂ ಹಾಗೂ ಡಿಸಿಎಂ ಘೋಷಿಸಿದ್ದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲ ವಲಯಗಳಿಂದಲೂ ನೆರವು ನೀಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು. ಬೆಂಗಳೂರು ಹಬ್ಬದಂಥ ಆಚರಣೆಗಳ ಮೂಲಕ ನಗರದ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎನ್ನುವುದು ಸರ್ಕಾರದ ಇರಾದೆ. ಅದಕ್ಕಾಗಿ ಎಲೀಟ್ ಜನರೇ ಕೂಡಿ ನಡೆಸುವ ಬೆಂಗಳೂರು ಹಬ್ಬ ಎನ್ನುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಸಕಲರೂ ನೆರವು ನೀಡಲು ಮುಂದಾಗಿದ್ದಾರೆ. ವಿಪರ್ಯಾಸ ಏನೆಂದರೆ, ಇವರೆಲ್ಲ ಸರ್ಕಾರಿ ಯಂತ್ರವನ್ನು ಬಳಸಿಕೊಂಡು ಬೆಂಗಳೂರಿನ ಪರಂಪರೆ, ಸಂಸ್ಕೃತಿ ಇತ್ಯಾದಿಗಳನ್ನು ಉಳಿಸುವುದಕ್ಕಿಂತಲೂ ಮೊದಲು ಬೆಂಗಳೂರಿನ ಬಡವರ ಪ್ರಾಣಗಳನ್ನು ಉಳಿಸಬೇಕಾಗಿದೆ.

ಸಿಲಿಕಾನ್ ಸಿಟಿ, ಹೈಟೆಕ್ ಸಿಟಿ, ಕಾಸ್ಮೋ ಸಿಟಿ ಎಂದೆಲ್ಲ ಉಳ್ಳವರ ಮರ್ಜಿಗೆ ತಕ್ಕಂತೆ ಕರೆಸಿಕೊಳ್ಳುವ ಬೆಂಗಳೂರಿನಲ್ಲಿ ಬಡವರ ಬದುಕು ದುರ್ಭರವಾಗಿ ಪರಿಣಮಿಸಿದೆ. ರಸ್ತೆಯಲ್ಲಿ ನಡೆದಾಡಿದರೂ ಸಾವು ಸಂಭವಿಸಬಹುದು ಎಂದರೆ, ನಗರದ ಪರಿಸ್ಥಿತಿ ಇನ್ನೆಷ್ಟು ಹದಗೆಟ್ಟಿರಬಹುದು. ಹೋಪ್ ಫಾರ್ಮ್ ಜಂಕ್ಷನ್ ಬಳಿಯ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಹಾಗೂ ಒಂಬತ್ತು ತಿಂಗಳ ಹಸುಳೆ ಸಾವನ್ನಪ್ಪಿರುವುದು ನಗರದ ಮೂಲಸೌಕರ್ಯಗಳ ದುಃಸ್ಥಿತಿಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ. ಘಟನೆ ನಡೆಯುತ್ತಿದ್ದಂತೆಯೇ ತಡಬಡಾಯಿಸಿ ಎದ್ದ ಸರ್ಕಾರ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿತು. ಕೆಲವೇ ಗಂಟೆಗಳಲ್ಲಿ ಬೆಸ್ಕಾಂನ ಐವರು ನೌಕರರನ್ನು ಬಂಧಿಸಲಾಯಿತು. ನಂತರದ ಕೆಲವೇ ಗಂಟೆಗಳಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿದ್ದೂ ಆಯಿತು. ಅದಕ್ಕಿಂತಲೂ ತಮಾಷೆಯ ವಿಚಾರ ಏನೆಂದರೆ, ಈ ವಿದ್ಯುತ್ ಅವಘಡಕ್ಕೆ ಇಲಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿರುವುದು. ಸರ್ಕಾರದ ತನಿಖೆ ಯಾವ ದಿಕ್ಕಿನಲ್ಲಿ ನಡೆಯಲಿದೆ ಎನ್ನುವುದು ಇದರಿಂದ ತಿಳಿಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಬೆಸ್ಕಾಂ ವ್ಯಾಪ್ತಿಯಲ್ಲಿ ಹಲವು ಅವಘಡಗಳು ನಡೆದಿವೆ. ಬಸ್ ತಂಗುದಾಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬನಿಗೆ ನೇತಾಡುತ್ತಿದ್ದ ತಂತಿಯ ಮೂಲಕ ವಿದ್ಯುತ್ ಪ್ರವಹಿಸಿ ಆತ ಸ್ಥಳದಲ್ಲೇ ಅಸುನೀಗಿದ್ದ. ಮತ್ತೊಮ್ಮೆ, ಮಳೆ ಬರುತ್ತಿದ್ದಾಗ, ಯುವತಿಯೊಬ್ಬರು ಸ್ಕೂಟಿಯಿಂದ ಮನೆಗೆ ತೆರಳುತ್ತಾ, ರಸ್ತೆಯಲ್ಲಿ ಕೆಸರಿನಿಂದ ಆಯತಪ್ಪಿ ಬೀಳುವುದು ತಪ್ಪಿಸಿಕೊಳ್ಳಲು ವಿದ್ಯುತ್ ಕಂಬದ ಬಳಿ ನೆಲದ ಮೇಲೆ ಹೆಜ್ಜೆಯೂರಿದ್ದರು. ವಿದ್ಯುತ್ ಕಂಬದಿಂದ ಹೊರಚಾಚಿದ್ದ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಅವರು ಮರಣ ಹೊಂದಿದ್ದರು. ಇನ್ನೊಮ್ಮೆ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ರಸ್ತೆಯಲ್ಲಿ ನಡೆಯುತ್ತಿದ್ದಾಗ, ಖಾಸಗಿ ಕಂಪನಿ ಹಾಕಿದ್ದ ಕೇಬಲ್ ತುಳಿದು, ಅದರಿಂದ ವಿದ್ಯುತ್ ಶಾಕ್‌ಗೆ ಗುರಿಯಾಗಿ ತೀರಿಕೊಂಡಿದ್ದ. ಇಂಥ ಅನೇಕ ಘಟನೆಗಳು ನಡೆದಿವೆ. ಆದರೆ, ಯಾವ ಘಟನೆಯಲ್ಲೂ ತಪ್ಪಿತಸ್ಥರಿಗೆ ಶಿಕ್ಷೆಯಾಗಿಲ್ಲ. ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದ್ದ ಬಿಜೆಪಿ ಸರ್ಕಾರಕ್ಕೆ ಬೆಂಗಳೂರಿನ ಜನಸಾಮಾನ್ಯರ ಸಾವುಗಳು ಲೆಕ್ಕಕ್ಕೇ ಇರಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಅದು ಮುಂದುವರೆಯುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ನೀಡಬಾರದು.

ಮರಗಳಲ್ಲಿ, ರಸ್ತೆ ಅಕ್ಕಪಕ್ಕ ನೇತಾಡುವ ಕೇಬಲ್‌ಗಳ ಹಿಂದೆ ಒಂದು ಮಾಫಿಯಾನೇ ಇದೆ. ಇಂಟರ್ನೆಟ್, ಟಿವಿ ಕೇಬಲ್ ಮುಂತಾದ ಕಾರಣಗಳಿಗಾಗಿ ಖಾಸಗಿ ಕಂಪನಿಗಳು ನಿಯಮ ಮೀರಿ ಎಲ್ಲೆಂದರಲ್ಲಿ ಕೇಬಲ್ ಅಳವಡಿಸುತ್ತಿವೆ. ಅಂತಹ ಕೇಬಲ್‌ಗಳು ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಸಿಕ್ಕಿ ಹಲವು ಪ್ರಮಾದಗಳು ಸಂಭವಿಸಿವೆ. ಆದರೆ, ಆ ಕೇಬಲ್ ಮಾಫಿಯಾದ ಹಿಂದೆ ಇರುವವರು ರಾಜಕಾರಣಿಗಳು ಹಾಗೂ ಅಧಿಕಾರಿಗಳು. ಅವರ ಪ್ರಭಾವದ ಮುಂದೆ ಸರ್ಕಾರಕ್ಕೆ, ಬಿಬಿಎಂಪಿ, ಬೆಸ್ಕಾಂಗಳಿಗೆ ಬಡವರ ಪ್ರಾಣ ಲೆಕ್ಕಕ್ಕಿಲ್ಲದಂತಾಗಿದೆ.

ಸರ್ಕಾರವು ಕೋಟಿ ಕೋಟಿ ಅನುದಾನ ನೀಡಿ ಬೆಂಗಳೂರು ಹಬ್ಬಗಳಂಥ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮುನ್ನ, ಬೆಂಗಳೂರಿನ ಸೌಂದರ್ಯವನ್ನು ವೀಕ್ಷಿಸಲು 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡುವ ಮುನ್ನ, ಸಿಲಿಕಾನ್ ಸಿಟಿಯನ್ನು ಜಾಗತಿಕ ಮಟ್ಟದಲ್ಲಿ ಮೆರೆಸುವ ಮುನ್ನ, ನಗರವನ್ನು ಬಡವರು, ಮಹಿಳೆಯರು, ಮಕ್ಕಳು ಎಲ್ಲರೂ ಯಾವುದೇ ಆತಂಕವಿಲ್ಲದೆ ಬದುಕುವ ತಾಣವನ್ನಾಗಿ ಮಾಡುವ, ಇಲ್ಲಿನ ರಸ್ತೆ, ನೀರು, ವಿದ್ಯುತ್, ಚರಂಡಿ ಮತ್ತಿತರ ಮೂಲಸೌಕರ್ಯಗಳನ್ನು ಮನುಷ್ಯರು ನಿರಾತಂಕವಾಗಿ ಬಳಸುವಂತೆ ರೂಪಿಸುವ ಜವಾಬ್ದಾರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರದ್ದಾಗಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ|ಗುಜರಾತಿನ ದಲಿತರಿಗೆ ಗಗನ ಕುಸುಮವಾಗೇ ಉಳಿದ ನ್ಯಾಯ

ಗುಜರಾತಿನ ಜನಸಂಖ್ಯೆಯಲ್ಲಿ ದಲಿತರ ಪ್ರಮಾಣ ಕಡಿಮೆ. ಶೇ.6.34 ಮಾತ್ರ. ಇಲ್ಲಿ ದಲಿತರಿಗಿಂತ...

ಈ ದಿನ ಸಂಪಾದಕೀಯ | ಮೋದಿಯ ಸಣ್ಣತನವನ್ನು ದೊಡ್ಡತನದಿಂದ ಸೋಲಿಸಿದ ಇರಾನ್‌!

ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ...

ಈ ದಿನ ಸಂಪಾದಕೀಯ | SIR ಹೆಸರಲ್ಲಿ ಮಹಿಳೆಯರ ಮತದಾನದ ಹಕ್ಕಿನ ಹರಣ ಅಕ್ಷಮ್ಯ

ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್‌ ನಡೆಯುವ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ....