ಸಿಇಟಿ ಅಭ್ಯರ್ಥಿಗಳಿಗೆ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ ಎಂದ ಕೆಇಎ

Date:

  • ಜೂನ್‌ 6ರಿಂದ 12ರವರೆಗೆ ಆರ್ ಡಿ ನಂಬರ್ ತಿದ್ದುಪಡಿ ಮಾಡಿ ಎಂದ ಕೆಇಎ
  • ಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ

ಯುಜಿಸಿಇಟಿ 2023ರ ಪ್ರವೇಶ ಪರೀಕ್ಷೆ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿದ್ದು, ಜೂನ್ 7ರಿಂದ 12ರವರೆಗೆ ತಿದ್ದುಪಡಿಗೆ ಕೊನೆಯ ಅವಕಾಶ ನೀಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸುವಾಗ ನಮೂದಿಸಿದ್ದ ಆರ್.ಡಿ ಸಂಖ್ಯೆಯನ್ನು ನೋಡಿ ತಿದ್ದುಪಡಿ ಮಾಡಿ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಿದೆ.

ಪರಿಶೀಲನೆಯ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಹೆಸರು ಅಥವಾ ನಮೂದಿಸಿರುವ ಜಾತಿ ತಾಳೆಯಾಗದಿರುವುದು, ಪ್ರಮಾಣ ಪತ್ರವು ಚಾಲ್ತಿಯಲ್ಲಿ ಇಲ್ಲದೇ ಇರುವುದು, ಅಭ್ಯರ್ಥಿಗಳ ಹೆಸರಿನಲ್ಲಿ ಪ್ರಮಾಣ ಪತ್ರಗಳು ಇಲ್ಲದೇ ಇರುವುದು ಅಥವಾ ನಿಗದಿತ ನಮೂನೆಗಳಲ್ಲಿ ಪಡೆಯದೇ ಇರುವುದು, ಇನ್ನಿತರ ವಿವಿಧ ಕಾರಣಗಳಿಂದ ಆರ್‌ಡಿ ಸಂಖ್ಯೆಗಳು ತಾಳೆ ಹೊಂದದೇ ತಿರಸ್ಕೃತಗೊಂಡಿರುವ ಅಭ್ಯರ್ಥಿಗಳ ಪಟ್ಟಿ ಮಾಡಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ ಡಿ ನಂಬರ್‌ ತಿದ್ದುಪಡಿ ಮಾಡಲು ಪಟ್ಟಿಯಲ್ಲಿ ಹೆಸರು ಇರುವಂತಹ ಅಭ್ಯರ್ಥಿಗಳು ಮಾತ್ರ ಜೂನ್‌ 6ರಿಂದ 12ರವರೆಗೆ ಪ್ರಾಧಿಕಾರದ ಪೋರ್ಟಲ್‌ನಲ್ಲಿ ಅಭ್ಯರ್ಥಿಗಳ ಲಾಗಿನ್ ಮತ್ತು ಪಾಸ್‌ವರ್ಡ್ ನಮೂದಿಸಿ ಸರಿಯಾದ ಆರ್‌ಡಿ ಸಂಖ್ಯೆಯನ್ನು ದಾಖಲಿಸಿ ಹಾಗೂ ಇತರೆ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಎಂದು ಹೇಳಿದೆ.

“ಕಳೆದ ಕೆಲವು ದಿನಗಳ ಹಿಂದೆ ವೃತ್ತಿಪರ ಕೋರ್ಸ್‌ಗಳಿಗಾಗಿ ಪ್ರವೇಶಾತಿ ಬಯಸಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆಯನ್ನು ಸರಿಪಡಿಸಿಕೊಳ್ಳಿ ಇಲ್ಲದಿದ್ದರೇ, ಮೀಸಲಾತಿ ಸೌಲಭ್ಯಗಳು ರದ್ದಾಗಲಿವೆ” ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

“ಅಭ್ಯರ್ಥಿಗಳು ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಯನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಇಲ್ಲದಿದ್ದರೆ, ಮೀಸಲಾತಿ ಸೌಲಭ್ಯ ರದ್ದಾಗಿ ಜನರಲ್ ಮೆರಿಟ್ ಕೋಟಾದಡಿ ಬರಬೇಕಾಗುತ್ತದ. ಹಾಗಾಗಿ, ಕೂಡಲೇ ಕಂದಾಯ ಇಲಾಖೆಯ ಆರ್‌ ಡಿ ಸಂಖ್ಯೆ ಜತೆ ತಾಳೆಯಾಗುವಂತೆ ಸರಿಪಡಿಸಿಕೊಳ್ಳಿ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...