ಪರೀಕ್ಷೆ ಬರೆಯಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಿವಿಮಾತು

Date:

ಇಂದಿನಿಂದ (ಮಾರ್ಚ್‌ 21) ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳುತ್ತಿವೆ. ಇದು ನಿಮ್ಮ ಬದುಕಿನ ಮೊದಲ ಅಥವಾ ಕೊನೆಯ ಪರೀಕ್ಷೆಯಲ್ಲ. ನರ್ಸರಿ/ಅಂಗನವಾಡಿಯಿಂದ ಆರಂಭಗೊಂಡು ಇಲ್ಲಿಯ ತನಕ ಸುಮಾರು 12 ವರ್ಷಗಳ ಕಾಲ ಅನೇಕ ಪರೀಕ್ಷೆಗಳನ್ನು ಎದುರಿಸಿ, ತೇರ್ಗಡೆಗೊಂಡು ಈ ಹಂತಕ್ಕೆ ತಲಪಿದ್ದೀರಿ.

ತಿಳಿದಿರಲಿ, ಶಾಲಾ ಕಾಲೇಜುಗಳ ಪರೀಕ್ಷೆಗಳಲ್ಲಿ ಪಾಸಾಗುವುದಕ್ಕಿಂತ ಬದುಕಿನ ಪರೀಕ್ಷೆಯಲ್ಲಿ ಪಾಸಾಗುವುದು ಬಹಳ ಮುಖ್ಯ. ಭಯಪಡಬೇಡಿ. ಒತ್ತಡಗಳಿಗೆ ಒಳಗಾಗಬೇಡಿ. ನಿಮಗೆ ತಿಳಿದಿರುವ, ಗೊತ್ತಿರುವ, ಓದಿರುವ ವಿಷಯಗಳನ್ನು ಚೆನ್ನಾಗಿ ಬರೆಯಿರಿ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿರಿ.

ಪ್ರತಿಯೊಂದು ಪರೀಕ್ಷೆಗೂ ಮುನ್ನಾ ದಿನ ರಾತ್ರಿ ಪ್ರವೇಶ ಪತ್ರ ಒಳಗೊಂಡಂತೆ, ಪರೀಕ್ಷೆಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಸಿದ್ಧಪಡಿಸಿಟ್ಟುಕೊಂಡು, ಬೇಗ ನಿದ್ದೆ ಮಾಡಿರಿ. ಬೆಳಿಗ್ಗೆ ಬೇಗನೇ ಎದ್ದು ಸ್ನಾನ ಮಾಡಿ, ತಿಂಡಿ ತಿಂದು, ಒಂದು ಲೀಟರ್ ಶುದ್ದವಾದ ಕುಡಿಯುವ ನೀರನ್ನು ತೆಗೆದುಕೊಂಡು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ನಿಮ್ಕ ಪರೀಕ್ಷಾ ಕೇಂದ್ರ ತಲಪಿರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷೆ ಬರೆಯುವಾಗ ಸಮಯ ಪಾಲನೆ ಮಾಡುವುದು ಮುಖ್ಯ ಎಂಬುದು ತಮಗೆ ಗೊತ್ತು. ಪ್ರಶ್ನೆ ಪತ್ರಿಕೆ ಕೈಸೇರಿದಾಗ ಎಲ್ಲ ಪ್ರಶ್ನೆಗಳನ್ನು ಒಮ್ಮೆ ಓದಿರಿ. ಮೊದಲಿಗೆ ತಮಗೆ ಗೊತ್ತಿರುವ, ಸುಲಭದ ಪ್ರಶ್ನೆಗಳಿಗೆ ಉತ್ತರ ಬರೆಯಲು ಆರಂಭಿಸಿರಿ. ಉತ್ತರ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ನೆನಪಿಸಿಕೊಳ್ಳುತ್ತಾ ಕಾಲ ಹರಣ ಮಾಡಬೇಡಿ. ಗೊಂದಲಗಳಿರುವ ಅಥವಾ ಕಠಿಣ ಎನಿಸುವ ಪ್ರಶ್ನೆಗಳಿಗೆ ನಂತರ ಉತ್ತರ ಬರೆಯಿರಿ.

ಪ್ರತಿಯೊಂದು ಪರೀಕ್ಷೆ ಮುಗಿದು, ಪರೀಕ್ಷಾ ಕೇಂದ್ರದಿಂದ ಹೊರಗಡೆ ಬಂದ ನಂತರ, ಬರೆದಿರುವ ಉತ್ತರಗಳ ಸರಿ/ತಪ್ಪುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮುಂದಿನ ಪರೀಕ್ಷೆಗೆ ಓದಿ, ತಯಾರಿ ನಡೆಸುತ್ತಿರಿ. ಬದುಕಿನಲ್ಲಿ ಸೋಲು, ಗೆಲುವು ಇದ್ದಿದ್ದೇ. ಎಲ್ಲ ರೀತಿಯ ಸವಾಲುಗಳನ್ನು ಎದುರಿಸುವ ಎದೆಗಾರಿಕೆ ನಿಮಗಿರಲಿ.

ಎಲ್ಲ ಪರೀಕ್ಷೆಗಳು ನಿಮಗೆ ಸುಲಭವಾಗಲಿ. ಗೆದ್ದು ಬನ್ನಿ, ಆಲ್‌ ದಿ ಬೆಸ್ಟ್.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...