ಬೈಜೂಸ್‌ನಿಂದ ಭಾರತದಲ್ಲಿ ಹೆಚ್ಚಿನ ಹೂಡಿಕೆ: ಸಿಇಒ ರವೀಂದ್ರನ್‌

Date:

  • 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ
  • ಬೈಜೂಸ್ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ

ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಿಇಒ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ಶೋಧ ನಡೆಸಿದೆ. ಈ ಬೆನ್ನಲ್ಲೇ, ರವೀಂದ್ರನ್‌ ಬೈಜು ಅವರು ಈ ಕುರಿತು ಸಂಸ್ಥೆಯ ಉದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ.

ಭಾರತಕ್ಕೆ ವಿದೇಶಿ ನೇರ ಬಂಡವಾಳ (ಎಫ್‌ಡಿಐ) ತರುವುದರಲ್ಲಿ, ಇತರ ನವೋದ್ಯಮಗಳಿಗೆ ಹೋಲಿಸಿದರೆ ಬೈಜೂಸ್‌ ಪಾಲು ಹೆಚ್ಚಿಗೆ ಇದೆ ಎಂದು ಕಂಪನಿ ಸಿಇಒ ಬೈಜು ರವೀಂದ್ರನ್‌ ಪತ್ರದಲ್ಲಿ ತಿಳಿಸಿದ್ದಾರೆ.

“ವಿದೇಶಿ ವಿನಿಮಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲ ನಿಯಮಗಳನ್ನು ಕಂಪನಿ ಪಾಲಿಸಿದೆ. 55 ಎಫ್‌ಡಿಎ ಆರ್ಕಷಣೆಗೆ ಒಳಗಾಗಿರುವ ಕಾರಣ ಹಲವಾರು ಪ್ರತಿಭಾನ್ವಿತ ನವೋದ್ಯಮಿಗಳಿಗೆ ಕೆಲಸ ಕೊಡುವಂತಾಯಿತು. ಇದರಿಂದಾಗಿಯೇ ಭಾರತದ ಅತಿದೊಡ್ಡ ಉದ್ಯೋಗದಾತ ಕಂಪನಿ ಆಗಿ ಬೈಜೂಸ್ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೈಜೂಸ್ ಒಮ್ಮೆ‍ 1.80 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿತ್ತು. ಜನರಲ್ ಅಟ್ಲಾಂಟಿಕ್, ಬ್ಲಾಕ್ ರಾಕ್ ಮತ್ತು ಸಿಕೊಯಾ ಕ್ಯಾಪಿಟಲ್ ತರಹದ ಜಾಗತಿಕ ಹೂಡಿಕೆದಾರರನ್ನೂ ಆಕರ್ಷಿಸಿತ್ತು. 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ ಮಾಡಿದ್ದು, ‘ಫೆಮಾ’ ನಿಯಮಗಳ ಪಾಲನೆ ಸೇರಿದಂತೆ ಸಂಸ್ಥೆಯ ಕಾರ್ಯನಿರ್ವಹಣೆ ಬಗ್ಗೆ ಸಂತೃಪ್ತಿ ಹೊಂದಿದ ಬಳಿಕವೇ ಹಣ ಹೂಡಿಕೆ ಮಾಡಿದ್ದಾರೆ. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಬಗ್ಗೆ ಅರ್ಥವಾಗಲಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಸ್ವಾಧೀನ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಅದಕ್ಕಾಗಿ ಒಂದಿಷ್ಟು ಹಣವನ್ನು ಕಳುಹಿಸಲಾಗಿತ್ತು. ಕಂಪನಿಯ ಬೆಳವಣಿಗೆಯ ಭಾಗವಾಗಿ 79 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಾಗಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

“ಸಂಸ್ಥೆಯು 2011 ಮತ್ತು 2023ರ ನಡುವೆ 28,000 ಕೋಟಿ ರೂ.ಗೂ ಅಧಿಕ ವಿದೇಶಿ ನೇರ ಹೂಡಿಕೆ ಪಡೆದಿದೆ. ಹೆಚ್ಚಿನ ಹೂಡಿಕೆ ಪಡೆದುಕೊಂಡಿದ್ದರಿಂದ 55 ಸಾವಿರ ಪ್ರತಿಭಾನ್ವಿತರಿಗೆ ಉದ್ಯೋಗ ನೀಡಲು ಸಾಧ್ಯವಾಯಿತು. ಇದರಿಂದಾಗಿ ದೇಶದ ನವೋದ್ಯಮಗಳ ಪೈಕಿ ಅತಿ ದೊಡ್ಡ ಉದ್ಯೋಗದಾತ ಕಂಪನಿಯಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಬೈಜು ರವೀಂದ್ರನ್‌ ಹೇಳಿದ್ದಾರೆ.

“ಇದೇ ಅವಧಿಯಲ್ಲಿ ಸಂಸ್ಥೆಯು 9,754 ಕೋಟಿ ರೂ.ಗಳನ್ನು ವಿದೇಶಿ ನೇರ ಹೂಡಿಕೆ ಹೆಸರಿನಲ್ಲಿ ವಿದೇಶಗಳಿಗೆ ರವಾನಿಸಿದೆ. ಆದರೆ, “ವಿದೇಶಿ ಸಂಸ್ಥೆಗಳ ವಿಲೀನಕ್ಕಾಗಿ ಈ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಲೀನವು ಸಂಸ್ಥೆಯ ಜಾಗತಿಕ ವಿಸ್ತರಣೆಯ ಭಾಗವಾಗಿದೆ,” ಎಂದು ಬೈಜು ರವೀಂದ್ರನ್‌ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...