ಕೇಂದ್ರೀಕರಣಗೊಳ್ಳುತ್ತಿರುವ ಶಿಕ್ಷಣ; ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣ ಅತಂತ್ರ

Date:

  • 6ನೇ ತರಗತಿಯಿಂದ ವೃತ್ತಿಪರ ತರಬೇತಿ ಶಿಕ್ಷಣ – ದುಷ್ಪರಿಣಾಮವೇ ಹೆಚ್ಚು
  • ಶಿಕ್ಷಣ ಕೇಂದ್ರೀಕರಣ ಪರಿಣಾಮ ಶಿಕ್ಷಣದಿಂದ ವಂಚಿತರಾಗುವ ಗ್ರಾಮೀಣ ಭಾಗದ ಮಕ್ಕಳು

ಶಾಲಾ ಶಿಕ್ಷಣದಲ್ಲಿ ತಮ್ಮದೇ ಆದ ಪಠ್ಯಕ್ರಮ, ಶಿಕ್ಷಣ ನೀತಿ ರೂಪಿಸಿಕೊಳ್ಳುವುದು ಆಯಾ ರಾಜ್ಯಗಳ ಹಕ್ಕು. ಆದರೆ, ಅದನ್ನು ಬುಡಮೇಲು ಮಾಡಿ ಶಾಲಾ ಶಿಕ್ಷಣವು ಕೇಂದ್ರೀಕರಣಗೊಳ್ಳುತ್ತಿರುವುದು ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣವು ಅತಂತ್ರ ಸ್ಥಿತಿಗೆ ದೂಡುತ್ತಿದೆ ಎಂದು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ವಿಚಾರವಾಗಿ ‘ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ’ವು (ಎನ್‌ಸಿಪಿಸಿಆರ್) ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, “ರಾಜ್ಯ, ಬೋರ್ಡ್ ಅಥವಾ ಶಾಲೆಯು ಪ್ರಾಥಮಿಕ ಶಿಕ್ಷಣದಲ್ಲಿ ಅಕಾಡೆಮಿಕ್ ಪ್ರಾಧಿಕಾರ ಸೂಚಿಸಿರುವಂತೆ ಪಾಲಿಸಬೇಕು. ಅದರ ಹೊರತಾಗಿ ತಮ್ಮದೇ ಪಠ್ಯಕ್ರಮ (ಪಠ್ಯಸೂಚಿ ಮತ್ತು ಪಠ್ಯಪುಸ್ತಕ), ಮೌಲ್ಯ ಮಾಪನ ವಿಧಾನ ಅಳವಡಿಸಿಕೊಂಡರೆ ಅದು ಶಿಕ್ಷಣ ಹಕ್ಕು ಕಾಯಿದೆಯ (ಆರ್‍‌ಟಿಇ) ಉಲ್ಲಂಘನೆಯಾಗುತ್ತದೆ. ಇದನ್ನು ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಬೇಕು” ಎಂದು ಹೇಳಿದೆ.

“ಉನ್ನತ ಶಿಕ್ಷಣದಲ್ಲಿ ಜಾರಿಗೊಳ್ಳುತ್ತಿರುವ ‘ಕೇಂದ್ರೀಕರಣ ನೀತಿ’ಯನ್ನು ಶಾಲಾ ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ 8ನೇ ತರಗತಿಯಿಂದ ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸಿಕೊಳ್ಳಲಾಗಿದೆ. ಇದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವೂ ಕೇಂದ್ರೀಕರಣದ ಸುಳಿಗೆ ಸಿಲುಕುವ ಸಾದ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ವಿಟಿಯು ಮೊದಲ ಸೆಮಿಷ್ಟರ್ ಪರೀಕ್ಷೆ ಮುಂದೂಡಿಕೆ

“ಕೇಂದ್ರೀಕರಣ ಶಿಕ್ಷಣ ಕಳವಳಕಾರಿ, ಆದರೆ ನಿರೀಕ್ಷಿತ. ಸಂವಿಧಾನದ ಅನುಬಂಧ 7ರ ಅನುಸಾರ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತು ರಾಜ್ಯಗಳಿಗೂ ಸಮಾನ ಅಧಿಕಾರವಿದೆ, ಹಕ್ಕುಗಳಿವೆ. ಶಾಲಾ ಶಿಕ್ಷಣದಲ್ಲಿ ತಮ್ಮದೇ ಪಠ್ಯಕ್ರಮ, ಶಿಕ್ಷಣ ನೀತಿ ರೂಪಿಸಿಕೊಳ್ಳುವುದು ರಾಜ್ಯಗಳ ಸಂವಿಧಾನಿಕ ಹಕ್ಕು. ಆದರೆ ರಾಜ್ಯಗಳ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸುವ ಈ ಮೇಲಿನ ಆದೇಶ ಸಂವಿಧಾನದ ನೀತಿಯನ್ನು ಉಲ್ಲಂಘಿಸುತ್ತದೆ” ಎಂದು ಆಯೋಗ ಹೇಳಿದೆ.

“ಮೋದಿ-ಶಾರವರ ಒಂದು ದೇಶ, ಒಂದು ಪಠ್ಯಕ್ರಮ, ಒಂದು ಮೌಲ್ಯಮಾಪನ’ ನೀತಿಯನ್ನು ಶಾಲಾ ಶಿಕ್ಷಣದಲ್ಲಿ ಜಾರಿಗೊಳಿಸುವ ತಂತ್ರ ಎನ್ನುವುದು ಸ್ಪಷ್ಟವಾಗಿದೆ. ಒಮ್ಮೆ ಶಾಲಾ ಶಿಕ್ಷಣವು ಕೇಂದ್ರೀಕರಣಗೊಂಡರೆ ತಳ ಸಮುದಾಯದ, ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ” ಎಂದು ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಹೇಳಿದ್ದಾರೆ

“ಎನ್ಇಪಿ ನೀತಿ ಜಾರಿಯಾಗುವ ಸಂದರ್ಭದಲ್ಲಿ ಈ ಬಗ್ಗೆ ಎಚ್ಚರಿಸಲಾಗಿತ್ತು. ಈಗ ನಿಜವಾಗುತ್ತಿದೆ. ಜೊತೆಗೆ 6ನೇ ತರಗತಿಯಿಂದ ವೃತ್ತಿಪರ ತರಬೇತಿ ಕೊಡಲು ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಇದರ ದುಷ್ಪರಿಣಾಮ ನಮಗೆ ಗೊತ್ತಿಲ್ಲವೇ? ಗೊತ್ತಿದ್ದೂ ನಾಗರಿಕ ಸಮಾಜದ ಮೌನ ಮತ್ತು ನಿರ್ಲಕ್ಷ್ಯ ಸರ್ವಾಧಿಕಾರಿ ಧೋರಣೆಗೆ ಸುಲಭದ ಹಾದಿ ಮಾಡಿಕೊಡುತ್ತಿದೆ. ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣವು ಅತಂತ್ರ ಸ್ಥಿತಿಯಲ್ಲಿದೆ” ಎಂದು ಶ್ರೀಪಾದ್ ಭಟ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...