ಸಿಇಟಿ, ಸಿಯುಇಟಿ ಒಂದೇ ದಿನ ನಿಗದಿ

Date:

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಕೇಂದ್ರಿಯ ವಿಶ್ವವಿದ್ಯಾನಿಲಯದ ಪದವಿ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪರೀಕ್ಷೆ (ಸಿಯುಇಟಿ) ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ, ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿದುಬಂದಿದೆ.

ಎರಡನೇ ಆವೃತ್ತಿಯ ಸಿಯುಇಟಿ–ಯುಜಿ ಪರೀಕ್ಷೆಯು ಇದೇ 21 ರಿಂದ 31ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ) ಹೇಳಿದೆ. ಅದೇ ದಿನ ಕರ್ನಾಟಕದಲ್ಲಿ ಸಿಇಟಿ ಇರುವ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಪೋಷಕರು ದೂರಿದ್ದಾರೆ.

ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಕೃಷಿ ವಿಜ್ಞಾನ, ಫಾರ್ಮಸಿ ಮತ್ತು ಶುಶ್ರೂಷೆಯಂತಹ ವಿವಿಧ ಕಾರ್ಯಕ್ರಮಗಳ ಪ್ರವೇಶಕ್ಕೆ ಪ್ರಮುಖವಾದ ಸಿಇಟಿ ಮೇ 20 ಮತ್ತು 21ರಂದು ನಿಗದಿಪಡಿಸಲಾಗಿದೆ. ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪತ್ರಿಕೆಗಳು ಭಾನುವಾರದಂದು ನಡೆಯಲಿವೆ. ಅದೇ ದಿನ ದೆಹಲಿ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ವಿಶ್ವವಿದ್ಯಾಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಆಯೋಜಿಸಿರುವ ಸಿಯುಇಟಿ-ಯುಜಿ ಪರೀಕ್ಷೆ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವೆಡೆ ನೋಂದಾಯಿತ ಅಭ್ಯರ್ಥಿಗಳ ಸಂಖ್ಯೆ ಅಧಿಕವಾಗಿದೆ. ಇಂತಹ ನಗರಗಳಲ್ಲಿ ಜೂನ್‌ 1, 2 ಮತ್ತು ಜೂನ್‌ 5, 6ರಂದೂ ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ಮೀಸಲು ಜೂನ್‌ 7 ಮತ್ತು 8 ದಿನಗಳೂ ಇರಲಿವೆ ಎಂದು ಎನ್‌ಟಿಎ ಹಿರಿಯ ನಿರ್ದೇಶಕಿ (ಪರೀಕ್ಷೆ) ಸಾಧನಾ ಪರಶಾರ್‌ ಹೇಳಿದ್ದಾರೆ.

“ನಾವು ಸಿಇಟಿ ಆರಂಭವಾಗುವ ವೇಳಾ ಪಟ್ಟಿಯನ್ನು ಒಂದು ತಿಂಗಳ ಹಿಂದೆಯೇ ನಿಗದಿ ಪಡಿಸಿದ್ದೆವು. ಆದರೆ, ಈ ಬಗ್ಗೆ ಎನ್‌ಟಿಎ ಕಾಳಜಿ ವಹಿಸಿ ಪರಿಷ್ಕೃತ ವೇಳಾಪಟ್ಟಿ ಸಿದ್ದಪಡಿಸಬೇಕಿತ್ತು. ಕರ್ನಾಟಕದ ವಿದ್ಯಾರ್ಥಿಗಳು ಸಿಯುಇಟಿ-ಯುಜಿ ಪರೀಕ್ಷೆ ಎದುರಿಸುವುದಿಲ್ಲ. ಎರಡೂ ಪರೀಕ್ಷೆ ಬರೆಯುತ್ತಿರುವ ಆಕಾಂಕ್ಷಿಗಳು ಯಾರ್‍ಯಾರು ಇದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...